Antiquities: ಅನ್ವೇಷಣೆಯಲ್ಲಿ 5 ಬಾವಿ, 5 ಶಾಸನ ಸೇರಿದಂತೆ 600 ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಪತ್ತೆ..!

ಗದಗ: ಲಕ್ಕುಂಡಿಯಲ್ಲಿ ಜರುಗುತ್ತಿರುವ ಪ್ರಾಚ್ಯಾವಶೇಷಗಳ (Antiquities) ಅನ್ವೇಷಣೆಯಲ್ಲಿ 5 ಬಾವಿ ಹಾಗೂ ಐದು ಶಾಸನಗಳು ಸೇರಿದಂತೆ 600ಕ್ಕೂ ಅಧಿಕ ಪ್ರಾಚಾವೇಶಗಳು ಲಭ್ಯವಾಗಿವೆ ಎಂದು ಸಚಿವ ಎಚ್ ಕೆ ಪಾಟೀಲ್ ಅವರು ಹೇಳಿದರು.

ಲಕ್ಕುಂಡಿ ಗ್ರಾಮದಲ್ಲಿ ಭಾನುವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಲಕ್ಕುಂಡಿಯನ್ನು ರಾಷ್ಟ್ರಕೂಟರ ಕಾಲದಲ್ಲಿ ಕಟ್ಟಿದ್ದಾರೆ. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ವಿಶೇಷ ಅಭಿವೃದ್ಧಿ ಹೊಂದಿ ಕಲಚುರ್ಯರು, ಹೊಯ್ಸಳರು, ಕೆಲವು ಕಾಲ ವಿಜಯನಗರದ ಅರಸರು ಆಳಿದ್ದಾರೆ. ಇಂದು ಪ್ರಾಚ್ಯಾವಶೇಷಗಳ ಅನ್ವೇಷಣೆ ಸಂಗ್ರಹಣೆ ಕೆಲಸವೂ ವಿಶೇಷ ಪ್ರಯತ್ನವಾಗಿದ್ದು ಸಾಂಸ್ಕೃತಿಕ, ಐತಿಹಾಸಿಕ, ಕಾಂತ್ರಿಕಾರಿಕ ಹಜ್ಜೆ ಎಂದರು.

ನವೆಂಬರ್ 22, 23 ಮತ್ತು24 ರಂದು ಪ್ರಾಚ್ಯಾವಶೇಷಗಳ ಅನ್ವೇಷಣೆ ಕೈಗೊಡು ಲಕ್ಕುಂಡಿಯಲ್ಲಿ ಈ ಹಿಂದೆ ಇದ್ದ 101 ದೇವಾಲಯಗಳಲ್ಲಿ ಇಂದು 50-60 ಲಭ್ಯವಾಗಿದೆ ಹಾಗೂ 8-10 ದೇವಾಲಯದ ಪಾಯಗಳು ದೊರಕಿವೆ.

ಇನ್ನೂ ಉಳಿದ ದೇವಾಲಯಗಳು ಎಲ್ಲಲ್ಲಿ ಇದ್ದವು ಎಂದು ಗುರುತಿಸುವ ಬಹು ದೊಡ್ಡ ಕೆಲಸವಾಗಿದೆ ಹಾಗೂ ಹುದುಗಿಹೋದ ದೇವಾಲಯಗಳಲ್ಲಿ ಮರುಸೃಷ್ಟಿಸಬಹುದಾದ ದೇವಾಲಯ ಬಗ್ಗೆ ತಜ್ಞರು ಗಂಭೀರ ಆಲೋಚನೆ ಮಾಡುತ್ತಿದ್ದಾರೆ ಎಂದರು.

ಅನ್ವೇಷಣೆ ಸಂದರ್ಭದಲ್ಲಿ 5 ಹಳೆ ಬಾವಿಗಳು ಹಿಸದಾಗಿ ಸಿಕ್ಕಿದೆ, ಹಾಗೂ 5 ಶಾಸನ ಲಭ್ಯವಾಗಿದೆ ಅದರಲ್ಲಿ 3 ಶಾಸನಗಳು ಸಂಪೂರ್ಣ ಅಪ್ರಕಟಿತವಾಗಿದೆ. 2 ಅಪ್ರಕಟಿತವಾಗಿದೆ ಎಂದು ತಿಳಿಸಿದರು.

ಈ ಕಾರ್ಯ ಎಲ್ಲರನ್ನೂ ಹುಮ್ಮಸ್ಸುಗೊಳಿಸಿದೆ, ಸರ್ಕಾರ ಕೆಲಸದಿಂದ ಇತಿಹಾಸವಿರುವ ಗ್ರಾಮಗಳಲ್ಲಿ ಯಾವ ರೀತಿ ಕಾರ್ಯ ಕೈಗೊಳ್ಳಬಹುದು ಎನ್ನುವುದರ ಬಗ್ಗೆ ದಿಕ್ಸೂಚಿ ಆಗಿದೆ ಎಂದು ಹೇಳಿದರು.

ಇಂದು 13 ಗುಡಿಗಳನ್ನು ರಕ್ಷಿತ ಸ್ಮಾರಕ ಎಂದು ಪೋಷಿಸಲು ಸರ್ಕಾರ ನಿರ್ಣಾಯ ಮಾಡಿದೆ ಹಾಗೂ 1 ಮಠದಲ್ಲಿ ವಾಸಮಾಡುತ್ತಿರುವ ಮಾಲಿಕರು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಬಿಟ್ಟುಕೊಟ್ಟಿದ್ದಾರೆ.

ಸ್ವ ಇಚ್ಛೆಯಿಂದ ಬಿಟ್ಟು ಕೊಟ್ಟ ಅವರಿಗೆ ಸರ್ಕಾರದಿಂದ ವಿಶೇಷ ಗೌರವ ನೀಡಲಾಗಿದೆ ಹಾಗೂ ಇನ್ನೂ 4 ಹತ್ತಿರ ವಾಸಮಾಡುತ್ತಿರುವ ಗುಡಿಗಳನ್ನು ಸರ್ಕಾರ ಪಡೆದುಕೊಳ್ಳುವುದಕ್ಕೆ ಮಾತುಕತೆ ನಡೆಸುತ್ತಿದೆ ಎಂದು ತಿಳಿಸಿದರು.

13 ಸ್ಮಾರಕಗಳ ಸಂರಕ್ಷಣಾ ಕೆಲಸ ಪ್ರಾರಂಭವಾಗಿದೆ. ಮೊದಲು ಭೂಮಿಯ ಮೇಲ್ಭಾಗದಲ್ಲಿ ಲಭ್ಯವಿರುವ ಸ್ಮಾರಕಗಳನ್ನು ಸಂಗ್ರಹಿಸುಲಾಗುತ್ತದೆ. ಆನಂತರ ಡಿಸೆಂಬರ್ ಅಂತ್ಯದ ಒಳಗೆ ಉತ್ಖನನ ಕೆಲಸ ಪ್ರಾರಂಭಿಸಲಾಗುತ್ತದೆ, ಹಾಗೂ ಕೋಟೆಯನ್ನು ಅಭಿವೃದ್ಧಿ ಪಡಿಸಿ ಲಕ್ಕುಂಡಿಯನ್ನು ಪ್ರವಾಸೋದ್ಯಮ ತಾಣವನ್ನಾಗಿಸಿ, ಇತಿಹಾಸವನ್ನು ತಿಳಿಯಲು ಬರುವವರಿಗೆ ಶ್ರೇಷ್ಠ ಕೇಂದ್ರವನ್ನಾಗಿಸಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯದಿಂದ ಲಕ್ಕುಂಡಿಯನ್ನು ಯುನೆಸ್ಕೋ ಪಟ್ಟಿಗೆ ಸೇರಿಸಲು ಹತ್ತಿರ ತೆಗೆದುಕೊಂಡು ಹೋಗುತ್ತೇವೆ ಎಂದು ತಿಳಿಸಿದರು.

ಶಾಸಕರಾದ ಸಿ ಸಿ ಪಾಟೀಲ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸಲಹಾ ಸಮಿತಿಯ ಸದಸ್ಯ,ಸಿದ್ಧಲಿಂಗೇಶ್ವರ ಎಚ್ ಪಾಟೀಲ,
ಸೇರಿದಂತೆ ಉಳಿದ ಅಧಿಕಾರಿಗಳು ಹಾಜರಿದ್ದರು.

1050 ಪ್ರಾಚ್ಯಾವಶೇಷಗಳು ಪತ್ಯೆ

ಲಕ್ಕುಂಡಿಯಲ್ಲಿ ನಡೆದ ಪ್ರಾಚ್ಯಾವಶೇಷ ಅನ್ವೇಷಣೆಯಲ್ಲಿ ಸಾಯಂಕಾಲದ ವೇಳೆಗೆ 13 ಶಾಸನ ಸೇರಿದಂತೆ ಒಟ್ಟಾರೆ 1050 ಪ್ರಾಚ್ಯಾವಶೇಷಗಳು ಪತ್ಯೆಯಾಗಿವೆ.

ಇವುಗಳಲ್ಲಿ ಪ್ರಮುಖವಾಗಿ ಗತಕಾಲದ ನಾಣ್ಯಗಳು, ದೇವರ ಮೂರ್ತಿಗಳು, ಶಿಲ್ಪ ಕಲೆ, ಶಿಲಾಮಂಟಪ ಅವಶೇಷಗಳು ಹಾಗೂ ಶಿಲಾಯುಗದ ಹಲವಾರು ಪಳವಳಿಕೆಗಳು ದೊರೆತಿವೆ. 3500 ವರ್ಷಗಳ ಹಿಂದಿನ ಶಿಲಾಯುಗದ ಕಲ್ಲಿನ ಆಯುಧ ಪತ್ತೆಯಾಗಿರುವುದು ವಿಶೇಷ.

ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ಕೆ ಜನಪದ ಕಲಾತಂಡ,ಪೊಲೀಸ್ ಬ್ಯಾಂಡ್ ಮೆರಗು ನೀಡಿತು ಜೊತೆಗೆ ಗ್ರಾಮದ ಮಹಿಳೆಯರು ಸ್ವಯಂ ಪ್ರೇರಿತರಾಗಿ ಪೂರ್ಣ ಕುಂಭದೊಂದಿಗೆ ಪ್ರಮುಖ ದೀಪಗಳಲ್ಲಿ ಚಲಿಸಿದರು, ಜನಪ್ರತಿನಿಧಿಗಳು ಹಾಗೂ ಅಧಿಕಾರಗಳ
ಅನ್ವೇಷಣೆಯ ಪ್ರತಿ ತಂಡಕ್ಕೆ ಒಂದೊಂದು ಕಲಾ ತಂಡ ಇದ್ದು ಪ್ರಾಚ್ಯಾವಶೇಷಗಳಿಗೆ ವಿಶೇಷ ಆತಿಥ್ಯದೊಂದಿಗೆ ಸಂಗ್ರಹಿಸುವ ಕಾರ್ಯ ಭರದಿಂದ ಸಾಗಿತು ಒಟ್ಟಾರೆ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯ ಯಶಸ್ವಿಯಾಯಿತು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!