Antiquities: ಅನ್ವೇಷಣೆಯಲ್ಲಿ 5 ಬಾವಿ, 5 ಶಾಸನ ಸೇರಿದಂತೆ 600 ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಪತ್ತೆ..!

ಗದಗ: ಲಕ್ಕುಂಡಿಯಲ್ಲಿ ಜರುಗುತ್ತಿರುವ ಪ್ರಾಚ್ಯಾವಶೇಷಗಳ (Antiquities) ಅನ್ವೇಷಣೆಯಲ್ಲಿ 5 ಬಾವಿ ಹಾಗೂ ಐದು ಶಾಸನಗಳು ಸೇರಿದಂತೆ 600ಕ್ಕೂ ಅಧಿಕ ಪ್ರಾಚಾವೇಶಗಳು ಲಭ್ಯವಾಗಿವೆ ಎಂದು ಸಚಿವ ಎಚ್ ಕೆ ಪಾಟೀಲ್ ಅವರು ಹೇಳಿದರು.

ಲಕ್ಕುಂಡಿ ಗ್ರಾಮದಲ್ಲಿ ಭಾನುವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಲಕ್ಕುಂಡಿಯನ್ನು ರಾಷ್ಟ್ರಕೂಟರ ಕಾಲದಲ್ಲಿ ಕಟ್ಟಿದ್ದಾರೆ. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ವಿಶೇಷ ಅಭಿವೃದ್ಧಿ ಹೊಂದಿ ಕಲಚುರ್ಯರು, ಹೊಯ್ಸಳರು, ಕೆಲವು ಕಾಲ ವಿಜಯನಗರದ ಅರಸರು ಆಳಿದ್ದಾರೆ. ಇಂದು ಪ್ರಾಚ್ಯಾವಶೇಷಗಳ ಅನ್ವೇಷಣೆ ಸಂಗ್ರಹಣೆ ಕೆಲಸವೂ ವಿಶೇಷ ಪ್ರಯತ್ನವಾಗಿದ್ದು ಸಾಂಸ್ಕೃತಿಕ, ಐತಿಹಾಸಿಕ, ಕಾಂತ್ರಿಕಾರಿಕ ಹಜ್ಜೆ ಎಂದರು.

ನವೆಂಬರ್ 22, 23 ಮತ್ತು24 ರಂದು ಪ್ರಾಚ್ಯಾವಶೇಷಗಳ ಅನ್ವೇಷಣೆ ಕೈಗೊಡು ಲಕ್ಕುಂಡಿಯಲ್ಲಿ ಈ ಹಿಂದೆ ಇದ್ದ 101 ದೇವಾಲಯಗಳಲ್ಲಿ ಇಂದು 50-60 ಲಭ್ಯವಾಗಿದೆ ಹಾಗೂ 8-10 ದೇವಾಲಯದ ಪಾಯಗಳು ದೊರಕಿವೆ.

ಇನ್ನೂ ಉಳಿದ ದೇವಾಲಯಗಳು ಎಲ್ಲಲ್ಲಿ ಇದ್ದವು ಎಂದು ಗುರುತಿಸುವ ಬಹು ದೊಡ್ಡ ಕೆಲಸವಾಗಿದೆ ಹಾಗೂ ಹುದುಗಿಹೋದ ದೇವಾಲಯಗಳಲ್ಲಿ ಮರುಸೃಷ್ಟಿಸಬಹುದಾದ ದೇವಾಲಯ ಬಗ್ಗೆ ತಜ್ಞರು ಗಂಭೀರ ಆಲೋಚನೆ ಮಾಡುತ್ತಿದ್ದಾರೆ ಎಂದರು.

ಅನ್ವೇಷಣೆ ಸಂದರ್ಭದಲ್ಲಿ 5 ಹಳೆ ಬಾವಿಗಳು ಹಿಸದಾಗಿ ಸಿಕ್ಕಿದೆ, ಹಾಗೂ 5 ಶಾಸನ ಲಭ್ಯವಾಗಿದೆ ಅದರಲ್ಲಿ 3 ಶಾಸನಗಳು ಸಂಪೂರ್ಣ ಅಪ್ರಕಟಿತವಾಗಿದೆ. 2 ಅಪ್ರಕಟಿತವಾಗಿದೆ ಎಂದು ತಿಳಿಸಿದರು.

ಈ ಕಾರ್ಯ ಎಲ್ಲರನ್ನೂ ಹುಮ್ಮಸ್ಸುಗೊಳಿಸಿದೆ, ಸರ್ಕಾರ ಕೆಲಸದಿಂದ ಇತಿಹಾಸವಿರುವ ಗ್ರಾಮಗಳಲ್ಲಿ ಯಾವ ರೀತಿ ಕಾರ್ಯ ಕೈಗೊಳ್ಳಬಹುದು ಎನ್ನುವುದರ ಬಗ್ಗೆ ದಿಕ್ಸೂಚಿ ಆಗಿದೆ ಎಂದು ಹೇಳಿದರು.

ಇಂದು 13 ಗುಡಿಗಳನ್ನು ರಕ್ಷಿತ ಸ್ಮಾರಕ ಎಂದು ಪೋಷಿಸಲು ಸರ್ಕಾರ ನಿರ್ಣಾಯ ಮಾಡಿದೆ ಹಾಗೂ 1 ಮಠದಲ್ಲಿ ವಾಸಮಾಡುತ್ತಿರುವ ಮಾಲಿಕರು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಬಿಟ್ಟುಕೊಟ್ಟಿದ್ದಾರೆ.

ಸ್ವ ಇಚ್ಛೆಯಿಂದ ಬಿಟ್ಟು ಕೊಟ್ಟ ಅವರಿಗೆ ಸರ್ಕಾರದಿಂದ ವಿಶೇಷ ಗೌರವ ನೀಡಲಾಗಿದೆ ಹಾಗೂ ಇನ್ನೂ 4 ಹತ್ತಿರ ವಾಸಮಾಡುತ್ತಿರುವ ಗುಡಿಗಳನ್ನು ಸರ್ಕಾರ ಪಡೆದುಕೊಳ್ಳುವುದಕ್ಕೆ ಮಾತುಕತೆ ನಡೆಸುತ್ತಿದೆ ಎಂದು ತಿಳಿಸಿದರು.

13 ಸ್ಮಾರಕಗಳ ಸಂರಕ್ಷಣಾ ಕೆಲಸ ಪ್ರಾರಂಭವಾಗಿದೆ. ಮೊದಲು ಭೂಮಿಯ ಮೇಲ್ಭಾಗದಲ್ಲಿ ಲಭ್ಯವಿರುವ ಸ್ಮಾರಕಗಳನ್ನು ಸಂಗ್ರಹಿಸುಲಾಗುತ್ತದೆ. ಆನಂತರ ಡಿಸೆಂಬರ್ ಅಂತ್ಯದ ಒಳಗೆ ಉತ್ಖನನ ಕೆಲಸ ಪ್ರಾರಂಭಿಸಲಾಗುತ್ತದೆ, ಹಾಗೂ ಕೋಟೆಯನ್ನು ಅಭಿವೃದ್ಧಿ ಪಡಿಸಿ ಲಕ್ಕುಂಡಿಯನ್ನು ಪ್ರವಾಸೋದ್ಯಮ ತಾಣವನ್ನಾಗಿಸಿ, ಇತಿಹಾಸವನ್ನು ತಿಳಿಯಲು ಬರುವವರಿಗೆ ಶ್ರೇಷ್ಠ ಕೇಂದ್ರವನ್ನಾಗಿಸಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯದಿಂದ ಲಕ್ಕುಂಡಿಯನ್ನು ಯುನೆಸ್ಕೋ ಪಟ್ಟಿಗೆ ಸೇರಿಸಲು ಹತ್ತಿರ ತೆಗೆದುಕೊಂಡು ಹೋಗುತ್ತೇವೆ ಎಂದು ತಿಳಿಸಿದರು.

ಶಾಸಕರಾದ ಸಿ ಸಿ ಪಾಟೀಲ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸಲಹಾ ಸಮಿತಿಯ ಸದಸ್ಯ,ಸಿದ್ಧಲಿಂಗೇಶ್ವರ ಎಚ್ ಪಾಟೀಲ,
ಸೇರಿದಂತೆ ಉಳಿದ ಅಧಿಕಾರಿಗಳು ಹಾಜರಿದ್ದರು.

1050 ಪ್ರಾಚ್ಯಾವಶೇಷಗಳು ಪತ್ಯೆ

ಲಕ್ಕುಂಡಿಯಲ್ಲಿ ನಡೆದ ಪ್ರಾಚ್ಯಾವಶೇಷ ಅನ್ವೇಷಣೆಯಲ್ಲಿ ಸಾಯಂಕಾಲದ ವೇಳೆಗೆ 13 ಶಾಸನ ಸೇರಿದಂತೆ ಒಟ್ಟಾರೆ 1050 ಪ್ರಾಚ್ಯಾವಶೇಷಗಳು ಪತ್ಯೆಯಾಗಿವೆ.

ಇವುಗಳಲ್ಲಿ ಪ್ರಮುಖವಾಗಿ ಗತಕಾಲದ ನಾಣ್ಯಗಳು, ದೇವರ ಮೂರ್ತಿಗಳು, ಶಿಲ್ಪ ಕಲೆ, ಶಿಲಾಮಂಟಪ ಅವಶೇಷಗಳು ಹಾಗೂ ಶಿಲಾಯುಗದ ಹಲವಾರು ಪಳವಳಿಕೆಗಳು ದೊರೆತಿವೆ. 3500 ವರ್ಷಗಳ ಹಿಂದಿನ ಶಿಲಾಯುಗದ ಕಲ್ಲಿನ ಆಯುಧ ಪತ್ತೆಯಾಗಿರುವುದು ವಿಶೇಷ.

ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ಕೆ ಜನಪದ ಕಲಾತಂಡ,ಪೊಲೀಸ್ ಬ್ಯಾಂಡ್ ಮೆರಗು ನೀಡಿತು ಜೊತೆಗೆ ಗ್ರಾಮದ ಮಹಿಳೆಯರು ಸ್ವಯಂ ಪ್ರೇರಿತರಾಗಿ ಪೂರ್ಣ ಕುಂಭದೊಂದಿಗೆ ಪ್ರಮುಖ ದೀಪಗಳಲ್ಲಿ ಚಲಿಸಿದರು, ಜನಪ್ರತಿನಿಧಿಗಳು ಹಾಗೂ ಅಧಿಕಾರಗಳ
ಅನ್ವೇಷಣೆಯ ಪ್ರತಿ ತಂಡಕ್ಕೆ ಒಂದೊಂದು ಕಲಾ ತಂಡ ಇದ್ದು ಪ್ರಾಚ್ಯಾವಶೇಷಗಳಿಗೆ ವಿಶೇಷ ಆತಿಥ್ಯದೊಂದಿಗೆ ಸಂಗ್ರಹಿಸುವ ಕಾರ್ಯ ಭರದಿಂದ ಸಾಗಿತು ಒಟ್ಟಾರೆ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯ ಯಶಸ್ವಿಯಾಯಿತು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!