Darshan ಬೇಲ್ ಅರ್ಜಿ ವಿಚಾರಣೆ: ಕಿಡ್ನಪ್ ಆದವ ಬಾರಲ್ಲಿ 640 ರೂ. ಪೋನ್ ಪೇ ಮಾಡಲು ಸಾಧ್ಯವೆ..? ದರ್ಶನ್ ಪರ ವಕೀಲರ ಪ್ರಬಲ ವಾದ

ಬೆಂಗಳೂರು: ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪ ಹೊತ್ತಿರುವ ನಟ ದರ್ಶನ್ (Darshan) ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ಇಂದು ನಡೆದಿದ್ದು, ಸಂಜೆ ನಾಲ್ಕು ಗಂಟೆಗೆ ಮುಂದೂಡಲಾಗಿದೆ.

ದರ್ಶನ್ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ತಮ್ಮ ವಾದ ಮುಂದಿಟ್ಟಿದ್ದು, ಹತ್ಯೆ ಒಳಗಾದ ವ್ಯಕ್ತಿಯನ್ನು ಕಿಡ್ನಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಕಿಡ್ನಪ್ ಒಳಗಾದ ವ್ಯಕ್ತಿ ಬಾರ್‌ನಲ್ಲಿ ಪೋನ್ ಮಾಡಿದ್ದಾನೆ.. ಇದು ಸಾಧ್ಯವೇ..? ಎಂದು ಪ್ರಶ್ನಿಸಿದ್ದಾರೆ.

ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗುವಾಗ ಬಾರ್ಗೆ ಹೋಗಿದ್ದಾರೆ. ಸಾವನಪ್ಪಿರುವ ವ್ಯಕ್ತಿ ಫೋನ್ ಪೇ ಮೂಲಕ ಬಾರ್ಗೆ ಹಣ ಪಾವತಿಸಿದ್ದಾನೆ. ಈ ಬಗ್ಗೆ ಬಾರ್ನ ಮಾಲೀಕನ ಹೇಳಿಕೆ ದಾಖಲಿಸಲಾಗಿದೆ.

ಅಪಹರಣಕ್ಕೊಳಗಾದವನು 640 ರೂಪಾಯಿ ಹಣವನ್ನು ಫೋನ್ ಪೇ ಮೂಲಕ ಹಣ ನೀಡಲು ಸಾಧ್ಯವೇ ಎಂದು ನಾಗೇಶ್ ಅವರು ವಾದ ಮಂಡಿಸಿದ್ದಾರೆ.

ಯಾವುದೇ ಮೋಸದಿಂದ ಅಥವಾ ಬಲವಂತದಿಂದ ಹತ್ಯೆಯಾದ ವ್ಯಕ್ತಿಯ ಕಿಡ್ನ್ಯಾಪ್ ಮಾಡಲಾಗಿಲ್ಲ ಎಂಬ ವಿಚಾರವನ್ನು ವಕೀಲರು ಹೇಳಿದ್ದಾರೆ. ಈಗಾಗಲೇ ಮೃತನ ತಂದೆಯ ಹೇಳಿಕೆಯನ್ನು ಪಡೆಯಲಾಗಿದೆ. ಅದರಲ್ಲಿ ಜೂ.8ರಂದು ಸಾವನಪ್ಪಿರುವ ವ್ಯಕ್ತಿ ಎಂದಿನಂತೆ ಕೆಲಸಕ್ಕೆ ಹೋದ ಬಗ್ಗೆ ವರದಿ ಇದೆ.

ನಾಲ್ವರು ಸ್ನೇಹಿತರೊಂದಿಗೆ ಹೋಗುತ್ತೇನೆಂದು ತಾಯಿ ಬಳಿ ಹೇಳಿದ್ದಾಗಿ ಹೇಳಿಕೆ ದಾಖಲಿಸಲಾಗಿದೆ. ಹತ್ಯೆಯಾದ ವ್ಯಕ್ತಿ ದಿನನಿತ್ಯ ಧರಿಸುವ ಯೂನಿಫಾರ್ಮ್ ಧರಿಸಿರಲಿಲ್ಲ. ಮಧ್ಯಾಹ್ನ ಊಟಕ್ಕೆ ಬರುವುದಿಲ್ಲವೆಂದು ಫೋನ್ ಮಾಡಿ ತಿಳಿಸಿದ್ದ. ಹೀಗಾಗಿ ಇದನ್ನು ಕಿಡ್ನ್ಯಾಪ್ ಎಂದು ಹೇಳಲು ಸಾಧ್ಯವಿಲ್ಲ. ಇದರಲ್ಲಿ ಒತ್ತಾಯವೂ ಇಲ್ಲ, ಮೋಸವೂ ಇಲ್ಲ ಎಂದು ವಕೀಲರು ವಾದ ಮಂಡಿಸಿದ್ದಾರೆ.

ಅಲ್ಲದೆ ಕೊಲೆಯಾಗಿದೆಯೋ ಇಲ್ಲವೋ ಬೇರೆ ವಿಚಾರ. ಆದರೆ ಕೊಲೆಯ ಉದ್ದೇಶದಿಂದ ಕಿಡ್ನ್ಯಾಪ್ ಆಗಿಲ್ಲ. ಶವವನ್ನು ಒಂದೆಡೆಯಿಂದ ಇನ್ನೊಂದೆಡೆಗೆ ಸಾಗಿಸುವುದು ಸಾಕ್ಷ್ಯನಾಶವಲ್ಲ ಎಂದಿರುವ ಸಿವಿ ನಾಗೇಶ್ ಅವರು ಅಲಹಾಬಾದ್ ಹೈಕೋರ್ಟ್ನ ತೀರ್ಪು ಉಲ್ಲೇಖಿಸಿದ್ದಾರೆ.

ಮೃತದೇಹವನ್ನು ಸುಟ್ಟುಹಾಕಿದ್ದರೆ ಸಾಕ್ಷ್ಯನಾಶ ಪರಿಗಣಿಸಬಹುದಿತ್ತು. ಆದರೆ ಆ ರೀತಿ ಆಗಿಲ್ಲ, ಕೇವಲ ಮೃತದೇಹ ಸ್ಥಳಾಂತರಿಸಲಾಗಿದೆ ಎಂದು ನಾಗೇಶ್ ಹೇಳಿದ್ದಾರೆಂದು ವರದಿಯಾಗಿದೆ.

ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ ಆರೋಪ ದರ್ಶನ್ ಮೇಲೆ ಇದೆ. ಅಪಾರ್ಟ್ಮೆಂಟ್ ಕಾವಲುಗಾರ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲು ಮಾಡಿಕೊಳ್ಳಲಾಯಿತು. ಇಲ್ಲಿ ಮೃತದೇಹದ ಮಹಜರು, ಪೋಸ್ಟ್ ಮಾರ್ಟಂ ವಿಳಂಬ ಮಾಡಲಾಗಿದೆ. 1.5X2.5 ಸೆಂ.ಮೀ. ಗಾಯ ಬಿಟ್ಟರೆ ಉಳಿದವು ರಕ್ತಗಾಯಗಳಿಲ್ಲ ಎಂದಿದ್ದಾರೆ ನಾಗೇಶ್.

ಶವ ಶೈತ್ಯಾಗಾರದಲ್ಲಿ ಇಟ್ಟಿದ್ದರಿಂದ ಸಾವಿನ ನಿಖರ ಸಮಯ ಸಿಕ್ಕಿಲ್ಲ. ಶವದ ಫೋಟೋ ಆಧಾರದಲ್ಲಿ ಸಾವಿನ ಸಮಯ ಅಂದಾಜಿಸಲಾಗಿದೆ. ಶವಪರೀಕ್ಷೆ ವರದಿ ಒಂದು ತಿಂಗಳು ವಿಳಂಬವಾಗಿ ಬಂದಿದೆ ಎಂದು ಸಿವಿ ನಾಗೇಶ್ ವಾದ ಮಾಡಿದ್ದಾರೆ. ಈ ಮೂಲಕ ದರ್ಶನ್ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಸೂಕ್ಷ್ಮ ಸೂಕ್ಷ್ಮ ವಿಚಾರಗಳನ್ನು ಹಿಡಿದು ನ್ಯಾಯಾಧೀಶರ ಗಮನಕ್ಕೆ ತರುತ್ತಿರುವ ಕುರಿತು ವರದಿಯಾಗಿದೆ.

ರಾಜಕೀಯ

ದೊಡ್ಡಬಳ್ಳಾಪುರ ತಾಲ್ಲೂಕು JDS ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ: ಪಕ್ಷ ಸಂಘಟನೆ ಸಹಕಾರಿಯೆಂದ ಪ್ರವೀಣ್ ಶಾಂತಿನಗರ

ದೊಡ್ಡಬಳ್ಳಾಪುರ ತಾಲ್ಲೂಕು JDS ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ: ಪಕ್ಷ ಸಂಘಟನೆ ಸಹಕಾರಿಯೆಂದ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (JDS) ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ

[ccc_my_favorite_select_button post_id="121361"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]