Gandhi bharatha| “ಗಾಂಧಿ ಭಾರತ” ಹೆಸರಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ನಿರ್ಣಯ

ಬೆಂಗಳೂರು: 1924 ರಲ್ಲಿ ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣಾ ಸಭೆ (Gandhi bharatha) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ನಡೆಯಿತು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಸಚಿವರಾದ ಹೆಚ್.ಕೆ.ಪಾಟೀಲ್, ಜಮೀರ್ ಅಹಮದ್ ಖಾನ್, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಮಧು ಬಂಗಾರಪ್ಪ, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ರಮಾನಾಥ್ ರೈ, ಬಿ.ಎಲ್.ಶಂಕರ್, ಶಾಸಕರಾದ ಆಸಿಫ್ ಸೇಠ್.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿಯವರಾದ ಕಾವೇರಿ, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಗಾಂಧಿ ಭವನದ ಪದಾಧಿಕಾರಿಗಳು , ಬೆಳಗಾವಿ ಜಿಲ್ಲಾಡಳಿತದ ಅಧಿಕಾರಿಗಳು ಸೇರಿ 60 ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯ ಮುಖ್ಯಾಂಶಗಳು

• ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ.

• ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಮುಖ್ಯಮಂತ್ರಿ ಅವರಿಂದ ಸೂಚನೆ.

• ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧಾರ.

• ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ.

• ಕಾಂಗ್ರೆಸ್‌ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ.

• ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್‌ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧಾರ.

• ಕಣಬರಗಿಯಲ್ಲಿ ಗಂಗಾಧರ ರಾವ್‌ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ.

• ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನ.

• ಅಟನ್‌ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸಲು ನಿರ್ಧಾರ.

• ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್‌ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ.

• ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ.

• ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ.

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!