ಕೋಳಿ ಜಗಳ.. ಮರ್ಮಾಂಗಕ್ಕೆ ಒದ್ದು ಮಹಿಳೆಯರಿಂದ ಕೊಲೆ..!| Murder

ತಿ.ನರಸೀಪುರ: ಸಾಕಿದ್ದ ಕೋಳಿಗಳು ಮನೆಗೆ ನುಗ್ಗಿ ಗಲೀಜು ಮಾಡುವ ವಿಚಾರಕ್ಕೆ ಆರಂಭವಾದ ಜಗಳ ಒಬ್ಬನ ಕೊಲೆಯಲ್ಲಿ (Murder) ಅಂತ್ಯಗೊಂಡಿರುವ ಘಟನೆ ತಾಲೂಕಿನ ದೊಡ್ಡಬಾಗಿಲು ಗ್ರಾಮದಲ್ಲಿ ಸಂಭವಿಸಿದೆ.

ದೊಡ್ಡಬಾಗಿಲು ಗ್ರಾಮದ ವಾಸಿ ಮಹದೇವಸ್ವಾಮಿ ಕೊಲೆಯಾದ ದುರ್ದೈವಿ.

ನಿನ್ನೆ ಬೆಳಗ್ಗೆ ಮನೆಯ ಮುಂದೆ ಮಹದೇವಸ್ವಾಮಿ ಅವರ ಪತ್ನಿ ಪಾತ್ರೆ ತೊಳೆಯುತ್ತಿದ್ದಾಗ, ಇವರ ದಾಯಾದಿ ನಂಜಮ್ಮನವರು ಮಾತನಾಡುತ್ತ ಮನೆಯ ಮುಂದೆ ನಿಂತಿದ್ದರು.

ಈ ವೇಳೆ ಎದುರು ಮನೆಯ ರಾಜಮ್ಮ ಮತ್ತು ಇವರ ತಾಯಿ ಸಿದ್ದಮ್ಮನವರು ನಿಮ್ಮ ಮನೆಯ ಕೋಳಿಗಳು ನಮ್ಮ ಮನೆಗೆ ಬಂದು ಗಲೀಜು ಮಾಡುತ್ತಿವೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತ ನಂಜಮ್ಮನವರ ತಲೆ ಜುಟ್ಟು ಹಿಡಿದು ಎಳೆದಾಡ ತೊಡಗಿದ್ದಾರೆ.

ಇದನ್ನು ಕಂಡ ಮಹದೇವಸ್ವಾಮಿಯವರ ಪತ್ನಿ ಪಾತ್ರೆ ತೊಳೆಯುವುದನ್ನು ಬಿಟ್ಟು ಜಗಳ ಬಿಡಿಸಲು ಮುಂದಾಗಿದ್ದಾರೆ. ಆಗ ಸಿದ್ದಮ್ಮ ಜಗಳ ಬಿಡಿಸಲು ಬಂದವರ ತಲೆಗೂದಲನ್ನು ಹಿಡಿದು ಎಳೆದಾಡಿದ್ದಾರೆ.

ಇದೇ ವೇಳೆ ರಾಜಮ್ಮ ಅಲ್ಲೆ ಬಿದ್ದಿದ್ದ ಕಲ್ಲಿನಿಂದ ಆಕೆಯ ಮೇಲೆ ಹಲ್ಲೆ ನಡೆಸಿದಾಗ ಎಡಗಣ್ಣಿಗೆ ಪೆಟ್ಟು ಬಿದ್ದಿದೆ. 00

ಇದೇ ಸಂದರ್ಭದಲ್ಲಿ ತನ್ನ ಪತ್ನಿ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಕಂಡು ಮಹದೇವಸ್ವಾಮಿ ಜಗಳ ಬಿಡಿಸಲು ಬಂದಾಗ ರಾಜಮ್ಮ ಮತ್ತು ಸಿದ್ದಮ್ಮ ಇಬ್ಬರೂ ಮಹದೇವಸ್ವಾಮಿಯನ್ನು ಎಳೆದಾಡಿ ಮರ್ಮಾಂಗಕ್ಕೆ ಒದ್ದು ಕೆಳಗೆ ಬೀಳಿಸಿದ್ದಾರೆ ಎನ್ನಲಾಗಿದೆ.

ನಂತರ ಜಗಳ ಬಿಟ್ಟು ಮನೆಯವರೆಲ್ಲ ಮಹದೇವಸ್ವಾಮಿಯನ್ನು ಎಬ್ಬಿಸಲು ಯತ್ನಿಸಿದಾಗ ಇಡೀ ದೇಹ ತಣ್ಣಗಾಗಿ ಸಾವನ್ನಪ್ಪಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ನನ್ನ ಗಂಡನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿರುವ ರಾಜಮ್ಮ ಮತ್ತು ಸಿದ್ದಮ್ಮ ಅವರ ಮೇಲೆ ಕ್ರಮ ಜರುಗಿಸಬೇಕು. ತಮಗೆ ನ್ಯಾಯ ಒದಗಿಸುವಂತೆ ಪತ್ನಿ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ವಿಷಯ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಡಿಷನಲ್ ಎಸ್ಪಿ ನಾಗೇಶ್, ಡಿವೈಎಸ್ಪಿ ರಘು ಹಾಗೂ ಸರ್ಕಲ್ ಇನ್‌ಸೆಕ್ಟರ್ ಧನಂಜಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಘಟನೆ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಕೀಯ

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.

“ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಡಿಸಿಎಂ ಡಿ.ಕೆ.

[ccc_my_favorite_select_button post_id="119395"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!