Gandhi bharatha| “ಗಾಂಧಿ ಭಾರತ” ಹೆಸರಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ನಿರ್ಣಯ

ಬೆಂಗಳೂರು: 1924 ರಲ್ಲಿ ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣಾ ಸಭೆ (Gandhi bharatha) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ನಡೆಯಿತು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಸಚಿವರಾದ ಹೆಚ್.ಕೆ.ಪಾಟೀಲ್, ಜಮೀರ್ ಅಹಮದ್ ಖಾನ್, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಮಧು ಬಂಗಾರಪ್ಪ, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ರಮಾನಾಥ್ ರೈ, ಬಿ.ಎಲ್.ಶಂಕರ್, ಶಾಸಕರಾದ ಆಸಿಫ್ ಸೇಠ್.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿಯವರಾದ ಕಾವೇರಿ, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಗಾಂಧಿ ಭವನದ ಪದಾಧಿಕಾರಿಗಳು , ಬೆಳಗಾವಿ ಜಿಲ್ಲಾಡಳಿತದ ಅಧಿಕಾರಿಗಳು ಸೇರಿ 60 ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯ ಮುಖ್ಯಾಂಶಗಳು

• ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ.

• ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಮುಖ್ಯಮಂತ್ರಿ ಅವರಿಂದ ಸೂಚನೆ.

• ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧಾರ.

• ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ.

• ಕಾಂಗ್ರೆಸ್‌ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ.

• ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್‌ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧಾರ.

• ಕಣಬರಗಿಯಲ್ಲಿ ಗಂಗಾಧರ ರಾವ್‌ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ.

• ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನ.

• ಅಟನ್‌ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸಲು ನಿರ್ಧಾರ.

• ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್‌ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ.

• ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ.

• ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ.

ರಾಜಕೀಯ

ರೈತರಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ರೈತರಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ಕೆರೆಯ ಮಣ್ಣು ಸಾಗಾಟ ಸಂಬಂಧ ರೈತರೊಬ್ಬರಿಗೆ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ (BJP MLA ) ಬಿ.ಪಿ.ಹರೀಶ್ (B.P. Harish) ವಿರುದ್ಧ ದಾವಣಗೆರೆಯ ಡಿಸಿಆರ್‌ಇ ಪೊಲೀಸ್ ಠಾಣೆಯಲ್ಲಿ

[ccc_my_favorite_select_button post_id="118506"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!