ಮಾನವೀಯ ಅಂತಃಕರಣದ ಪ್ರತೀಕವಾಗಿದ್ದರು ಡಾ.ಎಂ.ಎಂ.ಕಲಬುರ್ಗಿ: ನಾಡೋಜ ಗೊ.ರು.ಚನ್ನಬಸಪ್ಪ (goru channabasappa)

ಧಾರವಾಡ: ಕಲಬುರ್ಗಿ ಅವರ ಶ್ರೇಷ್ಠತೆ ಇರುವುದು ಕೇವಲ ಅವರು ಹಿರಿಯ ಸಂಶೋಧಕರು ಆಗಿದ್ದರು ಎಂಬುವುದಕ್ಕಲ್ಲ; ಅವರು ಸೃಜನಶೀಲ ಬರಹಗಾರರಾಗಿದ್ದರು ಎಂಬ ಕಾರಣಕ್ಕೂ ಅಲ್ಲ; ಅದಕ್ಕಿಂತ ಅವರಲ್ಲಿದ್ದ ಮಾನವೀಯ ಅಂಥಃಕರಣ ಎಂಬುದು ಅವರ ಶ್ರೇಷ್ಠತೆಯನ್ನು ಎತ್ತಿ ತೋರಿಸುತ್ತದೆ. ನಾವು ಮಾಡುವಂತಹ ಕೆಲಸದಲ್ಲಿ ನಿಷ್ಠೆ ಇಲ್ಲದಿದ್ದರೆ ನಮ್ಮ ಬದುಕು ಶೃತಿ ಕೆಟ್ಟ ಸಂಗೀತವಾಗುತ್ತದೆ ಎಂದು ಹೇಳುತ್ತಿದ್ದರು. ಸಂಗೀತ ಮತ್ತು ಅಧ್ಯಯನದಲ್ಲಿ ಯಾವುದೇ ರೀತಿಯ ಅಡೆತಡೆಗಳು ಬರದಂತೆ ಎಚ್ಚರ ವಹಿಸಿದ ವ್ಯಕ್ತಿ ನಮ್ಮ ಕಲಬುರ್ಗಿಯವರು ಎಂದು ನಾಡೋಜ ಗೊ.ರು.ಚನ್ನಬಸಪ್ಪ (goru channabasappa) ಅವರು ಹೇಳಿದರು.

ಅವರು ಇಂದು ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ವತಿಯಿಂದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾದ ಡಾ.ಎಂ.ಎಂ.ಕಲಬುರ್ಗಿ ಅವರ 86 ನೇ ಜನ್ಮ ದಿನಾಚರಣೆ, ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮತ್ತು ಗ್ರಂಥ ಬಿಡುಗಡೆ ಕಾರ್ಯಕ್ರಮದ ಅಂಗವಾಗಿ ಡಾ.ಎಂ.ಎಂ.ಕಲಬುರ್ಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಕಲಬುರ್ಗಿ ಅವರು ಯಾವುದೇ ಕೊರತೆ, ಹಸಿವು, ನಿದ್ದೆಗಳ ಹಂಗಿಲ್ಲದೆ ಕೆಲಸ ಮಾಡುವ ವ್ಯಕ್ತಿ ಆಗಿದ್ದರು. ಸಾಮಾನ್ಯವಾಗಿ ನಾವು ಸಮಗ್ರ ಎಂಬ ಪದವನ್ನು ಬಳಸುತ್ತೇವೆ. ಸಮಗ್ರ ಅಂದರೆ ಪೂರ್ಣವಾಗಿದ್ದು, ಒಟ್ಟಾಗಿರುವುದು ಎಂಬ ಅರ್ಥ ಇದೆ. ಲೋಕವ್ಯವಹಾರದಲ್ಲಿ ಸಮಗ್ರ ನೋಟ, ಸಮಗ್ರ ವರದಿ, ಸಮಗ್ರ ವ್ಯಕ್ತಿತ್ವ ಎಂಬ ಇಂತಹ ಪದಗಳನ್ನು ಬಳಸುತ್ತೇವೆ. ವ್ಯಕ್ತಿಗತವಾಗಿ ಅನ್ವಯಿಸುವುದಾದರೆ ಅದು ನಮ್ಮ ನೆಚ್ಚಿನ ಸಾಹಿತಿಗಳಾದ ಡಾ.ಎಂ.ಎಂ ಕಲಬುರ್ಗಿ ಅವರಿಗೆ ಅನ್ವಯಿಸುತ್ತದೆ ಎಂದರು.

ಗ್ರಂಥ ಬಿಡುಗಡೆ ಮಾಡಿ ಮಾತನಾಡಿದ ಅವರು ಕಲಬುರ್ಗಿ ಅವರ ಸಮಗ್ರ ಲೇಖನಗಳು ಪ್ರಕಟವಾಗಬೇಕು. ಸರಕಾರ ಕಲಬುರ್ಗಿ ಟ್ರಸ್ಟ್ ಸ್ಥಾಪಿಸಿದೆ, ಅವರ ಮನಸ್ಸಿನಲ್ಲಿ ಏನು ಇತ್ತೋ ಅದೆಲ್ಲಾ ಇಂದು ನೆರವೇರುತ್ತಿದೆ. ಕಲಬುರ್ಗಿ ಅವರು ತಮ್ಮ ಸಾಧನೆ, ಅವರು ನಡೆದು ಬಂದ ಬದುಕು, ಇದಾವುದರ ಬಗ್ಗೆಯೂ ಸಹ ಬರೆಯಲಿಲ್ಲ.

ಅವರು ಸಂಶೋಧನೆ ಸ್ತರಗಳ ಬಗ್ಗೆ ಬರೆದರು. ಮುಂದೆ ಬರುವಂತಹ ವಿದ್ಯಾರ್ಥಿಲೋಕಕ್ಕೆ ತಿಳುವಳಿಕೆ ಉಂಟಾಗಬೇಕು. ಸಂಶೋಧನೆ ಅಂದರೆ ಏನು?, ಸಂಶೋಧನೆಯ ಬಗ್ಗೆ ಯಾಕೆ ಆಸಕ್ತಿಯನ್ನು ಹೊಂದಬೇಕು, ಸಂಶೋಧನೆಯ ಸ್ವರೂಪ ಯಾವುದು ಎಂಬುದನ್ನು ತಿಳಿಸಿಕೊಡುವುದು ಪ್ರಾಮಾಣಿಕ ಪ್ರಯತ್ನವನ್ನು ಅವರು ಮಾಡಿದರು.

ಡಾ.ಎಂ.ಎಂ.ಕಲಬುರ್ಗಿ ವಚನ ಸಂಗೀತ ಪ್ರಶಸ್ತಿ ಪುರಸ್ಕೃತ ಡಾ.ಶರಣಬಸಪ್ಪ ಮೇಡೆದಾರ ಅವರು ಮಾತನಾಡಿ, ಡಾ.ಎಂ.ಎಂ.ಕಲಬುರ್ಗಿ ಹೆಸರಿನ ಪ್ರಶಸ್ತಿ ಪಡೆದಿರುವುದಾಗಿ ತುಂಬಾ ಸಂತಸವಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಹೆಚ್ಚು ಶರಣರ ವಚನಗಳು ಮತ್ತು ಸಾಹಿತ್ಯವನ್ನು ಉತ್ತಮವಾಗಿ ನಿಮ್ಮ ಮುಂದೆ ಹಾಡುತ್ತೇನೆ. ಸಾಹಿತ್ಯವನ್ನು ವಿದ್ಯಾರ್ಥಿಗಳಿಗೆ ಸ್ವತಃ ನಾನೇ ಬರೆದು ಕಲಿಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ. ಎಚ್. ಚನ್ನೂರ, ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಅಧ್ಯಕ್ಷ ವೀರಣ್ಣ ರಾಜೂರ, ಉಮಾದೇವಿ ಎಂ. ಕಲಬುರ್ಗಿ ಉಪಸ್ಥಿತರಿದ್ದರು.

ಡಾ. ಎಂ ಎಂ ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಸದಸ್ಯ ಶಶಿಧರ ತೊಡಕರ ಅವರು ಅತಿಥಿ ಪರಿಚಯ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿದರು.

ಡಾ.ಈರಣ್ಣ ಇಂಜಗನೇರಿ ಅವರು ಕಾರ್ಯಕ್ರಮ ನಿರೂಪಿಸಿದರು. ಡಾ.ಎಂ.ಎಂ.ಲಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಸದಸ್ಯ ಡಾ.ಬಾಳಣ್ಣ ಶೀಗಿಹಳ್ಳಿ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಹಿರಿಯರು, ಗಣ್ಯವ್ಯಕ್ತಿಗಳು, ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!