ಇದು ಮನೆಯಲ್ಲಿ ಹೆಣ್ಣು ಜನಿಸಿದರೆ ಸಂಭ್ರಮಿಸುವ ಕಾಲ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್| lakshmi hebbalkar

ವಿಜಯಪುರ: ಪ್ರತಿಯೊಬ್ಬ ವಿದ್ಯಾರ್ಥಿಗಳು ತಂದೆ-ತಾಯಿಯ ಕನಸನ್ನು ನನಸು ಮಾಡಬೇಕು. ಇದಕ್ಕೆ ಕಠಿಣ ಶ್ರಮದ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (lakshmi hebbalkar) ಹೇಳಿದ್ದಾರೆ.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವತಿಯಿಂದ ನಡೆದ ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ಕನ್ನಡದ ಪ್ರಪ್ರಥಮ ಮಹಿಳಾ ಕವಿಯತ್ರಿಯಾದ ಅಕ್ಕಮಹಾದೇವಿ ಅವರು ನಮ್ಮೆಲ್ಲರ ಆದರ್ಶವಾಗಿದ್ದಾರೆ ಎಂದರು.

ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ. ಪುರುಷರಿಗೆ 100 ಮೀಟರ್ ಓಡಿದರೂ ಗೋಲ್ಡ್ ಮೆಡಲ್ ಸಿಗುತ್ತದೆ. ಆದರೆ, ಸಾವಿರ ಮೀಟರ್ ಓಡಿದರೂ ಮಹಿಳೆಯರಿಗೆ ಮೆಡಲ್ ಕೊಡಲು ಹಿಂದೆ ಮುಂದೆ ನೋಡಲಾಗುತ್ತದೆ ಎಂದು ಸಚಿವರು ಹೇಳಿದರು.

ಹೆಣ್ಣು ಮಕ್ಕಳಲ್ಲಿ ಪರಸ್ಪರ ಸಹಕಾರ ಇರಬೇಕು. ಇಂದು ಹೆಣ್ಣು ಮಕ್ಕಳು ತೊಟ್ಟಿಲಿಗೆ ಸೀಮಿತವಿಲ್ಲ. ಇಂದು ಹೆಣ್ಣು ಹುಟ್ಟಿದರೂ ಸಂಭ್ರಮ ಪಡುವ ಸಂದರ್ಭದಲ್ಲಿ ನಾವಿದ್ದೇವೆ. ಸುಂದರ ಸಮಾಜ, ಸಂಸ್ಕೃತಿ ದೇಶದಲ್ಲಿ ನಾವಿದ್ದೇವೆ ಎಂದು ಸಚಿವರು ಹೇಳಿದರು.

ಕಷ್ಟ ಎಲ್ಲರಿಗೂ ಇರುತ್ತದೆ. ಆದರೆ ಗುರಿ ತಲುಪುವುದು ಮುಖ್ಯ, ಗುರಿ ಇಲ್ಲದ ಜೀವನ ಬೋರಗಲ್ಲ ಮೇಲೆ ಮಳೆ ಸುರಿದಂತೆ. ಪ್ರಾಮಾಣಿಕವಾದ ಗುರಿ ಇರಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಪ್ರತಿಯೊಬ್ಬರು ತಂದೆ ತಾಯಿ ಕನಸುಗಳನ್ನು ಈಡೇರಿಸಬೇಕು. ನಾನೂ ಕೂಡ ಹಿಂದುಳಿದ ಪ್ರದೇಶದಿಂದ ಬಂದಿದ್ದೇನೆ. ಕೆಂಪು ಬಸ್ಸಿನಲ್ಲಿ ಓಡಾಡಿದ್ದೇನೆ‌. ಇಂದಿಗೂ ಅದೇ ಛಲ ನನ್ನಲ್ಲಿದೆ ಎಂದರು‌.

ಇರುವೆಗಳಿಗೂ ಸ್ವಾಭಿಮಾನ ಇರುತ್ತದೆ. ಮುಂದಾಲೋಚನೆ ಇರುತ್ತದೆ. ಮನುಷ್ಯರಾದ ನಮಗೆ ಮುಂದಿನ 80 ವರ್ಷಕ್ಕೆ ಜೀವನ ರೂಪಿಸುವ ಪರಿಕಲ್ಪನೆ ಬೇಕಲ್ಲವೇ. ವಿದ್ಯಾರ್ಥಿ ಜೀವನ ಗೋಲ್ಡನ್ ಟೈಮ್ ಇದ್ದಂತೆ. ಜೀವನ ವಿಕಸನ ಮಾಡಿಕೊಳ್ಳಲು ಇದು ಪ್ರಮುಖ ಘಟ್ಟ. ದೇಶ ಎತ್ತರಕ್ಕೆ ಬೆಳೆಯುತ್ತಿದೆ, ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಸಚಿವೆ ಕಣ್ಣಿಗೆ ಬಿದ್ದ ನಿರ್ಗತಿಕ ಕುಟುಂಬ: ನೆರವು ನೀಡಿ ಮಾನವೀಯತೆ ತೋರಿದ ಲಕ್ಷ್ಮೀ ಹೆಬ್ಬಾಳಕರ್| lakshmi hebbalkar

ಮುಂದೆ ಹುಟ್ಟುವ ನಿಮ್ಮ ಮಕ್ಕಳಿಗೆ ನೀವೇ ಆದರ್ಶವಾಗಿರಿ, ಅರುಣಿಮಾ ಸಿನ್ಹಾ, ಸುಪ್ರಿಯಾ ರಾಯ್ ಅವರಂಥ ಮಹಿಳೆಯರು ಜೀವನದ ಪ್ರತಿಯೊಂದು ಹಂತದಲ್ಲೂ ಸ್ಫೂರ್ತಿಯಾಗಲಿ ಎಂದರು‌.

ಮಹಿಳೆ ಎಂದರೆ ಸಾಧನೆ, ಜೀವನದಲ್ಲಿ ಸಾಧನೆ ಬಹಳ ಮುಖ್ಯ. ಮಹಿಳೆ ಇಲ್ಲದೆ ಮನೆ ಉಳಿಸಿಕೊಳ್ಳಲು ಸಾಧ್ಯವಿಲ್ಲ. ರಾಜಕೀಯದ ಕೂಡ. ಮಹಿಳಾ ಮೀಸಲಾತಿಯನ್ನು ನಾವೇ ಮಾಡಿದ್ದು, ಆಗ ಬಹುಮತ ಕೊರತೆಯಿಂದ ಲೋಕಸಭೆಯಲ್ಲಿ ಪಾಸ್ ಆಗಲಿಲ್ಲ. ಈಗ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಿದ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ.ಬಿ.ಕೆ.ತುಳಸಿಮಾಲ,
ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ತೊರವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಾಬಾಯಿ ನಡಗಡ್ಡಿ, ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ, ಪ್ರೊ.ಶಾಂತಾದೇವಿ, ಸಿಂಡಿಕೇಟ್ ಮತ್ತು ಅಕಾಡೆಮಿ ಕೌನ್ಸಿಲ್ ಸದಸ್ಯರು, ಭೋದಕ ಹಾಗೂ ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ರಾಜಕೀಯ

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli Town Panchayat Election) ನಾಮಪತ್ರಗಳನ್ನು ಹಿಂಪಡೆಯಲು ಶುಕ್ರವಾರ ಕಡೆಯ ದಿನವಾಗಿದ್ದು, 10 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂತೆಗೆದುಕೊಂಡಿದ್ದು, 64 ಅಭ್ಯರ್ಥಿಗಳು ಅಂತಿಮ

[ccc_my_favorite_select_button post_id="117290"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]