ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ, ಮುಡಾ ಹಗರಣಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರ ವಿರುದ್ಧ ಕ್ರಮ: ಆರ್‌.ಅಶೋಕ| RAshoka

ನವೆಂಬರ್‌: ಮುಡಾ ಹಗರಣ ಬೆಳಕಿಗೆ ಬಂದ ಬಳಿಕ ಕಾಂಗ್ರೆಸ್‌ ಸರ್ಕಾರ ಬಿಜೆಪಿ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಆದರೆ ಬಿಜೆಪಿ ಇದಕ್ಕೆ ಹೆದರದೆ ಹೋರಾಟ ಮುಂದುವರಿಸಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ವಿರುದ್ಧದ ಪ್ರಕರಣವನ್ನು 2021 ರಲ್ಲೇ ರಾಜ್ಯಪಾಲರು ತಿರಸ್ಕರಿಸಿದ್ದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದ ಬಳಿಕ ಹಾಗೂ ಮುಡಾ ಹಗರಣ ಬೆಳಕಿಗೆ ಬಂದ ನಂತರ ಜ್ಞಾನೋದಯವಾಗಿದೆ. ಇದು ದ್ವೇಷದ ರಾಜಕಾರಣ ಎನ್ನುವುದರಲ್ಲಿ ಅನುಮಾನವಿಲ್ಲ. ರಾಜ್ಯಪಾಲರು ಈ ಪ್ರಕರಣ ತಿರಸ್ಕರಿಸಿದಾಗ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದರು. ಆಗಲೇ ಅವರು ಅದನ್ನು ಪ್ರಶ್ನೆ ಮಾಡಿ ಕೋರ್ಟ್‌ಗೆ ಹೋಗಬಹುದಿತ್ತು ಎಂದರು.

ಬಿ.ಎಸ್‌.ಯಡಿಯೂರಪ್ಪ ಸಿಎಂ ಆಗಿದ್ದಾಗ ಕಾಂಗ್ರೆಸ್‌ಗೆ ಸ್ವಾರ್ಥದ ಕೆಲಸ ಮಾಡಿಸಿಕೊಳ್ಳಬೇಕಿತ್ತು. ಈಗ ಅದನ್ನು ಮತ್ತೆ ವಿವಾದ ಮಾಡುತ್ತಿದ್ದಾರೆ ಎಂದರೆ ಅದು ದ್ವೇಷದ ರಾಜಕಾರಣ. ನನ್ನ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ವಿರೋಧ ಪಕ್ಷದವರನ್ನು ದ್ವೇಷಿಸುವ ರಾಜಕಾರಣವನ್ನು ಬಿಜೆಪಿ ಎಂದಿಗೂ ಮಾಡಿಲ್ಲ. ಆದರೆ ಇದು ಕಾಂಗ್ರೆಸ್‌ನ ಚಾಳಿ. ತುರ್ತು ಪರಿಸ್ಥಿತಿ ಘೋಷಣೆ ಮಾಡಿದಾಗಲೂ ಬಿಜೆಪಿ ನಾಯಕರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ವಿರೋಧ ಪಕ್ಷವನ್ನು ದಮನ ಮಾಡುವುದು ಇವರ ಚಾಳಿ. ಇದಕ್ಕೆ ಬಿಜೆಪಿ ಹೆದರದೆ ಹೋರಾಟ ಮಾಡಲಿದೆ. ಎಷ್ಟೇ ಪ್ರಕರಣ ದಾಖಲಿಸಿದರೂ ಅದನ್ನು ಎದುರಿಸುತ್ತೇವೆ ಎಂದರು.

14 ನಿವೇಶನ ಲೂಟಿ ಮಾಡಿದ ಪ್ರಕರಣ ಬಯಲಿಗೆ ಬಂದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಮಾಡಿದ್ದಾರೆ. ಈ ಹಿಂದೆಯೂ ಕಾಂಗ್ರೆಸ್‌ ಆಡಳಿತವಿತ್ತು. ಆಗೆಲ್ಲ ರಾಜ್ಯಪಾಲರ ಅಧಿಕಾರ ತೆಗೆದುಹಾಕುವ ಕೆಲಸ ಮಾಡಲಿಲ್ಲ. ಈಗ ಮಾತ್ರ ಅಧಿಕಾರ ಕಿತ್ತುಕೊಳ್ಳುವ ನಿರ್ಣಯಗಳನ್ನು ಮಾಡಲಾಗಿದೆ. ಇದನ್ನು ಜನರು ಗಮನಿಸುತ್ತಿದ್ದು, ಮುಂದೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದರು.

ಒಕ್ಕಲಿಗ ಸ್ವಾಮೀಜಿಗೆ ಕಿರುಕುಳ

ವಿಶ್ವ ಒಕ್ಕಲಿಗರ ಮಠದ ಸ್ವಾಮೀಜಿಯವರ ವಿರುದ್ಧ ಪ್ರಕರಣ ದಾಖಲಿಸಿ ಕಿರುಕುಳ ನೀಡಲು ಸರ್ಕಾರ ಮುಂದಾಗಿದೆ. ಒಕ್ಕಲಿಗ ಸ್ವಾಮೀಜಿ ಮೇಲೆಯೂ ದಬ್ಬಾಳಿಕೆ ಮಾಡುವ ವ್ಯವಸ್ಥಿತ ಸಂಚು ಮಾಡಲಾಗಿದೆ. ಕೋರ್ಟ್‌ ಆದೇಶ ಪಾಲನೆ ಮಾಡಲ್ಲ, ರಸ್ತೆ ಎಲ್ಲವೂ ನಮ್ಮದೇ ಎಂದವರ ವಿರುದ್ಧವೂ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು. ಸಿಎಂ ಸಿದ್ದರಾಮಯ್ಯನವರಿಗೆ ಹಿಂದೂಗಳನ್ನು ಕಂಡರೆ ಅಲರ್ಜಿ. ಆದ್ದರಿಂದಲೇ ಒಕ್ಕಲಿಗ ಸ್ವಾಮೀಜಿ ವಿರುದ್ಧ ದ್ವೇಷ ಕಾರಲಾಗುತ್ತಿದೆ. ಇದು ಒಕ್ಕಲಿಗ ಸಮುದಾಯಕ್ಕೆ ಮಾಡುತ್ತಿರುವ ಅಪಮಾನ ಎಂದರು.

ಸಿಎಂ ಸಿದ್ದರಾಮಯ್ಯ ಹೆಸರಿಗಷ್ಟೇ ಅಹಿಂದ. ಈಗ ಕೇವಲ ಅಲ್ಪಸಂಖ್ಯಾತರನ್ನು ಓಲೈಸುತ್ತಿದ್ದಾರೆ. ಸರ್ಕಾರ ಸಂಪೂರ್ಣ ಪಾಪರ್‌ ಆಗಿದೆ. ನೌಕರರಿಗೆ ವೇತನ ಕೊಡಲು ಕೂಡ ಹಣವಿಲ್ಲ. ಬಳ್ಳಾರಿ ಆಸ್ಪತ್ರೆಯಲ್ಲಿ ಕಳಪೆ ಔಷಧಿ ನೀಡಿರುವುದರಿಂದ ತಾಯಂದಿರು ಸತ್ತಿದ್ದಾರೆ. ಕೋವಿಡ್‌ನಲ್ಲಿ ಹಗರಣ ನಡೆದಿದೆ ಎಂದು ಹೇಳುವ ಕಾಂಗ್ರೆಸ್‌ ನಾಯಕರು, ಭ್ರಷ್ಟಾಚಾರಕ್ಕಾಗಿ ಕಳಪೆ ಔಷಧಿ ಪೂರೈಸಿದ್ದಾರೆ. ಈ ಸಾವಿಗೆ ಯಾರು ಕಾರಣ ಎಂದು ಜವಾಬ್ದಾರಿ ನಿಗದಿ ಮಾಡಿ. ಈ ಸಾವುಗಳಿಗೆ ನ್ಯಾಯ ನೀಡಿ ಎಂದು ಆಗ್ರಹಿಸಿದರು.

ಬಳ್ಳಾರಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ಮುಖ್ಯಮಂತ್ರಿ ಭೇಟಿ ನೀಡಿಲ್ಲ. ಮೋಜು, ಮಸ್ತಿ ಮಾಡಿಕೊಂಡು ಸಮಾವೇಶ ಮಾಡುತ್ತಿದ್ದಾರೆಯೇ ಹೊರತು ಜನರ ಆರೋಗ್ಯದ ಬಗ್ಗೆ ಕಾಳಜಿ ಇಲ್ಲ. ನಾನು ಕೂಡ ಈ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದೇನೆ ಎಂದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]