Doddaballapura hospitals: ಸರ್ಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಚಿಕಿತ್ಸೆ.! ವೈದ್ಯರಿಲ್ಲದೆ ರೋಗಿಗಳ ಪರದಾಟ..!

ದೊಡ್ಡಬಳ್ಳಾಪುರ (Doddaballapura hospitals): ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಆಸ್ಪತ್ರೆಗಲ್ಲಿ ವೈದ್ಯರ ಕೊರತೆ ಮಿತಿಮೀರಿದ್ದು, ರೋಗಿಗಳು ಪರದಾಡುವ ಪರಿಸ್ಥಿತಿ ಎದುರಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ, ಕೊನೇನಹಳ್ಳಿ, ಸಾಸಲು, ಕನಸವಾಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದು, ತುರ್ತು ಸಂದರ್ಭಗಳಲ್ಲಿ ರೋಗಿಗಳು ತೊಂದರೆಗೆ ಒಳಗಾಗುತ್ತಿದ್ದಾರೆ ಎಂಬ ಆರೋಪ ಸ್ಥಳೀಯರದ್ದಾಗಿದೆ.

ವೈದ್ಯರ ಟ್ರಾನ್ಫರ್, ತರಬೇತಿ, ಮುಂದುವರಿದ ಶಿಕ್ಷಣದ ಕಾರಣ ತಾಲೂಕಿನ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಎದುರಾಗಿದೆ. ಈ ಮುಂಚೆ ದೊಡ್ಡ ಹೆಜ್ಜಾಜಿ, ಕೊನೇನಹಳ್ಳಿ, ಕನಸವಾಡಿ, ತೂಬಗೆರೆ ಆಸ್ಪತ್ರೆಗಳ್ಳಿ ಇಬ್ಬರು ವೈದ್ಯರು ಕಾರ್ಯನಿರ್ವಹಿಸುತ್ತಿದ್ದರು. ಆದರೆ ಒಬ್ಬರೆ ಕಾರ್ಯನಿರ್ವಗಿಸಬೇಕಿದೆ.

ಇನ್ನೂ ಉಳಿದಿರುವ ಅಕ್ಕಪಕ್ಕದ ಆಸ್ಪತ್ರೆಗಳ ವೈದ್ಯರನ್ನು ಕೊರತೆ ಇರುವ ಎರಡು, ಮೂರು ಆಸ್ಪತ್ರೆಗೆ ಡೆಪ್ಟೇಷನ್ ಮಾಡುತ್ತಿರುವುದರಿಂದ ಎಲ್ಲಿಯೂ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಅವರಿಗೆ ತರಬೇತಿ, ಮೀಟಿಂಗ್ ಮತ್ತಿತರ ಹೆಚ್ಚುವರಿ ಕೆಲಸದಿಂದ ರೋಗಿಗಳು ಪರಿಸ್ಥಿತಿ ಕೇಳುವವರೇ ಇಲ್ಲವಾಗುತ್ತಿದೆ.

ಈ ಸಮಸ್ಯೆ ಉಂಟಾಗದಂತೆ ಎಲ್‌ಸಿಡಿಆರ್ (LCDR) ಹುದ್ದೆ ನೇಮಕ ಮಾಡಿಕೊಂಡು, ಈ ರೀತಿ ಕೊರತೆ ಎದುರಾಗುವ ಆಸ್ಪತ್ರೆಗೆ ಆ LCDR ವೈದ್ಯರನ್ನು ಕಳುಹಿಸಿ ಸರಿ ದೂಗಿಸಲಾಗುತ್ತಿತ್ತು. ಆದರೆ ಈಗ ಆ ಹುದ್ದೆ ಇಲ್ಲವಾಗಿರುವುದರಿಂದ ಸಮಸ್ಯೆ ತೀವ್ರ ಸ್ವರೂಪ ಪಡೆಯುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ದೊಡ್ಡ ತಾಲೂಕಾಗಿದ್ದು, ಹೆಚ್ಚಿನ ಜನಸಂಖ್ಯೆ ಹೊಂದಿದೆ. ಅಲ್ಲದೆ ಹಿಂದುಳಿದ ತಾಲೂಕಾಗಿರುವುದರಿಂದ ಸ್ಥಳೀಯ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿಂದ ಅನಾರೋಗ್ಯದ ಸಂದರ್ಭದಲ್ಲಿ ಚಿಕಿತ್ಸೆ ದೊರಕದೆ, ದೂರದೂರದ ಊರುಗಳಿಂದ ನಗರಕ್ಕೆ ಚಿಕಿತ್ಸೆ ಪಡೆಯಲು ಬರಬೇಕಾದ ಅನಿವಾರ್ಯತೆ ಎದುರಾಗಿದೆ.

ಹಗಲು ಹೊತ್ತಿನಲ್ಲಿ ಚಿಕಿತ್ಸೆ ಪಡೆಯಲು ದೊಡ್ಡಬಳ್ಳಾಪುರಕ್ಕೆ ತೆರಳಬಹುದು. ಆದರೆ ರಾತ್ರಿ ಸಂದರ್ಭದಲ್ಲಿ, ತುರ್ತು ಸಂದರ್ಭಗಳಲ್ಲಿ ಗತಿ ಏನು ಎಂಬ ಪ್ರಶ್ನೆ ಎದುರಾಗಿದೆ.

ಈ ಕುರಿತು ಮಾಹಿತಿ ಪಡೆಯಲು ದೊಡ್ಡಬಳ್ಳಾಪುರ ತಾಲೂಕು ವೈದ್ಯಾಧಿಕಾರಿಯವರನ್ನು ಸಂಪರ್ಕಿಸಿದಾಗ ತಾಲೂಕಿನ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದು, ಇತರೆ ಆಸ್ಪತ್ರೆಗಳಿಂದ ಡೆಪ್ಟೇಷನ್ ಹಾಕಲಾಗಿದೆ ಎಂದಿದ್ದಾರೆ.

ಒಟ್ಟಾರೆ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮೀಣ ಜನರ ಅನಾರೋಗ್ಯದ ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಇರುವ ಸರಕಾರಿ ಆಸ್ಪತ್ರೆಗಳು ವೈದ್ಯರ ಕೊರತೆ, ಅಗತ್ಯ ಸಿಬ್ಬಂದಿಗಳ ಕೊರತೆಯಿಂದ ಬಳಲುತ್ತಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡಬೇಕಾದ ಆಸ್ಪತ್ರೆಗಳಿಗೆ ಮೊದಲು ತುರ್ತು ಚಿಕಿತ್ಸೆ ನೀಡಬೇಕಾದ ಅನಿವಾರ್ಯ ಉಂಟಾಗಿದೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]