ವಕ್ಫ್ ವಿರುದ್ಧ BJP ‘ಬಿ’ ಟೀಮ್ ಪ್ರತಿಭಟನೆ| ವರಿಷ್ಠರಿಗೆ ದೂರು

ಬೀದರ್: BJP ಪಕ್ಷದ ವರಿಷ್ಠರ ಅನುಮತಿ ಇಲ್ಲದೆಯೇ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಹೋರಾಟ ಸೋಮವಾರ ಬೀದರ್ ಮೂಲಕ ಆರಂಭವಾಯಿತು.

ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಬಿಜೆಪಿಯ ಬಂಡಾಯ ನಾಯಕರೆಂದೆ ಕರೆಯಲ್ಪಡುತ್ತಿರುವ ಮಾಜಿ ಸಚಿವರಾದ ರಮೇಶ್ ಜಾರಕಿ ಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಜಿ.ಎಂ ಸಿದ್ದೇಶ್ವರ್, ಶಾಸಕ ಬಿ.ಪಿ ಹರೀಶ್, ಜೆಡಿಎಸ್ ಮುಖಂಡ ಎನ್ ಆರ್ ಸಂತೋಷ್, ಈಶ್ವರ ಸಿಂಗ್ ಠಾಕೂರ್ ಮತ್ತಿತರ ಮುಖಂಡರಿದ್ದ ಈ ಬಣ ಜಿಲ್ಲೆಯ ವಿವಿಧೆಡೆ ರೈತರು, ಸಾರ್ವಜನಿಕರಿಂದ ವಕ್ಫ್ ವಿರುದ್ಧದ ಅಹವಾಲು ಸ್ವೀಕರಿಸಿ ಜನ ಜಾಗೃತಿ ಮೂಡಿಸಿತು.

ಈ ವೇಳೆ ಮಾತನಾಡಿದ ಯತ್ನಾಳ, ವಕ್ಫ್ ಆಸ್ತಿ ಉಳಿಸೋಕೆ 5 ಲಕ್ಷ ಜನ ಸೇರುತ್ತಾ ರಂತೆ, ನಾವು ನಮ್ಮ ಆಸ್ತಿ ಉಳಿಸಿಕೊಳ್ಳಲು 25 ಲಕ್ಷ ಜನ ಸೇರೋಣ ಅಂತ ಕರೆ ನೀಡೋಣ. ನಾವೆಲ್ಲ ಇಲ್ಲಿ ವಿವಾದ ಮಾಡಲು ಬಂದಿಲ್ಲ, ಹಿಂದೂ ಸಮಾಜ ಉಳಿಸಲು ಬಂದಿದ್ದೇವೆ ಎಂದು ಹೇಳಿದರು.

ನರಸಿಂಹ ದೇವಸ್ಥಾನಕ್ಕೆ ಭೇಟಿ: ವಕ್ಫ್ ವಿರುದ್ಧದ ಹೋರಾಟಕ್ಕೆ ಚಾಲನೆ ನೀಡುವ ಮೊದಲು ಶಾಸಕ ಯತ್ನಾಳ್ ನೇತೃತ್ವದ ತಂಡ ಸುಕ್ಷೇತ್ರ ನರಸಿಂಹ ಝರಣಾ ದೇವ ಸ್ನಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿತು.

ಧರ್ಮಾಪುರ ಗ್ರಾಮಕ್ಕೆ ತೆರಳಿ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿತು. ತರುವಾಯ ಬೀದರ್ ಮಾರ್ಗ ಮಧ್ಯೆ ಮಾಜಿ ಶಾಸಕ ದಿ.ನಾರಾಯಣರಾವ್ ಮನಳಿ ಮನೆಗೆ ಭೇಟಿ ನೀಡಿ, ಅವರ ಕುಟುಂಬದ ಜತೆಗೆ ಕೆಲಕಾಲ ಮಾತುಕತೆ ನಡೆಸಿದರು.

ಬೀದರ್‌ನಗರದ ಗಣೇಶ ಮೈದಾನದಲ್ಲಿ ಸಾರ್ವಜನಿಕರಿಂದ ಬೃಹತ್ ಸಭೆ ನಡೆಸಿ, ಅಹವಾಲು ಸ್ವೀಕರಿಸಲಾಯಿತು. ಆ ಬಳಿಕ ಗಣೇಶ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪಾದಯಾತ್ರೆ ನಡೆಸಿ ವಕ್ಫ್ ವಿರುದ್ಧ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಬಳಿ ಚಟ್ನಳ್ಳಿಗೆ ತೆರಳಿ ಅಲ್ಲೂ ರೈತರಿಂದ ಅಹವಾಲು ಸ್ವೀಕರಿಸಿ, ನಂತರ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿಗೆ ರಾತ್ರಿ ವೇಳೆ ತೆರಳಿ ವಕ್ ವಿರುದ್ಧ ಜನಾಂದೋಲನ ನಡೆಸಿದ್ದಲ್ಲದೆ, ಮನವಿ ಪತ್ರ ಸ್ವೀಕರಿಸಿತು.

ದೂರು: ವಕ್ಫ್ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದ ತಂಡ ನಡೆಸುತ್ತಿರುವ ಪ್ರವಾಸ ಅನುಮತಿ ರಹಿತವಾಗಿದ್ದು, ಅವರ ವಿರುದ್ಧ ವಿರುದ್ಧ ರಾಷ್ಟ್ರೀಯ ನಾಯಕರಿಗೆ ವರದಿ ಕೊಡುತ್ತೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದ್ದಾರೆ.

ಸೋಮವಾರ ಮಾತನಾಡಿದ ಅವರು, ಬಿಜೆಪಿ ಶಿಸ್ತಿನ ಪಕ್ಷ. ಯತ್ನಾಳ ಅವರ ನಡೆ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ಕೋರ್‌ಕಮಿಟಿ ಸದಸ್ಯರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ಯತ್ನಾಳ್ ಅವರು ಮಾಡುವ ಹೋರಾಟಕ್ಕೆ ರಾಷ್ಟ್ರೀಯ ನಾಯಕರ ಅನುಮತಿ ಪಡೆದಿಲ್ಲ. ರಾಜ್ಯ ನಾಯಕರು, ಜಿಲ್ಲಾ ನಾಯಕರಿಂದಲೂ ಅನುಮತಿ ಪಡೆದಿಲ್ಲ; ಹಾಗಾಗಿ ಅದು ಪಕ್ಷದ ಹೋರಾಟ ಆಗುವುದಿಲ್ಲ. ಅದು ಪಕ್ಷದ ಅಶಿಸ್ತು ಕೂಡ ಆಗುತ್ತದೆ. ವೈಯಕ್ತಿಕ ಹಿತಾಸಕ್ತಿ ಇಟ್ಟುಕೊಂಡು ಪಕ್ಷದ ನಿಯಮ- ಶಿಸ್ತನ್ನು ಉಲ್ಲಂಘಿಸಿ ಹೇಳಿಕೆ ಕೊಟ್ಟರೆ, ಹೋರಾಟ ಮಾಡಿದರೆ ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇಲ್ಲಿನವರೆಗೆ ರಾಜ್ಯದ ಹಂತದಲ್ಲೇ ಸಮಸ್ಯೆ ಸರಿಪಡಿಸುವ ಪ್ರಯತ್ನ ಮಾಡಿದ್ದೆವು. ಅದನ್ನು ಅವರು ಒಪ್ಪಿಕೊಳ್ಳಲಿಲ್ಲ. ಯತ್ನಾಳ ಅವರ ಈ ಕ್ರಮದ ಕುರಿತು ರಾಷ್ಟ್ರನಾಯಕರ ಗಮನಕ್ಕೆ ತರುತ್ತೇವೆ. ಅವರ ವಿರುದ್ಧ ರಾಷ್ಟ್ರೀಯ ನಾಯಕರಿಗೆ ವರದಿ ಕೊಡುತ್ತೇವೆ ಎಂದು ರಾಜೀವ್ ತಿಳಿಸಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!