ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ: ಕೆ.ವಿ.ಪ್ರಭಾಕರ್ (KV Prabhakar)

ಬೆಂಗಳೂರು: ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ (KV Prabhakar) ಅಭಿಪ್ರಾಯಪಟ್ಟರು.

ಬಾಲ ಭವನ ಸೊಸೈಟಿ ಆಯೋಜಿಸಿದ್ದ ಕಲಾಶ್ರೀ ಆಯ್ಕೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಮನಸ್ಸು ಯಾವಾಗಲೂ ಓಡಾಟ-ಕುಣಿದಾಟದೊಂದಿಗೆ ಅತ್ಯಂತ ಫಲವತ್ತಾಗಿ ಅರಳುತ್ತವೆ. ಹೀಗಾಗಿ ಮಕ್ಕಳನ್ನು ನಿರಂತರ ಚಟುವಟಿಕಿಯಿಂದಿಡಬೇಕು. ಮಣ್ಣಲ್ಲಿ ಆಡೋದು, ಕೆರೆಯಲ್ಲಿ ಈಜುತ್ತಾ ನಾವೆಲ್ಲಾ ಬೆಳೆದೆವು. ಈಗ ಸಿಟಿ ಮಕ್ಕಳಿಗೆ ಈ ಅವಕಾಶ ಇಲ್ಲದಂತಾಗಿದೆ. ಹಳ್ಳಿಗಳಲ್ಲಿ ಈ ಅವಕಾಶಗಳು ಇವೆ ಎಂದರು.

ಮಕ್ಕಳು ಸ್ವಾಭಾವಿಕವಾಗಿಯೇ ಚಟುವಟಿಕೆಯಿಂದ ಇರುತ್ತಾರೆ. ರೆಡಿ ಮೇಡ್ ಪ್ಲಾಸ್ಟಿಕ್ ಆಟದ ಸಾಮಾನುಗಳು ಮತ್ತು ಮೊಬೈಲ್ ಫೋನ್ ಮಕ್ಕಳ ಕ್ರಿಯಾಶೀಲತೆಯ ಶತ್ರುಗಳಾಗಿವೆ ಎಂದರು.

ಮಕ್ಕಳನ್ನು ಪರಿಸರಕ್ಕೆ, ಆಟದ ಬಯಲಿಗೆ ಬಿಟ್ಟರೆ ಸಾಕು. ತಮಗೆ ಬೇಕಾದ ಆಟದ ಸಾಮಾಗ್ರಿಗಳನ್ನು ಕ್ರಿಯಾಶೀಲವಾಗಿ ಸೃಷ್ಟಿಸಿಕೊಳ್ಳುತ್ತಾರೆ.
ಪೋಷಕರು ತಮ್ಮ ಕೆಲಸದ ಒತ್ತಡ, ತಮ್ಮ ಹವ್ಯಾಸಗಳ ಒತ್ತಡವನ್ನು ಮಕ್ಕಳ ಮೇಲೆ ಹೇರುವುದರಿಂದ ಮಕ್ಕಳ ಕ್ರಿಯಾಶೀಲತೆ ಚಿವುಟಿದಂಗಾಗುತ್ತದೆ ಎನ್ನುವ ಎಚ್ಚರಿಕೆ ನೀಡಿದರು.‌

ಇವತ್ತು ಜಗತ್ತು ತುಂಬಾ ಫಾಸ್ಟ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಇಂದಿನ ಪ್ರಂಚದಲ್ಲಿ ಚಿಗುರೊಡೆಯುತ್ತಿರುವ ಮಕ್ಕಳನ್ನು ಕ್ರಿಯಾಶೀಲತೆ ಹಾಗೂ ಏಕಾಗೃತೆ ಮೂಡಿಸಲು ನಾವು ಪ್ರಯತ್ನಿಸಬೇಕು.

ಕನಕದಾಸರು ಮತ್ತು ಇಂತಹ ಮಹಾನ್ ಸಾಧಕರು ತಮ್ಮ ಸಾಧನೆಯನ್ನು ಹೇಗೆ ಮಾಡಿದರು ಎನ್ನುವ ತಿಳಿವಳಿಕೆ ಎಲ್ಲರ ಬಾಳಿನಲ್ಲಿ ಸ್ಪೂರ್ತಿನ್ನು ತಂದುಕೊಡುತ್ತವೆ.

ಬಾಲ್ಯದ ದಿನಗಳಲ್ಲೇ ಕ್ರಿಯಾಶೀಲತೆ ಕುರಿತು ನಾವು ಪೋಷಕರು ಅರಿವು ಬೆಳೆಸಿಕೊಳ್ಳಬೇಕು. ಬಳಿಕ ಮಕ್ಕಳಲ್ಲಿ ಮೂಡಿಸಬೇಕಾಗಿದೆ ಎಂದರು.

ಇವೆಲ್ಲದರ ಒಟ್ಟು ಪರಿಣಾಮವಾಗಿ ಇಂದು ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಮಕ್ಕಳು ಬೆಳೆದಂತೆ ಕೇವಲ ಯಾಂತ್ರಿಕವಾಗಿ ಬದುಕು ರೂಪಿಸಿಕೊಂಡು ಪೋಷಕರನ್ನು ನಿರ್ಲಕ್ಷಿಸುವುದು ಹೆಚ್ಚಾಗುತ್ತಿದೆ. ಇದರಿಂದ ವೃದ್ಧಾಶ್ರಮಗಳೂ ಹೆಚ್ಚುತ್ತಿವೆ ಎಂದರು.

ಮಕ್ಕಳ ಕಲ್ಪನಾಶಕ್ತಿ ಗರಿಗೆದರುವುದಕ್ಕಾಗಿ , ಅವರನ್ನು ಹೇಗೆ ಕ್ರಿಯಾಶೀಲರಾಗುವಂತೆ ಪ್ರೋತ್ಸಾಹಿಸಲು ಪಾಲಕರಿಗೆ ಮಾರ್ಗದರ್ಶನ ನೀಡಲು ಬಾಲ ಭವನ ಇದೆ. ಬಾಲ ಭವನದ ಅಧ್ಯಕ್ಷರಾದ ನಾಯ್ಡು ಅವರಿದ್ದಾರೆ ಎಂದರು.

ಬಾಲ ಭವನದ ಅಧ್ಯಕ್ಷರಾದ ಬಿ.ಆರ್.ನಾಯ್ಡು ಕಾರ್ಯದರ್ಶಿ ನಿಶ್ಚಿಲ್, ಆಡಳಿತಾಧಿಕಾರಿ ವಿಜಯಲಕ್ಷ್ಮಿ ಅವರು ಉಪಸ್ಥಿತರಿದ್ದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!