Darshan ಬೇಲ್ ಅರ್ಜಿ ವಿಚಾರಣೆ: ಕಿಡ್ನಪ್ ಆದವ ಬಾರಲ್ಲಿ 640 ರೂ. ಪೋನ್ ಪೇ ಮಾಡಲು ಸಾಧ್ಯವೆ..? ದರ್ಶನ್ ಪರ ವಕೀಲರ ಪ್ರಬಲ ವಾದ

ಬೆಂಗಳೂರು: ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪ ಹೊತ್ತಿರುವ ನಟ ದರ್ಶನ್ (Darshan) ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ಇಂದು ನಡೆದಿದ್ದು, ಸಂಜೆ ನಾಲ್ಕು ಗಂಟೆಗೆ ಮುಂದೂಡಲಾಗಿದೆ.

ದರ್ಶನ್ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ತಮ್ಮ ವಾದ ಮುಂದಿಟ್ಟಿದ್ದು, ಹತ್ಯೆ ಒಳಗಾದ ವ್ಯಕ್ತಿಯನ್ನು ಕಿಡ್ನಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಕಿಡ್ನಪ್ ಒಳಗಾದ ವ್ಯಕ್ತಿ ಬಾರ್‌ನಲ್ಲಿ ಪೋನ್ ಮಾಡಿದ್ದಾನೆ.. ಇದು ಸಾಧ್ಯವೇ..? ಎಂದು ಪ್ರಶ್ನಿಸಿದ್ದಾರೆ.

ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗುವಾಗ ಬಾರ್ಗೆ ಹೋಗಿದ್ದಾರೆ. ಸಾವನಪ್ಪಿರುವ ವ್ಯಕ್ತಿ ಫೋನ್ ಪೇ ಮೂಲಕ ಬಾರ್ಗೆ ಹಣ ಪಾವತಿಸಿದ್ದಾನೆ. ಈ ಬಗ್ಗೆ ಬಾರ್ನ ಮಾಲೀಕನ ಹೇಳಿಕೆ ದಾಖಲಿಸಲಾಗಿದೆ.

ಅಪಹರಣಕ್ಕೊಳಗಾದವನು 640 ರೂಪಾಯಿ ಹಣವನ್ನು ಫೋನ್ ಪೇ ಮೂಲಕ ಹಣ ನೀಡಲು ಸಾಧ್ಯವೇ ಎಂದು ನಾಗೇಶ್ ಅವರು ವಾದ ಮಂಡಿಸಿದ್ದಾರೆ.

ಯಾವುದೇ ಮೋಸದಿಂದ ಅಥವಾ ಬಲವಂತದಿಂದ ಹತ್ಯೆಯಾದ ವ್ಯಕ್ತಿಯ ಕಿಡ್ನ್ಯಾಪ್ ಮಾಡಲಾಗಿಲ್ಲ ಎಂಬ ವಿಚಾರವನ್ನು ವಕೀಲರು ಹೇಳಿದ್ದಾರೆ. ಈಗಾಗಲೇ ಮೃತನ ತಂದೆಯ ಹೇಳಿಕೆಯನ್ನು ಪಡೆಯಲಾಗಿದೆ. ಅದರಲ್ಲಿ ಜೂ.8ರಂದು ಸಾವನಪ್ಪಿರುವ ವ್ಯಕ್ತಿ ಎಂದಿನಂತೆ ಕೆಲಸಕ್ಕೆ ಹೋದ ಬಗ್ಗೆ ವರದಿ ಇದೆ.

ನಾಲ್ವರು ಸ್ನೇಹಿತರೊಂದಿಗೆ ಹೋಗುತ್ತೇನೆಂದು ತಾಯಿ ಬಳಿ ಹೇಳಿದ್ದಾಗಿ ಹೇಳಿಕೆ ದಾಖಲಿಸಲಾಗಿದೆ. ಹತ್ಯೆಯಾದ ವ್ಯಕ್ತಿ ದಿನನಿತ್ಯ ಧರಿಸುವ ಯೂನಿಫಾರ್ಮ್ ಧರಿಸಿರಲಿಲ್ಲ. ಮಧ್ಯಾಹ್ನ ಊಟಕ್ಕೆ ಬರುವುದಿಲ್ಲವೆಂದು ಫೋನ್ ಮಾಡಿ ತಿಳಿಸಿದ್ದ. ಹೀಗಾಗಿ ಇದನ್ನು ಕಿಡ್ನ್ಯಾಪ್ ಎಂದು ಹೇಳಲು ಸಾಧ್ಯವಿಲ್ಲ. ಇದರಲ್ಲಿ ಒತ್ತಾಯವೂ ಇಲ್ಲ, ಮೋಸವೂ ಇಲ್ಲ ಎಂದು ವಕೀಲರು ವಾದ ಮಂಡಿಸಿದ್ದಾರೆ.

ಅಲ್ಲದೆ ಕೊಲೆಯಾಗಿದೆಯೋ ಇಲ್ಲವೋ ಬೇರೆ ವಿಚಾರ. ಆದರೆ ಕೊಲೆಯ ಉದ್ದೇಶದಿಂದ ಕಿಡ್ನ್ಯಾಪ್ ಆಗಿಲ್ಲ. ಶವವನ್ನು ಒಂದೆಡೆಯಿಂದ ಇನ್ನೊಂದೆಡೆಗೆ ಸಾಗಿಸುವುದು ಸಾಕ್ಷ್ಯನಾಶವಲ್ಲ ಎಂದಿರುವ ಸಿವಿ ನಾಗೇಶ್ ಅವರು ಅಲಹಾಬಾದ್ ಹೈಕೋರ್ಟ್ನ ತೀರ್ಪು ಉಲ್ಲೇಖಿಸಿದ್ದಾರೆ.

ಮೃತದೇಹವನ್ನು ಸುಟ್ಟುಹಾಕಿದ್ದರೆ ಸಾಕ್ಷ್ಯನಾಶ ಪರಿಗಣಿಸಬಹುದಿತ್ತು. ಆದರೆ ಆ ರೀತಿ ಆಗಿಲ್ಲ, ಕೇವಲ ಮೃತದೇಹ ಸ್ಥಳಾಂತರಿಸಲಾಗಿದೆ ಎಂದು ನಾಗೇಶ್ ಹೇಳಿದ್ದಾರೆಂದು ವರದಿಯಾಗಿದೆ.

ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ ಆರೋಪ ದರ್ಶನ್ ಮೇಲೆ ಇದೆ. ಅಪಾರ್ಟ್ಮೆಂಟ್ ಕಾವಲುಗಾರ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲು ಮಾಡಿಕೊಳ್ಳಲಾಯಿತು. ಇಲ್ಲಿ ಮೃತದೇಹದ ಮಹಜರು, ಪೋಸ್ಟ್ ಮಾರ್ಟಂ ವಿಳಂಬ ಮಾಡಲಾಗಿದೆ. 1.5X2.5 ಸೆಂ.ಮೀ. ಗಾಯ ಬಿಟ್ಟರೆ ಉಳಿದವು ರಕ್ತಗಾಯಗಳಿಲ್ಲ ಎಂದಿದ್ದಾರೆ ನಾಗೇಶ್.

ಶವ ಶೈತ್ಯಾಗಾರದಲ್ಲಿ ಇಟ್ಟಿದ್ದರಿಂದ ಸಾವಿನ ನಿಖರ ಸಮಯ ಸಿಕ್ಕಿಲ್ಲ. ಶವದ ಫೋಟೋ ಆಧಾರದಲ್ಲಿ ಸಾವಿನ ಸಮಯ ಅಂದಾಜಿಸಲಾಗಿದೆ. ಶವಪರೀಕ್ಷೆ ವರದಿ ಒಂದು ತಿಂಗಳು ವಿಳಂಬವಾಗಿ ಬಂದಿದೆ ಎಂದು ಸಿವಿ ನಾಗೇಶ್ ವಾದ ಮಾಡಿದ್ದಾರೆ. ಈ ಮೂಲಕ ದರ್ಶನ್ ವಿರುದ್ಧ ಸಂಚು ರೂಪಿಸಿದ್ದಾರೆ ಎಂದು ಸೂಕ್ಷ್ಮ ಸೂಕ್ಷ್ಮ ವಿಚಾರಗಳನ್ನು ಹಿಡಿದು ನ್ಯಾಯಾಧೀಶರ ಗಮನಕ್ಕೆ ತರುತ್ತಿರುವ ಕುರಿತು ವರದಿಯಾಗಿದೆ.

ರಾಜಕೀಯ

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ, ನಮಗೆ ಸಿಕ್ಕ

“ಮೇಕೆದಾಟು (Mekedatu) ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="116123"]
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ

[ccc_my_favorite_select_button post_id="116006"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!