MSV ಪಬ್ಲಿಕ್ ಶಾಲೆಯಲ್ಲಿ ಕ್ರೀಡೋತ್ಸವ; ಮಾನಸಿಕ, ದೈಹಿಕ ಸದೃಢತೆಗಾಗಿ ಕ್ರೀಡೆ ಸಹಾಯಕಾರಿ ಎಂದ ಸಬ್ ಇನ್ಸ್ಪೆಕ್ಟರ್

ದೊಡ್ಡಬಳ್ಳಾಪುರ: ನಗರ ಪ್ರತಿಷ್ಠಿತ MSV ಪಬ್ಲಿಕ್ ಶಾಲೆಯಲ್ಲಿ ಇಂದು (ಶನಿವಾರ) ಶಾಲಾ ವಾರ್ಷಿಕ ಕ್ರೀಡೋತ್ಸವವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ದೊಡ್ಡಬಳ್ಳಾಪುರ ಶಾಖೆಯ ವ್ಯವಸ್ಥಾಪಕ ಸಂಜಯ ಕುಮಾರ್ ಸಿಂಗ್ ಭಾಗವಹಿಸಿದ್ದರು.

MSV ಪಬ್ಲಿಕ್ ಶಾಲೆಯಲ್ಲಿ ಕ್ರೀಡೋತ್ಸವ; ಮಾನಸಿಕ, ದೈಹಿಕ ಸದೃಢತೆಗಾಗಿ ಕ್ರೀಡೆ ಸಹಾಯಕಾರಿ ಎಂದ ಸಬ್ ಇನ್ಸ್ಪೆಕ್ಟರ್

ಕಾರ್ಯಕ್ರಮಕ್ಕೆ ಚಾಲನೆ‌ ನೀಡಿ ಮಾತನಾಡಿದ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ, ಮಾನಸಿಕ ಆರೋಗ್ಯ ಉತ್ತಮವಾಗಿರಬೇಕಾದರೆ ದೈಹಿಕ ಸದೃಢತೆ ಬಹಳ ಮುಖ್ಯ. ಮಾನಸಿಕವಾಗಿ ಕುಗ್ಗಿರುವಂತಹ ಜೀವಗಳಿಗೆ ದೈಹಿಕ ಚಟುವಟಿಕೆಗಳು ಚೇತರಿಕೆ ಉಂಟು ಮಾಡುತ್ತವೆ ಎಂದರು.

MSV ಪಬ್ಲಿಕ್ ಶಾಲೆಯಲ್ಲಿ ಕ್ರೀಡೋತ್ಸವ; ಮಾನಸಿಕ, ದೈಹಿಕ ಸದೃಢತೆಗಾಗಿ ಕ್ರೀಡೆ ಸಹಾಯಕಾರಿ ಎಂದ ಸಬ್ ಇನ್ಸ್ಪೆಕ್ಟರ್

ಪಾಠದ ಜೊತೆ ಆಟವೂ ಮುಖ್ಯ. ಕಲಿಯುವಿಕೆಯಲ್ಲಿ ಮತ್ತು ಆಟದಲ್ಲಿ ಭಾಗವಹಿಸುವಿಕೆಯನ್ನು ಬೆಂಬಲಿಸಬೇಕು. ಮಕ್ಕಳಲ್ಲಿರುವ ಕ್ರೀಡಾ ಆಸಕ್ತಿಯನ್ನು ಗ್ರಹಿಸಿ, ಅಂತಹ ಪ್ರತಿಭೆಗಳನ್ನು ಗುರುತಿಸಿ, ಶಾಲಾ ಹಂತದಲ್ಲಿ ಕ್ರೀಡಾಕೂಟಗಳನ್ನು ನಡೆಸಿ, ಅವರನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವ ಭದ್ರ ಬುನಾದಿಯನ್ನು ಹಾಕುವುದು ಶಿಕ್ಷಕರ ಪ್ರಮುಖ ಪಾತ್ರ. ಕ್ರೀಡಾ ಮೀಸಲಾತಿಯಿಂದಲೂ ಸಹ ಉತ್ತಮ ಹುದ್ದೆ ಪಡೆಯಲು ಬಹಳಷ್ಟು ಅವಕಾಶವಿದೆ ಎಂದು ತಿಳಿಸಿದರು.

MSV ಪಬ್ಲಿಕ್ ಶಾಲೆಯಲ್ಲಿ ಕ್ರೀಡೋತ್ಸವ; ಮಾನಸಿಕ, ದೈಹಿಕ ಸದೃಢತೆಗಾಗಿ ಕ್ರೀಡೆ ಸಹಾಯಕಾರಿ ಎಂದ ಸಬ್ ಇನ್ಸ್ಪೆಕ್ಟರ್

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ದೊಡ್ಡಬಳ್ಳಾಪುರ ಶಾಖೆಯ ವ್ಯವಸ್ಥಾಪಕರಾದ ಸಂಜಯ ಕುಮಾರ್ ಸಿಂಗ್ ಮಾತನಾಡಿ, ಕ್ರೀಡೆಯಿಂದ ಶಿಸ್ತು ಬೆಳೆಯುತ್ತದೆ. ಕ್ರೀಡೆ ಮಕ್ಕಳಲ್ಲಿ ಸ್ನೇಹವನ್ನು ಗಟ್ಟಿಗೊಳಿಸಲು ಸಹಕಾರಿ ಹಾಗೂ ಪ್ರತಿ ಮಗುವೂ ಕೂಡಾ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ ಎಂದರು.

ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಸುಬ್ರಮಣ್ಯ ಮಾತನಾಡಿ, ಕ್ರೀಡೆಯು ಶಿಕ್ಷಣದ ಅವಿಭಾಜ್ಯ ಅಂಗ, ಪಠ್ಯಗಳ ಜೊತೆಗೆ ಕ್ರೀಡಾ ಚಟುವಟಿಕೆಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಾಯ ಮಾಡುತ್ತವೆ. ಜೊತೆಗೆ ಮಕ್ಕಳಲ್ಲಿ ಆತ್ಮವಿಶ್ವಾಸ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಮೂಡಿಸುತ್ತವೆ ಎಂದರು.

ಒಲಂಪಿಕ್ ಮಾದರಿಯಲ್ಲಿ ನಡೆದ ಪಥ ಸಂಚಲನ, ಕ್ರೀಡಾ ಜ್ಯೋತಿ ಪ್ರಜ್ವಲನ, ಪುಟಾಣಿ ಮಕ್ಕಳ ಮ್ಯಾರಾಥಾನ್, ಯೋಗ,
ಡ್ರಿಲ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಾಲಾ ಕ್ರೀಡಾ ಮಹೋತ್ಸವ ವಿಜೃಂಭಣೆಯಿಂದ ಪ್ರಾರಂಭಗೊಂಡಿತು.

ವಿಜೇತರಿಗೆ ಪ್ರಶಸ್ತಿಪತ್ರ ಹಾಗೂ ಬಹುಮಾನ ವಿತರಿಸಲಾಯಿತು.

ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್‍, ನಿರ್ದೇಶಕರಾದ ನಯನಾ ಸ್ವರೂಪ್, ಪ್ರಾಂಶುಪಾಲರಾದ ರೆಮ್ಯ.ಬಿ.ವಿ., ಉಪಪ್ರಾಂಶುಪಾಲರಾದ ಪ್ರತಿಮಾ ಪೈ ಮತ್ತಿತರರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಡಾ.ಕೆ ಸುಧಾಕರ್ (Dr.K. Sudhakar) ಅವರು ಸೂಚನೆ ನೀಡಿದರು.

[ccc_my_favorite_select_button post_id="120824"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]