ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಸಂಭ್ರಮದ ಸುವರ್ಣ ಕನ್ನಡ ರಾಜ್ಯೋತ್ಸವ| SKDVV

ಬಳ್ಳಾರಿ (SKDVV): ಶ್ರೀಮಂತ ಸಂಸ್ಕೃತಿ, ಮನಸೂರೆಗೊಳ್ಳುವ ಕಲೆ, ಭೌಗೋಳಿಕ ವಿಶೇಷತೆ ಹಾಗೂ ವೈವಿಧ್ಯತೆಯಿಂದ ಕೂಡಿದ ಕನ್ನಡ ನಾಡಿನಲ್ಲಿ ಜನಿಸುವುದೇ ಪುಣ್ಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಜಯಕರ ಎಸ್.ಎಂ ಅವರು ಹೇಳಿದರು.

ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಸುವರ್ಣ ಕರ್ನಾಟಕ ಸಂಭ್ರಮ-ಕರ್ನಾಟಕ ರಾಜ್ಯೋತ್ಸವ-69 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದ ಪ್ರದೇಶಗಳಲ್ಲಿ ಒಂದು ಭಾಗದಿಂದ ಮತ್ತೊಂದು ಭಾಗದಲ್ಲಿ ಪ್ರಾದೇಶಿಕವಾರು ಮಾತನಾಡುವ ಭಾಷೆ ಶೈಲಿ, ಆಚಾರ-ವಿಚಾರ, ಉಡುಗೆ-ತೊಡುಗೆ ಬದಲಾವಣೆಗೊಳ್ಳುತ್ತದೆ. ಎಲ್ಲೇ ಇದ್ದರೂ ನಾವಾಡೋ ಮಾತು, ಉಸಿರಾಡೋ ಗಾಳಿ, ನಮ್ಮ ನಡೆ-ನುಡಿಯಲ್ಲೂ ಕನ್ನಡತವನ್ನು ಮೈಗೂಡಿಸಿಕೊಂಡು ವೈವಿಧ್ಯತೆಯಲ್ಲೂ ಏಕತೆಯನ್ನು ಎತ್ತಿಹಿಡಿಯಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಉದಯಗೊಂಡು 69 ವರ್ಷ ಕಳೆಯಿತು. ಈ ಮೊದಲು ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿದ್ದ ರಾಜ್ಯವನ್ನು 1973ರಲ್ಲಿ ಕರ್ನಾಟಕ ಎಂದು ಮರು ನಾಮಕರಣ ಮಾಡಿದ 50 ವರ್ಷದ ಸಂಭ್ರಮದಲ್ಲಿ ನಾವಿದ್ದೇವೆ ಎಂದರು.

ಕನ್ನಡ ನಾಡಿನ ಜನರು ಇತರೆ ಭಾಗಗಳಿಗೆ ಹೋದರೂ ಕನ್ನಡವನ್ನು ಸಂಭ್ರಮಿಸುವ ಗುಣ ಹೊಂದಿದ್ದಾರೆ. ಐತಿಹಾಸಿಕ ಹಿನ್ನೆಲೆ ಹೊಂದಿದ ಕನ್ನಡ ಸಂಸ್ಕೃತಿಯನ್ನು ಉನ್ನತ ಮಟ್ಟಕ್ಕೆ ಬೆಳೆಸುವಲ್ಲಿ ಕನ್ನಡಾಭಿಮಾನಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ನಾಡಿನ ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಅವರು ಮಾತನಾಡಿ, ಕನ್ನಡ ಭಾಷೆಗೆ ಅವಿರತ ಇತಿಹಾಸವಿದೆ. ಅನೇಕ ಶಾಸನ, ಸಾಹಿತ್ಯ, ವಚನ, ಕೃತಿ, ಲೇಖನಗಳನ್ನು ಕೊಡುಗೆ ನೀಡುವಲ್ಲಿ ಕನ್ನಡ ಮೇರುಸ್ಥಾನ ಹೊಂದಿದ್ದು, ಕನ್ನಡದ ಇತಿಹಾಸವನ್ನು ಅರಿತು ಗೌರವಿಸಬೇಕು ಎಂದು ಹೇಳಿದರು.

ವೈವಿಧ್ಯಮಯ ನಾಡು, ಸರ್ವ ಜನಾಂಗದ ಶಾಂತಿಯ ತೋಟವಾದ ಕನ್ನಡ ನಾಡಿನಲ್ಲಿ ಜಾತಿ-ಧರ್ಮದ ಎಲ್ಲೆ ಮೀರಿ ಜೀವಿಸಲಾಗುತ್ತಿದ್ದು, ಕನ್ನಡಿಗರು ಪರಿಷ್ಕೃತ ಗುಣ ಬೆಳೆಸಿಕೊಳ್ಳಬೇಕು ಎಂದರು.

ಕನ್ನಡವನ್ನು ಕಟ್ಟಿ ಬೆಳೆಸಲು ಶ್ರಮಿಸಿದ ಆದಿಕವಿ ಪಂಪ, ಕುಮಾರವ್ಯಾಸ, ಬಸವಣ್ಣ, ಅಲ್ಲಮಪ್ರಭು, ಪುರಂದರ ದಾಸ, ಕನಕದಾಸ, ಕುವೆಂಪು, ದ.ರಾ.ಬೇಂದ್ರೆ, ಸೇರಿದಂತೆ ಕನ್ನಡ ಭಾಷೆ-ಸಾಹಿತ್ಯ ಏಳಿಗೆಗೆ ಕೊಡುಗೆ ನೀಡಿದ ಅನೇಕ ಮಹನೀಯರನ್ನು ಸ್ಮರಿಸಬೇಕಿರುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ ಎಂದು ಹೇಳಿದರು.

ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ಪ್ರತಿ ವಿದ್ಯಾರ್ಥಿಯು ಸಂಸ್ಕಾರ ಹೊಂದಿರುತ್ತಾರೆ. ವಿವಿಯಲ್ಲಿ ಶೀಘ್ರವೇ ಕನ್ನಡ ಅಧ್ಯಯನ ವಿಭಾಗಕ್ಕೆ ಪೂರ್ಣಕಾಲಿಕ ಅಧ್ಯಾಪಕರುಗಳ ನೇಮಕಕ್ಕೆ ಮುತುವರ್ಜಿ ವಹಿಸಬೇಕು ಎಂದು ಒತ್ತಾಯಿಸಿದರು.

ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ.ರವಿ ಅವರು ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ವಿಜಯನಗರ ಸಾಮ್ರಾಜ್ಯ ಉದಯಿಸಿರುವ ಈ ಭಾಗ ಪವಿತ್ರ ಭೂಮಿಯಾಗಿದ್ದು, ಕಲೆ, ಸಾಹಿತ್ಯ, ಸಮಾಜಕ್ಕೆ ಅಪಾರ ಕೊಡುಗೆ ನೀಡಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.

ಯುವ ಪೀಳಿಗೆಯು ಹೆಚ್ಚಾಗಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆ ತಪ್ಪು ಪ್ರಯೋಗವಾದಲ್ಲಿ ಧ್ವನಿ ಎತ್ತುವ ಕೆಲಸ ನಿರ್ವಹಿಸಿ, ಕನ್ನಡ ಭಾಷೆ-ಸಾಹಿತ್ಯ ಬಲಿಷ್ಠಗೊಳಿಸುವ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಕನ್ನಡ ಭಾಷೆ, ಸಾಹಿತ್ಯ, ಜಾನಪದ ಸೊಗಡಿನ ಕುರಿತು ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ. ಕನ್ನಡ ಕೀಳರಿಮೆ ಭಾವನೆ ತ್ಯಜಿಸಿ ಸಮ ಸಮಾಜದ ಚಿಂತನೆ ಬೆಳೆಸಿಕೊಂಡು, ಕನ್ನಡತನವನ್ನು ಉಳಿಸಿ-ಬೆಳೆಸುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ಗಣ್ಯರು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಂಗೀತಾ ತಂಡದ ಗೀತೆಗಳು ಕನ್ನಡಾಭಿಮಾನಿಗಳಿಗೆ ಇಂಪು ನೀಡಿತು.

ಸಂಭ್ರಮ-ಸಡಗರದ ಮೆರವಣಿಗೆ

ಸುವರ್ಣ ಕರ್ನಾಟಕ ಸಂಭ್ರಮ, ಕರ್ನಾಟಕ ರಾಜ್ಯೋತ್ಸವ-69 ಕಾರ್ಯಕ್ರಮ ಅಂಗವಾಗಿ ಏರ್ಪಡಿಸಿದ್ದ ಅದ್ದೂರಿ ಮೆರವಣಿಗೆಯು ತಾಯಿ ಭುವನೇಶ್ವರಿಯ ರಥದೊಂದಿಗೆ ಕುಂಭ ಹೊತ್ತ ಮಹಿಳೆಯ ಸಮ್ಮುಖದಲ್ಲಿ ವಿವಿಧ ಕಲಾತಂಡಗಳ ವಾದ್ಯಗಳ ಮೂಲಕ ರಾಜ್ಯದ 31 ಜಿಲ್ಲೆಗಳ ಸಂಸ್ಕೃತಿ, ವಿಶೇಷತೆ ಒಳಗೊಂಡ ಮಾಹಿತಿ ಕೈಪಿಡಿಯ ಚಿತ್ರಣ ಹಿಡಿದು, ಬುಲೆಟ್ ಬೈಕ್‌ಗಳ ಕಲರವದಿಂದ ವಿವಿಯ ಆವರಣದಲ್ಲಿ ಸಾಗಿಬಂದ ಮೆರವಣಿಗೆಯು ಸಂಭ್ರಮ-ಸಡಗರಕ್ಕೆ ಸಾಕ್ಷಿಯಾಯಿತು. ವಿವಿಧ ಕಲಾ ತಂಡಗಳಿಂದ ಜಾನಪದ ಕಲೆಗಳ ಪ್ರದರ್ಶನಕ್ಕೆ ಮೆರವಣಿಗೆಯು ಮೆರಗು ತಂದಿತು.

ಈ ಸಂದರ್ಭದಲ್ಲಿ ವಿವಿಯ ಕುಲಪತಿಗಳಾದ ಪ್ರೊ.ಎಂ.ಮುನಿರಾಜು, ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ, ಬಳ್ಳಾರಿಯ ಲೋಹಿಯಾ ಪ್ರಕಾಶನದ ಪ್ರಕಾಶಕ ಸಿ.ಚನ್ನಬಸವಣ್ಣ, ಕುಲಸಚಿವರಾದ ಎಸ್.ಎನ್ ರುದ್ರೇಶ್, ಮೌಲ್ಯಮಾಪನ ಕುಲಸಚಿವರಾದ ಪ್ರೊ.ರಮೇಶ್ ಓಲೇಕಾರ್, ಹಣಕಾಸು ಅಧಿಕಾರಿಗಳಾದ ನಾಗರಾಜ, ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರೊ.ರಾಬರ್ಟ್ ಜೋಸ್, ಸಿಂಡಿಕೇಟ್ ಸದಸ್ಯರಾದ ಪೀರ್ ಬಾಷಾ, ಶಿವಕುಮಾರ್ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿದ್ಯಾ ವಿಷಯಕ ಪರಿಷತ್ ಸದಸ್ಯರು, ವಿಭಾಗದ ಮುಖ್ಯಸ್ಥರು, ಸಂಯೋಜಕರು, ಬೋಧಕ-ಬೋಧಕೇತರ ವರ್ಗ, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!