Darshan ಬೇಲ್ ಅರ್ಜಿ ವಿಚಾರಣೆ: ಕಿಡ್ನಪ್ ಆದವ ಬಾರಲ್ಲಿ 640 ರೂ. ಪೋನ್ ಪೇ ಮಾಡಲು ಸಾಧ್ಯವೆ..? ದರ್ಶನ್ ಪರ ವಕೀಲರ ಪ್ರಬಲ ವಾದ

ಬೆಂಗಳೂರು: ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪ ಹೊತ್ತಿರುವ ನಟ ದರ್ಶನ್ (Darshan) ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ಇಂದು ನಡೆದಿದ್ದು, ಸಂಜೆ ನಾಲ್ಕು ಗಂಟೆಗೆ ಮುಂದೂಡಲಾಗಿದೆ.

ದರ್ಶನ್ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ತಮ್ಮ ವಾದ ಮುಂದಿಟ್ಟಿದ್ದು, ಹತ್ಯೆ ಒಳಗಾದ ವ್ಯಕ್ತಿಯನ್ನು ಕಿಡ್ನಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಕಿಡ್ನಪ್ ಒಳಗಾದ ವ್ಯಕ್ತಿ ಬಾರ್‌ನಲ್ಲಿ ಪೋನ್ ಮಾಡಿದ್ದಾನೆ.. ಇದು ಸಾಧ್ಯವೇ..? ಎಂದು ಪ್ರಶ್ನಿಸಿದ್ದಾರೆ.

ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗುವಾಗ ಬಾರ್ಗೆ ಹೋಗಿದ್ದಾರೆ. ಸಾವನಪ್ಪಿರುವ ವ್ಯಕ್ತಿ ಫೋನ್ ಪೇ ಮೂಲಕ ಬಾರ್ಗೆ ಹಣ ಪಾವತಿಸಿದ್ದಾನೆ. ಈ ಬಗ್ಗೆ ಬಾರ್ನ ಮಾಲೀಕನ ಹೇಳಿಕೆ ದಾಖಲಿಸಲಾಗಿದೆ.

ಅಪಹರಣಕ್ಕೊಳಗಾದವನು 640 ರೂಪಾಯಿ ಹಣವನ್ನು ಫೋನ್ ಪೇ ಮೂಲಕ ಹಣ ನೀಡಲು ಸಾಧ್ಯವೇ ಎಂದು ನಾಗೇಶ್ ಅವರು ವಾದ ಮಂಡಿಸಿದ್ದಾರೆ.

ಯಾವುದೇ ಮೋಸದಿಂದ ಅಥವಾ ಬಲವಂತದಿಂದ ಹತ್ಯೆಯಾದ ವ್ಯಕ್ತಿಯ ಕಿಡ್ನ್ಯಾಪ್ ಮಾಡಲಾಗಿಲ್ಲ ಎಂಬ ವಿಚಾರವನ್ನು ವಕೀಲರು ಹೇಳಿದ್ದಾರೆ. ಈಗಾಗಲೇ ಮೃತನ ತಂದೆಯ ಹೇಳಿಕೆಯನ್ನು ಪಡೆಯಲಾಗಿದೆ. ಅದರಲ್ಲಿ ಜೂ.8ರಂದು ಸಾವನಪ್ಪಿರುವ ವ್ಯಕ್ತಿ ಎಂದಿನಂತೆ ಕೆಲಸಕ್ಕೆ ಹೋದ ಬಗ್ಗೆ ವರದಿ ಇದೆ.

ನಾಲ್ವರು ಸ್ನೇಹಿತರೊಂದಿಗೆ ಹೋಗುತ್ತೇನೆಂದು ತಾಯಿ ಬಳಿ ಹೇಳಿದ್ದಾಗಿ ಹೇಳಿಕೆ ದಾಖಲಿಸಲಾಗಿದೆ. ಹತ್ಯೆಯಾದ ವ್ಯಕ್ತಿ ದಿನನಿತ್ಯ ಧರಿಸುವ ಯೂನಿಫಾರ್ಮ್ ಧರಿಸಿರಲಿಲ್ಲ. ಮಧ್ಯಾಹ್ನ ಊಟಕ್ಕೆ ಬರುವುದಿಲ್ಲವೆಂದು ಫೋನ್ ಮಾಡಿ ತಿಳಿಸಿದ್ದ. ಹೀಗಾಗಿ ಇದನ್ನು ಕಿಡ್ನ್ಯಾಪ್ ಎಂದು ಹೇಳಲು ಸಾಧ್ಯವಿಲ್ಲ. ಇದರಲ್ಲಿ ಒತ್ತಾಯವೂ ಇಲ್ಲ, ಮೋಸವೂ ಇಲ್ಲ ಎಂದು ವಕೀಲರು ವಾದ ಮಂಡಿಸಿದ್ದಾರೆ.

ಅಲ್ಲದೆ ಕೊಲೆಯಾಗಿದೆಯೋ ಇಲ್ಲವೋ ಬೇರೆ ವಿಚಾರ. ಆದರೆ ಕೊಲೆಯ ಉದ್ದೇಶದಿಂದ ಕಿಡ್ನ್ಯಾಪ್ ಆಗಿಲ್ಲ. ಶವವನ್ನು ಒಂದೆಡೆಯಿಂದ ಇನ್ನೊಂದೆಡೆಗೆ ಸಾಗಿಸುವುದು ಸಾಕ್ಷ್ಯನಾಶವಲ್ಲ ಎಂದಿರುವ ಸಿವಿ ನಾಗೇಶ್ ಅವರು ಅಲಹಾಬಾದ್ ಹೈಕೋರ್ಟ್ನ ತೀರ್ಪು ಉಲ್ಲೇಖಿಸಿದ್ದಾರೆ.

ಮೃತದೇಹವನ್ನು ಸುಟ್ಟುಹಾಕಿದ್ದರೆ ಸಾಕ್ಷ್ಯನಾಶ ಪರಿಗಣಿಸಬಹುದಿತ್ತು. ಆದರೆ ಆ ರೀತಿ ಆಗಿಲ್ಲ, ಕೇವಲ ಮೃತದೇಹ ಸ್ಥಳಾಂತರಿಸಲಾಗಿದೆ ಎಂದು ನಾಗೇಶ್ ಹೇಳಿದ್ದಾರೆಂದು ವರದಿಯಾಗಿದೆ.

ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ ಆರೋಪ ದರ್ಶನ್ ಮೇಲೆ ಇದೆ. ಅಪಾರ್ಟ್ಮೆಂಟ್ ಕಾವಲುಗಾರ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲು ಮಾಡಿಕೊಳ್ಳಲಾಯಿತು. ಇಲ್ಲಿ ಮೃತದೇಹದ ಮಹಜರು, ಪೋಸ್ಟ್ ಮಾರ್ಟಂ ವಿಳಂಬ ಮಾಡಲಾಗಿದೆ. 1.5X2.5 ಸೆಂ.ಮೀ. ಗಾಯ ಬಿಟ್ಟರೆ ಉಳಿದವು ರಕ್ತಗಾಯಗಳಿಲ್ಲ ಎಂದಿದ್ದಾರೆ ನಾಗೇಶ್.

ಶವ ಶೈತ್ಯಾಗಾರದಲ್ಲಿ ಇಟ್ಟಿದ್ದರಿಂದ ಸಾವಿನ ನಿಖರ ಸಮಯ ಸಿಕ್ಕಿಲ್ಲ. ಶವದ ಫೋಟೋ ಆಧಾರದಲ್ಲಿ ಸಾವಿನ ಸಮಯ ಅಂದಾಜಿಸಲಾಗಿದೆ. ಶವಪರೀಕ್ಷೆ ವರದಿ ಒಂದು ತಿಂಗಳು ವಿಳಂಬವಾಗಿ ಬಂದಿದೆ ಎಂದು ಸಿವಿ ನಾಗೇಶ್ ವಾದ ಮಾಡಿದ್ದಾರೆ. ಈ ಮೂಲಕ ದರ್ಶನ್ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಸೂಕ್ಷ್ಮ ಸೂಕ್ಷ್ಮ ವಿಚಾರಗಳನ್ನು ಹಿಡಿದು ನ್ಯಾಯಾಧೀಶರ ಗಮನಕ್ಕೆ ತರುತ್ತಿರುವ ಕುರಿತು ವರದಿಯಾಗಿದೆ.

ರಾಜಕೀಯ

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಮಾಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (H.D. Deve Gowda) ಅವರು ಹಾಲಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ನೇರ ಆರೋಪ

[ccc_my_favorite_select_button post_id="120877"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]