ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ, ಮುಡಾ ಹಗರಣಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರ ವಿರುದ್ಧ ಕ್ರಮ: ಆರ್‌.ಅಶೋಕ| RAshoka

ನವೆಂಬರ್‌: ಮುಡಾ ಹಗರಣ ಬೆಳಕಿಗೆ ಬಂದ ಬಳಿಕ ಕಾಂಗ್ರೆಸ್‌ ಸರ್ಕಾರ ಬಿಜೆಪಿ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಆದರೆ ಬಿಜೆಪಿ ಇದಕ್ಕೆ ಹೆದರದೆ ಹೋರಾಟ ಮುಂದುವರಿಸಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ವಿರುದ್ಧದ ಪ್ರಕರಣವನ್ನು 2021 ರಲ್ಲೇ ರಾಜ್ಯಪಾಲರು ತಿರಸ್ಕರಿಸಿದ್ದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದ ಬಳಿಕ ಹಾಗೂ ಮುಡಾ ಹಗರಣ ಬೆಳಕಿಗೆ ಬಂದ ನಂತರ ಜ್ಞಾನೋದಯವಾಗಿದೆ. ಇದು ದ್ವೇಷದ ರಾಜಕಾರಣ ಎನ್ನುವುದರಲ್ಲಿ ಅನುಮಾನವಿಲ್ಲ. ರಾಜ್ಯಪಾಲರು ಈ ಪ್ರಕರಣ ತಿರಸ್ಕರಿಸಿದಾಗ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದರು. ಆಗಲೇ ಅವರು ಅದನ್ನು ಪ್ರಶ್ನೆ ಮಾಡಿ ಕೋರ್ಟ್‌ಗೆ ಹೋಗಬಹುದಿತ್ತು ಎಂದರು.

ಬಿ.ಎಸ್‌.ಯಡಿಯೂರಪ್ಪ ಸಿಎಂ ಆಗಿದ್ದಾಗ ಕಾಂಗ್ರೆಸ್‌ಗೆ ಸ್ವಾರ್ಥದ ಕೆಲಸ ಮಾಡಿಸಿಕೊಳ್ಳಬೇಕಿತ್ತು. ಈಗ ಅದನ್ನು ಮತ್ತೆ ವಿವಾದ ಮಾಡುತ್ತಿದ್ದಾರೆ ಎಂದರೆ ಅದು ದ್ವೇಷದ ರಾಜಕಾರಣ. ನನ್ನ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ವಿರೋಧ ಪಕ್ಷದವರನ್ನು ದ್ವೇಷಿಸುವ ರಾಜಕಾರಣವನ್ನು ಬಿಜೆಪಿ ಎಂದಿಗೂ ಮಾಡಿಲ್ಲ. ಆದರೆ ಇದು ಕಾಂಗ್ರೆಸ್‌ನ ಚಾಳಿ. ತುರ್ತು ಪರಿಸ್ಥಿತಿ ಘೋಷಣೆ ಮಾಡಿದಾಗಲೂ ಬಿಜೆಪಿ ನಾಯಕರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ವಿರೋಧ ಪಕ್ಷವನ್ನು ದಮನ ಮಾಡುವುದು ಇವರ ಚಾಳಿ. ಇದಕ್ಕೆ ಬಿಜೆಪಿ ಹೆದರದೆ ಹೋರಾಟ ಮಾಡಲಿದೆ. ಎಷ್ಟೇ ಪ್ರಕರಣ ದಾಖಲಿಸಿದರೂ ಅದನ್ನು ಎದುರಿಸುತ್ತೇವೆ ಎಂದರು.

14 ನಿವೇಶನ ಲೂಟಿ ಮಾಡಿದ ಪ್ರಕರಣ ಬಯಲಿಗೆ ಬಂದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಮಾಡಿದ್ದಾರೆ. ಈ ಹಿಂದೆಯೂ ಕಾಂಗ್ರೆಸ್‌ ಆಡಳಿತವಿತ್ತು. ಆಗೆಲ್ಲ ರಾಜ್ಯಪಾಲರ ಅಧಿಕಾರ ತೆಗೆದುಹಾಕುವ ಕೆಲಸ ಮಾಡಲಿಲ್ಲ. ಈಗ ಮಾತ್ರ ಅಧಿಕಾರ ಕಿತ್ತುಕೊಳ್ಳುವ ನಿರ್ಣಯಗಳನ್ನು ಮಾಡಲಾಗಿದೆ. ಇದನ್ನು ಜನರು ಗಮನಿಸುತ್ತಿದ್ದು, ಮುಂದೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದರು.

ಒಕ್ಕಲಿಗ ಸ್ವಾಮೀಜಿಗೆ ಕಿರುಕುಳ

ವಿಶ್ವ ಒಕ್ಕಲಿಗರ ಮಠದ ಸ್ವಾಮೀಜಿಯವರ ವಿರುದ್ಧ ಪ್ರಕರಣ ದಾಖಲಿಸಿ ಕಿರುಕುಳ ನೀಡಲು ಸರ್ಕಾರ ಮುಂದಾಗಿದೆ. ಒಕ್ಕಲಿಗ ಸ್ವಾಮೀಜಿ ಮೇಲೆಯೂ ದಬ್ಬಾಳಿಕೆ ಮಾಡುವ ವ್ಯವಸ್ಥಿತ ಸಂಚು ಮಾಡಲಾಗಿದೆ. ಕೋರ್ಟ್‌ ಆದೇಶ ಪಾಲನೆ ಮಾಡಲ್ಲ, ರಸ್ತೆ ಎಲ್ಲವೂ ನಮ್ಮದೇ ಎಂದವರ ವಿರುದ್ಧವೂ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು. ಸಿಎಂ ಸಿದ್ದರಾಮಯ್ಯನವರಿಗೆ ಹಿಂದೂಗಳನ್ನು ಕಂಡರೆ ಅಲರ್ಜಿ. ಆದ್ದರಿಂದಲೇ ಒಕ್ಕಲಿಗ ಸ್ವಾಮೀಜಿ ವಿರುದ್ಧ ದ್ವೇಷ ಕಾರಲಾಗುತ್ತಿದೆ. ಇದು ಒಕ್ಕಲಿಗ ಸಮುದಾಯಕ್ಕೆ ಮಾಡುತ್ತಿರುವ ಅಪಮಾನ ಎಂದರು.

ಸಿಎಂ ಸಿದ್ದರಾಮಯ್ಯ ಹೆಸರಿಗಷ್ಟೇ ಅಹಿಂದ. ಈಗ ಕೇವಲ ಅಲ್ಪಸಂಖ್ಯಾತರನ್ನು ಓಲೈಸುತ್ತಿದ್ದಾರೆ. ಸರ್ಕಾರ ಸಂಪೂರ್ಣ ಪಾಪರ್‌ ಆಗಿದೆ. ನೌಕರರಿಗೆ ವೇತನ ಕೊಡಲು ಕೂಡ ಹಣವಿಲ್ಲ. ಬಳ್ಳಾರಿ ಆಸ್ಪತ್ರೆಯಲ್ಲಿ ಕಳಪೆ ಔಷಧಿ ನೀಡಿರುವುದರಿಂದ ತಾಯಂದಿರು ಸತ್ತಿದ್ದಾರೆ. ಕೋವಿಡ್‌ನಲ್ಲಿ ಹಗರಣ ನಡೆದಿದೆ ಎಂದು ಹೇಳುವ ಕಾಂಗ್ರೆಸ್‌ ನಾಯಕರು, ಭ್ರಷ್ಟಾಚಾರಕ್ಕಾಗಿ ಕಳಪೆ ಔಷಧಿ ಪೂರೈಸಿದ್ದಾರೆ. ಈ ಸಾವಿಗೆ ಯಾರು ಕಾರಣ ಎಂದು ಜವಾಬ್ದಾರಿ ನಿಗದಿ ಮಾಡಿ. ಈ ಸಾವುಗಳಿಗೆ ನ್ಯಾಯ ನೀಡಿ ಎಂದು ಆಗ್ರಹಿಸಿದರು.

ಬಳ್ಳಾರಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ಮುಖ್ಯಮಂತ್ರಿ ಭೇಟಿ ನೀಡಿಲ್ಲ. ಮೋಜು, ಮಸ್ತಿ ಮಾಡಿಕೊಂಡು ಸಮಾವೇಶ ಮಾಡುತ್ತಿದ್ದಾರೆಯೇ ಹೊರತು ಜನರ ಆರೋಗ್ಯದ ಬಗ್ಗೆ ಕಾಳಜಿ ಇಲ್ಲ. ನಾನು ಕೂಡ ಈ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದೇನೆ ಎಂದರು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!