ಉಪ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರಕ್ಕೆ ಜನಾದೇಶವಲ್ಲ: ಬಸವರಾಜ ಬೊಮ್ಮಾಯಿ (basavaraj bommai)

ಬೆಂಗಳೂರು: ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡಿರುವ ಜನಾದೇಶವಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಭ್ರಮನಿರಸನಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (basavaraj bommai) ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಉಪ ಚುನಾವಣೆ ಸರ್ಕಾರದ ಪರವಾಗಿರುತ್ತವೆ. ನಾವು ಅಧಿಕಾರದಲ್ಲಿ ಇದ್ದಾಗ 17 ಉಪ ಚುನಾವಣೆಗಳಲ್ಲಿ 13 ಉಪ ಚುನಾವಣೆ ಗೆದ್ದಿದ್ದೇವೆ.

ಕಾಂಗ್ರೆಸ್ ನವರು ಇದು ಸರ್ಕಾರದ ಪರ ಜನರ ತೀರ್ಪು ಅಂತ ತಿಳಿದುಕೊಳ್ಳುವ ಅವಗತ್ಯವಿಲ್ಲ. ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿ ಆಗಿಲ್ಲ ಅಂತ ಭ್ರಮ ನಿರಸನಗೊಂಡಿದ್ದಾರೆ. ಈ ಚುನವಣೆ ಫಲಿತಾಂಶ ಉಪಚುನಾವಣೆ ನಡೆದ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಹೇಳಿದರು.

ಇನ್ನು ಗ್ಯಾರೆಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಆಡಳಿತ ಪಕ್ಷದ ಶಾಸಕರೇ ತಮ್ಮ ಪಕ್ಷದ ವೇದಿಕೆಯಲ್ಲಿ ಹೇಳಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಹಣಕಾಸಿನ ಸಿದ್ದತೆ ಮಾಡಿಕೊಳ್ಳದೇ ಗ್ಯಾರೆಂಟಿ ಯೋಜನೆ ಜಾರಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಲಕ್ಷ ಕೋಟಿಗಿಂತಲೂ ಹೆಚ್ಚು ಸಾಲ ಮಾಡಿದ್ದಾರೆ. ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಕಷ್ಟವಾಗಿದೆ. ಹದಿನೈದನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಸುಮಾರು ಎರಡು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಗ್ರಾಮ ಪಂಚಾಯತಿಗಳು ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕಿದೆ.

ಅಂಗನವಾಡಿ ಕಾರ್ಯಕರ್ತೆಯರು, ಗುತ್ತಿಗೆ ನೌಕರರಿಗೆ ಸಂಬಳ ಆಗುತ್ತಿಲ್ಲ. ಹಣ ಬಿಡುಗಡೆಯಾಗುತ್ತಿಲ್ಲ ಎನ್ನುವ ಕಾರಣಕ್ಕೆ ಟೆಂಡರ್ ಕರೆದರೂ ಕೆಲಸ ಮಾಡಲು ಕಾಂಟ್ರ್ಯಾಕ್ಟರ್ ಬರುತ್ತಿಲ್ಲ ಎಂದು ಹೇಳಿದರು.

ಬಿಜೆಪಿಯಲ್ಲಿ ಬಿನ್ನಮತ ಹೆಚ್ಚಾಗಿದಿಯಾ ಎನ್ನುವ ಪ್ರಶ್ನೆಗೆ ಬಿಜೆಪಿಯಲ್ಲಿ ಭಿನ್ನಮತವಿಲ್ಲ. ಎಲ್ಲರೂ ಬಿಜೆಪಿ ಪರವಿದ್ದಾರೆ. ಕೆಲವು ವಿಚಾರಗಳಲ್ಲಿ ಭಿನ್ನ ಅಭಿಪ್ರಾಯಗಳಿವೆ. ಒಂದು ತಿಂಗಳಲ್ಲಿ ಎಲ್ಲವೂ ಸರಿಯಾಗುವ ವಿಶ್ವಾಸವಿದೆ. ಬಿಜೆಪಿಯ ಒಂದು ತಂಡ ಉತ್ಸಾಹದಿಂದ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಅಕ್ರಮವಾಗಿ ಗನ್ ಮಾರಾಟ ಮಾಡುತ್ತಿರುವ ಜಾಲದ ಕುರಿತು ಕೇಳಿದ ಪ್ರಶ್ನೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಪೊಲಿಸ್ ಸ್ಟೇಷನ್ ಗಳು, ಕಲೆಕ್ಷನ್ ಸೆಂಟರ್ ಆಗಿವೆ. ಭಯೊತ್ಪಾದನೆಗೆ ಬೆಂಬಲಕೊಡುವವರನ್ನು ರಕ್ಷಿಸುತ್ತಾರೆ. ಬಂಗ್ಲಾ ನಿರಾಶ್ರಿತರು ನುಸುಳುತ್ತಿದ್ದಾರೆ‌. ಇದೇ ರೀತಿ ಮುಂದುವರೆದರೆ ಪರಿಸ್ಥಿತಿ ಕಷ್ಟವಾಗಲಿದೆ ಎಂದು ಹೇಳಿದರು.

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!