Doddaballapura; ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಗಳಿಗೆ ಸಂಭ್ರಮದ ತೆರೆ| ಪ್ರಶಸ್ತಿ ವಿಜೇತರ ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: Doddaballapura ತಾಲೂಕು ಕುಸ್ತಿ ಸಂಘದಿಂದ ಬಯಲು ಬಸವಣ್ಣ ಕಡಲೇಕಾಯಿ ಪರಿಷೆ ಅಂಗವಾಗಿ ಬಸವಣ್ಣ ದೇವಾಲಯದ ಎದುರಿನ ಮೈದಾನದಲ್ಲಿ ನಡೆದ ಅಂತರ ಜಿಲ್ಲಾ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳ ಬಹುಮಾನ ವಿತರಣಾ ಸಮಾರಂಭ ನಡೆಯಿತು.

ಸಾಂಪ್ರದಾಯಿಕ ಮಣ್ಣಿನ ಅಖಾಡ (ಮಟ್ಟಿ)ದಲ್ಲಿ ತಡರಾತ್ರಿವರೆಗೂ ನಡೆದ ಅಂತಿಮ ಹಣಾಹಣಿಯಲ್ಲಿ ಸೆಣಸಾಡುವ ಕುಸ್ತಿ ಪಟುಗಳ ಕಾದಾಟವನ್ನು ನೂರಾರು ಜನ ಕಣ್ತುಂಬಿಕೊಂಡು ಸಂತಸ ಪಟ್ಟರು. ಕುಸ್ತಿ ಪಟುಗಳ ಜಂಗಿ ಕುಸ್ತಿಯಾಟ ಮೈನವಿರೇಳಿಸಿತು.

ಕುಸ್ತಿಪಟುಗಳ ತೂಕಗಳ ಮಾನದಂಡಕ್ಕೆ ಅನುಸಾರವಾಗಿ, ದೊಡ್ಡಬಳ್ಳಾಪುರ ಯುವ ಕಿಶೋರ, ದೊಡ್ಡಬಳ್ಳಾಪುರ ಕಿಶೋರ, ದೊಡ್ಡಬಳ್ಳಾಪುರ ಕುಮಾರ, ದೊಡ್ಡಬಳ್ಳಾಪುರ ಕೇಸರಿ, ದೊಡ್ಡಬಳ್ಳಾಪುರ ಕಂಠೀರವ, ಹಾಗೂ ಮಹಿಳಾ ವಿಭಾಗದಲ್ಲಿ (60 ಕೆ.ಜಿ. ಒಳಗಿನ ವಿಭಾಗ) ದೊಡ್ಡಬಳ್ಳಾಪುರ ಕಿಶೋರಿ ವಿಭಾಗಗಳಲ್ಲಿ ಪಂದ್ಯಗಳು ನಡೆದವು.

ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಂದ 105 ಕ್ರೀಡಾಪಟುಗಳು ಭಾಗವಹಿಸಿದ್ದರು.

ವಿಜೇತರಿಗೆ ಬೆಳ್ಳಿಗದೆ, ಟ್ರೋಫಿ, ನಗದು ಬಹುಮಾನ, ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.

ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ಪಾರಂಪರಿಕ ಕುಸ್ತಿ ಕಲೆ ಮರೆಯಾಗುತ್ತಿರುವ ಇಂತಹ ಸಂದರ್ಭದಲ್ಲಿ, ಕುಸ್ತಿಯನ್ನು ಉತ್ತೇಜಿಸಲು ಉತ್ತಮ ವೇದಿಕೆಗಳ ಅಗತ್ಯವಿದೆ. ದೇವನಹಳ್ಳಿಯಲ್ಲಿ 10 ವರ್ಷಗಳಿಗೊಮ್ಮೆ ಕುಸ್ತಿ ಪಂದ್ಯಾವಳಿಗಳು ನಡೆಯುತ್ತಿವೆ. ಇಂದಿನ ಪೀಳಿಗೆಗೆ ಕುಸ್ತಿ, ವ್ಯಾಯಾಮ ಹಾಗೂ ಗರುಡಿ ಮನೆಗಳ ಪರಿಚಯವಾಗಬೇಕು. ಕುಸ್ತಿ ಪಂದ್ಯಾವಳಿಗಳು ಪ್ರತಿ ವರ್ಷ ನಡೆಯಬೇಕು ಎಂದು ಸಲಹೆ ನೀಡಿದರು.

ಈ ವೇಳೆ ನಗರಸಭಾ ಸದಸ್ಯರಾದ ಶಿವ, ವೆಂಕಟೇಶ್ ಲಾವಣ್ಯ ವಿದ್ಯಾಸಂಸ್ಥೆಯ ಗೌರವ ಕಾರ್‍ಯದರ್ಶಿ ವಿಶ್ವಾಸ್ ಗೌಡ, ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಗೌರವ ಅಧ್ಯಕ್ಷ ಪೈಲ್ವಾನ್ ಚೌಡಪ್ಪ, ಅಧ್ಯಕ್ಷ ಲಕ್ಷ್ಮೀನಾರಾಯಣ್, ಕಾರ್‍ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್‍ಯದರ್ಶಿ ಗಣೇಶ್ ರಾಜಘಟ್ಟ, ಗೌ.ಅಧ್ಯಕ್ಷ ಪಿಳ್ಳಣ್ಣ, ಉಪಾಧ್ಯಕ್ಷ ಎಸ್.ಪದ್ಮನಾಭ್, ಖಜಾಂಚಿ ವಿಶ್ವನಾಥ್, ಸೇರಿದಂತೆ ನಗರಸಭಾ ಸದಸ್ಯರು, ಬಯಲು ಬಸವಣ್ಣ ಸೇವಾ ಸಮಿತಿ ಪದಾಕಾರಿಗಳು ಭಾಗವಹಿಸಿದ್ದರು.

ಬಹುಮಾನ ವಿಜೇತರ ವಿವರ

ದೊಡ್ಡಬಳ್ಳಾಪುರ ಯುವ ಕಿಶೋರಿ: ಶ್ರೀರಕ್ಷ (ಕನಕಪುರ).

ದೊಡ್ಡಬಳ್ಳಾಪುರ ಯುವ ಕಿಶೋರಅಭಿಷೇಕ್ (ಕನಕಪುರ).

ದೊಡ್ಡಬಳ್ಳಾಪುರ ಕಿಶೋರ: ಸೋಫಿಯಾನ್ (ಬೆಂಗಳೂರು).

ದೊಡ್ಡಬಳ್ಳಾಪುರ ಕುಮಾರ: ಅಂಬರೀಶ್ (ಮಂಡ್ಯ).

ದೊಡ್ಡಬಳ್ಳಾಪುರ ಕೇಸರಿ: ಧನಂಜಯ (ದೊಡ್ಡಬಳ್ಳಾಪುರ).

ದೊಡ್ಡಬಳ್ಳಾಪುರ ಕಂಠೀರವ: ಮಧುಸೂದನ್ (ದೇವನಹಳ್ಳಿ)

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!