ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯ ಓಪನ್: ಪೂಜೆ, ದರ್ಶನ ಆರಂಭ| video

ಪತ್ತನಂತಿಟ್ಟ: ಇಂದಿನಿಂದ ಕೆರಳದ ಶಬರಿಮಲೆಯಲ್ಲಿ ಅಯ್ಯಪ್ಪಸ್ವಾಮಿ ಮಂಡಲ ಪೂಜೆ, ದರ್ಶನ ಆರಂಭವಾಗಿದೆ.

ಇಂದು ಶುಕ್ರವಾರ ಸಂಜೆ 4 ಗಂಟೆಗೆ ದೇವಸ್ಥಾನದ ಅರ್ಚಕರಾದ ಕಂದರಾರು ರಾಜೀವ್ ಮತ್ತು ಕಂದರಾರು ಬ್ರಹ್ಮದತ್ತನ ಸಮ್ಮುಖದಲ್ಲಿ ಪ್ರಧಾನ ಅರ್ಚಕರಾದ ಪಿ.ಎನ್.ಮಹೇಶ್ ನಂಬೂತಿರಿ ಅವರು ಶಾಸ್ತ್ರೋಕ್ತವಾಗಿ ದೇವಾಲಯದ ಬಾಗಿಲು ತೆರೆದರು.

ಮೊದಲ ದರ್ಶನಕ್ಕಾಗಿ ಅಪಾರ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದು, ನೂತನವಾಗಿ ನೇಮಕಗೊಂಡಿರುವ ಪ್ರಧಾನ ಅರ್ಚಕರಾದ ಅರುಣ್ ಕುಮಾರ್ ನಂಬೂತಿರಿ ಮತ್ತು ವಾಸುದೇವನ್ ನಂಬೂತಿರಿ ಅವರು ಮೊದಲಿಗೆ 18 ಮೆಟ್ಟಿಲುಗಳನ್ನು ಹತ್ತಿದರು. ನಂತರ ಭಕ್ತರು 18 ಮೆಟ್ಟಿಲು ಹತ್ತಿ ಅಯ್ಯಪ್ಪನ ದರ್ಶನ ಪಡೆದರು.

ನಾಳೆ ಶನಿವಾರದಿಂದ ಪ್ರತಿದಿನ ದೇವಸ್ಥಾನ ಬಾಗಿಲನ್ನು ಬೆಳಗ್ಗೆ 3 ಗಂಟೆಗೆ ತೆರೆಯಲಾಗುತ್ತದೆ ಮತ್ತು ಮಧ್ಯಾಹ್ನ 1 ಗಂಟೆಗೆ ಮುಚ್ಚಲಾಗುತ್ತದೆ, ನಂತರ ಮಧ್ಯಾಹ್ನ 3 ಗಂಟೆಗೆ ಮತ್ತೆ ಬಾಗಿಲು ತೆರೆದು, ರಾತ್ರಿ 11 ಗಂಟೆಗೆ ಮುಚ್ಚಲಾಗುತ್ತದೆ.

ಬೆಳಗ್ಗೆ 3.30ಕ್ಕೆ ತುಪ್ಪದ ಅಭಿಷೇಕ ಆರಂಭವಾಗಲಿದ್ದು, 7.30ಕ್ಕೆ ಬೆಳಗ್ಗೆ ಪೂಜೆ ಹಾಗೂ 12.30ಕ್ಕೆ ಮಧ್ಯಾಹ್ನದ ಪೂಜೆ ನಡೆಯಲಿದೆ. ಸಂಜೆ 6.30ಕ್ಕೆ ದೀಪಾರಾಧನೆ ನಡೆಯಲಿದ್ದು, ರಾತ್ರಿ 9.30ಕ್ಕೆ ಕೊನೆಯ ಪೂಜೆ(ಅತ್ತಾಳ ಪೂಜೆ) 11 ಗಂಟೆಗೆ ನೆರವೇರಲಿದೆ. 18 ಗಂಟೆಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶ ಇರುತ್ತದೆ.

ಮಂಡಲ ಪೂಜೆಯನ್ನು ಡಿಸೆಂಬರ್ 26 ರಂದು ನಿಗದಿಪಡಿಸಲಾಗಿದ್ದು, ಅಂದು ರಾತ್ರಿ 10 ಗಂಟೆಗೆ ದೇವಸ್ಥಾನವನ್ನು ಮುಚ್ಚಲಾಗುತ್ತದೆ. ನಂತರ ಡಿಸೆಂಬರ್ 30 ರಂದು ದೇವಸ್ಥಾನದ ಬಾಗಿಲು ತೆರೆಯಲಿದೆ. ಮುಂದಿನ ವರ್ಷ ಜನವರಿ 14 ರಂದು ಮಕರ ಜ್ಯೋತಿ ಕಾಣಲಿದೆ. ನಂತರ ಜನವರಿ 20ರಂದು ದೇವಸ್ಥಾನವನ್ನು ಮುಚ್ಚಲಾಗುತ್ತದೆ.

ದೇವಸ್ಥಾನ ಆಡಳಿತ ಮಂಡಳಿ ಪ್ರತಿದಿನ 80 ಸಾವಿರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸುತ್ತಿದೆ. 70 ಸಾವಿರ ವರ್ಚುಯಲ್ ಕ್ಯೂ ಬುಕಿಂಗ್ ಮತ್ತು 10 ಸಾವಿರ ಸ್ಪಾಟ್ ಬುಕಿಂಗ್​ಗೆ ಅವಕಾಶ ಇದೆ.

ನಿಲಕ್ಕಲ್‌ನಲ್ಲಿ 8 ಸಾವಿರದಿಂದ 10 ಸಾವಿರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ನಿಲಕ್ಕಲ್‌ನಲ್ಲಿ 17,000 ಚದರ ಅಡಿ ಟೆಂಟ್ ಹಾಕಲಾಗಿದ್ದು, 2,700 ಜನ ಇಲ್ಲಿ ವಿಶ್ರಾಂತಿ ಪಡೆಯಬಹುದು.

ನಿಲಕ್ಕಲ್, ಪಂಪಾದಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಲಾಗಿದೆ. ಶಬರಿಮಲೆ ಹತ್ತುವ ಭಕ್ತರಿಗೆ ನೀರು ಮತ್ತು ತಿಂಡಿ ವಿತರಿಸಲಾಗುತ್ತದೆ, ಮರಕ್ಕೂಟಂನಿಂದ ಬೆಟ್ಟ ಹತ್ತುವ ಭಕ್ತರು ಕುಳಿತು ವಿಶ್ರಾಂತಿ ಪಡೆಯಲು ಸಾವಿರ ಸ್ಟೀಲ್ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ.

ಒಟ್ಟು 132 ಕೇಂದ್ರಗಳಲ್ಲಿ ವಿಶ್ರಾಂತಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!