cancer awareness: ದೇಹದಲ್ಲಿನ ಗಡ್ಡೆಗಳ ನಿರ್ಲಕ್ಷ್ಯ ಬೇಡವೆಂದ ಡಾ.ವಿಜಯ್ ಕುಮಾರ್

ದೊಡ್ಡಬಳ್ಳಾಪುರ: ಕ್ಯಾನ್ಸರ್ಗೆ (cancer awareness) ಯಾವುದೇ ವಯಸ್ಸು, ಲಿಂಗಭೇದವಿಲ್ಲ. ಚಿಕ್ಕ ಮಕ್ಕಳಿಗೂ ಕ್ಯಾನ್ಸರ್ ಬರುವ ಸಾಧ್ಯತೆಗಳಿವೆ. ಕ್ಯಾನ್ಸರ್ಗೆ ಗುಣಲಕ್ಷಣಗಳನ್ನು ಅರಿಯುವ ಮೂಲಕ ಆರಂಭದಲ್ಲಿಯೇ ತಪಾಸಣೆ ಮಾಡಿ, ಚಿಕಿತ್ಸೆ ಪಡೆದರೆ ಕ್ಯಾನ್ಸರ್ ಗುಣಪಡಿಸಲು ಸಾಧ್ಯವಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಬೇಕಿದೆ ಎಂದು ಶ್ರೀ ರಾಮ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯಕುಮಾರ್ ತಿಳಿಸಿದರು.

ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ತಾಲೂಕಿನ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ, ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅವರು ಕ್ಯಾನ್ಸರ್ ಜಾಗೃತಿ ಕುರಿತು ಮಾತನಾಡಿದರು.

ಕ್ಯಾನ್ಸರ್ ಎಂದರೆ ಜೀವಕೋಶಗಳ ಅಸಹಜ ಬೆಳವಣಿಗೆ. ತಂಬಾಕು ಸೇವನೆ, ಬದಲಾಗುತ್ತಿರುವ ಜೀವನ ಶೈಲಿ, ಹಾರ್ಮೋನ್ಗಳ ವ್ಯತ್ಯಾಸವೂ ಕ್ಯಾನ್ಸರ್ಗೆ ಕಾರಣವಾಗಬಹುದು. ಕ್ಯಾನ್ಸರ್ ಭಯಾನಕ ರೋಗವಲ್ಲ. ಇದರ ಬಗ್ಗೆ ಭಯಬೀಳಬೇಕಾದ ಅಗತ್ಯವಿಲ್ಲ. ದೇಹದ ಯಾವುದೇ ಅಂಗಕ್ಕೂ ಕ್ಯಾನ್ಸರ್ ಹರಡಬಹುದು. 100ಕ್ಕೂ ಹೆಚ್ಚುಬಗೆಯ ಕ್ಯಾನ್ಸರ್ಗಳಿವೆ. ಹೆಚ್ಚಾಗಿ ಕರುಳು, ಸ್ಥನ, ರಕ್ತ, ಮೂಳೆ ಕ್ಯಾನ್ಸರ್ಗಳು ಕಾಣಿಸಿಕೊಳ್ಳುತ್ತವೆ.
ಅನೇಕ ಕುಟುಂಬಗಳಲ್ಲಿ ಕೆಲವರಾದರೂ ಕ್ಯಾನ್ಸರ್ ರೋಗಿಗಳಿದ್ದರೆ ಅದಕ್ಕೆ ಆಶ್ಚರ್ಯ ಪಡಬೇಕಾಗಿಲ್ಲ.

ಧೂಮಪಾನ, ತಂಬಾಕು ಸೇವನೆ,ಮದ್ಯಸೇವನೆ, ಬೊಜ್ಜು, ಅನಿಯಮಿತ ಆಹಾರ ಸೇವನೆಗಳು ಕ್ಯಾನ್ಸರ್ಗೆ ಕಾರಣವಾಗಬಹುದು. ಆದರೆ ಬಹಳಷ್ಟು ಮಂದಿ ಕ್ಯಾನ್ಸರ್ ರೋಗವನ್ನು ಆರಂಭದಲ್ಲಿ ನಿರ್ಲಕ್ಷ್ಯ ಮಾಡುವ ಪರಿಣಾಮ, ಅದು ಉಲ್ಬಣಗೊಳ್ಳುತ್ತದೆ. ಅಂತಿಮ ಹಂತ ತಲುಪಿದಾಗ ವೈದ್ಯರು ಸಹ ಏನೂ ಮಾಡಲಾಗುವುದಿಲ್ಲ ಎಂದರು.

ಗಡ್ಡೆ ನಿರ್ಲಕ್ಷ್ಯ ಬೇಡ

ದೇಹದಲ್ಲಿ ಯಾವುದೇ ಸಣ್ಣ ಗಡ್ಡೆಯಿದ್ದರೂ ಅದನ್ನು ನಿರ್ಲಕ್ಷ್ಯ ಮಾಡಬಾರದು. ಅದು ಕ್ಯಾನ್ಸರ್ ಗಡ್ಡೆಯಾಗಿರಬಹುದು. ತಕ್ಷಣವೇ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯಬೇಕು. ಮಹಿಳೆಯರಿಗೆ ಗರ್ಭಕೋಶ ಹಾಗೂ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕ್ಯಾನ್ಸರ್ ಹಂತಗಳನ್ನು ಮೀರಿದರೆ ಉಲ್ಬಣಗೊಂಡು ಜೀವಕ್ಕೆ ಅಪಾಯವಾಗುತ್ತದೆ. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಅರಿವಿನ ಕೊರತೆಯಾಗಿದ್ದು, ಇಂದಿಗೂ ಆರೋಗ್ಯದ ಬಗ್ಗೆ ಹಲವಾರು ತಪ್ಪು ಕಲ್ಪನೆಗಳಿವೆ. ಈ ದಿಸೆಯಲ್ಲಿ ಹೆಚ್ಚಿನ ಜಾಗೃತಿ ವಹಿಸಬೇಕಾದ ಅಗತ್ಯವಿದೆ ಎಂದರು.

ಆಹಾರದಲ್ಲಿ ಜಾಗ್ರತೆಯಿರಲಿ

ಮಕ್ಕಳು ಜಂಖ್ ಫುಡ್ ಹೆಚ್ಚಾಗಿ ಸೇವಿಸುವುದರಿಂದ ಇದರಲ್ಲಿ ಕೃತಕ ಬಣ್ಣ, ರುಚಿಗಾಗಿ ಬಳಸುವ ಪದಾರ್ಥಗಳು ಕ್ಯಾನ್ಸರ್ಗೆ ಕಾರಣವಾಗಬಹುದು. ಈ ಕಾರಣದಿಂದಲೇ ರಾಜ್ಯದಲ್ಲಿ ಗೋಬಿ ಮಂಚೂರಿ ಮೊದಲಾದ ಆಹಾರ ಪದಾರ್ಥಗಳಿಗೆ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಲಾಗಿದೆ.

ಎಣ್ಣೆ, ಹೆಚ್ಚಿನ ಜಿಡ್ಡಿನ ಪದಾರ್ಥಗಳು ಕಡಿಮೆ ಮಾಡಬೇಕು. ರಾಗಿ, ತರಕಾರಿ, ಸಿರಿಧಾನ್ಯ, ಸೊಪ್ಪು ಮೊದಲಾದ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು ಎಂದರು.

ಗುಣಲಕ್ಷಣಗಳು ಹಾಗೂ ಚಿಕಿತ್ಸೆ

ದೇಹದಲ್ಲಿ ಸಣ್ಣ ಗಡ್ಡೆ, ಮಚ್ಚೆ ಅಗಲವಾಗುತ್ತಿರುವುದು, ಕೆಮ್ಮು, ಮೂಗು, ಕಿವಿ, ಮೂತ್ರ ಮಲ ವಿಸರ್ಜನೆ ವೇಳೆ ಯಲ್ಲಿ ರಕ್ತ ಸ್ರಾವ, ಮೂತ್ರದಲ್ಲಿ ರಕ್ತ ಹೋಗುವುದು, ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ವ್ಯತ್ಯಾಸಗಳಾಗುವುದು, ತೂಕ ಕಡಿಮೆಯಾಗುವುದು ಇವು ಕ್ಯಾನ್ಸರ್ನ ಮುನ್ಸೂಚನೆಗಳಾಗಿವೆ. ಕ್ಯಾನ್ಸರ್ಗೆ ಈಗ ಆಧುನಿಕ ಚಿಕಿತ್ಸೆಗಳಿದ್ದು, ಕಿಮೋಥರಫಿ ಎಲ್ಲರಿಗೂ ತಿಳಿದ ಚಿಕಿತ್ಸೆಯಾಗಿದೆ. ಈಗ ಬಂದಿರುವ ಇಮ್ಯುನೋ ಥರಫಿ ಕ್ಯಾನ್ಸರ್ಕಾರಕ ಕಣಗಳನ್ನು ನಾಶಪಡಿಸುತ್ತದೆ ಆದರೆ ೪ನೇ ಹಂತ ದಾಟಿದ್ದರೆ ಗುಣಪಡಿಸುವುದು ಕಷ್ಟಸಾಧ್ಯ ಎಂದರು.

ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಮಹತ್ವ ಕುರಿತು ಮಾತನಾಡಿದ ಪತ್ರಕರ್ತ ಡಿ.ಶ್ರೀಕಾಂತ, ವಿದ್ಯಾರ್ಥಿಗಳು ದಿನ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡರೆ, ಸಾಮಾನ್ಯ ಜ್ಞಾನ ಹೆಚ್ಚಾಗುವುದರೊಂದಿಗೆ, ಭಾಷೆಯ ಮೇಲೆ ಪ್ರಭುತ್ವವಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗುತ್ತದೆ ಎಂದರು.

ರಾಜಕೀಯ

ಕಾಂಗ್ರೆಸ್ ನ ತುಷ್ಟೀಕರಣ ರಾಜಕೀಯವನ್ನ ಖಂಡಿಸುತ್ತೇವೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ನ ತುಷ್ಟೀಕರಣ ರಾಜಕೀಯವನ್ನ ಖಂಡಿಸುತ್ತೇವೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮುಸ್ಲಿಮರಿಗೆ ಕಾಂಗ್ರೆಸ್ ಸರ್ಕಾರ ಶೇ.4ರಷ್ಟು ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆಗಳಲ್ಲಿ ವರದಿಯಾಗಿರುವ ಸುದ್ದಿಗಳು ಸತ್ಯಕ್ಕೆ

[ccc_my_favorite_select_button post_id="104510"]
3 ಸಾವಿರ ಗರ್ಭಿಣಿಯರಿಗೆ ಸೀಮಂತ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ

3 ಸಾವಿರ ಗರ್ಭಿಣಿಯರಿಗೆ ಸೀಮಂತ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ (lakshmi hebbalkar) ಅವರು ಸಾಮೂಹಿಕವಾಗಿ 3 ಸಾವಿರ ಗರ್ಭಿಣಿಯರಿಗೆ (ಉಡಿ ತುಂಬುವ

[ccc_my_favorite_select_button post_id="104529"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
Doddaballapura: ಗರಿಕೇನಹಳ್ಳಿ ಮಹಿಳೆ ಆತ್ಮಹತ್ಯೆ ಪ್ರಕರಣ.. ಓರ್ವನ ಬಂಧನ.! ಕಾರಣ ಏನ್ ಗೊತ್ತಾ..?

Doddaballapura: ಗರಿಕೇನಹಳ್ಳಿ ಮಹಿಳೆ ಆತ್ಮಹತ್ಯೆ ಪ್ರಕರಣ.. ಓರ್ವನ ಬಂಧನ.! ಕಾರಣ ಏನ್ ಗೊತ್ತಾ..?

ದೊಡ್ಡಬಳ್ಳಾಪುರ (Doddaballapura): ಮಾ.14 ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆಯೋರ್ವ ಶವದ ಕುರಿತು ತನಿಖೆ ನಡೆಸುತ್ತಿರುವ ತಾಲೂಕಿನ ಹೊಸಹಳ್ಳಿ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು 40 ವರ್ಷದ ರಂಗಸ್ವಾಮಿ ಎಂದು ಗುರುತಿಸಲಾಗಿದೆ. ಬಂಧಿತನ ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆ ಎಂಬ

[ccc_my_favorite_select_button post_id="104504"]
ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ

[ccc_my_favorite_select_button post_id="104484"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!