Doddaballapura; ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಗಳಿಗೆ ಸಂಭ್ರಮದ ತೆರೆ| ಪ್ರಶಸ್ತಿ ವಿಜೇತರ ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: Doddaballapura ತಾಲೂಕು ಕುಸ್ತಿ ಸಂಘದಿಂದ ಬಯಲು ಬಸವಣ್ಣ ಕಡಲೇಕಾಯಿ ಪರಿಷೆ ಅಂಗವಾಗಿ ಬಸವಣ್ಣ ದೇವಾಲಯದ ಎದುರಿನ ಮೈದಾನದಲ್ಲಿ ನಡೆದ ಅಂತರ ಜಿಲ್ಲಾ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳ ಬಹುಮಾನ ವಿತರಣಾ ಸಮಾರಂಭ ನಡೆಯಿತು.

ಸಾಂಪ್ರದಾಯಿಕ ಮಣ್ಣಿನ ಅಖಾಡ (ಮಟ್ಟಿ)ದಲ್ಲಿ ತಡರಾತ್ರಿವರೆಗೂ ನಡೆದ ಅಂತಿಮ ಹಣಾಹಣಿಯಲ್ಲಿ ಸೆಣಸಾಡುವ ಕುಸ್ತಿ ಪಟುಗಳ ಕಾದಾಟವನ್ನು ನೂರಾರು ಜನ ಕಣ್ತುಂಬಿಕೊಂಡು ಸಂತಸ ಪಟ್ಟರು. ಕುಸ್ತಿ ಪಟುಗಳ ಜಂಗಿ ಕುಸ್ತಿಯಾಟ ಮೈನವಿರೇಳಿಸಿತು.

ಕುಸ್ತಿಪಟುಗಳ ತೂಕಗಳ ಮಾನದಂಡಕ್ಕೆ ಅನುಸಾರವಾಗಿ, ದೊಡ್ಡಬಳ್ಳಾಪುರ ಯುವ ಕಿಶೋರ, ದೊಡ್ಡಬಳ್ಳಾಪುರ ಕಿಶೋರ, ದೊಡ್ಡಬಳ್ಳಾಪುರ ಕುಮಾರ, ದೊಡ್ಡಬಳ್ಳಾಪುರ ಕೇಸರಿ, ದೊಡ್ಡಬಳ್ಳಾಪುರ ಕಂಠೀರವ, ಹಾಗೂ ಮಹಿಳಾ ವಿಭಾಗದಲ್ಲಿ (60 ಕೆ.ಜಿ. ಒಳಗಿನ ವಿಭಾಗ) ದೊಡ್ಡಬಳ್ಳಾಪುರ ಕಿಶೋರಿ ವಿಭಾಗಗಳಲ್ಲಿ ಪಂದ್ಯಗಳು ನಡೆದವು.

ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಂದ 105 ಕ್ರೀಡಾಪಟುಗಳು ಭಾಗವಹಿಸಿದ್ದರು.

ವಿಜೇತರಿಗೆ ಬೆಳ್ಳಿಗದೆ, ಟ್ರೋಫಿ, ನಗದು ಬಹುಮಾನ, ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.

ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ಪಾರಂಪರಿಕ ಕುಸ್ತಿ ಕಲೆ ಮರೆಯಾಗುತ್ತಿರುವ ಇಂತಹ ಸಂದರ್ಭದಲ್ಲಿ, ಕುಸ್ತಿಯನ್ನು ಉತ್ತೇಜಿಸಲು ಉತ್ತಮ ವೇದಿಕೆಗಳ ಅಗತ್ಯವಿದೆ. ದೇವನಹಳ್ಳಿಯಲ್ಲಿ 10 ವರ್ಷಗಳಿಗೊಮ್ಮೆ ಕುಸ್ತಿ ಪಂದ್ಯಾವಳಿಗಳು ನಡೆಯುತ್ತಿವೆ. ಇಂದಿನ ಪೀಳಿಗೆಗೆ ಕುಸ್ತಿ, ವ್ಯಾಯಾಮ ಹಾಗೂ ಗರುಡಿ ಮನೆಗಳ ಪರಿಚಯವಾಗಬೇಕು. ಕುಸ್ತಿ ಪಂದ್ಯಾವಳಿಗಳು ಪ್ರತಿ ವರ್ಷ ನಡೆಯಬೇಕು ಎಂದು ಸಲಹೆ ನೀಡಿದರು.

ಈ ವೇಳೆ ನಗರಸಭಾ ಸದಸ್ಯರಾದ ಶಿವ, ವೆಂಕಟೇಶ್ ಲಾವಣ್ಯ ವಿದ್ಯಾಸಂಸ್ಥೆಯ ಗೌರವ ಕಾರ್‍ಯದರ್ಶಿ ವಿಶ್ವಾಸ್ ಗೌಡ, ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಗೌರವ ಅಧ್ಯಕ್ಷ ಪೈಲ್ವಾನ್ ಚೌಡಪ್ಪ, ಅಧ್ಯಕ್ಷ ಲಕ್ಷ್ಮೀನಾರಾಯಣ್, ಕಾರ್‍ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್‍ಯದರ್ಶಿ ಗಣೇಶ್ ರಾಜಘಟ್ಟ, ಗೌ.ಅಧ್ಯಕ್ಷ ಪಿಳ್ಳಣ್ಣ, ಉಪಾಧ್ಯಕ್ಷ ಎಸ್.ಪದ್ಮನಾಭ್, ಖಜಾಂಚಿ ವಿಶ್ವನಾಥ್, ಸೇರಿದಂತೆ ನಗರಸಭಾ ಸದಸ್ಯರು, ಬಯಲು ಬಸವಣ್ಣ ಸೇವಾ ಸಮಿತಿ ಪದಾಕಾರಿಗಳು ಭಾಗವಹಿಸಿದ್ದರು.

ಬಹುಮಾನ ವಿಜೇತರ ವಿವರ

ದೊಡ್ಡಬಳ್ಳಾಪುರ ಯುವ ಕಿಶೋರಿ: ಶ್ರೀರಕ್ಷ (ಕನಕಪುರ).

ದೊಡ್ಡಬಳ್ಳಾಪುರ ಯುವ ಕಿಶೋರಅಭಿಷೇಕ್ (ಕನಕಪುರ).

ದೊಡ್ಡಬಳ್ಳಾಪುರ ಕಿಶೋರ: ಸೋಫಿಯಾನ್ (ಬೆಂಗಳೂರು).

ದೊಡ್ಡಬಳ್ಳಾಪುರ ಕುಮಾರ: ಅಂಬರೀಶ್ (ಮಂಡ್ಯ).

ದೊಡ್ಡಬಳ್ಳಾಪುರ ಕೇಸರಿ: ಧನಂಜಯ (ದೊಡ್ಡಬಳ್ಳಾಪುರ).

ದೊಡ್ಡಬಳ್ಳಾಪುರ ಕಂಠೀರವ: ಮಧುಸೂದನ್ (ದೇವನಹಳ್ಳಿ)

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: “ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯಲು 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರ ತಾಲೂಕಿಗೆ ನೀಡಬೇಕು. ಇದಾದ ನಂತರ ನಾವು ಕೆರೆ ತುಂಬಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="109700"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]