ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ, ಮುಡಾ ಹಗರಣಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರ ವಿರುದ್ಧ ಕ್ರಮ: ಆರ್‌.ಅಶೋಕ| RAshoka

ನವೆಂಬರ್‌: ಮುಡಾ ಹಗರಣ ಬೆಳಕಿಗೆ ಬಂದ ಬಳಿಕ ಕಾಂಗ್ರೆಸ್‌ ಸರ್ಕಾರ ಬಿಜೆಪಿ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಆದರೆ ಬಿಜೆಪಿ ಇದಕ್ಕೆ ಹೆದರದೆ ಹೋರಾಟ ಮುಂದುವರಿಸಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ವಿರುದ್ಧದ ಪ್ರಕರಣವನ್ನು 2021 ರಲ್ಲೇ ರಾಜ್ಯಪಾಲರು ತಿರಸ್ಕರಿಸಿದ್ದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದ ಬಳಿಕ ಹಾಗೂ ಮುಡಾ ಹಗರಣ ಬೆಳಕಿಗೆ ಬಂದ ನಂತರ ಜ್ಞಾನೋದಯವಾಗಿದೆ. ಇದು ದ್ವೇಷದ ರಾಜಕಾರಣ ಎನ್ನುವುದರಲ್ಲಿ ಅನುಮಾನವಿಲ್ಲ. ರಾಜ್ಯಪಾಲರು ಈ ಪ್ರಕರಣ ತಿರಸ್ಕರಿಸಿದಾಗ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದರು. ಆಗಲೇ ಅವರು ಅದನ್ನು ಪ್ರಶ್ನೆ ಮಾಡಿ ಕೋರ್ಟ್‌ಗೆ ಹೋಗಬಹುದಿತ್ತು ಎಂದರು.

ಬಿ.ಎಸ್‌.ಯಡಿಯೂರಪ್ಪ ಸಿಎಂ ಆಗಿದ್ದಾಗ ಕಾಂಗ್ರೆಸ್‌ಗೆ ಸ್ವಾರ್ಥದ ಕೆಲಸ ಮಾಡಿಸಿಕೊಳ್ಳಬೇಕಿತ್ತು. ಈಗ ಅದನ್ನು ಮತ್ತೆ ವಿವಾದ ಮಾಡುತ್ತಿದ್ದಾರೆ ಎಂದರೆ ಅದು ದ್ವೇಷದ ರಾಜಕಾರಣ. ನನ್ನ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ವಿರೋಧ ಪಕ್ಷದವರನ್ನು ದ್ವೇಷಿಸುವ ರಾಜಕಾರಣವನ್ನು ಬಿಜೆಪಿ ಎಂದಿಗೂ ಮಾಡಿಲ್ಲ. ಆದರೆ ಇದು ಕಾಂಗ್ರೆಸ್‌ನ ಚಾಳಿ. ತುರ್ತು ಪರಿಸ್ಥಿತಿ ಘೋಷಣೆ ಮಾಡಿದಾಗಲೂ ಬಿಜೆಪಿ ನಾಯಕರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ವಿರೋಧ ಪಕ್ಷವನ್ನು ದಮನ ಮಾಡುವುದು ಇವರ ಚಾಳಿ. ಇದಕ್ಕೆ ಬಿಜೆಪಿ ಹೆದರದೆ ಹೋರಾಟ ಮಾಡಲಿದೆ. ಎಷ್ಟೇ ಪ್ರಕರಣ ದಾಖಲಿಸಿದರೂ ಅದನ್ನು ಎದುರಿಸುತ್ತೇವೆ ಎಂದರು.

14 ನಿವೇಶನ ಲೂಟಿ ಮಾಡಿದ ಪ್ರಕರಣ ಬಯಲಿಗೆ ಬಂದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಮಾಡಿದ್ದಾರೆ. ಈ ಹಿಂದೆಯೂ ಕಾಂಗ್ರೆಸ್‌ ಆಡಳಿತವಿತ್ತು. ಆಗೆಲ್ಲ ರಾಜ್ಯಪಾಲರ ಅಧಿಕಾರ ತೆಗೆದುಹಾಕುವ ಕೆಲಸ ಮಾಡಲಿಲ್ಲ. ಈಗ ಮಾತ್ರ ಅಧಿಕಾರ ಕಿತ್ತುಕೊಳ್ಳುವ ನಿರ್ಣಯಗಳನ್ನು ಮಾಡಲಾಗಿದೆ. ಇದನ್ನು ಜನರು ಗಮನಿಸುತ್ತಿದ್ದು, ಮುಂದೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದರು.

ಒಕ್ಕಲಿಗ ಸ್ವಾಮೀಜಿಗೆ ಕಿರುಕುಳ

ವಿಶ್ವ ಒಕ್ಕಲಿಗರ ಮಠದ ಸ್ವಾಮೀಜಿಯವರ ವಿರುದ್ಧ ಪ್ರಕರಣ ದಾಖಲಿಸಿ ಕಿರುಕುಳ ನೀಡಲು ಸರ್ಕಾರ ಮುಂದಾಗಿದೆ. ಒಕ್ಕಲಿಗ ಸ್ವಾಮೀಜಿ ಮೇಲೆಯೂ ದಬ್ಬಾಳಿಕೆ ಮಾಡುವ ವ್ಯವಸ್ಥಿತ ಸಂಚು ಮಾಡಲಾಗಿದೆ. ಕೋರ್ಟ್‌ ಆದೇಶ ಪಾಲನೆ ಮಾಡಲ್ಲ, ರಸ್ತೆ ಎಲ್ಲವೂ ನಮ್ಮದೇ ಎಂದವರ ವಿರುದ್ಧವೂ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು. ಸಿಎಂ ಸಿದ್ದರಾಮಯ್ಯನವರಿಗೆ ಹಿಂದೂಗಳನ್ನು ಕಂಡರೆ ಅಲರ್ಜಿ. ಆದ್ದರಿಂದಲೇ ಒಕ್ಕಲಿಗ ಸ್ವಾಮೀಜಿ ವಿರುದ್ಧ ದ್ವೇಷ ಕಾರಲಾಗುತ್ತಿದೆ. ಇದು ಒಕ್ಕಲಿಗ ಸಮುದಾಯಕ್ಕೆ ಮಾಡುತ್ತಿರುವ ಅಪಮಾನ ಎಂದರು.

ಸಿಎಂ ಸಿದ್ದರಾಮಯ್ಯ ಹೆಸರಿಗಷ್ಟೇ ಅಹಿಂದ. ಈಗ ಕೇವಲ ಅಲ್ಪಸಂಖ್ಯಾತರನ್ನು ಓಲೈಸುತ್ತಿದ್ದಾರೆ. ಸರ್ಕಾರ ಸಂಪೂರ್ಣ ಪಾಪರ್‌ ಆಗಿದೆ. ನೌಕರರಿಗೆ ವೇತನ ಕೊಡಲು ಕೂಡ ಹಣವಿಲ್ಲ. ಬಳ್ಳಾರಿ ಆಸ್ಪತ್ರೆಯಲ್ಲಿ ಕಳಪೆ ಔಷಧಿ ನೀಡಿರುವುದರಿಂದ ತಾಯಂದಿರು ಸತ್ತಿದ್ದಾರೆ. ಕೋವಿಡ್‌ನಲ್ಲಿ ಹಗರಣ ನಡೆದಿದೆ ಎಂದು ಹೇಳುವ ಕಾಂಗ್ರೆಸ್‌ ನಾಯಕರು, ಭ್ರಷ್ಟಾಚಾರಕ್ಕಾಗಿ ಕಳಪೆ ಔಷಧಿ ಪೂರೈಸಿದ್ದಾರೆ. ಈ ಸಾವಿಗೆ ಯಾರು ಕಾರಣ ಎಂದು ಜವಾಬ್ದಾರಿ ನಿಗದಿ ಮಾಡಿ. ಈ ಸಾವುಗಳಿಗೆ ನ್ಯಾಯ ನೀಡಿ ಎಂದು ಆಗ್ರಹಿಸಿದರು.

ಬಳ್ಳಾರಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ಮುಖ್ಯಮಂತ್ರಿ ಭೇಟಿ ನೀಡಿಲ್ಲ. ಮೋಜು, ಮಸ್ತಿ ಮಾಡಿಕೊಂಡು ಸಮಾವೇಶ ಮಾಡುತ್ತಿದ್ದಾರೆಯೇ ಹೊರತು ಜನರ ಆರೋಗ್ಯದ ಬಗ್ಗೆ ಕಾಳಜಿ ಇಲ್ಲ. ನಾನು ಕೂಡ ಈ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದೇನೆ ಎಂದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!