ಮಾನವೀಯ ಅಂತಃಕರಣದ ಪ್ರತೀಕವಾಗಿದ್ದರು ಡಾ.ಎಂ.ಎಂ.ಕಲಬುರ್ಗಿ: ನಾಡೋಜ ಗೊ.ರು.ಚನ್ನಬಸಪ್ಪ (goru channabasappa)

ಧಾರವಾಡ: ಕಲಬುರ್ಗಿ ಅವರ ಶ್ರೇಷ್ಠತೆ ಇರುವುದು ಕೇವಲ ಅವರು ಹಿರಿಯ ಸಂಶೋಧಕರು ಆಗಿದ್ದರು ಎಂಬುವುದಕ್ಕಲ್ಲ; ಅವರು ಸೃಜನಶೀಲ ಬರಹಗಾರರಾಗಿದ್ದರು ಎಂಬ ಕಾರಣಕ್ಕೂ ಅಲ್ಲ; ಅದಕ್ಕಿಂತ ಅವರಲ್ಲಿದ್ದ ಮಾನವೀಯ ಅಂಥಃಕರಣ ಎಂಬುದು ಅವರ ಶ್ರೇಷ್ಠತೆಯನ್ನು ಎತ್ತಿ ತೋರಿಸುತ್ತದೆ. ನಾವು ಮಾಡುವಂತಹ ಕೆಲಸದಲ್ಲಿ ನಿಷ್ಠೆ ಇಲ್ಲದಿದ್ದರೆ ನಮ್ಮ ಬದುಕು ಶೃತಿ ಕೆಟ್ಟ ಸಂಗೀತವಾಗುತ್ತದೆ ಎಂದು ಹೇಳುತ್ತಿದ್ದರು. ಸಂಗೀತ ಮತ್ತು ಅಧ್ಯಯನದಲ್ಲಿ ಯಾವುದೇ ರೀತಿಯ ಅಡೆತಡೆಗಳು ಬರದಂತೆ ಎಚ್ಚರ ವಹಿಸಿದ ವ್ಯಕ್ತಿ ನಮ್ಮ ಕಲಬುರ್ಗಿಯವರು ಎಂದು ನಾಡೋಜ ಗೊ.ರು.ಚನ್ನಬಸಪ್ಪ (goru channabasappa) ಅವರು ಹೇಳಿದರು.

ಅವರು ಇಂದು ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ವತಿಯಿಂದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾದ ಡಾ.ಎಂ.ಎಂ.ಕಲಬುರ್ಗಿ ಅವರ 86 ನೇ ಜನ್ಮ ದಿನಾಚರಣೆ, ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮತ್ತು ಗ್ರಂಥ ಬಿಡುಗಡೆ ಕಾರ್ಯಕ್ರಮದ ಅಂಗವಾಗಿ ಡಾ.ಎಂ.ಎಂ.ಕಲಬುರ್ಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಕಲಬುರ್ಗಿ ಅವರು ಯಾವುದೇ ಕೊರತೆ, ಹಸಿವು, ನಿದ್ದೆಗಳ ಹಂಗಿಲ್ಲದೆ ಕೆಲಸ ಮಾಡುವ ವ್ಯಕ್ತಿ ಆಗಿದ್ದರು. ಸಾಮಾನ್ಯವಾಗಿ ನಾವು ಸಮಗ್ರ ಎಂಬ ಪದವನ್ನು ಬಳಸುತ್ತೇವೆ. ಸಮಗ್ರ ಅಂದರೆ ಪೂರ್ಣವಾಗಿದ್ದು, ಒಟ್ಟಾಗಿರುವುದು ಎಂಬ ಅರ್ಥ ಇದೆ. ಲೋಕವ್ಯವಹಾರದಲ್ಲಿ ಸಮಗ್ರ ನೋಟ, ಸಮಗ್ರ ವರದಿ, ಸಮಗ್ರ ವ್ಯಕ್ತಿತ್ವ ಎಂಬ ಇಂತಹ ಪದಗಳನ್ನು ಬಳಸುತ್ತೇವೆ. ವ್ಯಕ್ತಿಗತವಾಗಿ ಅನ್ವಯಿಸುವುದಾದರೆ ಅದು ನಮ್ಮ ನೆಚ್ಚಿನ ಸಾಹಿತಿಗಳಾದ ಡಾ.ಎಂ.ಎಂ ಕಲಬುರ್ಗಿ ಅವರಿಗೆ ಅನ್ವಯಿಸುತ್ತದೆ ಎಂದರು.

ಗ್ರಂಥ ಬಿಡುಗಡೆ ಮಾಡಿ ಮಾತನಾಡಿದ ಅವರು ಕಲಬುರ್ಗಿ ಅವರ ಸಮಗ್ರ ಲೇಖನಗಳು ಪ್ರಕಟವಾಗಬೇಕು. ಸರಕಾರ ಕಲಬುರ್ಗಿ ಟ್ರಸ್ಟ್ ಸ್ಥಾಪಿಸಿದೆ, ಅವರ ಮನಸ್ಸಿನಲ್ಲಿ ಏನು ಇತ್ತೋ ಅದೆಲ್ಲಾ ಇಂದು ನೆರವೇರುತ್ತಿದೆ. ಕಲಬುರ್ಗಿ ಅವರು ತಮ್ಮ ಸಾಧನೆ, ಅವರು ನಡೆದು ಬಂದ ಬದುಕು, ಇದಾವುದರ ಬಗ್ಗೆಯೂ ಸಹ ಬರೆಯಲಿಲ್ಲ.

ಅವರು ಸಂಶೋಧನೆ ಸ್ತರಗಳ ಬಗ್ಗೆ ಬರೆದರು. ಮುಂದೆ ಬರುವಂತಹ ವಿದ್ಯಾರ್ಥಿಲೋಕಕ್ಕೆ ತಿಳುವಳಿಕೆ ಉಂಟಾಗಬೇಕು. ಸಂಶೋಧನೆ ಅಂದರೆ ಏನು?, ಸಂಶೋಧನೆಯ ಬಗ್ಗೆ ಯಾಕೆ ಆಸಕ್ತಿಯನ್ನು ಹೊಂದಬೇಕು, ಸಂಶೋಧನೆಯ ಸ್ವರೂಪ ಯಾವುದು ಎಂಬುದನ್ನು ತಿಳಿಸಿಕೊಡುವುದು ಪ್ರಾಮಾಣಿಕ ಪ್ರಯತ್ನವನ್ನು ಅವರು ಮಾಡಿದರು.

ಡಾ.ಎಂ.ಎಂ.ಕಲಬುರ್ಗಿ ವಚನ ಸಂಗೀತ ಪ್ರಶಸ್ತಿ ಪುರಸ್ಕೃತ ಡಾ.ಶರಣಬಸಪ್ಪ ಮೇಡೆದಾರ ಅವರು ಮಾತನಾಡಿ, ಡಾ.ಎಂ.ಎಂ.ಕಲಬುರ್ಗಿ ಹೆಸರಿನ ಪ್ರಶಸ್ತಿ ಪಡೆದಿರುವುದಾಗಿ ತುಂಬಾ ಸಂತಸವಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಹೆಚ್ಚು ಶರಣರ ವಚನಗಳು ಮತ್ತು ಸಾಹಿತ್ಯವನ್ನು ಉತ್ತಮವಾಗಿ ನಿಮ್ಮ ಮುಂದೆ ಹಾಡುತ್ತೇನೆ. ಸಾಹಿತ್ಯವನ್ನು ವಿದ್ಯಾರ್ಥಿಗಳಿಗೆ ಸ್ವತಃ ನಾನೇ ಬರೆದು ಕಲಿಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ. ಎಚ್. ಚನ್ನೂರ, ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಅಧ್ಯಕ್ಷ ವೀರಣ್ಣ ರಾಜೂರ, ಉಮಾದೇವಿ ಎಂ. ಕಲಬುರ್ಗಿ ಉಪಸ್ಥಿತರಿದ್ದರು.

ಡಾ. ಎಂ ಎಂ ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಸದಸ್ಯ ಶಶಿಧರ ತೊಡಕರ ಅವರು ಅತಿಥಿ ಪರಿಚಯ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿದರು.

ಡಾ.ಈರಣ್ಣ ಇಂಜಗನೇರಿ ಅವರು ಕಾರ್ಯಕ್ರಮ ನಿರೂಪಿಸಿದರು. ಡಾ.ಎಂ.ಎಂ.ಲಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಸದಸ್ಯ ಡಾ.ಬಾಳಣ್ಣ ಶೀಗಿಹಳ್ಳಿ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಹಿರಿಯರು, ಗಣ್ಯವ್ಯಕ್ತಿಗಳು, ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಈಗಾಗಲೇ ದೊಡ್ಡಬಳ್ಳಾಪುರ, ಕೊರಟಗೆರೆಗೆ ಭೇಟಿ ನೀಡಿದ್ದೇನೆ. ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ್ ಅವರ ಜೊತೆ ಚರ್ಚೆ ಮಾಡಿದ್ದೇನೆ. D.K.Shivakumar

[ccc_my_favorite_select_button post_id="109990"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]