ಸಿಂಧನೂರು; ಪಿಡಿಒ (pdo) ಪರೀಕ್ಷೆಯಲ್ಲಿ ಅರ್ಧಂಬರ್ಧ ಪ್ರಶ್ನೆ ಪತ್ರಿಕೆಗಳನ್ನು ಕಳುಹಿಸಿದೆ ಎನ್ನಲಾಗಿದ್ದು, ಇದರಿಂದ ಪರೀಕ್ಷೆ ಬರೆಯಲು ಬಂದಿರುವ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆ ಸಿಗದೇ ಕಂಗಾಲಾಗಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ 12 ಪ್ರಶ್ನೆ ಪತ್ರಿಕೆಗಳನ್ನು ಮಾತ್ರ ಹಂಚಿಕೆ ಮಾಡಲಾಗಿದೆ. ಇದರಿಂದ ಅಭ್ಯರ್ಥಿಗಳು ಕೆಪಿಎಸ್ಸಿ ವಿದ್ಯಾರ್ಥಿ ಸಿಡಿದೆದಿದ್ದಾರೆ. ಬೇರೆ ಬೇರೆ ಜಿಲ್ಲೆಗಳಿಂದ ಅಭ್ಯರ್ಥಿ ಸಿಂಧನೂರು-ಕುಷ್ಟಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸ್ ಹಾಗೂ ತಹಶೀಲ್ದಾರ್ ಅರುಣ್ ಕುಮಾರ್, ತಡವಾಗಿ ಪ್ರಶ್ನೆ ಪತ್ರಿಕೆ ಪಡೆದವರಿಗೆ ಮತ್ತೆ 30 ನಿಮಿಷ ಹೆಚ್ಚುವರಿ ಸಮಯ ನೀಡಲಾಗುವುದೆಂದು ಅಭ್ಯರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು.
ಪರೀಕ್ಷೆಯಲ್ಲಿ 24ರ ಬದಲು 12 ಪ್ರಶ್ನೆ ಪತ್ರಿಕೆ ಹಂಚಿದ ಆರೋಪ ಕೇಳಿಬಂದಿದೆ. ಒಂದು ಕೊಠಡಿಯಲ್ಲಿ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ, ಆದರೆ 12 ವಿದ್ಯಾರ್ಥಿಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ನೀಡಲಾಗಿದೆ ಎಂದು ಆರೋಪಿಸಲಾಗುತ್ತಿದೆ.