ಇದು ಮನೆಯಲ್ಲಿ ಹೆಣ್ಣು ಜನಿಸಿದರೆ ಸಂಭ್ರಮಿಸುವ ಕಾಲ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್| lakshmi hebbalkar

ವಿಜಯಪುರ: ಪ್ರತಿಯೊಬ್ಬ ವಿದ್ಯಾರ್ಥಿಗಳು ತಂದೆ-ತಾಯಿಯ ಕನಸನ್ನು ನನಸು ಮಾಡಬೇಕು. ಇದಕ್ಕೆ ಕಠಿಣ ಶ್ರಮದ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (lakshmi hebbalkar) ಹೇಳಿದ್ದಾರೆ.

Guarantee scheme
ಎನ್ ವಿಶ್ವನಾಥ್

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವತಿಯಿಂದ ನಡೆದ ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ಕನ್ನಡದ ಪ್ರಪ್ರಥಮ ಮಹಿಳಾ ಕವಿಯತ್ರಿಯಾದ ಅಕ್ಕಮಹಾದೇವಿ ಅವರು ನಮ್ಮೆಲ್ಲರ ಆದರ್ಶವಾಗಿದ್ದಾರೆ ಎಂದರು.

ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ. ಪುರುಷರಿಗೆ 100 ಮೀಟರ್ ಓಡಿದರೂ ಗೋಲ್ಡ್ ಮೆಡಲ್ ಸಿಗುತ್ತದೆ. ಆದರೆ, ಸಾವಿರ ಮೀಟರ್ ಓಡಿದರೂ ಮಹಿಳೆಯರಿಗೆ ಮೆಡಲ್ ಕೊಡಲು ಹಿಂದೆ ಮುಂದೆ ನೋಡಲಾಗುತ್ತದೆ ಎಂದು ಸಚಿವರು ಹೇಳಿದರು.

ಹೆಣ್ಣು ಮಕ್ಕಳಲ್ಲಿ ಪರಸ್ಪರ ಸಹಕಾರ ಇರಬೇಕು. ಇಂದು ಹೆಣ್ಣು ಮಕ್ಕಳು ತೊಟ್ಟಿಲಿಗೆ ಸೀಮಿತವಿಲ್ಲ. ಇಂದು ಹೆಣ್ಣು ಹುಟ್ಟಿದರೂ ಸಂಭ್ರಮ ಪಡುವ ಸಂದರ್ಭದಲ್ಲಿ ನಾವಿದ್ದೇವೆ. ಸುಂದರ ಸಮಾಜ, ಸಂಸ್ಕೃತಿ ದೇಶದಲ್ಲಿ ನಾವಿದ್ದೇವೆ ಎಂದು ಸಚಿವರು ಹೇಳಿದರು.

ಕಷ್ಟ ಎಲ್ಲರಿಗೂ ಇರುತ್ತದೆ. ಆದರೆ ಗುರಿ ತಲುಪುವುದು ಮುಖ್ಯ, ಗುರಿ ಇಲ್ಲದ ಜೀವನ ಬೋರಗಲ್ಲ ಮೇಲೆ ಮಳೆ ಸುರಿದಂತೆ. ಪ್ರಾಮಾಣಿಕವಾದ ಗುರಿ ಇರಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಪ್ರತಿಯೊಬ್ಬರು ತಂದೆ ತಾಯಿ ಕನಸುಗಳನ್ನು ಈಡೇರಿಸಬೇಕು. ನಾನೂ ಕೂಡ ಹಿಂದುಳಿದ ಪ್ರದೇಶದಿಂದ ಬಂದಿದ್ದೇನೆ. ಕೆಂಪು ಬಸ್ಸಿನಲ್ಲಿ ಓಡಾಡಿದ್ದೇನೆ‌. ಇಂದಿಗೂ ಅದೇ ಛಲ ನನ್ನಲ್ಲಿದೆ ಎಂದರು‌.

ಇರುವೆಗಳಿಗೂ ಸ್ವಾಭಿಮಾನ ಇರುತ್ತದೆ. ಮುಂದಾಲೋಚನೆ ಇರುತ್ತದೆ. ಮನುಷ್ಯರಾದ ನಮಗೆ ಮುಂದಿನ 80 ವರ್ಷಕ್ಕೆ ಜೀವನ ರೂಪಿಸುವ ಪರಿಕಲ್ಪನೆ ಬೇಕಲ್ಲವೇ. ವಿದ್ಯಾರ್ಥಿ ಜೀವನ ಗೋಲ್ಡನ್ ಟೈಮ್ ಇದ್ದಂತೆ. ಜೀವನ ವಿಕಸನ ಮಾಡಿಕೊಳ್ಳಲು ಇದು ಪ್ರಮುಖ ಘಟ್ಟ. ದೇಶ ಎತ್ತರಕ್ಕೆ ಬೆಳೆಯುತ್ತಿದೆ, ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಸಚಿವೆ ಕಣ್ಣಿಗೆ ಬಿದ್ದ ನಿರ್ಗತಿಕ ಕುಟುಂಬ: ನೆರವು ನೀಡಿ ಮಾನವೀಯತೆ ತೋರಿದ ಲಕ್ಷ್ಮೀ ಹೆಬ್ಬಾಳಕರ್| lakshmi hebbalkar

ಮುಂದೆ ಹುಟ್ಟುವ ನಿಮ್ಮ ಮಕ್ಕಳಿಗೆ ನೀವೇ ಆದರ್ಶವಾಗಿರಿ, ಅರುಣಿಮಾ ಸಿನ್ಹಾ, ಸುಪ್ರಿಯಾ ರಾಯ್ ಅವರಂಥ ಮಹಿಳೆಯರು ಜೀವನದ ಪ್ರತಿಯೊಂದು ಹಂತದಲ್ಲೂ ಸ್ಫೂರ್ತಿಯಾಗಲಿ ಎಂದರು‌.

ಮಹಿಳೆ ಎಂದರೆ ಸಾಧನೆ, ಜೀವನದಲ್ಲಿ ಸಾಧನೆ ಬಹಳ ಮುಖ್ಯ. ಮಹಿಳೆ ಇಲ್ಲದೆ ಮನೆ ಉಳಿಸಿಕೊಳ್ಳಲು ಸಾಧ್ಯವಿಲ್ಲ. ರಾಜಕೀಯದ ಕೂಡ. ಮಹಿಳಾ ಮೀಸಲಾತಿಯನ್ನು ನಾವೇ ಮಾಡಿದ್ದು, ಆಗ ಬಹುಮತ ಕೊರತೆಯಿಂದ ಲೋಕಸಭೆಯಲ್ಲಿ ಪಾಸ್ ಆಗಲಿಲ್ಲ. ಈಗ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಿದ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ.ಬಿ.ಕೆ.ತುಳಸಿಮಾಲ,
ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ತೊರವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಾಬಾಯಿ ನಡಗಡ್ಡಿ, ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ, ಪ್ರೊ.ಶಾಂತಾದೇವಿ, ಸಿಂಡಿಕೇಟ್ ಮತ್ತು ಅಕಾಡೆಮಿ ಕೌನ್ಸಿಲ್ ಸದಸ್ಯರು, ಭೋದಕ ಹಾಗೂ ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!