ಮಹಿಳೆಯರನ್ನು ಮಂಚಕ್ಕೆ ಕರೆದ, ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯನ್ನು ನ್ಯಾಷನಲ್ ಹೀರೋ ಮಾಡಲಾಗಿದೆ: ನ್ಯಾಯಾಧೀಶರಿಗೆ Darshan ಪರ ವಕೀಲರ ಮನವರಿಕೆ

ಬೆಂಗಳೂರು: ಗೆಳತಿಗೆ ಸಂದೇಶ ಕಳುಹಿಸಿದ ರೇಣುಕಾಸ್ವಾಮಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ (Darshan) ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಸಂಜೆ ನಾಲ್ಕು ಗಂಟೆಗೆ ಕರ್ನಾಟಕ ಹೈಕೋರ್ಟ್ನಲ್ಲಿ ಮತ್ತೆ ಆರಂಭಿಸಲಾಯಿತು.

ದರ್ಶನ್ ಪರ ಹಿರಿಯ ವಕೀಲರಾದ ಸಿ.ವಿನಾಗೇಶ್ ಅವರು ಪ್ರಕರಣದ ತನಿಖೆಯ ಲೋಪದೋಷಗಳನ್ನು ಮುಂದಿಟ್ಟು ದರ್ಶನ್ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಷಡ್ಯಂತ್ರ ರೂಪಿಸಿದ್ದಾರೆ ಎಂಬ ಕುರಿತು ಪ್ರಬಲ ವಾದ ಮಂಡಿಸುತ್ತಿದ್ದಾರೆ.

ಕೊಲೆಯಾಗಿರುವ ರೇಣುಕಾಸ್ವಾಮಿ ಹಿನ್ನೆಲೆಯ ಬಗ್ಗೆ ಮತ್ತು ಮಹಿಳೆಯರ ಕುರಿತು ರೇಣುಕಾಸ್ವಾಮಿ ನಡೆದುಕೊಂಡ ರೀತಿ ಕುರಿತಾಗಿ ಪೀಠಕ್ಕೆ ನಾಗೇಶ್ ಅವರು ವಿವರಿಸುತ್ತಾ, ಮೃತ ರೇಣುಕಾಸ್ವಾಮಿ 4-1 ಆರೋಪಿ ಪವಿತ್ರಾಗೌಡ ಅವರನ್ನು ಮಂಚಕ್ಕೆ ಕರೆದಿದ್ದ ಮಂಚಕ್ಕೆ ಕರೆದಂತಹ ಅವರನ್ನು ನ್ಯಾಷನಲ್ ಹೀರೋ ಎಂಬಂತೆ ಬಿಂಬಿಸಲಾಗುತ್ತಿದೆ.

ಗೌತಮ್ ಹೆಸರಿನಲ್ಲಿ ರೇಣುಕಾಸ್ವಾಮಿ ಕಳುಹಿಸಿರುವ ಅಶ್ಲೀಲ ಫೋಟೋ ಚಿತ್ರ ಸಂದೇಶಗಳನ್ನು ಪೀಠಕ್ಕೆ ಸಲ್ಲಿಸಿದರು.

ಸಮಾಜದಲ್ಲಿ ಮಹಿಳೆರನ್ನು ಗೌರವಿಸದ ವ್ಯಕ್ತಿ ರೇಣುಕಾಸ್ವಾಮಿಯನ್ನು ಹೀರೋ, ನಮ್ಮ ಕಕ್ಷಿದಾರ ದರ್ಶನ್‌ರನ್ನು ಖಳನಾಯಕನಂತೆ ಸಮಾಜದಲ್ಲಿ ಬಿಂಬಿಸಲಾಗುತ್ತಿದೆ. ಇನ್ನು ರೇಣುಕಾಸ್ವಾಮಿಯ ಹತ್ಯೆಯಾದ ನಂತರದಲ್ಲಿ ಮೃತದೇಹ ಪತ್ತೆಯಾಗಿರುವುದು ಮತ್ತು ಪ್ರಕರಣ ದಾಖಲಾಗಿರುವ ನಿಧಾನಗತಿಯ ಬಗ್ಗೆ ನಾಗೇಶ್ ಅವರ ಪೀಠದ ಗಮನಕ್ಕೆ ತಂದರು.

ಕೊಲೆ ಮಾಡಲೇಬೇಕು ಎಂಬ ಉದ್ದೇಶದಿಂದ ಕಿಡ್ನಾಪ್ ಮಾಡಿಲ್ಲ. ಸಾಕ್ಷ್ಯ ನಾಶವಾಗಲಿ, ಕೊಲೆ, ಹಲ್ಲೆ ಸುಳ್ಳು ಆರೋಪವನ್ನು ದರ್ಶನ್ ವಿರುದ್ಧ ಮಾಡಲಾಗಿದೆ. IPC ಸೆಕ್ಷನ್ 364 & 302 ಜಾಮೀನುರಹಿತ ಅಪಾದನೆಗಳನ್ನು ಹೊರಿಸಲಾಗಿದೆ IPC 364 ಆರೋಪ ಒಪ್ಪಲಾಗದು. ಇದು ಅಪಹರಣಕ್ಕೆ ಸಂಬಂಧಿಸಿದೆ. ಆದರೆ ರೇಣುಕಾಸ್ವಾಮಿ ಇಲ್ಲಿ ಅಪ್ರಾಪ್ತನಲ್ಲ. ಅವರನ್ನು ಹೊರದೇಶಕ್ಕೆ ಕರೆದುಕೊಂಡು ಹೋಗಿಲ್ಲ.

ಕಿಡ್ಯಾಪ್ ಮಾಡಲು ಯಾವುದೇ ಟೀಂ ಕೂಡ ಮಾಡಿಲ್ಲ ಈ ಬಗ್ಗೆ ಚಾರ್ಜ್ ಶೀಟ್‌ನಲ್ಲೂ ಸಾಕ್ಷಿ ಉಲ್ಲೇಖಿಸಿಲ್ಲ. ನಾಲ್ವರು ಸ್ನೇಹಿತರ ಜೊತೆ ಊಟಕ್ಕೆ ಹೋಗುತ್ತಿರುವುದಾಗಿ ತಾಯಿ ಜೊತೆ ಖುದ್ದು ರೇಣುಕಾಸ್ವಾಮಿ ಹೇಳಿದ್ದಾನೆ ಎಂದು ರೇಣುಕಾಸ್ವಾಮಿಯವರ ತಂದೆ ಕಾಶಿನಾಥಯ್ಯ ಅವರ ಹೇಳಿಕೆಯನ್ನು ಉಲ್ಲೇಖಿಸುತ್ತಾ ನಾಗೇಶ್ ಅವರು ಸಂಕ್ಷಿಪ್ತವಾಗಿ ಪೀಠಕ್ಕೆ ವಿವರ ಸಲ್ಲಿಸಿದರು.

ಹಗ್ಗ ಮರದ 2 ರೆಕ್ಕೆಯನ್ನು ಹತ್ಯೆ ಸ್ಥಳದಲ್ಲಿ ಸಾಕ್ಷ್ಯವಾಗಿ ಪ್ರಾಸಿಕ್ಯೂಷನ್ ಜಪ್ತಿ ಮಾಡಿದ್ದಾರೆ. ಇನ್ನು ಪಟ್ಟಣಗೆರೆ ಶೆಡ್ಗೆ ಜೂನ್ 9ರಂದು ಬೀಗ ಹಾಕಿ ತಮ್ಮ ಬಳಿ ಇಟ್ಟುಕೊಂಡಿದ್ದರು.

ಜೂ.1ರಂದು ರೇಣುಕಾಸ್ವಾಮಿ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಲಾಗಿದೆ ಜೂ.12ದು ಶೆಡ್ಗೆ ತನಿಖಾಧಿಕಾರಿಗಳು ಭೇಟಿ ನೀಡಿದ್ದರು. ಇದಕ್ಕೂ ಮುನ್ನ 3 ದಿನ ಸುಮ್ಮನೇ ಸಮಯ ವ್ಯರ್ಥ ಮಾಡಿದ್ದಾರೆ. ವಶಕ್ಕೆ ಪಡೆದ ವಸ್ತುಗಳು ಶೆಡ್‌ನಲ್ಲೇ 3 ದಿನ ಬಿದ್ದಿರುತ್ತವೆ.

ದರ್ಶನ್ ತೊಟ್ಟ ಬಟ್ಟೆಯನ್ನು ಕುಕ್ಕಿ ಕುಕ್ಕಿ ಒಗೆಯಲಾಗಿದೆ ಆದರೂ ರಕ್ತದ ಕಲೆ ದೊರೆತಿದೆ. ದರ್ಶನ್ ಚಪ್ಪಲಿ ತೊಟ್ಟಿದ್ದರೆ ಪೊಲೀಸರು ಶೂ ತರ್ತಾರೆ ಎಂದು ನಾಗೇಶ್ ಅವರು ತನಿಖೆಯ ಹಂತದ ಲೋಪದೋಷಗಳ ಕುರಿತು ವಾದ ಮಂಡಿಸಿದ್ದರು.

ಈ ನಡುವೆ ನ್ಯಾಯಾಧೀಶರು ಅರ್ಜಿಯ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!