naxal encounter; ವಿಕ್ರಂ ಗೌಡ ಅವರದ್ದು ನಕಲಿ‌ ಎನ್‌ಕೌಂಟರ್ ಅಲ್ಲ; ಡಾ.ಜಿ.ಪರಮೇಶ್ವರ

ಬೆಂಗಳೂರು; ನಕ್ಸಲ್ ವಿಕ್ರಂಗೌಡ (naxal encounter) ಚಟುವಟಿಕೆಗಳ ಮೇಲೆ ಕಳೆದ 20 ವರ್ಷಗಳಿಂದ ನಿಗಾವಹಿಸಲಾಗಿತ್ತು. ಜನ ವಿರೋದಿ ಕೆಲಸಗಳಲ್ಲಿ ತೊಡಗಿದ್ದ ಎಂಬ ಮಾಹಿತಿ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಬಾಹಿರವಾಗಿ, ಅನುಮತಿ ಇಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ. ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿದ್ದ. ನಕ್ಸಲ್ ನಿಗ್ರಹಕ್ಕಾಗಿ ರಾಜ್ಯದಲ್ಲಿ ಮತ್ತು ಬೇರೆಬೇರೆ ರಾಜ್ಯಗಳಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ರಚಿಸಲಾಗಿದೆ. ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಅವರದ್ದು ನಕಲಿ‌ ಎನ್‌ಕೌಂಟರ್ ಅಲ್ಲ ಎಂದರು.

ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದವರಿಗೆ ಶರಣಾಗುವಂತೆ ವಿಚಾರವಾದಿಗಳು ಮನವಿ ಮಾಡಿದ್ದಾರೆ. ಇದು ಸರಿ ಇಲ್ಲ.‌ ಸಮಾಜದಲ್ಲಿ ನ್ಯಾಯಯುತವಾಗಿ ಪ್ರತಿಭಟನೆ ಮಾಡಿ, ನಕ್ಸಲ್ ಚಟುವಟಿಕೆಗೆ ಸೇರಬೇಡಿ ಎಂದಿದ್ದಾರೆ. ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಗಂಭೀರವಾಗಿ‌ ಪರಿಗಣಿಸಬೇಕು ಎಂದು ಹೇಳಿದರು.

ಈ ಹಿಂದೆ ತುಮಕೂರಿನ ಪಾವಘಡದ ಆಂಧ್ರಪ್ರದೇಶ ಗಡಿಯಲ್ಲಿ ಪೀಪಲ್ಸ್ ವಾರ್ ಗ್ರೂಪ್ ಇತ್ತು. ಇದೇ ರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಅನುಕೂಲಸ್ಥರಿಂದ ಹಣ ಕೇಳುವುದು, ಜಮೀನುಗಳಿಗೆ ಬೇಲಿ ಹಾಕುವುದು, ಪೊಲೀಸರನ್ನು ಹತ್ಯೆ ಮಾಡಿದ್ದರು. ಎಸ್.ಎಮ್.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನೂರಾರು ಜನ ನಕ್ಸಲರು ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಶರಣಾಗತಿಯಾದರು. ಅದೇರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಗತಿಪರ ಚಿಂತಕರು ಪ್ರಯತ್ನ ಮಾಡಬೇಕು ಎಂದರು.

ಎಕ್ಸಿಟ್ ಪೋಲ್‌ಗಳು ಒಂದೇ ತರನಾಗಿ ಹೇಳಿಲ್ಲ. ಕೆಲವು ಸರ್ವೇಗಳು ಮಹಾ ವಿಕಾಸ್ ಅಘಾಡಿಗೆ 162 ಸೀಟುಗಳನ್ನು ಕೊಟ್ಟಿದ್ದು, ಬಿಜೆಪಿಯವರಿಗೆ 128 ಕೊಟ್ಟಿವೆ. ಇನ್ನು ಕೆಲ ಸರ್ವೇಗಳು ಬಿಜೆಪಿಯವರಿಗೆ 140 ನೀಡಿವೆ. ಯಾವುದನ್ನು ನಿಖರವಾಗಿ ಹೇಳಲು ಬರುವುದಿಲ್ಲ ಎಂದು ಹೇಳಿದರು.

ವಾಸ್ತವವಾಗಿ ಮಹಾರಾಷ್ಟ್ರ ಜನ, ಭ್ರಷ್ಟಚಾರ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಬಹಳಷ್ಟು ಕಾರಣಗಳಿವೆ. ಆಂಬುಲೆನ್ಸ್ ಖರೀದಿಯಲ್ಲಿ 8000 ಕೋಟಿ ಅಕ್ರಮ ನಡೆದಿದೆ. ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಿಸಿ, ಅಂಬೇಡ್ಕರ್ ಕೇಂದ್ರ ಮಾಡುವುದಾಗಿ ಪ್ರಧಾನಿ ಮೋಡಿಯವರು 2025ರಲ್ಲಿ ಅಡಿಗಲ್ಲು ಹಾಕಿದ್ದರು.

ಮಹಾರಾಷ್ಟ್ರ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಮತಗಟ್ಟೆ ಸಮೀಕ್ಷೆಗಳು ಒಂದೇ ತರನಾಗಿ ಹೇಳಿಲ್ಲ. ಕೆಲವು ಸಮೀಕ್ಷೆಗಳು ಮಹಾ ವಿಕಾಸ್ ಅಘಾಡಿಗೆ 162 ಸೀಟುಗಳು ಬರುತ್ತವೆ ಎಂದು ಹೇಳಿದ್ದು, ಬಿಜೆಪಿಯವರಿಗೆ 128 ಸೀಟು ಬರುತ್ತವೆ ಎಂದು ತಿಳಿಸಿವೆ. ಇನ್ನು ಕೆಲ ಸಮೀಕ್ಷೆಗಳು ಬಿಜೆಪಿಯವರಿಗೆ 140 ಬರುತ್ತವೆ ಎಂದು ಹೇಳಿವೆ. ಈಗಲೇ ಯಾವುದನ್ನು ನಿಖರವಾಗಿ ಹೇಳಲು ಬರುವುದಿಲ್ಲ ಎಂದರು‌.

ವಾಸ್ತವವಾಗಿ ಮಹಾರಾಷ್ಟ್ರ ಜನ, ಭ್ರಷ್ಟಚಾರದಲ್ಲಿ ತೊಡಗಿರುವ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರ ಆಂಬುಲೆನ್ಸ್ ಖರೀದಿಯಲ್ಲಿ 8000 ಕೋಟಿ ರೂ. ಅಕ್ರಮ ಎಸಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಿಸಿ, ಅಂಬೇಡ್ಕರ್ ಕೇಂದ್ರ ಮಾಡುವುದಾಗಿ ಪ್ರಧಾನಿ ಮೋದಿಯವರು 2015ರಲ್ಲಿ ಅಡಿಗಲ್ಲು ಹಾಕಿದ್ದರು. ಈವರೆಗು ಪೂರ್ಣಗೊಂಡಿಲ್ಲ. ಅಂಬೇಡ್ಕರ್ ಅವರು ಮಹಾರಾಷ್ಟ್ರದಲ್ಲಿ ಜನಿಸಿದವರು. ಇಡೀ ದೇಶದ ಜನತೆ ಅವರನ್ನು ಇಷ್ಡಪಡುತ್ತಾರೆ. ಯೋಜನೆಯನ್ನು ಪೂರ್ಣಗೊಳಿಸದೆ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಜನ ಅಸಮಾದಾನ ವ್ಯಕ್ತಪಡಿಸಿದ್ದಾರೆ ಎಂದರು‌.

ಮಹಾರಾಷ್ಟ್ರಕ್ಕೆ ಬಂದಿದ್ದ ಕೈಗಾರಿಕೆಗಳನ್ನು ಗುಜುರಾತ್‌ಗೆ ತೆಗೆದುಕೊಂಡು ಹೋಗಿದ್ದಾರೆ‌. 25 ಸಾವಿರ ಕೋಟಿ ರೂ ಹೂಡಿಕೆಯ ಸಂಸ್ಥೆಯನ್ನು ಗುಜುರಾತ್‌‌ಗೆ ತೆಗೆದುಕೊಂಡು ಹೋಗಿದ್ದಾರೆ‌. ಇದರಿಂದ ಉದ್ಯೋಗಗಳೆಲ್ಲ ಗುಜುರಾತ್‌ಗೆ ಹೋಗಿರುವುದಕ್ಕೆ ಜನರಿಗೆ ಅಸಮಾದಾನವಿದೆ‌.

ರೈತರಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುತ್ತಿಲ್ಲ. ವಿಪರೀತ ಭ್ರಷ್ಟಚಾರ ಮಾಡುತ್ತಿದ್ದಾರೆ ಎಂಬುದು ಜನರೊಂದಿಗೆ ಸಮಾಲೋಚನೆ ನಡೆಸಿದ ವೇಳೆ ಬಂದ ಮಾತುಗಳು. ಹೀಗಾಗಿ ಜನರು, ಮಹಾ ವಿಕಾಸ್ ಅಘಾಡಿ ಮೈತ್ರಿಕೂಟಕ್ಕೆ ಬಹುಮತ ನೀಡುವ ಭರವಸೆ ಇದೆ ಎಂದು ಹೇಳಿದರು.

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!