ವಕ್ಫ್ ವಿರುದ್ಧ BJP ‘ಬಿ’ ಟೀಮ್ ಪ್ರತಿಭಟನೆ| ವರಿಷ್ಠರಿಗೆ ದೂರು

ಬೀದರ್: BJP ಪಕ್ಷದ ವರಿಷ್ಠರ ಅನುಮತಿ ಇಲ್ಲದೆಯೇ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಹೋರಾಟ ಸೋಮವಾರ ಬೀದರ್ ಮೂಲಕ ಆರಂಭವಾಯಿತು.

ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಬಿಜೆಪಿಯ ಬಂಡಾಯ ನಾಯಕರೆಂದೆ ಕರೆಯಲ್ಪಡುತ್ತಿರುವ ಮಾಜಿ ಸಚಿವರಾದ ರಮೇಶ್ ಜಾರಕಿ ಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಜಿ.ಎಂ ಸಿದ್ದೇಶ್ವರ್, ಶಾಸಕ ಬಿ.ಪಿ ಹರೀಶ್, ಜೆಡಿಎಸ್ ಮುಖಂಡ ಎನ್ ಆರ್ ಸಂತೋಷ್, ಈಶ್ವರ ಸಿಂಗ್ ಠಾಕೂರ್ ಮತ್ತಿತರ ಮುಖಂಡರಿದ್ದ ಈ ಬಣ ಜಿಲ್ಲೆಯ ವಿವಿಧೆಡೆ ರೈತರು, ಸಾರ್ವಜನಿಕರಿಂದ ವಕ್ಫ್ ವಿರುದ್ಧದ ಅಹವಾಲು ಸ್ವೀಕರಿಸಿ ಜನ ಜಾಗೃತಿ ಮೂಡಿಸಿತು.

ಈ ವೇಳೆ ಮಾತನಾಡಿದ ಯತ್ನಾಳ, ವಕ್ಫ್ ಆಸ್ತಿ ಉಳಿಸೋಕೆ 5 ಲಕ್ಷ ಜನ ಸೇರುತ್ತಾ ರಂತೆ, ನಾವು ನಮ್ಮ ಆಸ್ತಿ ಉಳಿಸಿಕೊಳ್ಳಲು 25 ಲಕ್ಷ ಜನ ಸೇರೋಣ ಅಂತ ಕರೆ ನೀಡೋಣ. ನಾವೆಲ್ಲ ಇಲ್ಲಿ ವಿವಾದ ಮಾಡಲು ಬಂದಿಲ್ಲ, ಹಿಂದೂ ಸಮಾಜ ಉಳಿಸಲು ಬಂದಿದ್ದೇವೆ ಎಂದು ಹೇಳಿದರು.

ನರಸಿಂಹ ದೇವಸ್ಥಾನಕ್ಕೆ ಭೇಟಿ: ವಕ್ಫ್ ವಿರುದ್ಧದ ಹೋರಾಟಕ್ಕೆ ಚಾಲನೆ ನೀಡುವ ಮೊದಲು ಶಾಸಕ ಯತ್ನಾಳ್ ನೇತೃತ್ವದ ತಂಡ ಸುಕ್ಷೇತ್ರ ನರಸಿಂಹ ಝರಣಾ ದೇವ ಸ್ನಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿತು.

ಧರ್ಮಾಪುರ ಗ್ರಾಮಕ್ಕೆ ತೆರಳಿ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿತು. ತರುವಾಯ ಬೀದರ್ ಮಾರ್ಗ ಮಧ್ಯೆ ಮಾಜಿ ಶಾಸಕ ದಿ.ನಾರಾಯಣರಾವ್ ಮನಳಿ ಮನೆಗೆ ಭೇಟಿ ನೀಡಿ, ಅವರ ಕುಟುಂಬದ ಜತೆಗೆ ಕೆಲಕಾಲ ಮಾತುಕತೆ ನಡೆಸಿದರು.

ಬೀದರ್‌ನಗರದ ಗಣೇಶ ಮೈದಾನದಲ್ಲಿ ಸಾರ್ವಜನಿಕರಿಂದ ಬೃಹತ್ ಸಭೆ ನಡೆಸಿ, ಅಹವಾಲು ಸ್ವೀಕರಿಸಲಾಯಿತು. ಆ ಬಳಿಕ ಗಣೇಶ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪಾದಯಾತ್ರೆ ನಡೆಸಿ ವಕ್ಫ್ ವಿರುದ್ಧ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಬಳಿ ಚಟ್ನಳ್ಳಿಗೆ ತೆರಳಿ ಅಲ್ಲೂ ರೈತರಿಂದ ಅಹವಾಲು ಸ್ವೀಕರಿಸಿ, ನಂತರ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿಗೆ ರಾತ್ರಿ ವೇಳೆ ತೆರಳಿ ವಕ್ ವಿರುದ್ಧ ಜನಾಂದೋಲನ ನಡೆಸಿದ್ದಲ್ಲದೆ, ಮನವಿ ಪತ್ರ ಸ್ವೀಕರಿಸಿತು.

ದೂರು: ವಕ್ಫ್ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದ ತಂಡ ನಡೆಸುತ್ತಿರುವ ಪ್ರವಾಸ ಅನುಮತಿ ರಹಿತವಾಗಿದ್ದು, ಅವರ ವಿರುದ್ಧ ವಿರುದ್ಧ ರಾಷ್ಟ್ರೀಯ ನಾಯಕರಿಗೆ ವರದಿ ಕೊಡುತ್ತೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದ್ದಾರೆ.

ಸೋಮವಾರ ಮಾತನಾಡಿದ ಅವರು, ಬಿಜೆಪಿ ಶಿಸ್ತಿನ ಪಕ್ಷ. ಯತ್ನಾಳ ಅವರ ನಡೆ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ಕೋರ್‌ಕಮಿಟಿ ಸದಸ್ಯರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ಯತ್ನಾಳ್ ಅವರು ಮಾಡುವ ಹೋರಾಟಕ್ಕೆ ರಾಷ್ಟ್ರೀಯ ನಾಯಕರ ಅನುಮತಿ ಪಡೆದಿಲ್ಲ. ರಾಜ್ಯ ನಾಯಕರು, ಜಿಲ್ಲಾ ನಾಯಕರಿಂದಲೂ ಅನುಮತಿ ಪಡೆದಿಲ್ಲ; ಹಾಗಾಗಿ ಅದು ಪಕ್ಷದ ಹೋರಾಟ ಆಗುವುದಿಲ್ಲ. ಅದು ಪಕ್ಷದ ಅಶಿಸ್ತು ಕೂಡ ಆಗುತ್ತದೆ. ವೈಯಕ್ತಿಕ ಹಿತಾಸಕ್ತಿ ಇಟ್ಟುಕೊಂಡು ಪಕ್ಷದ ನಿಯಮ- ಶಿಸ್ತನ್ನು ಉಲ್ಲಂಘಿಸಿ ಹೇಳಿಕೆ ಕೊಟ್ಟರೆ, ಹೋರಾಟ ಮಾಡಿದರೆ ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇಲ್ಲಿನವರೆಗೆ ರಾಜ್ಯದ ಹಂತದಲ್ಲೇ ಸಮಸ್ಯೆ ಸರಿಪಡಿಸುವ ಪ್ರಯತ್ನ ಮಾಡಿದ್ದೆವು. ಅದನ್ನು ಅವರು ಒಪ್ಪಿಕೊಳ್ಳಲಿಲ್ಲ. ಯತ್ನಾಳ ಅವರ ಈ ಕ್ರಮದ ಕುರಿತು ರಾಷ್ಟ್ರನಾಯಕರ ಗಮನಕ್ಕೆ ತರುತ್ತೇವೆ. ಅವರ ವಿರುದ್ಧ ರಾಷ್ಟ್ರೀಯ ನಾಯಕರಿಗೆ ವರದಿ ಕೊಡುತ್ತೇವೆ ಎಂದು ರಾಜೀವ್ ತಿಳಿಸಿದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!