ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ, ಮುಡಾ ಹಗರಣಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರ ವಿರುದ್ಧ ಕ್ರಮ: ಆರ್‌.ಅಶೋಕ| RAshoka

ನವೆಂಬರ್‌: ಮುಡಾ ಹಗರಣ ಬೆಳಕಿಗೆ ಬಂದ ಬಳಿಕ ಕಾಂಗ್ರೆಸ್‌ ಸರ್ಕಾರ ಬಿಜೆಪಿ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಆದರೆ ಬಿಜೆಪಿ ಇದಕ್ಕೆ ಹೆದರದೆ ಹೋರಾಟ ಮುಂದುವರಿಸಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ವಿರುದ್ಧದ ಪ್ರಕರಣವನ್ನು 2021 ರಲ್ಲೇ ರಾಜ್ಯಪಾಲರು ತಿರಸ್ಕರಿಸಿದ್ದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದ ಬಳಿಕ ಹಾಗೂ ಮುಡಾ ಹಗರಣ ಬೆಳಕಿಗೆ ಬಂದ ನಂತರ ಜ್ಞಾನೋದಯವಾಗಿದೆ. ಇದು ದ್ವೇಷದ ರಾಜಕಾರಣ ಎನ್ನುವುದರಲ್ಲಿ ಅನುಮಾನವಿಲ್ಲ. ರಾಜ್ಯಪಾಲರು ಈ ಪ್ರಕರಣ ತಿರಸ್ಕರಿಸಿದಾಗ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದರು. ಆಗಲೇ ಅವರು ಅದನ್ನು ಪ್ರಶ್ನೆ ಮಾಡಿ ಕೋರ್ಟ್‌ಗೆ ಹೋಗಬಹುದಿತ್ತು ಎಂದರು.

ಬಿ.ಎಸ್‌.ಯಡಿಯೂರಪ್ಪ ಸಿಎಂ ಆಗಿದ್ದಾಗ ಕಾಂಗ್ರೆಸ್‌ಗೆ ಸ್ವಾರ್ಥದ ಕೆಲಸ ಮಾಡಿಸಿಕೊಳ್ಳಬೇಕಿತ್ತು. ಈಗ ಅದನ್ನು ಮತ್ತೆ ವಿವಾದ ಮಾಡುತ್ತಿದ್ದಾರೆ ಎಂದರೆ ಅದು ದ್ವೇಷದ ರಾಜಕಾರಣ. ನನ್ನ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ವಿರೋಧ ಪಕ್ಷದವರನ್ನು ದ್ವೇಷಿಸುವ ರಾಜಕಾರಣವನ್ನು ಬಿಜೆಪಿ ಎಂದಿಗೂ ಮಾಡಿಲ್ಲ. ಆದರೆ ಇದು ಕಾಂಗ್ರೆಸ್‌ನ ಚಾಳಿ. ತುರ್ತು ಪರಿಸ್ಥಿತಿ ಘೋಷಣೆ ಮಾಡಿದಾಗಲೂ ಬಿಜೆಪಿ ನಾಯಕರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ವಿರೋಧ ಪಕ್ಷವನ್ನು ದಮನ ಮಾಡುವುದು ಇವರ ಚಾಳಿ. ಇದಕ್ಕೆ ಬಿಜೆಪಿ ಹೆದರದೆ ಹೋರಾಟ ಮಾಡಲಿದೆ. ಎಷ್ಟೇ ಪ್ರಕರಣ ದಾಖಲಿಸಿದರೂ ಅದನ್ನು ಎದುರಿಸುತ್ತೇವೆ ಎಂದರು.

14 ನಿವೇಶನ ಲೂಟಿ ಮಾಡಿದ ಪ್ರಕರಣ ಬಯಲಿಗೆ ಬಂದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಮಾಡಿದ್ದಾರೆ. ಈ ಹಿಂದೆಯೂ ಕಾಂಗ್ರೆಸ್‌ ಆಡಳಿತವಿತ್ತು. ಆಗೆಲ್ಲ ರಾಜ್ಯಪಾಲರ ಅಧಿಕಾರ ತೆಗೆದುಹಾಕುವ ಕೆಲಸ ಮಾಡಲಿಲ್ಲ. ಈಗ ಮಾತ್ರ ಅಧಿಕಾರ ಕಿತ್ತುಕೊಳ್ಳುವ ನಿರ್ಣಯಗಳನ್ನು ಮಾಡಲಾಗಿದೆ. ಇದನ್ನು ಜನರು ಗಮನಿಸುತ್ತಿದ್ದು, ಮುಂದೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದರು.

ಒಕ್ಕಲಿಗ ಸ್ವಾಮೀಜಿಗೆ ಕಿರುಕುಳ

ವಿಶ್ವ ಒಕ್ಕಲಿಗರ ಮಠದ ಸ್ವಾಮೀಜಿಯವರ ವಿರುದ್ಧ ಪ್ರಕರಣ ದಾಖಲಿಸಿ ಕಿರುಕುಳ ನೀಡಲು ಸರ್ಕಾರ ಮುಂದಾಗಿದೆ. ಒಕ್ಕಲಿಗ ಸ್ವಾಮೀಜಿ ಮೇಲೆಯೂ ದಬ್ಬಾಳಿಕೆ ಮಾಡುವ ವ್ಯವಸ್ಥಿತ ಸಂಚು ಮಾಡಲಾಗಿದೆ. ಕೋರ್ಟ್‌ ಆದೇಶ ಪಾಲನೆ ಮಾಡಲ್ಲ, ರಸ್ತೆ ಎಲ್ಲವೂ ನಮ್ಮದೇ ಎಂದವರ ವಿರುದ್ಧವೂ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು. ಸಿಎಂ ಸಿದ್ದರಾಮಯ್ಯನವರಿಗೆ ಹಿಂದೂಗಳನ್ನು ಕಂಡರೆ ಅಲರ್ಜಿ. ಆದ್ದರಿಂದಲೇ ಒಕ್ಕಲಿಗ ಸ್ವಾಮೀಜಿ ವಿರುದ್ಧ ದ್ವೇಷ ಕಾರಲಾಗುತ್ತಿದೆ. ಇದು ಒಕ್ಕಲಿಗ ಸಮುದಾಯಕ್ಕೆ ಮಾಡುತ್ತಿರುವ ಅಪಮಾನ ಎಂದರು.

ಸಿಎಂ ಸಿದ್ದರಾಮಯ್ಯ ಹೆಸರಿಗಷ್ಟೇ ಅಹಿಂದ. ಈಗ ಕೇವಲ ಅಲ್ಪಸಂಖ್ಯಾತರನ್ನು ಓಲೈಸುತ್ತಿದ್ದಾರೆ. ಸರ್ಕಾರ ಸಂಪೂರ್ಣ ಪಾಪರ್‌ ಆಗಿದೆ. ನೌಕರರಿಗೆ ವೇತನ ಕೊಡಲು ಕೂಡ ಹಣವಿಲ್ಲ. ಬಳ್ಳಾರಿ ಆಸ್ಪತ್ರೆಯಲ್ಲಿ ಕಳಪೆ ಔಷಧಿ ನೀಡಿರುವುದರಿಂದ ತಾಯಂದಿರು ಸತ್ತಿದ್ದಾರೆ. ಕೋವಿಡ್‌ನಲ್ಲಿ ಹಗರಣ ನಡೆದಿದೆ ಎಂದು ಹೇಳುವ ಕಾಂಗ್ರೆಸ್‌ ನಾಯಕರು, ಭ್ರಷ್ಟಾಚಾರಕ್ಕಾಗಿ ಕಳಪೆ ಔಷಧಿ ಪೂರೈಸಿದ್ದಾರೆ. ಈ ಸಾವಿಗೆ ಯಾರು ಕಾರಣ ಎಂದು ಜವಾಬ್ದಾರಿ ನಿಗದಿ ಮಾಡಿ. ಈ ಸಾವುಗಳಿಗೆ ನ್ಯಾಯ ನೀಡಿ ಎಂದು ಆಗ್ರಹಿಸಿದರು.

ಬಳ್ಳಾರಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ಮುಖ್ಯಮಂತ್ರಿ ಭೇಟಿ ನೀಡಿಲ್ಲ. ಮೋಜು, ಮಸ್ತಿ ಮಾಡಿಕೊಂಡು ಸಮಾವೇಶ ಮಾಡುತ್ತಿದ್ದಾರೆಯೇ ಹೊರತು ಜನರ ಆರೋಗ್ಯದ ಬಗ್ಗೆ ಕಾಳಜಿ ಇಲ್ಲ. ನಾನು ಕೂಡ ಈ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದೇನೆ ಎಂದರು.

ರಾಜಕೀಯ

ಖರ್ಗೆ, ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿ.ವೈ. ವಿಜಯೇಂದ್ರ

ಖರ್ಗೆ, ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿ.ವೈ. ವಿಜಯೇಂದ್ರ

ಇಡೀ ವಿಶ್ವವೇ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಜೀ ಅವರನ್ನು ಭಯೋತ್ಪಾದಕರೆಂದು ಹೇಳಿದ್ದು ಬಿಜೆಪಿ ಮಾತ್ರವಲ್ಲದೇ ಇಡೀ ದೇಶ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು

[ccc_my_favorite_select_button post_id="121263"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!