ಸಚಿವೆ ಕಣ್ಣಿಗೆ ಬಿದ್ದ ನಿರ್ಗತಿಕ ಕುಟುಂಬ: ನೆರವು ನೀಡಿ ಮಾನವೀಯತೆ ತೋರಿದ ಲಕ್ಷ್ಮೀ ಹೆಬ್ಬಾಳಕರ್| lakshmi hebbalkar

ಬೆಳಗಾವಿ: ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (lakshmi hebbalkar) ಬೆಳಗಾವಿಗೆ ವಾಪಸ್ ಆಗುವಾಗ ಆಕಸ್ಮಾತಾಗಿ ಕಣ್ಣಿಗೆ ಕಾಣಿಸಿದ ನಿರ್ಗತಿಕ ಕುಟುಂಬವೊಂದಕ್ಕೆ ನೆರವು ನೀಡುವ ಮೂಲಕ ಮಾನವೀಯತೆ ತೋರಿಸಿದ್ದಾರೆ.

ಕಾರ್ಯಕ್ರಮ ಮುಗಿಸಿ ಮರಳುವಾಗ ವಿಜಯಪುರ – ಬಾಗಲಕೋಟೆ ಹೆದ್ದಾರಿಯ ಪಕ್ಕ ಹನಗನಹಳ್ಳಿ ಎಂಬಲ್ಲಿ ರಸ್ತೆ ಪಕ್ಕದಲ್ಲಿ ಊಟಕ್ಕೆಂದು ಸಚಿವರು ವಾಹನ ನಿಲ್ಲಿಸಿದರು. ಊಟ ಮಾಡುವಾಗ ಪಕ್ಕದಲ್ಲಿದ್ದ ಸಣ್ಣ ಮನೆಯ ಮುಂದೆ ಅಜ್ಜಿಯೊಬ್ಬಳು ಬಾಟಲಿಗಳಲ್ಲಿ ನೀರು ತುಂಬಿಸಿ ಮನೆಯ ಮುಂದೆ ಇಡುತ್ತಿದ್ದಳು. ಆ ಬಗ್ಗೆ ವಿಚಾರಿಸಿದಾಗ ರಸ್ತೆಯಲ್ಲಿ ಹೋಗುವ ಜನರು ನೀರು ಕುಡಿಯಲು ಬರುತ್ತಾರೆ. ಅವರಿಗೆ ಸಹಾಯವಾಗಲೆಂದು ಬಾಟಲಿಗಳಲ್ಲಿ ತುಂಬಿ ಇಡುವುದಾಗಿ ತಿಳಿಸಿದಳು.

ಹಾಗೆ ಮಾತನಾಡುತ್ತ ಗೌರಮ್ಮ ವಾಡೇದ ಎಂಬ ಆ ಅಜ್ಜಿ ಹಾಗೂ ಜೊತೆಗಿದ್ದ ಮಲ್ಲು ಎನ್ನುವ ಹೆಸರಿನ ಅವಳ ಮಗನ ಕುರಿತು ವಿಚಾರಿಸಿದಾಗ, ಅವರು ಹಳ್ಳಿಯಲ್ಲಿ ಹೊಂದಿದ್ದ ಮನೆಯ ಜಾಗ ರಸ್ತೆ ಮಾಡುವಾಗ ಕೈ ತಪ್ಪಿದೆ. ಇದರಿಂದಾಗಿ ವಾಸಿಸಲು ಮನೆಯೇ ಇರಲಿಲ್ಲ. ನಂತರ ಈ ಸ್ಥಳದಲ್ಲಿದ್ದ ತೋಟದ ಮಾಲಕರು ಒಂದೇ ಕೊಠಡಿಯ ಮನೆಯಲ್ಲಿ ವಾಸಿಸಲು ಅವಕಾಶ ನೀಡಿದರು. ಆದರೆ ಅಡುಗೆ ಮಾಡಲು ಪಾತ್ರೆಗಳಾಗಲಿ, ಹಾಸಿಗೆ- ಹೊದಿಕೆಗಳಾಗಲಿ, ಕಾಳು ಕಡಿಗಳಾಗಲಿ ಏನೂ ಇಲ್ಲದೆ ಊಟಕ್ಕೂ ಸರಿಯಾಗಿ ಗತಿ ಇಲ್ಲ ಎನ್ನುವ ಅಂಶ ಗೊತ್ತಾಯಿತು.

ಅವರು ಈ ಮೊದಲು ಹೊಂದಿದ್ದ ಪಡಿತರ ಕಾರ್ಡ್ ಕೂಡ ಕಳೆದುಹೋಗಿದ್ದರಿಂದ ಸರಕಾರದಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ ಎನ್ನುವುದು ಕೂಡ ತಿಳಿಯಿತು.
ಕೂಡಲೇ ಸಚಿವರು (lakshmi hebbalkar) ಸ್ವಲ್ಪಮಟ್ಟಿಗೆ ಆರ್ಥಿಕ ನೆರವು ನೀಡಿದರಲ್ಲದೆ, ಆದಷ್ಟು ಶೀಘ್ರ ರೇಶನ್ ಕಾರ್ಡ್ ಮತ್ತು ಗೃಹಲಕ್ಷ್ಮೀ ಯೋಜನೆಯ ಹಣ ಬರುವಂತೆ ಮಾಡುವುದಾಗಿ ತಿಳಿಸಿ, ಸ್ಥಳದಿಂದಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನೆರವು ನೀಡಿದ ಪೊಲೀಸ್ ಅಧಿಕಾರಿ

ಇದೇ ವೇಳೆ ಅದೇ ಮಾರ್ಗವಾಗಿ ತೆರಳುತ್ತಿದ್ದ ಎಎಸ್ಐ ಎಚ್.ಎಸ್.ಗೌಡರ್ ಸಚಿವರ ಬಳಿ ಆಗಮಿಸಿ, ಅಜ್ಜಿಯ ಕುಟುಂಬದ ಪರಿಸ್ಥಿತಿ ವಿವರಿಸಿದರು. ಆಗ ಅಜ್ಜಿ, ತಾವು ಉಪವಾಸವಿದ್ದ ಸಂದರ್ಭದಲ್ಲಿ ಎಎಸ್ಐ ತಮಗೆ ಅಕ್ಕಿ ನೀಡಿ ನೆರವು ನೀಡಿದ್ದಾರೆ ಎಂದು ಸಚಿವರಿಗೆ ತಿಳಿಸಿದಳು. ಇದನ್ನು ತಿಳಿದ ಸಚಿವರು, ಸಂಕಷ್ಟದಲ್ಲಿದ್ದವರಿಗೆ ನೆರವು ನೀಡಿದ್ದಕ್ಕಾಗಿ ಸರಕಾರದ ಪರವಾಗಿ ಎಎಸ್ಐ ಗೌಡರ್ ಗೆ ಧನ್ಯವಾದ ತಿಳಿಸಿದರು.

ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇಂತವರಿಗಾಗಿಯೇ ಸರಕಾರ ಗೃಹಲಕ್ಷ್ಮೀ, ಅನ್ನಭಾಗ್ಯ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿಗಳು ಬಡವರಿಗಾಗಿಯೇ ಯೋಜನೆಗಳನ್ನು ತಂದಿದ್ದಾರೆ. ಅದು ಯಾರಿಗೆ ತಲುಪಿಲ್ಲವೋ ಅಂತವರಿಗೆ ತಲುಪಿಸುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಶೀಘ್ರದಲ್ಲೇ ಮಾಡಲಾಗುವುದು.

ಎಎಸ್ಐ ಗೌಡರ್ ಮನುಷ್ಯತ್ವ ತೋರಿಸಿ ಅಜ್ಜಿಯ ಕುಟುಂಬಕ್ಕೆ ನೆರವು ನೀಡಿದ್ದಾರೆ. ಅವರ ಕಾರ್ಯ ಸ್ತುತ್ಯಾರ್ಹ. ಸರಕಾರದಿಂದ ಆ ಕುಟುಂಬಕ್ಕೆ ಎಲ್ಲ ನೆರವು ಸಿಗುವಂತೆ ಮಾಡುತ್ತೇನೆ ಎಂದು ತಿಳಿಸಿದರು.

ತಮ್ಮ ಅವಸರದ ಪ್ರವಾಸದ ಮಧ್ಯೆಯೂ ಸಚಿವರು ಸಮಯ ನೀಡಿ ಇಂತಹ ನಿರ್ಗತಿಕ ಕುಟುಂಬಕ್ಕೆ ನೆರವು ನೀಡಲು ಮುಂದಾಗಿರುವುದು ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!