ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವ ಪೀಳಿಗೆ ಪಾತ್ರ ಮಹತ್ವದ್ದು: ಸಚಿವ ಡಾ.ಎಂ.ಸಿ.ಸುಧಾಕರ್| Dr.MC sudhakar

ಬೆಳಗಾವಿ: ಭಾರತ ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ವಿದ್ಯಾರ್ಥಿಗಳು ಪದವಿಯ ನಂತರ ಸಮಗ್ರ ಜ್ಞಾನ ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವ ಮೂಲಕ ಸಾಮಾಜಿಕ-ಆರ್ಥಿಕ-ಶೈಕ್ಷಣಿಕವಾಗಿ ಭಾರತವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ, ಸಚಿವರಾದ ಡಾ.ಎಂ.ಸಿ.ಸುಧಾಕರ್ (Dr.MC sudhakar) ಅವರು ತಿಳಿಸಿದರು

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ “ಜ್ಞಾನ ಸಂಗಮ” ಸಭಾಂಗಣದಲ್ಲಿ ಬುಧವಾರ (ಡಿ.3) ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದ ಅಂತರ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಜ್ಞಾನವಂತ, ಕೌಶಲ್ಯಪೂರ್ಣ ಮತ್ತು ಶಸಕ್ತ ವ್ಯಕ್ತಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕಾಲಿಡುವ ಮೂಲಕ ಯಶಸ್ಸು ಗಳಿಸಲು ಮುಂದಾಗಬೇಕು ಎಂದು ಹೇಳಿದರು.

ಸ್ವಾತಂತ್ರ್ಯ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕಿತ್ತೂರಿನ ವೀರ ರಾಣಿ ಹೆಸರಿನ ವಿಶ್ವವಿದ್ಯಾಲಯ ಇದಾಗಿದೆ. ರಾಣಿ ಚನ್ನಮ್ಮ ಎಂದರೆ ಅದಮ್ಯ ರಾಷ್ಟ್ರಪ್ರೇಮ, ಸ್ವಾಭಿಮಾನ ಹಾಗೂ ಸ್ತ್ರೀಶಕ್ತಿ ಸಂಕೇತ, ಬೆಳಗಾವಿ-ವಿಜಯಪುರ ಭಾಗದ ಜನರಿಗೆ ಜ್ಞಾನದ ಬೆಳಕು ಹಂಚುವ ಪಾತ್ರ ವಿಶ್ವವಿದ್ಯಾಲಯ ವಹಿಸಿಕೊಂಡಿದೆ.

ವಿಶ್ವವಿದ್ಯಾಲಯದ ಬೆಳವಣಿಗೆ ಒಂದು ಭಾಗದ ಅಭಿವೃದ್ಧಿ ಮಾತ್ರವಲ್ಲದೆ ರಾಜ್ಯ ಮತ್ತು ರಾಷ್ಟ್ರದ ಶೈಕ್ಷಣಿಕ ಅಭಿವೃದ್ಧಿಪರ ಕೊಡುಗೆಗಳನ್ನು ನೀಡುತ್ತಿದೆ ಎಂದರು.

ಸಮಾಜದ ಪ್ರಗತಿಯಲ್ಲಿ ಶಿಕ್ಷಣದ ಪಾತ್ರ

ಉನ್ನತ ಶಿಕ್ಷಣವು ಸಮಾಜದ ಬದಲಾವಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವುದು ಮಾತ್ರವಲ್ಲದೆ ನಾವಿನ್ಯತೆಯನ್ನು ಉತ್ತೇಜಿಸುತ್ತದೆ. ಸಮಾನ ಮತ್ತು ಪ್ರಗತಿಶೀಲ ಸಮಾಜವನ್ನು ಸೃಷ್ಟಿಸುತ್ತದೆ.

ವಿಶ್ವವಿದ್ಯಾಲಯ ಕೇವಲ ಪದವಿ ಉತ್ಪಾದಿಸುವ ಕಾರ್ಖಾನೆಗಳಲ್ಲ. ವಿಷಯಜ್ಞಾನ ಕಾರ್ಯಗಳಿಗೆ ಅಳವಡಣಾಶಕ್ತಿ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಪೋಷಿಸುವ ಕೇಂದ್ರಗಳಾಗಬೇಕು. ಪದವಿಯ ನಂತರ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ರೂಪಗೊಳ್ಳಬೇಕು ಎಂದು ತಿಳಿಸಿದರು.

ಸ್ಪರ್ಧಾತ್ಮಕ ಜಗತ್ತಿನಲ್ಲಿ, ತಂತ್ರಜ್ಞಾನ ಬೆಳವಣಿಗೆ ಹೊಂದಿ ಸಮಾಜದಲ್ಲಿ ಶಿಕ್ಷಣದ ವ್ಯವಸ್ಥೆಯಲ್ಲಿ ಬಹಳಷ್ಟು ಬದಲಾವಣೆಯನ್ನು ಕಂಡಿದ್ದೇವೆ. ಖಾಸಗಿ ಕಾಲೇಜುಗಳಲ್ಲಿ ಓದಿಸಲು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರಿಗೆ ವಿಶ್ವವಿದ್ಯಾಲಯಗಳು ಅತೀ ಕಡಿಮೆ ಶುಲ್ಕ ಪಡೆದು ಶಿಕ್ಷಣ ಒದಗಿಸುವ ಮೂಲಕ ಆರ್ಥಿಕವಾಗಿ ಆಧಾರವಾಗಿವೆ.

ಕೌಶಲ್ಯಕ್ಕೆ ಆದ್ಯತೆ ನೀಡಿ, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿ ಇಂಗ್ಲಿಷ್ ಭಾಷೆಯಮೇಲೆ ಹಿಡಿತ ಸಾಧಿಸುವ ಕೆಲಸಕ್ಕೆ ವಿಶ್ವವಿದ್ಯಾಲಯಗಳು ಚಿಂತನೆ ನಡೆಸಿವೆ. ವಿಶ್ವವಿದ್ಯಾಲಯವು ವಿನೂತನ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕೌಶಲ್ಯ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ, ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದರು.

ವಿಶ್ವಸಂಸ್ಥೆಯ ಸಲಹೆಗಾರರು, ಅಂತರರಾಷ್ಟ್ರೀಯ ಪ್ರಖ್ಯಾತ ವಿಜ್ಞಾನಿ, ಯು.ಎನ್ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ ಮಾಜಿ ಹಿರಿಯ ಅಧಿಕಾರಿ ಮಂಗಳೂರಿನ ಡಾ. ಇಡ್ಯಾ ಕರುಣಾಸಾಗರ ಅವರು ಮಾತನಾಡಿ ಇಂದಿನ ಯುವ ಪೀಳಿಗೆ ಮಹಾನ್ ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಧೈರ್ಯ, ಶೌರ್ಯ ಮತ್ತು ಪ್ರತಿಭಟನೆಯ ಪ್ರತೀಕ, ರಾಣಿ ಚನ್ನಮ್ಮ ಅವರ ಹೆಸರನ್ನು ಸ್ಮರಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಪದವಿಗಳನ್ನು ಪಡೆದ ಎಲ್ಲಾ ಪದವೀಧರರು, ಸ್ನಾತಕೋತ್ತರ ಪದವೀಧರರು, ಡಾಕ್ಟರೇಟ್‌ಗಳಿಗೆ ಇಂದು ಉತ್ತಮ ದಿನ. ಘಟಿಕೋತ್ಸವದಲ್ಲಿ ಪದವಿಗಳನ್ನು ಪಡೆಯುವುದು ಪ್ರತಿಯೊಬ್ಬ ಯುವಕನ ಜೀವನದಲ್ಲಿ ಒಂದು ದೊಡ್ಡ ಮೈಲಿಗಲ್ಲು.

ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಹೆಚ್ಚಿನ ಪ್ರಯತ್ನಗಳನ್ನು ಮಾಡುತ್ತಿದೆ. ಯುವ ಪದವೀಧರರು ಎಲ್ಲಾ ಕೌಶಲ್ಯಗಳೊಂದಿಗೆ ಸಂಪೂರ್ಣವಾಗಿ ಸಜ್ಜುಗೊಂಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧಿಸುವುದು ಅವರ ಮುಂದಿನ ವೃತ್ತಿಜೀವನದಲ್ಲಿ ಅಗತ್ಯವಿದೆ.

ಭಾರತದಲ್ಲಿ ಪ್ರತಿ ವರ್ಷ ಮಿಲಿಯನ್ ಲೆಕ್ಕದಲ್ಲಿ ಮಕ್ಕಳು ಶಾಲೆಗಳಿಗೆ ದಾಖಲಾಗುತ್ತಾರೆ ಮತ್ತು ಕೇವಲ ಮಿಲಿಯನ್ ಮಾತ್ರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾಗುತ್ತಾರೆ. ಭಾರತದಲ್ಲಿ ವಾರ್ಷಿಕ ಪದವೀಧರರ ಸಂಖ್ಯೆ ಕೇವಲ 5.6 ಮಿಲಿಯನ್ ಇದೆ ಅವರಲ್ಲಿ ನೀವು ಒಬ್ಬರು ಅದೃಷ್ಟವಂತರು.

ವಿದ್ಯಾರ್ಥಿ ಜೀವನದಲ್ಲಿ ಸಾಧಿಸಲು ನಿಮ್ಮ ಪ್ರಯಾಣದಲ್ಲಿ ನೀವು ತೋರಿದ ಶ್ರಮ, ತಾಳ್ಮೆ ಮತ್ತು ಪರಿಶ್ರಮದ ಬಗ್ಗೆ ತಿಳಿದಿದೆ. ನಿಮ್ಮ ಪೋಷಕರು ಮಾಡಿದ ಸಂಕಲ್ಪ ಮತ್ತು ತ್ಯಾಗಗಳು ಮತ್ತು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಿಕ್ಷಕರು ಒದಗಿಸಿದ ವೃತ್ತಿಪರತೆ, ಸಮರ್ಪಣೆ, ಸಹಾನುಭೂತಿ ಮತ್ತು ಮಾರ್ಗದರ್ಶನದಿಂದ ಪದವಿ ಪಡೆದುಕೊಂಡಿದ್ದೀರಿ ಎಂದರು.

ಜೀವನದಲ್ಲಿ ಮಹತ್ತರವಾದುದನ್ನು ಸಾಧಿಸಲು ನಿಮ್ಮೆಲ್ಲರಿಗೂ ಅಪಾರವಾದ ಸಾಮರ್ಥ್ಯವಿದೆ . ನಮ್ಮ ಮಾಜಿ ರಾಷ್ಟ್ರಪತಿ, ವಿಜ್ಞಾನಿ, ದಾರ್ಶನಿಕ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಹೇಳಿದಂತೆ ಶ್ರೇಷ್ಠ ಗುರಿ ಹೊಂದಿ, ಜ್ಞಾನ ಸಂಪಾದನೆ, ಕಠಿಣ ಪರಿಶ್ರಮದಿಂದ ಏನನ್ನು ಬೇಕಾದರೂ ಸಾಧಿಸಬಹುದು. ಸೂರ್ಯನಂತೆ ಬೆಳಗಬೇಕೆಂದರೆ. ಮೊದಲು ಸೂರ್ಯನಂತೆ ಉರಿಯಬೇಕು ಎಂಬುದನ್ನು ಅರಿತುಕೊಳ್ಳಬೇಕು.

ನಿಮ್ಮ ವೃತ್ತಿಪರ ಪ್ರಯಾಣದ ಸಮಯದಲ್ಲಿ ವೈಫಲ್ಯದ ಭಯಪಡಬೇಡಿ. ಡಾ. ಅಬ್ದುಲ್ ಕಲಾಂ ಅವರು “ನೀವು ವಿಫಲವಾದರೆ, ಎಂದಿಗೂ ಬಿಟ್ಟುಕೊಡಬೇಡಿ ಏಕೆಂದರೆ ಫೆಲ್ ಎಂದರೆ ಕಲಿಕೆಯಲ್ಲಿ ಮೊದಲ ಪ್ರಯತ್ನ” ಎಂದು ಹೇಳಿದ್ದಾರೆ.
ಹಾಗಾಗಿ ಪದವೀಧರರು ಯಾವುದೇ ಭಯವಿಲ್ಲದೇ ಉತ್ತಮ ಜೀವನ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಮಾದರಿ ವ್ಯಕ್ತಿಗಳಾಗಬೇಕು ಎಂದು ಡಾ. ಇಡ್ಯಾ ಕರುಣಾಸಾಗರ ಅವರು ತಿಳಿಸಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಗೌರವ ಡಾಕ್ಟರೇಟ್ ಪದವಿ ಪ್ರದಾನ

ಪ್ರದರ್ಶನ ಕಲೆಗಳ ಕ್ಷೇತ್ರದಲ್ಲಿ ಪದ್ಮಶ್ರೀ ಪಂಡಿತ್ ಎಸ್. ಬಾಲೇಶ್ ಭಜಂತ್ರಿ, ಉದ್ಯಮಶೀಲತೆ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗೋಪಾಲ ದೇವೇಂದ್ರ ಜಿನಗೌಡ ಹಾಗೂ ನಾಗರಿಕ, ಕ್ರೀಡೆ, ಲೋಕೋಪಕಾರಿ ಸೇವಾ ಕ್ಷೇತ್ರದಲ್ಲಿ ಗೋಪಾಲ ಬಿ. ಹೊಸೂರ ಇವರುಗಳಿಗೆ ‘ಡಾಕ್ಟರ್ ಆಫ್ ಲೆಟರ್ಸ್’ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು.

ಚಿನ್ನದ ಪದಕ

ಘಟಿಕೋತ್ಸವದಲ್ಲಿ ಒಟ್ಟು 38,512 ವಿದ್ಯಾರ್ಥಿಗಳು ಪದವಿ ಮತ್ತು 5909 ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡರು ಇದರಲ್ಲಿ ಎಂ.ಎ(ಕನ್ನಡ) ವಿಷಯದಲ್ಲಿ ರ್‍ಯಾಂಕ್‌ ಗಳಿಸಿದ ಮತ್ತು ವಿಷಯವಾರು ಹೆಚ್ಚಿನ ಅಂಕ ಪಡೆದ ಮಹೇಶ್ವರಿ ತೇಗೂರ ಎರಡು ಚಿನ್ನದ ಪದಕಗಳು, ಬಿ.ಕಾಂ ವಿನಾಯಕ ತೇಲಿ, ಬಿ.ಎಸ್ಸಿ ಕುಮಾರೇಶ ಕಾತರಕಿ, ಎಂ.ಎ(ಸಮಾಜಶಾಸ್ತ್ರ) ವಿಷಯದಲ್ಲಿ ಐಶ್ವರ್ಯಾ ಪಾಟೀಲ, ಎಂಬಿಎ ಪೂರ್ಣಿಮಾ ದೇಸಾಯಿ, ಎಂ.ಎಸ್ಸಿ(ಗಣಿತ) ವಿಷಯದಲ್ಲಿ ಶಿವಕುಮಾರ ಸರದಾರ ಹಾಗೂ ವಿಷಯವಾರು ಹೆಚ್ಚಿನ ಅಂಕ ಗಳಿಸಿದ ವಿನಯ ಘೂಳಪ್ಪನವರ, ಸುಜಾತಾ ಕೇಸ್ತಿ, ನಿವೇದಿತಾ ಕಾಟಕರ, ಸಂಗೀತಾ ಬಸಗೌಡನವರ ಅವರಿಗೆ ತಲಾ ಒಂದು ಚಿನ್ನದ ಪದಕ ವಿತರಿಸಲಾಯಿತು.

ಅದೇ ರೀತಿಯಲ್ಲಿ 123 ಪಿಎಚ್.ಡಿ. ಪದವಿಗಳನ್ನು ಪ್ರದಾನ ಮಾಡಲಾಯಿತು. ಬಳಿಕ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇ-ವಿದ್ಯಾ ಅಪ್ಲಿಕೇಶನ್ ಬಿಡುಗಡೆ ಮಾಡಲಾಯಿತು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ, ಮೌಲ್ಯಮಾಪನ ಕುಲಸಚಿವ ಪ್ರೊ. ರವೀಂದ್ರ ಎನ್. ಕದಮ್, ಹಣಕಾಸು ಅಧಿಕಾರಿ ಎಂ.ಎ ಸ್ವಪ್ನ, ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳ, ಪಾಲಕರು ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!