nayanthara-ಧನುಶ್ ಜಗಳ ಜೋರು..!

ಚೆನ್ನೈ: ಅನುಮತಿ ಇಲ್ಲದೆ ದೃಶ್ಯವನ್ನು ಬಳಿಸಿಕೊಳ್ಳಲಾಗಿದೆ ಎಂದು ಹತ್ತು ಕೋಟಿ ರೂ.ನೀಡುವಂತೆ ನಟ ಧನುಶ್ ಅವರು ನಟಿ ನಯನತಾರಾ (nayanthara) ಹಾಗೂ ನೆಟ್‌ ಫಿಕ್ಸ್‌ ಸಂಸ್ಥೆಗೆ ನೋಟೀಸ್ ನೀಡಿದ್ದಾರೆ.

ನಟ ಧನುಷ್‌ ಹಾಗೂ ನಯನತಾರಾ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕೆಲವು ಸಿನಿಮಾಗಳಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಆದರೆ ಈಗ ಇಬ್ಬರ ನಡುವೆ ಮಾತಿನ ಯುದ್ದ ಆರಂಭವಾಗಿದೆ.

ಈ ಬೆನ್ನಲ್ಲೇ ಧನುಶ್ ಅವರನ್ನು ನಯನತಾರಾ ನೀಚ ಎಂದು ಜರಿದಿದ್ದಾರೆ. ನಯನತಾರಾ ಸಿನಿಮಾ ಜರ್ನಿಯ ಕುರಿತ ನಯನತಾರಾ ಬಿಯಾಂಡ್ ದಿ ಫೇರೀಟೇಲ್ ಸಾಕ್ಷ್ಯ ಚಿತ್ರ ರಿಲಿಸ್‌ಗೆ ರೆಡಿಯಾಗಿದ್ದು, ನೆಟ್ ಪ್ಲಿಕ್ಸ್‌ನಲ್ಲಿ ಪ್ರಸಾರ ಆರಂಭಿಸಲಿದೆ.

ಈ ಡಾಕ್ಯುಮೆಂಟರಿಯ ಪ್ರೋಮೋ ಬಿಡುಗಡೆ ಆಗಿದ್ದು, ಇದರಲ್ಲಿ ಕೆಲವು ಸಿನಿಮಾಗಳ ದೃಶ್ಯಗಳು, ಚಿತ್ರೀಕರಣದ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ. ಅದರಲ್ಲಿ ನಾನುಮ್ ರೌಡಿ ದಾನ್ ಚಿತ್ರದ ಮೂರು ಸೆಕೆಂಡ್ ದೃಶ್ಯವೂ ಇದೆ.

ಇದು ಧನುಶ್ ನಿರ್ಮಾಣದ ಸಿನಿಮಾವಾಗಿದ್ದು, ತಮ್ಮ ಅನುಮತಿ ಇಲ್ಲದೆ ದೃಶ್ಯವನ್ನು ಬಳಿಸಿಕೊಳ್ಳಲಾಗಿದೆ, ಹಾಗಾಗಿ ಹತ್ತು ಕೋಟಿ ರು.ನೀಡುವಂತೆ ಧನುಶ್, ನಯನತಾರಾ ಹಾಗೂ ನೆಟ್‌ ಫಿಕ್ಸ್‌ಗೆ ನೋಟೀಸ್ ನೀಡಿದ್ದರು.

ಧನುಶ್ ಕಳಿಸಿರುವ ನೊಟೀಸ್ ನೋಡಿ ಕೆಂಡಾಮಂಡಲರಾಗಿರುವ ನಯನ, ಧನುಶ್‌ ಅವರನ್ನು ನೀಚ, ದುರಹಂಕಾರಿ, ಹಣಬಾಕ ಎಂದು ನಿಂದಿಸಿದ್ದಾರೆ.

ನಾನೂಮ್ ರೌಡಿ `ದಾನ್ ಸಿನಿಮಾದ ಹಾಡು, ಕೆಲವು ವಿಡಿಯೊ ತುಣುಕನ್ನು ಬಳಸಿಕೊಳ್ಳಲು ಕಳೆದ ಎರಡು ವರ್ಷದಿಂದಲೂ ಅನುಮತಿ ಕೇಳಿದ್ದೇನೆ. ಆದರೆ ನಮ್ಮ ಮನವಿಗೆ ಸ್ಪಂದಿಸಿಲ್ಲ. ನಿಮ್ಮಿಂದ ಯಾವುದೇ ಪ್ರತಿಕ್ರಿಯೆ ಬರದೇ ಇದ್ದಾಗ ಹಾಡು ಬಳಸುವುದನ್ನು ಕೈಬಿಟ್ಟು ಸಿನಿಮಾದ ಶೂಟಿಂಗ್ ದೃಶ್ಯವನ್ನು ಬಳಸಿಕೊಂಡಿದ್ದೇವೆ. ಅದರ ಮೂರು ಸೆಕೆಂಡ್ ಬಳಸಿಕೊಂಡಿದ್ದಕ್ಕೆ ಹತ್ತು ಕೋಟಿ ರು.ನೀಡುವಂತೆ ನೊಟೀಸ್ ಕಳಿಸಿದ್ದೀರ. ಇದು ನನಗೆ ಬೇಸರತರಿಸಿದೆ ಎಂದು ನಯನತಾರಾ ಕಿಡಿಕಾರಿದ್ದಾರೆ.

ಇದಿಷ್ಟೇ ಅಲ್ಲ, ನಾನುಮ್ ರೌಡಿ ದಾನ್ ಸಿನಿಮಾ ನಿರ್ಮಾಣ ಮಾಡುವಾಗ ಚಿತ್ರತಂಡದ ವಿರುದ್ದ ಅದೆಷ್ಟು ವಿಷಕಾರಿದಿರಿ. ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ನೀನು ಆಡಿದ ಮಾತುಗಳು ಮನಸಿಗೆ ನೋವುಂಟು ಮಾಡಿವೆ. ಅದನ್ನು ನಾನು ಇನ್ನು ಮರೆತಿಲ್ಲ, ನನ್ನ ಮನಸಿಗೆ ಮಾಡಿದ ಗಾಯ ಇನ್ನೂ ಆರಿಲ್ಲ ಎಂದು ಖಾರವಾಗಿಯೇ ನುಡಿದಿದ್ದಾರೆ ನಯನತಾರಾ.

ಅಭಿಮಾನಿಗಳ ಮುಂದೆ ನಾಟಕೀಯವಾಗಿ ನಟಿಸುತ್ತೀಯಾ ತಾನು ಭಾರೀ ಸಾಧು ಎಂದು ಬಿಂಬಿಸಿಕೊಳ್ಳುತ್ತೀಯಾ ನೀನೆಂತ ನೀಚ ಎಂದು ಎಲ್ಲರಿಗೂ ಗೊತ್ತಾಗಲಿದೆ ಅದನ್ನು ಹೆಚ್ಚು ದಿನ ಮುಚ್ಚಿಡಲಾಗುವುದಿಲ್ಲ ಎಂದು ನಯನ ತಾರಾ ನೇರವಾಗಿಯೇ ನಿಂದಿಸಿದ್ದಾರೆ.

ನಾನುಮ್ ರೌಡಿ ದಾನ್ 2015ರಲ್ಲಿ ತೆರೆಗೆ ಬಂದಿತ್ತು. ನಯನಾತಾರ ಪತಿ ವಿಣೇಶ್ ಶಿವನ್ ನಿರ್ದೇಶಿದ್ದ ಈ ಚಿತ್ರವನ್ನು ಧನುಶ್ ನಿರ್ಮಾಣ ಮಾಡಿದ್ದರು. ವಿಜಯ್ ಸೇತುಪತಿ ಹಾಗೂ ನಯನತಾರಾ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಟಿಪ್ಪರ್ ಡಿಕ್ಕಿ.. ಕಂಟೈನರ್ ಪಲ್ಟಿ

ದೊಡ್ಡಬಳ್ಳಾಪುರ: ಟಿಪ್ಪರ್ ಡಿಕ್ಕಿ.. ಕಂಟೈನರ್ ಪಲ್ಟಿ

ಮುಂದೆ ತಿರುವು ಪಡೆಯುತ್ತಿದ್ದ ಕಂಟೈನರ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ (Accident) ಕಂಟೈನರ್‌ ಮುಗುಚಿ ಬಿದ್ದು, ಚಾಲಕರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್ ಬಳಿ ಸೋಮವಾರ

[ccc_my_favorite_select_button post_id="119069"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!