Love Reddy| ದರ್ಶನ್ ಬಗ್ಗೆ ಮಾತಾಡಲು ನಿನಗೇನ್ ಅರ್ಹತೆ ಇದೆ..?; ಲೈವ್‌ನಲ್ಲೆ ಜಗದೀಶ್ಗೆ ಹಿಗ್ಗಾಮುಗ್ಗಾ ತರಾಟೆ| video

ಬೆಂಗಳೂರು: ಲವ್ ರೆಡ್ಡಿ (Love Reddy) ಸಿನಿಮಾದ ಪ್ರಮೋಷನ್ ವೇಳೆ ಅನಾವಶ್ಯಕವಾಗಿ ನಟ ದರ್ಶನ್ ಹೆಸರನ್ನು ಪದೇ ಪದೇ ಪ್ರಸ್ತಾಪಿಸಿದ ಬಿಗ್ ಬಾಸ್ ಸ್ಪರ್ಧಿ ಜಗದೀಶ್ಗೆ ನೇರ ಪ್ರಸಾರದಲ್ಲಿಯೇ ಲವ್ ರೆಡ್ಡಿ ಸಿನಿಮಾ ನಿರ್ಮಾಪಕ ರವೀಂದ್ರ ರೆಡ್ಡಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಓದಲ್ಲಿ ಬಂದಲ್ಲಿ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಜಗದೀಶ್ ಅವರಿಗೆ ತೀವ್ರ ಮುಜುಗರಕ್ಕೆ ಕಾರಣವಾಗುತ್ತಿದೆ.

ತೆಲುಗಿನ ಹಿಟ್ ಸಿನಿಮಾ Love Reddy ಇಂದು (ನ.22) ಕನ್ನಡದಲ್ಲಿ ಬಿಡುಗಡೆಯಾಗುತ್ತಿದೆ.
ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಗಡಿಯಲ್ಲಿ ನಡೆದ ನೈಜ ಘಟನೆಯಾಧಾರಿತ ಚಿತ್ರ ‘ಲವ್ ರೆಡ್ಡಿ’ ಸಿನಿಮಾ ತೆಲುಗಿನಲ್ಲಿ ಹಿಟ್ ಆಗಿತ್ತು. ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿದ್ದೂ ಅಲ್ಲದೇ ಸ್ಟಾರ್​ ನಟರಿಂದ ಮೆಚ್ಚುಗೆ ಕೂಡ ಪಡೆದುಕೊಂಡಿದೆ.

ಕನ್ನಡದಲ್ಲಿ Love Reddy ಸಿನಿಮಾ ಬಿಡುಗಡೆ ಕುರಿತು ಸಿನಿಮಾ ತಂಡ ವ್ಯಾಪಕ ಪ್ರಚಾರ ಕಾರ್ಯ ಕೈಗೊಂಡಿದ್ದು, ವಿವಿಧ ಮಾಧ್ಯಮಗಳಿಗೆ ಸರಣಿ ಸಂದರ್ಶನ ನೀಡುತ್ತಿದೆ.

ಈ ಪ್ರಮೋಷನ್ ವೇಳೆ ಸಂದರ್ಶಕನಾಗಿ ಭಾಗವಹಿಸಿದ್ದ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮುಜುಗರಕ್ಕೆ ಒಳಗಾದ ಘಟನೆ ನಡೆದಿದ್ದು, ದರ್ಶನ್ ವಿಚಾರದಲ್ಲಿ ಅನಾವಶ್ಯಕವಾಗಿ ಪದೇ ಪದೇ ಮೂಗು ತೂರಿಸುವ ಅರ್ಹತೆ ನಿನಗೇನಿದೆ ಎಂದು Love Reddy ಸಿನಿಮಾ ನಿರ್ಮಾಪಕ ನೇರ ಸಂದರ್ಶನದಲ್ಲಿಯೇ ಜಾಡಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಪ್ರಮೋಷನ್ ವೇಳೆ Love Reddy ಸಿನಿಮಾ ನಾಯಕ ನಟ ಅಂಜನ್ ರಾಮಚಂದ್ರ, ನಟಿ ಶ್ರಾವಣಿ ರೆಡ್ಡಿ ಹಾಗೂ ಸಿನಿಮಾ ನಿರ್ಮಾಪಕ ರವಿಂದ್ರ ರೆಡ್ಡಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂದರ್ಶಕ ಜಗದೀಶ್ ಪದೇ ಪದೇ ನಟ ದರ್ಶನ್ ಅವರ ಹೆಸರನ್ನು ಅನಾವಶ್ಯಕವಾಗಿ ಉಲ್ಲೇಖಿಸಿದ್ದು ನಿರ್ಮಾಪಕ ರವೀಂದ್ರ ರೆಡ್ಡಿ ಅವರನ್ನು ಕೆರಳಿಸಿದೆ. ನೇರ ಸಂದರ್ಶನದಲ್ಲಿಯೇ ಸಿಡಿದೆದ್ದಿರುವ ರವೀಂದ್ರ ರೆಡ್ಡಿ, ದರ್ಶನ್ ಹೆಸರು ಬೇಡ ಸರ್ ಪಾಪಾ ಅವರ ಕಷ್ಟದಲ್ಲಿ ಅವರಿದ್ದಾರೆ. ಅವರ ಹೇಸರೇನುಕ್ ಇಲ್ ತರ್ತೀರಿ ಎಂದು ಮನವಿ ಮಾಡಿದ್ದಾರೆ.

ಅಲ್ಲದೆ ಫೇಸ್‌ಬುಕ್‌ ಸೇರಿದಂತೆ ಓದಲ್ಲಿ ಒಂದಲ್ಲಿ ದರ್ಶನ್ ಹೆಸರನ್ನು ಏತಕ್ಕೆ ಪ್ರಸ್ತಾಪ ಮಾಡ್ತಿರಿ ನಿಮಗೇನ್ ಅರ್ಹತೆ, ಹಕ್ಕಿದೆ ಎಂದಿದ್ದಾರೆ. ಈ ವೇಳೆ ಜಗದೀಶ್ ಅವರು ದರ್ಶನ್ ಏನ್ ನಿನ್ ಪ್ರಾಪರ್ಟಿನಾ..? ದರ್ಶನ್ ಹೆಸರು ನಿನ್ ಜಿಪಿಎ ಮಾಡ್ಕೊಂಡಿದ್ದೀಯ…? ಈ ರೀತಿ ಮಾತಾಡಿದರೆ ಇಂಟರ್ ವ್ಯೂ ಮಾಡಬೇಕಾ ಬೇಡವಾ ಅನಿಸ್ತಾ ಇದೆ ಎಂದಿದ್ದಾರೆ.

ಇದರಿಂದ ಮತ್ತಷ್ಟು ಕೆರಳಿದ ರವೀಂದ್ರ ರೆಡ್ಡಿ, ನಿನ್ ಇಂಟರ್ ವ್ಯೂ ಮಾಡದಿದ್ದರೆ ಬೇಡ, ನೀನ್ ಏನುಕ್ ಅನಾವಶ್ಯವಾಗಿ ದರ್ಶನ್ ಹೆಸರು ಪ್ರಸ್ತಾಪ ಮಾಡ್ತಿಯಾ..? ನಿನಗೇನ್ ಅರ್ಹತೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ನಾಯಕನಟ ಅಂಜನ್ ರಾಮಚಂದ್ರ ಮಧ್ಯ ಪ್ರವೇಶಿಸಿದ್ದು, ಜಗದೀಶ್ ಅವರನ್ನು ಕುಳ್ಳರಿಸಿ, ರವೀಂದ್ರ ರೆಡ್ಡಿ ಅವರನ್ನು ಸಮಾಧಾನಿಸಲು ಪಯತ್ನಿಸಿದರಾದರು, ಇಂಟರ್ ವ್ಯೂ ಬೇಡವೆಂದು ರವೀಂದ್ರ ರೆಡ್ಡಿ ಹೊರನಡೆದಿದ್ದಾರೆ.

ಇದರಿಂದ ಮುಜುಗರಕ್ಕೀಡಾದ ಜಗದೀಶ್ ಓಗ್ಲಿ ಬನ್ರಿ ಬನ್ರಿ ಎಂದರಾದರು, ಬೇಕಿಲ್ಲ ಓಗ್ರಿ ಎಂದು ದಿಕ್ಕರಿಸಿ ರವೀಂದ್ರ ರೆಡ್ಡಿ ನಡೆದಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗಿದೆ.

ನಂತರ ಮುಂದುವರಿದ ಸಂದರ್ಶನದಲ್ಲಿ ಸಿನಿಮಾ ತಂಡದ ಕ್ಷಮೆ ಕೋರಿರುವ ಜಗದೀಶ್, ದರ್ಶನ್ ಬಗ್ಗೆ ನನಗೂ ಅಭಿಮಾನವಿದೆ. ನಾನು ಅಭಿಮಾನಿಯೇ.. ನೋಡಿ ದರ್ಶನ್ ಅವರ ಅಭಿಮಾನಿಗಳು ಎಲ್ ಎಲ್ ಇದ್ದಾರೆ. ಅವರೊಂದು ಹಿರಿಯ ನಟ, ಅವರ ಸಲಹೆ ನಮಗೆಲ್ಲ ಬೇಕು, ದರ್ಶನ್ ಆಕಾಶದಲ್ಲಿ ಸೂರ್ಯ ಇದ್ದಂತೆ ಎಂದು ತೇಪೆ ಹಚ್ಚಲು ಮುಂದಾದರು.

ಜಗದೀಶ್ ಮಾತಿಗೆ ಬ್ರೇಕ್ ಹಾಕಿದ ತಡೆದ ನಟ ಅಂಜನ್ ರಾಮಚಂದ್ರ, ಜನರನ್ನು ತಲುಪು ಸಲುವಾಗಿ ನಿಮ್ಮ ಮೂಲಕ ಈ ಪ್ರಮಖಷನ್ ಭಾಗವಹಿಸಿದ್ದೇವೆ. ಆದರೆ ನೀವು ಪದೇ ಪದೇ ದರ್ಶನ್ ಸರ್ ಅವರ ಹೆಸರು ಬಳಸಿದ್ದು ಎಲ್ಲಿಂದ ಎಲ್ಲಿಗೋ ಹೋಗುತ್ತದೆ.

ನಮಗೆ ದರ್ಶನ್ ಸರ್ ಅಂದರೆ ಅಪಾರ ಪ್ರೀತಿ ದಯವಿಟ್ಟು ಇಲ್ಲಿಂದ ಬಿಟ್ಟು ಬಿಡಿ ಎಂದಿದ್ದಾರೆ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!