ಉಪ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರಕ್ಕೆ ಜನಾದೇಶವಲ್ಲ: ಬಸವರಾಜ ಬೊಮ್ಮಾಯಿ (basavaraj bommai)

ಬೆಂಗಳೂರು: ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡಿರುವ ಜನಾದೇಶವಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಭ್ರಮನಿರಸನಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (basavaraj bommai) ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಉಪ ಚುನಾವಣೆ ಸರ್ಕಾರದ ಪರವಾಗಿರುತ್ತವೆ. ನಾವು ಅಧಿಕಾರದಲ್ಲಿ ಇದ್ದಾಗ 17 ಉಪ ಚುನಾವಣೆಗಳಲ್ಲಿ 13 ಉಪ ಚುನಾವಣೆ ಗೆದ್ದಿದ್ದೇವೆ.

ಕಾಂಗ್ರೆಸ್ ನವರು ಇದು ಸರ್ಕಾರದ ಪರ ಜನರ ತೀರ್ಪು ಅಂತ ತಿಳಿದುಕೊಳ್ಳುವ ಅವಗತ್ಯವಿಲ್ಲ. ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿ ಆಗಿಲ್ಲ ಅಂತ ಭ್ರಮ ನಿರಸನಗೊಂಡಿದ್ದಾರೆ. ಈ ಚುನವಣೆ ಫಲಿತಾಂಶ ಉಪಚುನಾವಣೆ ನಡೆದ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಹೇಳಿದರು.

ಇನ್ನು ಗ್ಯಾರೆಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಆಡಳಿತ ಪಕ್ಷದ ಶಾಸಕರೇ ತಮ್ಮ ಪಕ್ಷದ ವೇದಿಕೆಯಲ್ಲಿ ಹೇಳಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಹಣಕಾಸಿನ ಸಿದ್ದತೆ ಮಾಡಿಕೊಳ್ಳದೇ ಗ್ಯಾರೆಂಟಿ ಯೋಜನೆ ಜಾರಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಲಕ್ಷ ಕೋಟಿಗಿಂತಲೂ ಹೆಚ್ಚು ಸಾಲ ಮಾಡಿದ್ದಾರೆ. ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಕಷ್ಟವಾಗಿದೆ. ಹದಿನೈದನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಸುಮಾರು ಎರಡು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಗ್ರಾಮ ಪಂಚಾಯತಿಗಳು ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕಿದೆ.

ಅಂಗನವಾಡಿ ಕಾರ್ಯಕರ್ತೆಯರು, ಗುತ್ತಿಗೆ ನೌಕರರಿಗೆ ಸಂಬಳ ಆಗುತ್ತಿಲ್ಲ. ಹಣ ಬಿಡುಗಡೆಯಾಗುತ್ತಿಲ್ಲ ಎನ್ನುವ ಕಾರಣಕ್ಕೆ ಟೆಂಡರ್ ಕರೆದರೂ ಕೆಲಸ ಮಾಡಲು ಕಾಂಟ್ರ್ಯಾಕ್ಟರ್ ಬರುತ್ತಿಲ್ಲ ಎಂದು ಹೇಳಿದರು.

ಬಿಜೆಪಿಯಲ್ಲಿ ಬಿನ್ನಮತ ಹೆಚ್ಚಾಗಿದಿಯಾ ಎನ್ನುವ ಪ್ರಶ್ನೆಗೆ ಬಿಜೆಪಿಯಲ್ಲಿ ಭಿನ್ನಮತವಿಲ್ಲ. ಎಲ್ಲರೂ ಬಿಜೆಪಿ ಪರವಿದ್ದಾರೆ. ಕೆಲವು ವಿಚಾರಗಳಲ್ಲಿ ಭಿನ್ನ ಅಭಿಪ್ರಾಯಗಳಿವೆ. ಒಂದು ತಿಂಗಳಲ್ಲಿ ಎಲ್ಲವೂ ಸರಿಯಾಗುವ ವಿಶ್ವಾಸವಿದೆ. ಬಿಜೆಪಿಯ ಒಂದು ತಂಡ ಉತ್ಸಾಹದಿಂದ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಅಕ್ರಮವಾಗಿ ಗನ್ ಮಾರಾಟ ಮಾಡುತ್ತಿರುವ ಜಾಲದ ಕುರಿತು ಕೇಳಿದ ಪ್ರಶ್ನೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಪೊಲಿಸ್ ಸ್ಟೇಷನ್ ಗಳು, ಕಲೆಕ್ಷನ್ ಸೆಂಟರ್ ಆಗಿವೆ. ಭಯೊತ್ಪಾದನೆಗೆ ಬೆಂಬಲಕೊಡುವವರನ್ನು ರಕ್ಷಿಸುತ್ತಾರೆ. ಬಂಗ್ಲಾ ನಿರಾಶ್ರಿತರು ನುಸುಳುತ್ತಿದ್ದಾರೆ‌. ಇದೇ ರೀತಿ ಮುಂದುವರೆದರೆ ಪರಿಸ್ಥಿತಿ ಕಷ್ಟವಾಗಲಿದೆ ಎಂದು ಹೇಳಿದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!