cancer awareness: ದೇಹದಲ್ಲಿನ ಗಡ್ಡೆಗಳ ನಿರ್ಲಕ್ಷ್ಯ ಬೇಡವೆಂದ ಡಾ.ವಿಜಯ್ ಕುಮಾರ್

ದೊಡ್ಡಬಳ್ಳಾಪುರ: ಕ್ಯಾನ್ಸರ್ಗೆ (cancer awareness) ಯಾವುದೇ ವಯಸ್ಸು, ಲಿಂಗಭೇದವಿಲ್ಲ. ಚಿಕ್ಕ ಮಕ್ಕಳಿಗೂ ಕ್ಯಾನ್ಸರ್ ಬರುವ ಸಾಧ್ಯತೆಗಳಿವೆ. ಕ್ಯಾನ್ಸರ್ಗೆ ಗುಣಲಕ್ಷಣಗಳನ್ನು ಅರಿಯುವ ಮೂಲಕ ಆರಂಭದಲ್ಲಿಯೇ ತಪಾಸಣೆ ಮಾಡಿ, ಚಿಕಿತ್ಸೆ ಪಡೆದರೆ ಕ್ಯಾನ್ಸರ್ ಗುಣಪಡಿಸಲು ಸಾಧ್ಯವಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಬೇಕಿದೆ ಎಂದು ಶ್ರೀ ರಾಮ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯಕುಮಾರ್ ತಿಳಿಸಿದರು.

ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ತಾಲೂಕಿನ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ, ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅವರು ಕ್ಯಾನ್ಸರ್ ಜಾಗೃತಿ ಕುರಿತು ಮಾತನಾಡಿದರು.

ಕ್ಯಾನ್ಸರ್ ಎಂದರೆ ಜೀವಕೋಶಗಳ ಅಸಹಜ ಬೆಳವಣಿಗೆ. ತಂಬಾಕು ಸೇವನೆ, ಬದಲಾಗುತ್ತಿರುವ ಜೀವನ ಶೈಲಿ, ಹಾರ್ಮೋನ್ಗಳ ವ್ಯತ್ಯಾಸವೂ ಕ್ಯಾನ್ಸರ್ಗೆ ಕಾರಣವಾಗಬಹುದು. ಕ್ಯಾನ್ಸರ್ ಭಯಾನಕ ರೋಗವಲ್ಲ. ಇದರ ಬಗ್ಗೆ ಭಯಬೀಳಬೇಕಾದ ಅಗತ್ಯವಿಲ್ಲ. ದೇಹದ ಯಾವುದೇ ಅಂಗಕ್ಕೂ ಕ್ಯಾನ್ಸರ್ ಹರಡಬಹುದು. 100ಕ್ಕೂ ಹೆಚ್ಚುಬಗೆಯ ಕ್ಯಾನ್ಸರ್ಗಳಿವೆ. ಹೆಚ್ಚಾಗಿ ಕರುಳು, ಸ್ಥನ, ರಕ್ತ, ಮೂಳೆ ಕ್ಯಾನ್ಸರ್ಗಳು ಕಾಣಿಸಿಕೊಳ್ಳುತ್ತವೆ.
ಅನೇಕ ಕುಟುಂಬಗಳಲ್ಲಿ ಕೆಲವರಾದರೂ ಕ್ಯಾನ್ಸರ್ ರೋಗಿಗಳಿದ್ದರೆ ಅದಕ್ಕೆ ಆಶ್ಚರ್ಯ ಪಡಬೇಕಾಗಿಲ್ಲ.

ಧೂಮಪಾನ, ತಂಬಾಕು ಸೇವನೆ,ಮದ್ಯಸೇವನೆ, ಬೊಜ್ಜು, ಅನಿಯಮಿತ ಆಹಾರ ಸೇವನೆಗಳು ಕ್ಯಾನ್ಸರ್ಗೆ ಕಾರಣವಾಗಬಹುದು. ಆದರೆ ಬಹಳಷ್ಟು ಮಂದಿ ಕ್ಯಾನ್ಸರ್ ರೋಗವನ್ನು ಆರಂಭದಲ್ಲಿ ನಿರ್ಲಕ್ಷ್ಯ ಮಾಡುವ ಪರಿಣಾಮ, ಅದು ಉಲ್ಬಣಗೊಳ್ಳುತ್ತದೆ. ಅಂತಿಮ ಹಂತ ತಲುಪಿದಾಗ ವೈದ್ಯರು ಸಹ ಏನೂ ಮಾಡಲಾಗುವುದಿಲ್ಲ ಎಂದರು.

ಗಡ್ಡೆ ನಿರ್ಲಕ್ಷ್ಯ ಬೇಡ

ದೇಹದಲ್ಲಿ ಯಾವುದೇ ಸಣ್ಣ ಗಡ್ಡೆಯಿದ್ದರೂ ಅದನ್ನು ನಿರ್ಲಕ್ಷ್ಯ ಮಾಡಬಾರದು. ಅದು ಕ್ಯಾನ್ಸರ್ ಗಡ್ಡೆಯಾಗಿರಬಹುದು. ತಕ್ಷಣವೇ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯಬೇಕು. ಮಹಿಳೆಯರಿಗೆ ಗರ್ಭಕೋಶ ಹಾಗೂ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕ್ಯಾನ್ಸರ್ ಹಂತಗಳನ್ನು ಮೀರಿದರೆ ಉಲ್ಬಣಗೊಂಡು ಜೀವಕ್ಕೆ ಅಪಾಯವಾಗುತ್ತದೆ. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಅರಿವಿನ ಕೊರತೆಯಾಗಿದ್ದು, ಇಂದಿಗೂ ಆರೋಗ್ಯದ ಬಗ್ಗೆ ಹಲವಾರು ತಪ್ಪು ಕಲ್ಪನೆಗಳಿವೆ. ಈ ದಿಸೆಯಲ್ಲಿ ಹೆಚ್ಚಿನ ಜಾಗೃತಿ ವಹಿಸಬೇಕಾದ ಅಗತ್ಯವಿದೆ ಎಂದರು.

ಆಹಾರದಲ್ಲಿ ಜಾಗ್ರತೆಯಿರಲಿ

ಮಕ್ಕಳು ಜಂಖ್ ಫುಡ್ ಹೆಚ್ಚಾಗಿ ಸೇವಿಸುವುದರಿಂದ ಇದರಲ್ಲಿ ಕೃತಕ ಬಣ್ಣ, ರುಚಿಗಾಗಿ ಬಳಸುವ ಪದಾರ್ಥಗಳು ಕ್ಯಾನ್ಸರ್ಗೆ ಕಾರಣವಾಗಬಹುದು. ಈ ಕಾರಣದಿಂದಲೇ ರಾಜ್ಯದಲ್ಲಿ ಗೋಬಿ ಮಂಚೂರಿ ಮೊದಲಾದ ಆಹಾರ ಪದಾರ್ಥಗಳಿಗೆ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಲಾಗಿದೆ.

ಎಣ್ಣೆ, ಹೆಚ್ಚಿನ ಜಿಡ್ಡಿನ ಪದಾರ್ಥಗಳು ಕಡಿಮೆ ಮಾಡಬೇಕು. ರಾಗಿ, ತರಕಾರಿ, ಸಿರಿಧಾನ್ಯ, ಸೊಪ್ಪು ಮೊದಲಾದ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು ಎಂದರು.

ಗುಣಲಕ್ಷಣಗಳು ಹಾಗೂ ಚಿಕಿತ್ಸೆ

ದೇಹದಲ್ಲಿ ಸಣ್ಣ ಗಡ್ಡೆ, ಮಚ್ಚೆ ಅಗಲವಾಗುತ್ತಿರುವುದು, ಕೆಮ್ಮು, ಮೂಗು, ಕಿವಿ, ಮೂತ್ರ ಮಲ ವಿಸರ್ಜನೆ ವೇಳೆ ಯಲ್ಲಿ ರಕ್ತ ಸ್ರಾವ, ಮೂತ್ರದಲ್ಲಿ ರಕ್ತ ಹೋಗುವುದು, ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ವ್ಯತ್ಯಾಸಗಳಾಗುವುದು, ತೂಕ ಕಡಿಮೆಯಾಗುವುದು ಇವು ಕ್ಯಾನ್ಸರ್ನ ಮುನ್ಸೂಚನೆಗಳಾಗಿವೆ. ಕ್ಯಾನ್ಸರ್ಗೆ ಈಗ ಆಧುನಿಕ ಚಿಕಿತ್ಸೆಗಳಿದ್ದು, ಕಿಮೋಥರಫಿ ಎಲ್ಲರಿಗೂ ತಿಳಿದ ಚಿಕಿತ್ಸೆಯಾಗಿದೆ. ಈಗ ಬಂದಿರುವ ಇಮ್ಯುನೋ ಥರಫಿ ಕ್ಯಾನ್ಸರ್ಕಾರಕ ಕಣಗಳನ್ನು ನಾಶಪಡಿಸುತ್ತದೆ ಆದರೆ ೪ನೇ ಹಂತ ದಾಟಿದ್ದರೆ ಗುಣಪಡಿಸುವುದು ಕಷ್ಟಸಾಧ್ಯ ಎಂದರು.

ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಮಹತ್ವ ಕುರಿತು ಮಾತನಾಡಿದ ಪತ್ರಕರ್ತ ಡಿ.ಶ್ರೀಕಾಂತ, ವಿದ್ಯಾರ್ಥಿಗಳು ದಿನ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡರೆ, ಸಾಮಾನ್ಯ ಜ್ಞಾನ ಹೆಚ್ಚಾಗುವುದರೊಂದಿಗೆ, ಭಾಷೆಯ ಮೇಲೆ ಪ್ರಭುತ್ವವಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗುತ್ತದೆ ಎಂದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!