ವಕ್ಫ್‌ ವಿವಾದ: ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಕಾರಣ – ಆರ್‌.ಅಶೋಕ| RAshoka

ಮೈಸೂರು: ವಕ್ಫ್‌ ಮಂಡಳಿಯು ಬಡ ಜನರ ಭೂಮಿ ಕಬಳಿಸುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಇದಕ್ಕೆ ಸರ್ಕಾರವೇ ನೇರ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಆಕ್ರೋಶ ವ್ಯಕ್ತಪಡಿಸಿದರು.

ವಕ್ಫ್‌ ಮಂಡಳಿಯಿಂದ ನೋಟಿಸ್‌ ನೀಡಲಾದ ಸ್ಥಳಗಳಿಗೆ ಭೇಟಿ ನೀಡಿದ ಆರ್‌.ಅಶೋಕ ಅವರು, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್‌ ಮಂಡಳಿ ಮೈಸೂರಿನಲ್ಲಿ ಅನೇಕರಿಗೆ ನೋಟಿಸ್‌ ನೀಡಿದೆ. ಭೂಮಿಯನ್ನು ಕಬಳಿಸುವುದರ ಜೊತೆಗೆ, ಈ ಜಾಗವನ್ನು ಲೀಸ್‌ಗೆ ಪಡೆಯಿರಿ ಎಂದು ವಕ್ಫ್‌ ಮಂಡಳಿಯ ಅಧಿಕಾರಿಗಳು ಹೇಳುತ್ತಿದ್ದಾರೆ. ಕೆಲವು ಕಡೆ ಬಡಜನರ ಭೂಮಿಗೆ ಬೇಲಿ ಹಾಕಿಕೊಂಡಿದ್ದಾರೆ. ಮುಸಲ್ಮಾನರೇ ಇಲ್ಲದ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಮುನೇಶ್ವರ ನಗರವನ್ನು ಸಂಪೂರ್ಣ ವಕ್ಫ್‌ಗೆ ನೀಡಲು ಸಿದ್ಧತೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ರೀತಿ ಮಾಡುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಹಾಳಾಗಲಿದೆ. ಇದಕ್ಕೆ ಸರ್ಕಾರವೇ ನೇರ ಕಾರಣವಾಗಲಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದಾಗ ಹಿಂದೂಗಳಿಗೆ ಒಂದೇ ಮದುವೆಯಾಗುವಂತೆ ಕಾನೂನು ತರಲಾಯಿತು. ಆದರೆ ಮುಸ್ಲಿಮರಿಗೆ ಈ ಕಾನೂನು ಅನ್ವಯವಾಗಲಿಲ್ಲ. ಅಲ್ಲಿಂದಲೇ ಕಾಂಗ್ರೆಸ್‌ ಸರ್ಕಾರ ಮುಸ್ಲಿಮರ ಪರವಾಗಿ ಕಾನೂನುಗಳನ್ನು ಜಾರಿ ಮಾಡಿತು. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ವಕ್ಫ್‌ ಮಂಡಳಿಗೆ ಸಂಪೂರ್ಣ ಅಧಿಕಾರ ನೀಡುವಂತೆ ಕಾನೂನು ತಿದ್ದುಪಡಿ ತಂದರು. ಅದಾದ ನಂತರ 1 ಲಕ್ಷ ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಭೂಮಿ ಒಂದೇ ಬಾರಿಗೆ ವಕ್ಫ್‌ ಮಂಡಳಿಗೆ ಸೇರಿಬಿಟ್ಟಿತು. ಇವೆಲ್ಲವನ್ನೂ ವ್ಯವಸ್ಥಿತವಾಗಿದೆ ಮಾಡಲಾಗಿದೆ ಎಂದು ದೂರಿದರು.

ವಕ್ಫ್‌ ಮಂಡಳಿಯದ್ದು ಸಮಸ್ಯೆಯೇ ಅಲ್ಲವೆಂದರೆ, ರೈತರು ಹಾಗೂ ಮಠಗಳ ಸ್ವಾಮೀಜಿಗಳು ಪ್ರತಿಭಟನೆ ಏಕೆ ಮಾಡುತ್ತಿದ್ದಾರೆ? ಬಿಜೆಪಿ ಸಚಿವರು ಎಂದಿಗೂ ಪ್ರತಿ ಜಿಲ್ಲೆಗೆ ಹೋಗಿ ನೋಟಿಸ್‌ ಕೊಡಲು ಸೂಚನೆ ನೀಡಿರಲಿಲ್ಲ. ಆದರೆ ಈಗಿನ ಸಚಿವ ಜಮೀರ್‌ ಅಹ್ಮದ್‌ ಪ್ರತಿ ಜಿಲ್ಲೆಗೆ ಹೋಗಿ ಅಧಿಕಾರಿಗಳನ್ನು ಬೆದರಿಸಿ ನೋಟಿಸ್‌ ಕೊಡಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕಾನೂನಿನಲ್ಲಿ ತಿದ್ದುಪಡಿ ತಂದು ಈ ತಪ್ಪು ಕೆಲಸವನ್ನು ಸರಿ ಪಡಿಸಲಿದ್ದಾರೆ ಎಂದರು.

ಪ್ರಧಾನಿ ನೆಹರು ಕಾಲದಲ್ಲೇ ಧರ್ಮಾಧಾರಿತವಾಗಿ ದೇಶವನ್ನು ವಿಭಜಿಸಲಾಯಿತು. ಅದೇ ಮಾದರಿಯಲ್ಲಿ ತುಷ್ಟೀಕರಣವನ್ನು ಮಾಡಿ ವಕ್ಫ್‌ ಮಂಡಳಿಗೆ ಪರಮಾಧಿಕಾರ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಜಮೀರ್‌ ಅಹ್ಮದ್‌ ಭೂಮಿ ಕಬಳಿಕೆಗೆ ಆದೇಶ ನೀಡಿದ್ದಾರೆ. ಇದರಿಂದಾಗಿ ರೈತರು ಆತಂಕಕ್ಕೀಡಾಗಿದ್ದಾರೆ ಎಂದರು.

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!