guarantee scheme: ಗ್ಯಾರೆಂಟಿಗಳನ್ನು ನಿಲ್ಲಿಸುವುದು ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ; ಆರ್.ಅಶೋಕ್

ಬೆಂಗಳೂರು; ರಾಜ್ಯದ ಜನರಿಗೆ 40 ಪರ್ಸೆಂಟ್‌ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಪರ್ಸೆಂಟ್‌ ಭ್ರಷ್ಟರಾಗಿದ್ದಾರೆ. ಕಳೆದ 18 ತಿಂಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದಿನನಿತ್ಯ ಒಬ್ಬರಲ್ಲ ಒಬ್ಬ ಮಂತ್ರಿ ಲೂಟಿ ಹೊಡೆಯುತ್ತಿದ್ದಾರೆ, ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. (guarantee scheme)

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರು ತಮ್ಮ 40 ವರ್ಷದ ಜೀವನ ತೆರೆದ ಪುಸ್ತಕ ಅಂದವರು. ಇವತ್ತು ಅವರ ತೆರೆದ ಪುಸ್ತಕ ಪುಟಗಳು ತಿರುವಿದರೆ ಲೂಟಿಯ ಕಪ್ಪು ಚುಕ್ಕೆಗಳೇ ಕಾಣುತ್ತಿವೆ. ಸಿದ್ದರಾಮಯ್ಯ ನೇಮಕ ಮಾಡಿರುವ ಪೊಲೀಸ್ ಅಧಿಕಾರಿಯಿಂದ ವಿಚಾರಣೆ ಎದುರಿಸುತ್ತಿರುವುದು ಕನ್ನಡಿಗರ ದುರ್ದೈವ.
ಅಬಕಾರಿ ಇಲಾಖೆಯಲ್ಲಿ ನಡೆದಿರುವ 700 ಕೋಟಿ ಭ್ರಷ್ಟಾಚಾರದ ಬಗ್ಗೆ ಮಹಾರಾಷ್ಟ್ರದ ಚುನಾವಣಾ ಪ್ರಚಾರದ ವೇಳೆ ಪ್ರದಾನ ಮಂತ್ರಿಗಳು ಪ್ರಸ್ತಾಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಇದಕ್ಕೆ ಸಾಕ್ಷಿ ಕೊಡಿ ಎಂದು ಕೇಳಿದ್ದಾರೆ.

ಅದು ಪ್ರಧಾನಿ ಮೋದಿ ಅವರು ಮಾಡಿರುವ ಆರೋಪವಲ್ಲ. ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರರ ಸಂಘ ಮಾಡಿರುವ ಆರೋಪ. ಮದ್ಯ ಮಾರಾಟಗಾರರ ಸಂಘ ಬರೆದಿರುವ ಪತ್ರವನ್ನ ಒಮ್ಮೆ ಮುಖ್ಯಮಂತ್ರಿಗಳು ತರಿಸಿಕೊಂಡು ಓದಬೇಕು.

ಲೈಸೆನ್ಸ್ ನವೀಕರಣಕ್ಕೆ ರೇಟೇಷ್ಟು, ಮಂಥ್ಲಿ ಮನಿ ಹೆಸರಿನಲ್ಲಿ ಪ್ರತಿ ಮದ್ಯದ ಅಂಗಡಿಯಿಂದ ಎಷ್ಟ ಲಂಚ ಎಂದು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅದನ್ನ ಮಾಧ್ಯಮಗಳು ವರದಿ ಮಾಡಿವೆ. ಇದನ್ನೇ ಪ್ರಧಾನಿ ಮೋದಿ ಅವರು ಮಹಾರಾಷ್ಟ್ರದಲ್ಲಿ ಹೇಳಿದ್ದಾರೆಯೇ ಹೊರತು ಅವರು ಯಾವುದೇ ಸುಳ್ಳು ಆರೋಪ ಮಾಡಿಲ್ಲ. ಸಾಕ್ಷಿ ಬೇಕಾದರೆ ಸಿದ್ದರಾಮಯ್ಯನವರು ಮದ್ಯ ಮಾರಾಟಗಾರರ ಸಂಘದ ಆರೋಪದ ತನಿಖೆ ಮಾಡಲು ಮತ್ತೊಂದು ಎಸ್ ಐಟಿ ರಚಿಸಲಿ.

ಮದ್ಯ ಮಾರಾಟಗಾರರು ಮಾಡುತ್ತಿರುವ ಆರೋಪ ಸುಳ್ಳಾದರೆ ಅವರ ಲೈಸೆನ್ಸ್ ರದ್ದು ಮಾಡಿ ಅಂಗಡಿಗಳಿಗೆ ಬೀಗ ಹಾಕಿಸಿ. ತಮ್ಮ ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣವನ್ನ ಲೂಟಿ ಹೊಡೆಯುತ್ತಿರುವ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ಮೋದಿ ಅವರ ಬಗ್ಗೆ ಮಾತನಾಡಲು ಯಾವ ನೈತಿಕತೆಯೂ ಇಲ್ಲ.

ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರು ಬಿಬಿಎಂಪಿಗೆ ಸಂಬಂಧಿಸಿದಂತೆ ಮಾಡಿದ್ದ 40% ಕಮಿಷನ್ ಆರೋಪಗಳು ಶುದ್ಧ ಸುಳ್ಳೆಂದು ಲೋಕಾಯುಕ್ತ ತನಿಖಾ ಅಧಿಕಾರಿಗಳು ಸಲ್ಲಿಸಿರುವ ವರದಿಯಲ್ಲಿ ಬಹಿರಂಗವಾಗಿದೆ. 40 ಪರ್ಸೆಂಟ್ ಕಮಿಷನ್ ಆರೋಪ ಕಾಂಗ್ರೆಸ್ ನ ಟೂಲ್ ಕಿಟ್ ಎಂಬುದು ಈಗ ಸಾಕ್ಷಿ ಸಮೇತ ಋಜುವಾತಾಗಿದೆ.

ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರ ಅಂಬಿಕಾಪತಿ ಗುತ್ತಿಗೆ ಕೆಲಸಗಳನ್ನು ಮಾಡುವುದನ್ನು ಬಿಟ್ಟೆ 6 ವರ್ಷವಾಗಿತ್ತು. ಇದರಿಂದ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಕಟ್ಟಿದ ಸುಳ್ಳಿನ ಮಹಲು ಸಂಪೂರ್ಣ ಕುಸಿದುಬಿದ್ದಿದೆ.

ಬೆಂಗಳೂರು ನಗರದಲ್ಲಿ ಒಂದು ರಸ್ತೆ ಗುಂಡಿ ಮುಚ್ಚಲು ಈ ಸರ್ಕಾರಕ್ಕೆ ಯೋಗ್ಯತೆ ಇಲ್ಲ. ಭಗವಾನ್ ಬುದ್ಧ ಸಾವೇ ಇಲ್ಲದ ಮನೆಯಿಂದ ಸಾಸಿವೆ ತನ್ನಿ ಎಂದಿದ್ದರು. ಹಾಗೆ ಬೆಂಗಳೂರಿನಲ್ಲಿ ಇವತ್ತು ರಸ್ತೆ ಗುಂಡಿ ಇಲ್ಲದ ರಸ್ತೆ ತೋರಿಸಿ ಎನ್ನಬೇಕಾದ ಪರಿಸ್ಥಿತಿ ಬಂದಿದೆ.

ತ್ಯಾಜ್ಯ ವಿಲೇವಾರಿ ಮಾಡಲು ಸರ್ಕಾರದ ಬಳಿ ದುಡ್ಡಿಲ್ಲ. ಹಾಲು, ಕರೆಂಟು, ಪೆಟ್ರೋಲ್, ಡೀಸೆಲ್, ಸ್ಟ್ಯಾಂಪ್ ಡ್ಯೂಟಿ, ನೋಂದಣಿ ಶುಲ್ಕ ಎಲ್ಲವನ್ನ ಜಾಸ್ತಿ ಮಾಡಿದ್ದಾಯ್ತು, ಈಗ ಕಸ ವಿಲೇವಾರಿ ಹೆಸರಿನಲ್ಲಿ ಹೊಸ ಸೆಸ್ ಹಾಕಿ ಬೆಂಗಳೂರಿನ ಜನರನ್ನ ಸುಲಿಗೆ ಮಾಡಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸುತ್ತಿದೆ.

ಡಿಸಿಎಂ ಡಿಕೆ ಶಿವಕುಮಾರ್ ಅವರ ಪ್ರಕಾರ ಅನುದಾನ ಬೇಕಾದರೆ ಶಾಸಕರು ತಗ್ಗಿ ಬಗ್ಗಿ ನಡೆಯಬೇಕಂತೆ. ಬೆಂಗಳೂರಿನ ಜನತೆಗೆ, ಜಯನಗರದ ಜನತೆಗೆ ‘ನಮ್ಮ ತೆರಿಗೆ ನಮ್ಮ ಹಕ್ಕು’ ಅನ್ವಯಿಸುವುದಿಲ್ಲವಾ? ಡಿಸಿಎಂ ಡಿಕೆ ಶಿವಕುಮಾರ್ ಅವರು ಪಾಳೇಗಾರರೂ ಅಲ್ಲ, ನಿಜಾಮರ ಕಾಲದ ರಜಾಕರು ಅಲ್ಲ.

ವಕ್ಫ್ ಹೆಸರಿನಲ್ಲಿ ರೈತರ ಜಮೀನಿನ ಮೇಲೆ, ಸರ್ಕಾರಿ ಆಸ್ತಿ ಪಾಸ್ತಿಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಮಿತಿಮೀರುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಉಳುಮೆ ಮಾಡಲು ಬಂದಿದ್ದ ರೈತರ ಮೇಲೆ ಮತಾಂಧರು ಹಲ್ಲೆ ಮಾಡಿ, ಬೇಲಿ ಕಿತ್ತು ಹಾಕಿದ್ದಾರೆ.

ಸಿದ್ದರಾಮಯ್ಯನವರು ಈಗ ಅಹಿಂದ ಚಾಂಪಿಯನ್ ಅಲ್ಲ, ಮುಸ್ಲಿಮರ ಚಾಂಪಿಯನ್. ವಕ್ಫ್ ಹೆಸರಿನಲ್ಲಿ ಲೂಟಿ ಆಗುತ್ತಿರುವುದು ಬಹುತೇಕ ದಲಿತರು, ಹಿಂದುಳಿದ ಸಮುದಾಯಗಳಿಗೆ ಸೇರಿದ ಭೂಮಿಯೇ. ಮಂಗಳವಾರ ನಾನು ಚಿಕ್ಕಬಳ್ಳಾಪುರಕ್ಕೆ ಹೋಗಿ ರೈತರನ್ನು ಭೇಟಿ ಮಾಡಲಿದ್ದೇನೆ.

ಇದು ಗುರುವಾರದ ಸರ್ಕಾರ. ಕೆವಲ ಸಂಪುಟ ಸಭೆಯ ದಿನದಂದು ಸರ್ಕಾರ ಜೀವಂತವಾಗಿರುತ್ತದೆ. ಆಮೇಲೆ ಯಾವ ಸಚಿವರೂ ಪತ್ತೆ ಇರಲ್ಲ. ಈ ಮೊದಲು ರಾಜಸ್ವ ಸಂಗ್ರಹಣೆಗೆ ಅಧಿಕಾರಿಗಳಿಗೆ ಟಾರ್ಗೆಟ್ ನೀಡಲಾಗುತ್ತಿತ್ತು. ಈಗ ಭ್ರಷ್ಟಾಚಾರ, ಲಂಚಕ್ಕೆ ಟಾರ್ಗೆಟ್ ನೀಡಲಾಗುತ್ತಿದೆ.

(Guarantee scheme) ಗ್ಯಾರೆಂಟಿಗಳನ್ನು ನಿಲ್ಲಿಸುವುದು ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ. ಪ್ರತಿ ವರ್ಷ 10% ಫಲಾನುಭವಿಗಳ ಸಂಖ್ಯೆ ಕಡಿತಗೊಳಿಸಬೇಕು ಎಂದು ಅಧಿಕಾರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಈಗಾಗಲೇ ಲಕ್ಷಾಂತರ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದಾರೆ. ಒಟ್ಟಿನಲ್ಲಿ ಗ್ಯಾರೆಂಟಿಗಳು ರದ್ದು ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಸರ್ಕಾರದ ಆರ್ಥಿಕ ಪರಿಸ್ಥಿತಿ ಐಸಿಯುನಲ್ಲಿ ಇದೆ. ಈ ವರ್ಷ ಸಾಲ ಎತ್ತುವಳಿ ಇನ್ನೂ ಹೆಚ್ಚಾಗಲಿದೆ.

ಸಿಎಂ ಸಿದ್ದರಾಮಯ್ಯ ಅವರು ತಮಗೆ ಸಂಕಷ್ಟ ಎದುರಾದಾಗ ನಾನು ಹಳ್ಳಿಯವನು, ಹಿಂದುಳಿದ ಸಮುದಾಯದವನು ಎಂದು ಜಾತಿ ಅಸ್ತ್ರ ಬಳಸುವುದನ್ನು 40 ವರ್ಷದಿಂದ ರಾಜ್ಯದ ಜನತೆ ನೋಡಿಕೊಂಡೇ ಬಂದಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಪಾಪದ ತುಂಬಿದೆ. ಜನ ಕಾಂಗ್ರೆಸ್ ಪಕ್ಷವನ್ನ ಗಂಟು ಮೂಟೆ ಕಟ್ಟಿಸಿ ಶಾಶ್ವತವಾಗಿ ಮನೆಗೆ ಕಳುಹಿಸೋದು ಗ್ಯಾರಂಟಿ.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]