Doddaballapura; ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಗಳಿಗೆ ಸಂಭ್ರಮದ ತೆರೆ| ಪ್ರಶಸ್ತಿ ವಿಜೇತರ ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: Doddaballapura ತಾಲೂಕು ಕುಸ್ತಿ ಸಂಘದಿಂದ ಬಯಲು ಬಸವಣ್ಣ ಕಡಲೇಕಾಯಿ ಪರಿಷೆ ಅಂಗವಾಗಿ ಬಸವಣ್ಣ ದೇವಾಲಯದ ಎದುರಿನ ಮೈದಾನದಲ್ಲಿ ನಡೆದ ಅಂತರ ಜಿಲ್ಲಾ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳ ಬಹುಮಾನ ವಿತರಣಾ ಸಮಾರಂಭ ನಡೆಯಿತು.

ಸಾಂಪ್ರದಾಯಿಕ ಮಣ್ಣಿನ ಅಖಾಡ (ಮಟ್ಟಿ)ದಲ್ಲಿ ತಡರಾತ್ರಿವರೆಗೂ ನಡೆದ ಅಂತಿಮ ಹಣಾಹಣಿಯಲ್ಲಿ ಸೆಣಸಾಡುವ ಕುಸ್ತಿ ಪಟುಗಳ ಕಾದಾಟವನ್ನು ನೂರಾರು ಜನ ಕಣ್ತುಂಬಿಕೊಂಡು ಸಂತಸ ಪಟ್ಟರು. ಕುಸ್ತಿ ಪಟುಗಳ ಜಂಗಿ ಕುಸ್ತಿಯಾಟ ಮೈನವಿರೇಳಿಸಿತು.

ಕುಸ್ತಿಪಟುಗಳ ತೂಕಗಳ ಮಾನದಂಡಕ್ಕೆ ಅನುಸಾರವಾಗಿ, ದೊಡ್ಡಬಳ್ಳಾಪುರ ಯುವ ಕಿಶೋರ, ದೊಡ್ಡಬಳ್ಳಾಪುರ ಕಿಶೋರ, ದೊಡ್ಡಬಳ್ಳಾಪುರ ಕುಮಾರ, ದೊಡ್ಡಬಳ್ಳಾಪುರ ಕೇಸರಿ, ದೊಡ್ಡಬಳ್ಳಾಪುರ ಕಂಠೀರವ, ಹಾಗೂ ಮಹಿಳಾ ವಿಭಾಗದಲ್ಲಿ (60 ಕೆ.ಜಿ. ಒಳಗಿನ ವಿಭಾಗ) ದೊಡ್ಡಬಳ್ಳಾಪುರ ಕಿಶೋರಿ ವಿಭಾಗಗಳಲ್ಲಿ ಪಂದ್ಯಗಳು ನಡೆದವು.

ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಂದ 105 ಕ್ರೀಡಾಪಟುಗಳು ಭಾಗವಹಿಸಿದ್ದರು.

ವಿಜೇತರಿಗೆ ಬೆಳ್ಳಿಗದೆ, ಟ್ರೋಫಿ, ನಗದು ಬಹುಮಾನ, ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.

ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ಪಾರಂಪರಿಕ ಕುಸ್ತಿ ಕಲೆ ಮರೆಯಾಗುತ್ತಿರುವ ಇಂತಹ ಸಂದರ್ಭದಲ್ಲಿ, ಕುಸ್ತಿಯನ್ನು ಉತ್ತೇಜಿಸಲು ಉತ್ತಮ ವೇದಿಕೆಗಳ ಅಗತ್ಯವಿದೆ. ದೇವನಹಳ್ಳಿಯಲ್ಲಿ 10 ವರ್ಷಗಳಿಗೊಮ್ಮೆ ಕುಸ್ತಿ ಪಂದ್ಯಾವಳಿಗಳು ನಡೆಯುತ್ತಿವೆ. ಇಂದಿನ ಪೀಳಿಗೆಗೆ ಕುಸ್ತಿ, ವ್ಯಾಯಾಮ ಹಾಗೂ ಗರುಡಿ ಮನೆಗಳ ಪರಿಚಯವಾಗಬೇಕು. ಕುಸ್ತಿ ಪಂದ್ಯಾವಳಿಗಳು ಪ್ರತಿ ವರ್ಷ ನಡೆಯಬೇಕು ಎಂದು ಸಲಹೆ ನೀಡಿದರು.

ಈ ವೇಳೆ ನಗರಸಭಾ ಸದಸ್ಯರಾದ ಶಿವ, ವೆಂಕಟೇಶ್ ಲಾವಣ್ಯ ವಿದ್ಯಾಸಂಸ್ಥೆಯ ಗೌರವ ಕಾರ್‍ಯದರ್ಶಿ ವಿಶ್ವಾಸ್ ಗೌಡ, ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಗೌರವ ಅಧ್ಯಕ್ಷ ಪೈಲ್ವಾನ್ ಚೌಡಪ್ಪ, ಅಧ್ಯಕ್ಷ ಲಕ್ಷ್ಮೀನಾರಾಯಣ್, ಕಾರ್‍ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್‍ಯದರ್ಶಿ ಗಣೇಶ್ ರಾಜಘಟ್ಟ, ಗೌ.ಅಧ್ಯಕ್ಷ ಪಿಳ್ಳಣ್ಣ, ಉಪಾಧ್ಯಕ್ಷ ಎಸ್.ಪದ್ಮನಾಭ್, ಖಜಾಂಚಿ ವಿಶ್ವನಾಥ್, ಸೇರಿದಂತೆ ನಗರಸಭಾ ಸದಸ್ಯರು, ಬಯಲು ಬಸವಣ್ಣ ಸೇವಾ ಸಮಿತಿ ಪದಾಕಾರಿಗಳು ಭಾಗವಹಿಸಿದ್ದರು.

ಬಹುಮಾನ ವಿಜೇತರ ವಿವರ

ದೊಡ್ಡಬಳ್ಳಾಪುರ ಯುವ ಕಿಶೋರಿ: ಶ್ರೀರಕ್ಷ (ಕನಕಪುರ).

ದೊಡ್ಡಬಳ್ಳಾಪುರ ಯುವ ಕಿಶೋರಅಭಿಷೇಕ್ (ಕನಕಪುರ).

ದೊಡ್ಡಬಳ್ಳಾಪುರ ಕಿಶೋರ: ಸೋಫಿಯಾನ್ (ಬೆಂಗಳೂರು).

ದೊಡ್ಡಬಳ್ಳಾಪುರ ಕುಮಾರ: ಅಂಬರೀಶ್ (ಮಂಡ್ಯ).

ದೊಡ್ಡಬಳ್ಳಾಪುರ ಕೇಸರಿ: ಧನಂಜಯ (ದೊಡ್ಡಬಳ್ಳಾಪುರ).

ದೊಡ್ಡಬಳ್ಳಾಪುರ ಕಂಠೀರವ: ಮಧುಸೂದನ್ (ದೇವನಹಳ್ಳಿ)

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!