Doddaballapura; ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಗಳಿಗೆ ಸಂಭ್ರಮದ ತೆರೆ| ಪ್ರಶಸ್ತಿ ವಿಜೇತರ ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: Doddaballapura ತಾಲೂಕು ಕುಸ್ತಿ ಸಂಘದಿಂದ ಬಯಲು ಬಸವಣ್ಣ ಕಡಲೇಕಾಯಿ ಪರಿಷೆ ಅಂಗವಾಗಿ ಬಸವಣ್ಣ ದೇವಾಲಯದ ಎದುರಿನ ಮೈದಾನದಲ್ಲಿ ನಡೆದ ಅಂತರ ಜಿಲ್ಲಾ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳ ಬಹುಮಾನ ವಿತರಣಾ ಸಮಾರಂಭ ನಡೆಯಿತು.

ಸಾಂಪ್ರದಾಯಿಕ ಮಣ್ಣಿನ ಅಖಾಡ (ಮಟ್ಟಿ)ದಲ್ಲಿ ತಡರಾತ್ರಿವರೆಗೂ ನಡೆದ ಅಂತಿಮ ಹಣಾಹಣಿಯಲ್ಲಿ ಸೆಣಸಾಡುವ ಕುಸ್ತಿ ಪಟುಗಳ ಕಾದಾಟವನ್ನು ನೂರಾರು ಜನ ಕಣ್ತುಂಬಿಕೊಂಡು ಸಂತಸ ಪಟ್ಟರು. ಕುಸ್ತಿ ಪಟುಗಳ ಜಂಗಿ ಕುಸ್ತಿಯಾಟ ಮೈನವಿರೇಳಿಸಿತು.

ಕುಸ್ತಿಪಟುಗಳ ತೂಕಗಳ ಮಾನದಂಡಕ್ಕೆ ಅನುಸಾರವಾಗಿ, ದೊಡ್ಡಬಳ್ಳಾಪುರ ಯುವ ಕಿಶೋರ, ದೊಡ್ಡಬಳ್ಳಾಪುರ ಕಿಶೋರ, ದೊಡ್ಡಬಳ್ಳಾಪುರ ಕುಮಾರ, ದೊಡ್ಡಬಳ್ಳಾಪುರ ಕೇಸರಿ, ದೊಡ್ಡಬಳ್ಳಾಪುರ ಕಂಠೀರವ, ಹಾಗೂ ಮಹಿಳಾ ವಿಭಾಗದಲ್ಲಿ (60 ಕೆ.ಜಿ. ಒಳಗಿನ ವಿಭಾಗ) ದೊಡ್ಡಬಳ್ಳಾಪುರ ಕಿಶೋರಿ ವಿಭಾಗಗಳಲ್ಲಿ ಪಂದ್ಯಗಳು ನಡೆದವು.

ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಂದ 105 ಕ್ರೀಡಾಪಟುಗಳು ಭಾಗವಹಿಸಿದ್ದರು.

ವಿಜೇತರಿಗೆ ಬೆಳ್ಳಿಗದೆ, ಟ್ರೋಫಿ, ನಗದು ಬಹುಮಾನ, ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.

ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ಪಾರಂಪರಿಕ ಕುಸ್ತಿ ಕಲೆ ಮರೆಯಾಗುತ್ತಿರುವ ಇಂತಹ ಸಂದರ್ಭದಲ್ಲಿ, ಕುಸ್ತಿಯನ್ನು ಉತ್ತೇಜಿಸಲು ಉತ್ತಮ ವೇದಿಕೆಗಳ ಅಗತ್ಯವಿದೆ. ದೇವನಹಳ್ಳಿಯಲ್ಲಿ 10 ವರ್ಷಗಳಿಗೊಮ್ಮೆ ಕುಸ್ತಿ ಪಂದ್ಯಾವಳಿಗಳು ನಡೆಯುತ್ತಿವೆ. ಇಂದಿನ ಪೀಳಿಗೆಗೆ ಕುಸ್ತಿ, ವ್ಯಾಯಾಮ ಹಾಗೂ ಗರುಡಿ ಮನೆಗಳ ಪರಿಚಯವಾಗಬೇಕು. ಕುಸ್ತಿ ಪಂದ್ಯಾವಳಿಗಳು ಪ್ರತಿ ವರ್ಷ ನಡೆಯಬೇಕು ಎಂದು ಸಲಹೆ ನೀಡಿದರು.

ಈ ವೇಳೆ ನಗರಸಭಾ ಸದಸ್ಯರಾದ ಶಿವ, ವೆಂಕಟೇಶ್ ಲಾವಣ್ಯ ವಿದ್ಯಾಸಂಸ್ಥೆಯ ಗೌರವ ಕಾರ್‍ಯದರ್ಶಿ ವಿಶ್ವಾಸ್ ಗೌಡ, ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಗೌರವ ಅಧ್ಯಕ್ಷ ಪೈಲ್ವಾನ್ ಚೌಡಪ್ಪ, ಅಧ್ಯಕ್ಷ ಲಕ್ಷ್ಮೀನಾರಾಯಣ್, ಕಾರ್‍ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್‍ಯದರ್ಶಿ ಗಣೇಶ್ ರಾಜಘಟ್ಟ, ಗೌ.ಅಧ್ಯಕ್ಷ ಪಿಳ್ಳಣ್ಣ, ಉಪಾಧ್ಯಕ್ಷ ಎಸ್.ಪದ್ಮನಾಭ್, ಖಜಾಂಚಿ ವಿಶ್ವನಾಥ್, ಸೇರಿದಂತೆ ನಗರಸಭಾ ಸದಸ್ಯರು, ಬಯಲು ಬಸವಣ್ಣ ಸೇವಾ ಸಮಿತಿ ಪದಾಕಾರಿಗಳು ಭಾಗವಹಿಸಿದ್ದರು.

ಬಹುಮಾನ ವಿಜೇತರ ವಿವರ

ದೊಡ್ಡಬಳ್ಳಾಪುರ ಯುವ ಕಿಶೋರಿ: ಶ್ರೀರಕ್ಷ (ಕನಕಪುರ).

ದೊಡ್ಡಬಳ್ಳಾಪುರ ಯುವ ಕಿಶೋರಅಭಿಷೇಕ್ (ಕನಕಪುರ).

ದೊಡ್ಡಬಳ್ಳಾಪುರ ಕಿಶೋರ: ಸೋಫಿಯಾನ್ (ಬೆಂಗಳೂರು).

ದೊಡ್ಡಬಳ್ಳಾಪುರ ಕುಮಾರ: ಅಂಬರೀಶ್ (ಮಂಡ್ಯ).

ದೊಡ್ಡಬಳ್ಳಾಪುರ ಕೇಸರಿ: ಧನಂಜಯ (ದೊಡ್ಡಬಳ್ಳಾಪುರ).

ದೊಡ್ಡಬಳ್ಳಾಪುರ ಕಂಠೀರವ: ಮಧುಸೂದನ್ (ದೇವನಹಳ್ಳಿ)

ರಾಜಕೀಯ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ಕುಮಾರಣ್ಣ ಆರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕುಮಾರಣ್ಣ ಆರೋಗ್ಯವಾಗಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="113069"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!