ಮನೆ ಕಟ್ಟುವವರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ…!| state government

School timings starting tomorrow have changed!

ಬೆಂಗಳೂರು: ರಾಜ್ಯ ಸರ್ಕಾರವು (state government) ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್‌.ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ.

ಈ ಸಂಬಂಧ ಮಾದ್ಯಮ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ರಾಜ್ಯ ಸರ್ಕಾರದ ಮರಳು ನೀತಿಯಂತೆ ಈಗಾಗಲೇ ಸಾರ್ವಜನಿಕ ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ಬೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು I, II ಮತ್ತು III ನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಬ್ದಾರಿಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ವಹಿಸಿದೆ.

ಪ್ರತಿ ಮೆ.ಟನ್‌ ಮರಳಿನ ಮಾರಾಟ ಬೆಲೆಯನ್ನು ರೂ.300/-ಗಳನ್ನು ನಿಗದಿಪಡಿಸಲಾಗಿದೆ. ಮತ್ತು ಸದರಿ ವ್ಯವಸ್ಥೆಯು ಪ್ರಸ್ತುತ ಜಾರಿಯಲ್ಲಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

IV, V ಮತ್ತು ಉನ್ನತ ಶ್ರೇಣಿಗಳ ಹಳ್ಳ / ನದಿಗಳ ಪಾತ್ರಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ ಗಳನ್ನು ಸರ್ಕಾರದಿಂದ ಅಧಿಸೂಚಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಸರ್ಕಾರಿ ಇಲಾಖೆಗಳಿಗೆ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಇದೆ ರೀತಿ ಸಾರ್ವಜನಿಕ/ ಖಾಸಗಿ ಸಂಸ್ಥೆಗಳಿಗೆ ಟೆಂಡರ್ ಮೂಲಕ ಮರಳು ಬ್ಲಾಕ್‌ಗಳನ್ನು ವಿಲೇಪಡಿಸುವ ನಿಯಮದಲ್ಲಿ ತಿದ್ದುಪಡಿ ಮಾಡಲಾಗಿದೆ ಎಂದಿದ್ದಾರೆ.

ಈ ನೂತನ ನೀತಿಯಂತೆ ಮರಳು ಬ್ಲಾಕ್‌ಗಳ ಟೆಂಡರ್‌ನ್ನು ಆಯಾ ಜಿಲ್ಲಾ ಮರಳು ಸಮಿತಿಯಿಂದ ನಡೆಸಲಾಗುವುದು. ಜಿಲ್ಲಾವಾರು ಗುರುತಿಸಲಾಗುವ ಮರಳು ಬ್ಲಾಕ್‌ಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಇತರೆ ಸಾಮಾನ್ಯ ವರ್ಗದವರಿಗೆ ರೋಸ್ಟರ್‌ ಪದ್ಧತಿಯಡಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಪ್ರತಿ ಮೆ.ಟನ್‌ ಮರಳು ಏಕ ರೂಪ ಮಾರಾಟ ದರ ರೂ. 850/- ನ್ನು ನಿಗದಿಪಡಿಸಲಾಗಿದೆ. ಸರ್ಕಾರವು ನಿಗದಿಪಡಿಸುವ ಮಾರಾಟ ಬೆಲೆಯ ಮೊತ್ತದ ಶೇಕಡ 50 ರಷ್ಟುನ್ನು Ceiling price ಎಂದು ಹಾಗೂ Ceiling Price ನ ಶೇಕಡ 60ರಷ್ಟನ್ನು Cut-off Price ಎಂದು ನಿಗದಿಪಡಿಸಲಾಗಿರುತ್ತದೆ.

Ceiling Price ಮತ್ತು Cut-off Price ಗೆ ಸಮನಾದ ಅಥವಾ ನಡುವೆ ಸಲ್ಲಿಸುವ ಕಡಿಮೆ ಟೆಂಡರ್‌ ಮೊತ್ತವನ್ನು ನಮೂದಿಸಿದವರನ್ನು ಯಶಸ್ವಿ ಬಿಡ್ಡುದಾರರೆಂದು ಪರಿಗಣಿಸಲಾಗುವುದು. ಒಂದಕ್ಕಿಂತ ಹೆಚ್ಚು ಟೆಂಡರ್‌ದಾರರು ಏಕ ರೂಪ ಟೆಂಡರ್‌ ದರವನ್ನು ನಮೂದಿಸಿದಲ್ಲಿ ಲಾಟರಿ ಮೂಲಕ ಯಶಸ್ವಿ ಬಿಡ್ಡುದಾರನನ್ನು ಆಯ್ಕೆ ಮಾಡಲಾಗುವುದು.

ಟೆಂಡರ್‌ ಪ್ರಕ್ರಿಯೆಯನ್ನು e-Portal ನಲ್ಲಿ ನಡೆಸಲಾಗುತ್ತಿದ್ದು, ಸದರಿ Portal ಮೂಲಕ ಆಸಕ್ತ ವ್ಯಕ್ತಿ/ಖಾಸಗಿ ಕಂಪನಿ/ಸಂಸ್ಥೆಯವರು ಅರ್ಜಿ ಸಲ್ಲಿಸಲು ಜಿಲ್ಲಾವಾರು ಅಧಿಸೂಚನೆ ಜಾರಿ ಮಾಡಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.

ಈ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಮತ್ತು ಟೆಂಡರ್‌ ಡಾಕ್ಯುಮೆಂಟ್‌ ನ್ನು ಎಲ್ಲಾ ಜಿಲ್ಲಾ ಕಛೇರಿಗಳಿಗೆ ನೀಡಲಾಗಿದ್ದು, ಸರ್ಕಾರದಿಂದ ಜಾರಿ ಮಾಡಿರುವ ಮರಳು ನೀತಿಯನ್ನು ಪರಿಣಾಮಕಾರಿಯಾಗಿ ಯಶಸ್ವಿಗೊಳಿಸಲು ನಿರ್ದೇಶಿಸಲಾಗಿದೆ ಎಂದು ಗಣಿ ಸಚಿವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಮಹಾವೀರ್, ಉಪನಿರ್ದೇಶಕರು, ಗಣಿ ಇಲಾಖೆ : +919972111002 ಇವರನ್ನು ಸಂಪರ್ಕಿಸಬಹುದು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]