Cmsiddaramaiah: ರಾಜ್ಯಕ್ಕೆ ಸಮೃದ್ಧ ಬಂಡವಾಳ ಹರಿವು, ಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ: ಸಿಎಂ

ಬೆಂಗಳೂರು: ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ ಆರೇಳು ತಿಂಗಳಲ್ಲಿ ಇನ್ನೂ 19,059 ಸಾವಿರ ಕೋಟಿ ರೂ. ಬಂಡವಾಳ ಹರಿದು ಬರುವುದು ಖಾತ್ರಿಯಾಗಿದೆ. ಈ ಮೂಲಕ ರಾಜ್ಯವು 73 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆಯನ್ನು ಕಾಣಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಬುಧವಾರ ಹೇಳಿದ್ದಾರೆ.

ಅವರು ಜಿಕೆವಿಕೆ ಆವರಣದಲ್ಲಿ ಆಯೋಜನೆಗೊಂಡಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಟಲ್ಸ್ ಸಂಸ್ಥೆಯ 78ನೇ ವಾರ್ಷಿಕ ತಾಂತ್ರಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯವು ಈ ವರ್ಷ ಈಗಾಗಲೇ 21 ವಿವಿಧ ಉದ್ಯಮಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರಿಂದ 46,375 ಕೋಟಿ ರೂ. ಬಂಡವಾಳ ಹರಿದು ಬರಲಿದ್ದು, 27 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಗಳ ಮೂಲಕ 90 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆ ಆಗಲಿರುವಂತಹ ಒಟ್ಟು 669 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ಕೊಡಲಾಗಿದೆ. ಇವುಗಳಿಂದಾಗಿ 1.73 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ಅವರು ವಿವರಿಸಿದ್ದಾರೆ.

ಕೈಗಾರಿಕಾ ಅಭಿವೃದ್ಧಿಯ ಜತೆಯಲ್ಲೇ ಪರಿಸರ ಸಂರಕ್ಷಣೆ ಮತ್ತು ಎಲ್ಲರನ್ನೂ ಒಳಗೊಂಡಿರುವ ಬೆಳವಣಿಗೆಗಳ ಜತೆಗೆ ಸಮತೋಲನ ಸಾಧಿಸುವ ಸವಾಲು ನಮ್ಮ ಮುಂದಿದೆ. ಮೆಟಲ್ಸ್ (ಲೋಹಗಳು) ಮತ್ತು ಮೆಟಿರೀಯಲ್ಸ್ ವಲಯಗಳಲ್ಲಿ ಇವೆಲ್ಲವನ್ನೂ ಸಾಧ್ಯವಾಗಿಸುವಂತಹ ಸಂಶೋಧನೆ ಮತ್ತು ನಾವೀನ್ಯತಾ ಉಪಕ್ರಮಗಳಿಗೆ ಸರಕಾರವು ಒತ್ತು ನೀಡುತ್ತಿದೆ ಎಂದು ಅವರು ನುಡಿದಿದ್ದಾರೆ.

ಮೆಟಲ್ಸ್ ಮತ್ತು ಮೆಟೀರಿಯಲ್ಸ್ ಕ್ಷೇತ್ರವೂ ಸೇರಿದಂತೆ ಎಲ್ಲ ವಲಯಗಳಲ್ಲೂ ಕರ್ನಾಟಕವು ಪರಿಸರಸ್ನೇಹಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಲೋಹ ಮತ್ತು ಅದಕ್ಕೆ ಪೂರಕವಾದ ವಲಯಗಳು ಆರ್ಥಿಕ ಅಭಿವೃದ್ಧಿಯ ಆಚೆಗೂ ತಮ್ಮ ಪ್ರಭಾವ ಬೀರುತ್ತವೆ. ಕ್ಷಿಪ್ರವಾಗಿ ಬೆಳವಣಿಗೆ ಕಾಣುತ್ತಿರುವ ಜಗತ್ತಿನಲ್ಲಿ ಉದ್ಭವಿಸುತ್ತಿರುವ ಸಂಕೀರ್ಣ ಸಮಸ್ಯೆಗಳಿಗೆ ಉದ್ಯಮಿಗಳು ಸರಿಯಾದ ಪರಿಹಾರವನ್ನು ಕಂಡುಕೊಳ್ಳಬೇಕಾದ ಅಗತ್ಯವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಮರ್ಥ ನೀತಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, `ರಾಜ್ಯ ಸರಕಾರವು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮಾತ್ರವಲ್ಲದೆ ಸೆಮಿಕಂಡಕ್ಟರ್, ವಿದ್ಯುನ್ಮಾನ, ಚಿಪ್ ವಿನ್ಯಾಸ, ನವೋದ್ಯಮ, ವಿದ್ಯುಚ್ಚಾಲಿತ ವಾಹನ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆಯೂ ಸಮರ್ಥ ನೀತಿಗಳನ್ನು ಹೊಂದಿದೆ. ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ಕೌಶಲಪೂರ್ಣವನ್ನಾಗಿಸಿ, ಅವರೆಲ್ಲರನ್ನೂ ಉದ್ಯೋಗಕ್ಕೆ ಅರ್ಹರನ್ನಾಗಿ ಸಜ್ಜುಗೊಳಿಸಲಾಗುವುದು’ ಎಂದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಮಾತನಾಡಿ, ಉದ್ಯಮ ಕ್ಷೇತ್ರದಲ್ಲಿ ಈಗ ಡಿಜಿಟಲ್ ಉತ್ಪಾದನೆ, ಕೃತಕ ಬುದ್ಧಿಮತ್ತೆ ಮತ್ತು ಆಟೋಮೇಶನ್ ನಿರ್ಣಾಯಕವಾಗಿದ್ದು ಹೊಸ ಬಗೆಯ ಶಕ್ತಿಸಾಮರ್ಥ್ಯಗಳನ್ನು ತಂದುಕೊಟ್ಟಿವೆ.

ಸುಧಾರಿತ ಅಲಾಯ್ಸ್, ಅತ್ಯಧಿಕ ಸಾಮರ್ಥ್ಯದ ಉಕ್ಕು ಮತ್ತು ಸುಸ್ಥಿರ ಮೆಟೀರಿಯಲ್ ಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಈ ವಲಯದಲ್ಲಿ ರಾಜ್ಯದ ಹಲವು ನವೋದ್ಯಮಗಳು ಆಟೋಮೋಟೀವ್, ವೈಮಾಂತರಿಕ್ಷ, ಹಗುರ ಅಲಾಯ್ ಗಳಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿವೆ ಎಂದರು.

ರಾಜ್ಯವು ಹೆವಿ ಎಂಜಿನಿಯರಿಂಗ್, ವಿದ್ಯುತ್ ಉತ್ಪಾದನೆ ಮತ್ತು ಸ್ಪೆಷಲ್ ಪರ್ಪಸ್ ಮಷಿನರಿ ಕ್ಷೇತ್ರಗಳ ತಾಣವಾಗಿದೆ. ಮಶೀನ್ ಟೂಲ್ ತಯಾರಿಕೆಯಲ್ಲಿ ದೇಶದ ಒಟ್ಟು ಉತ್ಪಾದನೆಯಲ್ಲಿ ಶೇ.52ರಷ್ಟು ಕೊಡುಗೆ ನೀಡುತ್ತಿದೆ.

ಈ ಮೂಲಕ ಸ್ಥಳೀಯ ಮತ್ತು ಜಾಗತಿಕ ಮಾರುಕಟ್ಟೆಯ ಬೇಡಿಕೆಗಳನ್ನು ಏಕಕಾಲಕ್ಕೆ ಪೂರೈಸಲಾಗುತ್ತಿದೆ. ಲೋಹ ಮತ್ತು ಮೆಟೀರಿಯಲ್ಸ್ ವಲಯಗಳ ಬೇಡಿಕೆಗಳನ್ನು ಸರಕಾರವು ಸಕಾರಾತ್ಮಕವಾಗಿ ಪರಿಗಣಿಸಿ, ಎಲ್ಲ ಬಗೆಯ ಪ್ರೋತ್ಸಾಹಗಳನ್ನೂ ಕೊಡಲಿದೆ ಎಂದು ಅವರು ಭರವಸೆ ನೀಡಿದರು.

ಐಐಎಂ ಅಧ್ಯಕ್ಷ ಸಜ್ಜನ್ ಜಿಂದಾಲ್, ಜಿಂದಾಲ್ ಅಧ್ಯಕ್ಷ ಪಿ.ಕೆ.ಮುರುಗನ್ ಮತ್ತಿತರರು ಈ ಸಂದರ್ಭದಲ್ಲಿ ಮಾತನಾಡಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!