ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಸರಿಯಲ್ಲ: ವಿಜಯೇಂದ್ರ ಆಕ್ರೋಶ| Vijayendra

ಬೆಂಗಳೂರು: ಸ್ವಾಮೀಜಿಗಳು ಸಹಜವಾಗಿ ಆಕ್ರೋಶದಿಂದ ಮಾತನಾಡಿದ್ದಾರೆ. ಸರಕಾರವು ದೇಶದ್ರೋಹಿಗಳು, ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ಕೇಸ್‍ಗಳನ್ನು ಹಿಂಪಡೆಯುತ್ತಿದೆ. ಮತ್ತೊಂದೆಡೆ ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಖಂಡಿತ ಸರಿಯಲ್ಲ. ಸ್ವಾಮೀಜಿಗಳ ಪರ ಇದ್ದೇವೆ ಎಂದು ತಿಳಿಸಿ, ಆಶೀರ್ವಾದ ಪಡೆದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (Vijayendra) ಅವರು ತಿಳಿಸಿದ್ದಾರೆ.

ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮೊನ್ನೆ ನಡೆದ ಹೋರಾಟದಲ್ಲಿ ಸ್ವಾಮೀಜಿಗಳು ರಾಜ್ಯ ಸರಕಾರದ ನಡವಳಿಕೆ ವಿರುದ್ಧ ಆಕ್ರೋಶಭರಿತರಾಗಿ ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ಬಗ್ಗೆ ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದಾರೆ. ಇದರ ನಡುವೆ ರಾಜ್ಯ ಸರಕಾರವು ಸ್ವಾಮೀಜಿಗಳ ವಿರುದ್ಧ ಎಫ್‍ಐಆರ್ ದಾಖಲು ಮಾಡಿ ಅವರಿಗೆ ತನಿಖೆಗೆ ಬರಲು ಒತ್ತಾಯಿಸಿದೆ ಎಂದು ಆಕ್ಷೇಪಿಸಿದರು.

ಸ್ವಾಮೀಜಿಗಳು ಆರೋಗ್ಯ ಸರಿ ಇಲ್ಲದಿರುವ ಕುರಿತು ತಿಳಿಸಿದ್ದಲ್ಲದೆ ಅಗತ್ಯ ಉತ್ತರವನ್ನು ಪತ್ರ ಮೂಲಕ ನೀಡಿದ್ದರು. ಆದರೂ ಕೂಡ, ಒತ್ತಡ ಹಾಕುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.

ರಾಜ್ಯ ಸರಕಾರವು ವಕ್ಫ್ ವಿಷಯ ಮುಂದಿಟ್ಟು ರೈತರನ್ನು ಒಕ್ಕಲೆಬ್ಬಿಸುತ್ತಿದೆ; ಮಠಮಾನ್ಯಗಳ ಜಮೀನು ಕಿತ್ತುಕೊಳ್ಳುತ್ತಿದೆ. ಅಧಿಕಾರಿಗಳ ಮೂಲಕ ನೋಟಿಸ್ ಕೊಡುತ್ತಿದೆ ಎಂದು ಟೀಕಿಸಿದರು. ಇದರ ವಿರುದ್ಧ ಉಗ್ರ ಪ್ರತಿಭಟನೆ ನಡೆದಿದ್ದು, ರೈತರು ಬೀದಿಗೆ ಇಳಿದಿದ್ದಾರೆ ಎಂದು ವಿವರಿಸಿದರು.

ಯತ್ನಾಳ್ ವಿಚಾರ, ನಕಲಿ ನೋಟಿಸ್ ಎಂಬ ಹೇಳಿಕೆ ಕುರಿತು ಪದೇಪದೇ ಮಾತನಾಡುವುದಿಲ್ಲ. ನೋಟಿಸ್ ಅಸಲಿಯೇ ನಕಲಿಯೇ ಎಂಬುದು ಬರುವ ದಿನಗಳಲ್ಲಿ ಗೊತ್ತಾಗಲಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಬಿಜೆಪಿ ಸ್ವಾಮೀಜಿಗಳ ಪರ ನಿಲ್ಲಲಿದೆ

ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯದ ಕೆಲವು ಮುಖಂಡರು ದೊಡ್ಡ ಸಭೆ ಮಾಡಿ ನಾವು ಸುಪ್ರೀಂ ಕೋರ್ಟಿನ ಮುಂದೆ ಹೋಗಿ ಭಿಕ್ಷೆ ಬೇಡುವುದಿಲ್ಲ; ನಿಮಗೆ ಸಂಸತ್ ಇದ್ದರೆ ನಮಗೆ ರಸ್ತೆಗಳಿವೆ. ನಾವೂ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ ನಿದರ್ಶನವಿದೆ. ಇದಕ್ಕೆ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ಕೇಳಿದರು.

ಕರಿಯ ಎಂದವರ ಬಗ್ಗೆ ಎಫ್‍ಐಆರ್ ಆಗಿದೆಯೇ? ಎಂದು ಕೇಳಿದರು. ವಕ್ಫ್ ವಿಚಾರದಲ್ಲಿ ರೈತರಿಗೆ ಆಗಿರುವ ಆಕ್ರೋಶದ ಹಿನ್ನೆಲೆಯಲ್ಲಿ ಸ್ವಾಮೀಜಿಗಳು ಅವತ್ತು ಒಂದು ಮಾತನ್ನಾಡಿದ್ದರು. ಅದಕ್ಕೆ ಅವರು ಪಶ್ಚಾತ್ತಾಪವನ್ನೂ ವ್ಯಕ್ತಪಡಿಸಿದ್ದಾರೆ. ನೋವಾಗಿದ್ದರೆ ಕ್ಷಮೆ ಕೇಳುವುದಾಗಿ ತಿಳಿಸಿದ ಮೇಲೆ ಇನ್ನೇನಿದೆ ಎಂದು ಪ್ರಶ್ನಿಸಿದರು.

ನಿಮ್ಮ ಪಕ್ಕದಲ್ಲೇ ನಿಂತು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರನ್ನು ರಕ್ಷಿಸುತ್ತೀರಿ. ಮಾಡಿದ ತಪ್ಪಿಗೆ ಆಕ್ರೋಶ ವ್ಯಕ್ತವಾದಾಗ, ಕ್ಷಮೆ ಕೇಳಿದ ಮೇಲೂ ಕ್ರಮ ಜರುಗಿಸುವುದಾದರೆ ದ್ವಿಮುಖ ನೀತಿ ನಿಮ್ಮದಲ್ಲವೇ? ಓಲೈಕೆ ನೀತಿ ಮೂಲಕ ಹಿಂದೂಗಳು, ರೈತರಿಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಆಕ್ಷೇಪಿಸಿದರು.

ಬಿಜೆಪಿ ಸ್ವಾಮೀಜಿಗಳ ಪರ ನಿಲ್ಲಲಿದೆ. ಸರಕಾರದ ಅನ್ಯಾಯಗಳ ವಿಷಯವನ್ನು ಜನರಿಗೆ ಎತ್ತಿ ತೋರಿಸುವ ಕೆಲಸವನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.

ಬೇರೆ ಬೇರೆ ಕಾನೂನು ಇದೆಯೇ?

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಅವರು ಮಾತನಾಡಿ, ಸ್ವಾಮೀಜಿಗಳು ಕ್ಷಮೆ ಕೇಳಿದರೂ ಕೇಸು ದಾಖಲಿಸಿದ್ದಾರೆ. ದೇಶವಿರೋಧಿ, ಗಲಭೆ ಎಬ್ಬಿಸುವ ಹಾಗೂ ಸೌಹಾರ್ದತೆ ಹಾಳು ಮಾಡುವ ರೀತಿಯಲ್ಲಿ ಹೇಳಿಕೆ ಕೊಟ್ಟ ಇತರರ ಬಗ್ಗೆ ಸರಕಾರ ಯಾಕೆ ಕೇಸು ಹಾಕಿಲ್ಲ? ಅವರ ಮೇಲೂ ಪ್ರಕರಣ ದಾಖಲಿಸಬೇಕಿತ್ತಲ್ಲವೇ? ಕಾನೂನು ಬೇರೆ ಬೇರೆ ಇದೆಯೇ ಎಂದು ಪ್ರಶ್ನಿಸಿದರು.

ಸ್ವಾಮೀಜಿಯವರಿಗೆ 80 ವರ್ಷವಾಗಿದ್ದು, ಅನಾರೋಗ್ಯದಿಂದಿದ್ದಾರೆ. ಬಹಳ ನೊಂದಿದ್ದಾರೆ. ದೇಶದ್ರೋಹಿಗಳಿಗೂ ಇದು ಅನ್ವಯ ಮಾಡಬೇಕಿತ್ತು ಎಂದು ತಿಳಿಸಿದರು. ಎಲ್ಲರೂ ಒಗ್ಗೂಡಿ ಕೆಲಸ ಮಾಡಿ ಎಂದು ಸ್ವಾಮೀಜಿ ತಿಳಿಸಿದ್ದಾಗಿ ಹೇಳಿದರು.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!