Darshan ಪ್ರಕರಣ: ಕೊಲ್ಲುವ ಉದ್ದೇಶವಿದ್ದರೆ ಊಟ, ನೀರು ತಂದುಕೊಡಿ, ಪೊಲೀಸರಿಗೆ ಒಪ್ಪಿಸಿ ಎನ್ನಲು ಸಾಧ್ಯವೇ..?; ನ್ಯಾಯವಾದಿ ಸಿವಿ ನಾಗೇಶ್ ಪ್ರಬಲ ವಾದ

ಬೆಂಗಳೂರು: ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ಇಂದೂ ಕೂಡ ನಡೆದಿದ್ದು, ದರ್ಶನ್ (Darshan) ಪರ ಹಿರಿಯ ವಕೀಲರಾದ ಸಿವಿ ನಾಗೇಶ್ ಅವರು ಲೋಪ ದೋಶಗಳನ್ನು ಪಟ್ಟಿ ಮಾಡಿ, ದರ್ಶನ್ ಅವರಿಗೆ ಜಾಮೀನು ನೀಡಬೇಕೆಂಬ ತಮ್ಮ ಪ್ರಬಲ ವಾದವನ್ನು ಮುಕ್ತಾಯಗೊಳಿಸಿದರು.

ಇಂದು ಮಧ್ಯಾಹ್ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠದಲ್ಲಿ ಆರಂಭವಾದ ವಿಚಾರಣೆಯಲ್ಲಿ ತಮ್ಮ ವಾದ ಮುಂದುವರಿಸಿದ ಸಿವಿ ನಾಗೇಶ್ ಅವರು,
ಆರೋಪಿಗಳ 164 ಹೇಳಿಕೆ ಪ್ರಾಮುಖ್ಯತೆ ಇದ್ದಾಗ ದಾಖಲಿಸಲಾಗುತ್ತದೆ. ಪೊಲೀಸರು ದಾಖಲಿಸಿರುವ ಸ್ವಇಚ್ಛಾ ಹೇಳಿಕೆಗಳೂ ಹೀಗೆ ಬಂದು ಹಾಗೇ ಕಾರು ಹೋಗಿವೆ. ಎಂದು ಹೇಳಿದ್ದಾರೆ. ಪಟ್ಟಣಗೆರೆ ಶೆಡ್‌ಗೆ ಯಾರು? ಯಾವಾಗ ಬಂದರು. ಯಾರು ಯಾರು ಇದ್ದರು ಎಂಬುವುದು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಯಲ್ಲಿ ಸ್ಪಷ್ಟತೆ ಇಲ್ಲ.

ಸಾಕ್ಷಿಗಳು ಜೂ.10ನೇ ತಾರೀಖಿನಂದು ಕೊಲೆ ನಡೆದ ವಿಷಯ ಗೊತ್ತಾಗಿದೆ ಎಂದು ಹೇಳಿದ್ದಾರೆ. ಅದು ಮಾಧ್ಯಮಗಳಲ್ಲಿ ನೋಡಿದ ಮೇಲೆ ಇಂಥವರೇ ಕೊಲೆ ಮಾಡಿದ್ದಾರೆ ಎಂಬ ವಿಷಯಗಳು ತಿಳಿದವು. ಆದರೆ ಯಾವತ್ತು ಏನು ಆಗಿದೆ ಎಂಬುವುದನ್ನು ಸರಿಯಾಗಿ ಹೇಳಿಲ್ಲ ಪ್ರತ್ಯಕ್ಷದರ್ಶಿ ಓರ್ವರ ಹೇಳಿಕೆ ಆಧರಿಸಿ ನಾಗೇಶ್ ಅವರು ವಾದಿಸಿದರು.

ಮುಂದುವರಿದು, ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳನ್ನು ಜೂ.15ರಂದು ದಾಖಲಿಸಲಾಗಿದೆ. ಬೆಂಗಳೂರಿನಲ್ಲೇ ಇಬ್ಬರು ಸಾಕ್ಷಿಗಳ ಹೇಳಿಕೆಗಳನ್ನು ತಡವಾಗಿ ದಾಖಲಿಸಲಾಗಿದೆ. ಘಟನೆ ನಡೆದ ದಿನ ಸಾಕ್ಷಿ ಓರ್ವನು ಶೆಡ್‌ನಲ್ಲೇ ಇದ್ದ ಅದರೂ ತನಿಖಾಧಿಕಾರಿಗಳು 15 ದಿನಗಳ ಬಳಿಕ ಹೇಳಿಕೆಗಳನ್ನು ತಡವಾಗಿ ದಾಖಲಿಸಿದ್ದು ಯಾಕೇ..? ಎಂದು ಪೊಲೀಸರ ತನಿಖೆಯ ಬಗ್ಗೆ ಸಿವಿ ನಾಗೇಶ್ ಅವರು ಅನುಮಾನ ವ್ಯಕ್ತಪಡಿಸಿದರು.

7 ರಿಮ್ಯಾಂಡ್ ಅರ್ಜಿಗಳನ್ನು ಹಾಕಲಾಗಿದೆ. ಪೊಲೀಸರು ಈವರೆಗೂ ಯಾವ ಸಾಕ್ಷಿಯನ್ನು ಸಂಗ್ರಹಿಸಿದ್ದಾರೋ ಆ ಬಗ್ಗೆ ಯಾವುದೇ ರಿಮ್ಯಾಂಡ್ ಅರ್ಜಿಯಲ್ಲೂ ಉಲ್ಲೇಖ ಮಾಡಿಲ್ಲ. ಜೂ.21ರಂದು ಮ್ಯಾಜಿಸ್ಟ್ರೇಟ್ ಮುಂದೆ 164 ಹೇಳಿಕ ದಾಖಲಿಸಲಾಗಿದೆ. ಹೀಗಿದ್ದೂ ರಿಮ್ಯಾಂಡ್ ಅರ್ಜಿಯಲ್ಲಿ ಉಲ್ಲೇಖಿಸದಿರಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಸಾಕ್ಷಿದಾರರ ಮೂವರ ಸ್ವಇಚ್ಚಾ ಹೇಳಿಕೆಗಳನ್ನು ಪೀಠದ ಮುಂದೆ ವಿವರಿಸಿದ ನಾಗೇಶ್ ಅವರು ಹೆಚ್ಚುವರಿ ಚಾರ್ಜ್‌ ಶೀಟ್ ನಲ್ಲೂ ದೋಷಗಳು ಇವೆ. ಸಾಕಷ್ಟು ಸಾಕ್ಷಿಗಳನ್ನು ಸೃಷ್ಟಿ ಮಾಡಿದ್ದಾರೆ. ಸಾಕ್ಷಿ ಓರ್ವನ ಮೊಬೈಲ್ ಟವರ್ ಜಂಪ್ ತೋರಿಸಲಾಗಿದೆ.

ಸಾಕ್ಷಿಯೋರ್ವ ಬೇಸಿಕ್ ಮೊಬೈಲ್ ಗೆ ಸಿಮ್ ಹಾಕಿಕೊಂಡು, ಬೇರೆ ಮೊಬೈಲ್ ಮನೆಯಲ್ಲಿಟ್ಟಿದ್ದ ಆರೋಪಿ ವಿನಯ್ಗೆ ಈ ಸಾಕ್ಷಿಯು ಕರೆ ಮಾಡಿದ್ದ ಭಯವಾದ ಕಾರಣ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗಿದ್ದೆ ಹಾಸನಕ್ಕೆ ಹೋಗಿದ್ದೆ ಅಲ್ಲಿ ಇಲ್ಲಿ ಹೋಗಿದ್ದೆ ಅಂತಾ ಸಾಕ್ಷಿ ಹೇಳಿದ್ದಾನೆ. ಈ ರೀತಿ ಕಥೆಗಳನ್ನು ಕಟ್ಟಲಾಗಿದ್ದು ಇವುಗಳನ್ನು ಹೇಗೆ ನಂಬುವುದು ಎಂದ ನಾಗೇಶ್ ಅವರು ಹೆಚ್ಚುವರಿ ಚಾರ್ಜ್ ಶೀಟ್ ದೋಷಗಳಿಂದ ಕೂಡಿದೆ. ಸಾಕ್ತಿಯೋರ್ವನು ತನಗೆ ಭಯವಾದ್ದರಿಂದ ಗೋವಾಗೆ ಹೋಗಿದ್ದೆ ಅಂತಾ ಹೇಳಿದ್ದಾನೆ. ಆದರೆ ಮುಂಚಿತವಾಗಿಯೇ ಟಿಕೆಟ್ ಬುಕ್ ಮಾಡಲಾಗಿದೆ.

ಪೊಲೀಸರು ಇತ್ತೀಚೆಗೆ 8 ಫೋಟೋಗಳನ್ನು ರಿಟ್ರೇವ್ ಮಾಡಿದ್ದಾರೆ. ಫೋಟೋಗಳು ಜೂ.ರಂದು ತೆಗೆಯಲಾಗಿದೆ. ಇದನ್ನು ಪ್ರಾಸಿಕ್ಯೂಷನ್ ಹೇಳ್ತಾ ಇದೆ. ಫೋಟೋದಲ್ಲಿ ಸಾಕ್ಷಿ ಧರಿಸಿದ ಪ್ಯಾಂಟ್, ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ತೋರಿಸಿರುವ ಪ್ಯಾಂಟ್ ಬೇರೆ ಇದೆ ಇನ್ನು ಸಾಕ್ಷಿಯೋರ್ವ ಗೋವಾಕ್ಕೆ ಹೋಗಲು ಮೊದಲೇ ಪ್ಲಾನ್ ಮಾಡಿದ್ದ ಗೋವಾಗೆ ಗೋಗುವ ಪ್ಲಾನ್ ಮೊದಲೇ ಇತ್ತು ರೇಣುಕಾಸ್ವಾಮಿ ಕೊಲೆ ಜೂ.8ರಂದು ನಡೆದಿದೆ. ಸಾಕ್ಷಿ ಗೋವಾಗೆ ಗೋವಾಗೆ ಹೋಗಲು ಜೂ.21ಕ್ಕೆ ಟಿಕೆಟ್ ಬುಕ್ ಮಾಡಿಕೊಂಡಿದ್ದ ಹೆದರಿಕೊಂಡು ಆತ ಗೋವಾಗೆ ಹೋಗಿಲ್ಲ. ಮೊದಲೇ ಪ್ಲಾನ್ ಮಾಡಿ ಟಿಕೆಟ್ ಕೂಡ ಬುಕ್ ಮಾಡಿಕೊಂಡಿದ್ದ

ಪೊಲೀಸರು ಸಾಕ್ಷಿಯ ಮೊಬೈಲ್‌ನಿಂದ ರಿಟೀವ್ ಆದ ಫೋಟೋಗಳನ್ನು ತೋರಿಸಿದ್ದಾರೆ. ಪೊಲೀಸರು ಸಾಕ್ಷಿಯ ಫೋಟೋದಲ್ಲಿರುವ ಪ್ಯಾಂಟ್, ಅವರು ತೋರಿಸಿರುವ ಪ್ಯಾಂಟ್ ಬೇರೆ ಇದೆ. ಪ್ಯಾಂಟನ್ನೇ ಪೊಲೀಸರು ಬದಲಾಯಿಸಿದ್ದಾರೆ.

ಪೊಲೀಸರು ಜೈಲಿನಿಂದ ರಿಲೀಸ್ ಆದ ಆರೋಪಿ ನಿಂದ ಬಿಡುಗಡೆ ನಂತರವೂ ಅವರ ಇಷ್ಟದಂತೆ ಹೇಳಿಕೆ ಮತ್ತೊಮ್ಮೆ ಪಡೆದಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿ ವಾದಿಸಿದರು. ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ದಾಖಲಿಸಲು ತನಿಖಾಧಿಕಾರಿಗಳಿಂದ ವಿಳಂಬ ಆಗಿದೆ. ಲೋಪಗಳಿವೆ. ಹೀಗಾಗಿ ತಮ್ಮ ಕಕ್ಷಿದಾರ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಹೇಳಿಕೆ ದಾಖಲಿಸಲು ವಿಳಂಬ ಮಾಡಿದರೆ ಜಾಮೀನು ನೀಡಬಹುದೆಂಬ ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿ ಜಾಮೀನು ಕೋರಿದರು.

ಅಲ್ಲದೆ ದರ್ಶನ್ಗೆ ಕೊಲ್ಲುವ ಉದ್ದೇಶ ಇದ್ದಿದ್ದರೆ ಊಟ ತಂದುಕೊಡಿ, ನೀರು ತಂದು ಕೊಡಿ, ಪೊಲೀಸರ ಮುಂದೆ ಹಾಜರು ಪಡಿಸಿ ಎಂದು ಯಾಕೆ ಹೇಳ್ತಾ ಇದ್ದರೇ.? ಹೇಳುವುದು ಮತ್ತಷ್ಟು ಇದ ಎಂದು ಪ್ರಬಲವಾಗಿ ವಾದ ಮಂಡಿಸಿದರು.

ಇನ್ನು ದರ್ಶನ್ ಅವರ ಆರೋಗ್ಯದ ಸ್ಥಿತಿಗತಿ ಹೇಗಿದೆ ಎಂದು ಪ್ರಶ್ನಿಸಿರುವ ನ್ಯಾಯಮೂರ್ತಿ ವಿಶ್ವಜಿತ್ ಅವರಗೆ ಉತ್ತರಿಸಿದ ನಾಗೇಶ್ ಅವರು, ದರ್ಶನ್ ಅವರನ್ನು ಎಂಆರ್‌ಐ ಪರೀಕ್ಷೆಗೆ ಒಳಪಡಿಸಲಾಗಿದೆ. ಬಿ.ಪಿ ವ್ಯತ್ಯಾಸವಾಗುತ್ತಿದೆ ಹೀಗಾಗಿ ಸರ್ಜರಿಗೆ ಇನ್ನು ಮುಂದಾಗಿಲ್ಲ. ಸರ್ಜರಿಯನ್ನು ವೈದ್ಯರು ನಿರ್ಧರಿಸುತ್ತಾರೆ ಎಂದು ವಿವರಣೆ ನೀಡಿದರು.

ನಂತರ ವಿಚಾರಣೆಯನ್ನು ಪೀಠ ನಾಳೆಗೆ (ನವೆಂಬರ್ 29ಕ್ಕೆ) ಮುಂದೂಡಿತು ಎಂದು ವರದಿಯಾಗಿದೆ.

ರಾಜಕೀಯ

ಹಾವು ಬಿಡ್ತೀನಿ ಅಂತೇಳಿ ಹಾವ್ರಾಣಿ ಬಿಟ್ಟ ರಾಜಣ್ಣ..!

ಹಾವು ಬಿಡ್ತೀನಿ ಅಂತೇಳಿ ಹಾವ್ರಾಣಿ ಬಿಟ್ಟ ರಾಜಣ್ಣ..!

ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ದಾಖಲೆಗಳಿಲ್ಲ. ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಸಿಸಿ ಕ್ಯಾಮರಾ ಇಲ್ಲ. Rajanna

[ccc_my_favorite_select_button post_id="104571"]
ಕರ್ನಾಟಕದ ರಫ್ತು: 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ; ಎಂಬಿ ಪಾಟೀಲ

ಕರ್ನಾಟಕದ ರಫ್ತು: 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ; ಎಂಬಿ

`ರಾಜ್ಯದ ಕೈಗಾರಿಕಾ ವಲಯವು ಸದ್ಯಕ್ಕೆ ವಾರ್ಷಿಕವಾಗಿ 27 ಬಿಲಿಯನ್ ಡಾಲರ್ ಮೌಲ್ಯದ ರಫ್ತು ವಹಿವಾಟನ್ನು ಮಾತ್ರ ನಡೆಸುತ್ತಿದೆ. ಇದನ್ನು 100 ಬಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯಬೇಕು ಎನ್ನುವುದು ನಮ್ಮ ಗುರಿಯಾಗಿದೆ. MB Patila

[ccc_my_favorite_select_button post_id="104564"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
ಮಾತೃ ನಿಂದನೆ ಮಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹೇಳಿದ್ದು ಭಾರತ್ ಮಾತಾ ಕಿ ಜೈ..!| Video

ಮಾತೃ ನಿಂದನೆ ಮಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹೇಳಿದ್ದು ಭಾರತ್ ಮಾತಾ ಕಿ ಜೈ..!|

ಹಾವೇರಿ: ದೇಶ, ಧರ್ಮ, ಗೋಮಾತೆ, ಮಾತೆಯರ ಕುರಿತು ಗೌರವಯುತ ಸಿದ್ದಾಂತ ಹೊಂದಿರುವ ಬಿಜೆಪಿ (BJP)ಯ ಜಿಲ್ಲಾ ಅಧ್ಯಕ್ಷನೋರ್ವ ಮಾತೃ ನಿಂದನೆ ಮಾಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುರಿತು ಪ್ರತಿಭಟನೆ ವೇಳೆ ಅಸಭ್ಯ ಪದ ಬಳಸಿದ್ದು ಸಾರ್ವಜನಿಕ ವಲಯದಲ್ಲಿ

[ccc_my_favorite_select_button post_id="104539"]
ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ

[ccc_my_favorite_select_button post_id="104484"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!