ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವ ಪೀಳಿಗೆ ಪಾತ್ರ ಮಹತ್ವದ್ದು: ಸಚಿವ ಡಾ.ಎಂ.ಸಿ.ಸುಧಾಕರ್| Dr.MC sudhakar

ಬೆಳಗಾವಿ: ಭಾರತ ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ವಿದ್ಯಾರ್ಥಿಗಳು ಪದವಿಯ ನಂತರ ಸಮಗ್ರ ಜ್ಞಾನ ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವ ಮೂಲಕ ಸಾಮಾಜಿಕ-ಆರ್ಥಿಕ-ಶೈಕ್ಷಣಿಕವಾಗಿ ಭಾರತವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ, ಸಚಿವರಾದ ಡಾ.ಎಂ.ಸಿ.ಸುಧಾಕರ್ (Dr.MC sudhakar) ಅವರು ತಿಳಿಸಿದರು

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ “ಜ್ಞಾನ ಸಂಗಮ” ಸಭಾಂಗಣದಲ್ಲಿ ಬುಧವಾರ (ಡಿ.3) ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದ ಅಂತರ ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಜ್ಞಾನವಂತ, ಕೌಶಲ್ಯಪೂರ್ಣ ಮತ್ತು ಶಸಕ್ತ ವ್ಯಕ್ತಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಕಾಲಿಡುವ ಮೂಲಕ ಯಶಸ್ಸು ಗಳಿಸಲು ಮುಂದಾಗಬೇಕು ಎಂದು ಹೇಳಿದರು.

ಸ್ವಾತಂತ್ರ್ಯ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕಿತ್ತೂರಿನ ವೀರ ರಾಣಿ ಹೆಸರಿನ ವಿಶ್ವವಿದ್ಯಾಲಯ ಇದಾಗಿದೆ. ರಾಣಿ ಚನ್ನಮ್ಮ ಎಂದರೆ ಅದಮ್ಯ ರಾಷ್ಟ್ರಪ್ರೇಮ, ಸ್ವಾಭಿಮಾನ ಹಾಗೂ ಸ್ತ್ರೀಶಕ್ತಿ ಸಂಕೇತ, ಬೆಳಗಾವಿ-ವಿಜಯಪುರ ಭಾಗದ ಜನರಿಗೆ ಜ್ಞಾನದ ಬೆಳಕು ಹಂಚುವ ಪಾತ್ರ ವಿಶ್ವವಿದ್ಯಾಲಯ ವಹಿಸಿಕೊಂಡಿದೆ.

ವಿಶ್ವವಿದ್ಯಾಲಯದ ಬೆಳವಣಿಗೆ ಒಂದು ಭಾಗದ ಅಭಿವೃದ್ಧಿ ಮಾತ್ರವಲ್ಲದೆ ರಾಜ್ಯ ಮತ್ತು ರಾಷ್ಟ್ರದ ಶೈಕ್ಷಣಿಕ ಅಭಿವೃದ್ಧಿಪರ ಕೊಡುಗೆಗಳನ್ನು ನೀಡುತ್ತಿದೆ ಎಂದರು.

ಸಮಾಜದ ಪ್ರಗತಿಯಲ್ಲಿ ಶಿಕ್ಷಣದ ಪಾತ್ರ

ಉನ್ನತ ಶಿಕ್ಷಣವು ಸಮಾಜದ ಬದಲಾವಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವುದು ಮಾತ್ರವಲ್ಲದೆ ನಾವಿನ್ಯತೆಯನ್ನು ಉತ್ತೇಜಿಸುತ್ತದೆ. ಸಮಾನ ಮತ್ತು ಪ್ರಗತಿಶೀಲ ಸಮಾಜವನ್ನು ಸೃಷ್ಟಿಸುತ್ತದೆ.

ವಿಶ್ವವಿದ್ಯಾಲಯ ಕೇವಲ ಪದವಿ ಉತ್ಪಾದಿಸುವ ಕಾರ್ಖಾನೆಗಳಲ್ಲ. ವಿಷಯಜ್ಞಾನ ಕಾರ್ಯಗಳಿಗೆ ಅಳವಡಣಾಶಕ್ತಿ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಪೋಷಿಸುವ ಕೇಂದ್ರಗಳಾಗಬೇಕು. ಪದವಿಯ ನಂತರ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ರೂಪಗೊಳ್ಳಬೇಕು ಎಂದು ತಿಳಿಸಿದರು.

ಸ್ಪರ್ಧಾತ್ಮಕ ಜಗತ್ತಿನಲ್ಲಿ, ತಂತ್ರಜ್ಞಾನ ಬೆಳವಣಿಗೆ ಹೊಂದಿ ಸಮಾಜದಲ್ಲಿ ಶಿಕ್ಷಣದ ವ್ಯವಸ್ಥೆಯಲ್ಲಿ ಬಹಳಷ್ಟು ಬದಲಾವಣೆಯನ್ನು ಕಂಡಿದ್ದೇವೆ. ಖಾಸಗಿ ಕಾಲೇಜುಗಳಲ್ಲಿ ಓದಿಸಲು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರಿಗೆ ವಿಶ್ವವಿದ್ಯಾಲಯಗಳು ಅತೀ ಕಡಿಮೆ ಶುಲ್ಕ ಪಡೆದು ಶಿಕ್ಷಣ ಒದಗಿಸುವ ಮೂಲಕ ಆರ್ಥಿಕವಾಗಿ ಆಧಾರವಾಗಿವೆ.

ಕೌಶಲ್ಯಕ್ಕೆ ಆದ್ಯತೆ ನೀಡಿ, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬಿ ಇಂಗ್ಲಿಷ್ ಭಾಷೆಯಮೇಲೆ ಹಿಡಿತ ಸಾಧಿಸುವ ಕೆಲಸಕ್ಕೆ ವಿಶ್ವವಿದ್ಯಾಲಯಗಳು ಚಿಂತನೆ ನಡೆಸಿವೆ. ವಿಶ್ವವಿದ್ಯಾಲಯವು ವಿನೂತನ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕೌಶಲ್ಯ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ, ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದರು.

ವಿಶ್ವಸಂಸ್ಥೆಯ ಸಲಹೆಗಾರರು, ಅಂತರರಾಷ್ಟ್ರೀಯ ಪ್ರಖ್ಯಾತ ವಿಜ್ಞಾನಿ, ಯು.ಎನ್ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ ಮಾಜಿ ಹಿರಿಯ ಅಧಿಕಾರಿ ಮಂಗಳೂರಿನ ಡಾ. ಇಡ್ಯಾ ಕರುಣಾಸಾಗರ ಅವರು ಮಾತನಾಡಿ ಇಂದಿನ ಯುವ ಪೀಳಿಗೆ ಮಹಾನ್ ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಧೈರ್ಯ, ಶೌರ್ಯ ಮತ್ತು ಪ್ರತಿಭಟನೆಯ ಪ್ರತೀಕ, ರಾಣಿ ಚನ್ನಮ್ಮ ಅವರ ಹೆಸರನ್ನು ಸ್ಮರಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಪದವಿಗಳನ್ನು ಪಡೆದ ಎಲ್ಲಾ ಪದವೀಧರರು, ಸ್ನಾತಕೋತ್ತರ ಪದವೀಧರರು, ಡಾಕ್ಟರೇಟ್‌ಗಳಿಗೆ ಇಂದು ಉತ್ತಮ ದಿನ. ಘಟಿಕೋತ್ಸವದಲ್ಲಿ ಪದವಿಗಳನ್ನು ಪಡೆಯುವುದು ಪ್ರತಿಯೊಬ್ಬ ಯುವಕನ ಜೀವನದಲ್ಲಿ ಒಂದು ದೊಡ್ಡ ಮೈಲಿಗಲ್ಲು.

ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಹೆಚ್ಚಿನ ಪ್ರಯತ್ನಗಳನ್ನು ಮಾಡುತ್ತಿದೆ. ಯುವ ಪದವೀಧರರು ಎಲ್ಲಾ ಕೌಶಲ್ಯಗಳೊಂದಿಗೆ ಸಂಪೂರ್ಣವಾಗಿ ಸಜ್ಜುಗೊಂಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧಿಸುವುದು ಅವರ ಮುಂದಿನ ವೃತ್ತಿಜೀವನದಲ್ಲಿ ಅಗತ್ಯವಿದೆ.

ಭಾರತದಲ್ಲಿ ಪ್ರತಿ ವರ್ಷ ಮಿಲಿಯನ್ ಲೆಕ್ಕದಲ್ಲಿ ಮಕ್ಕಳು ಶಾಲೆಗಳಿಗೆ ದಾಖಲಾಗುತ್ತಾರೆ ಮತ್ತು ಕೇವಲ ಮಿಲಿಯನ್ ಮಾತ್ರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾಗುತ್ತಾರೆ. ಭಾರತದಲ್ಲಿ ವಾರ್ಷಿಕ ಪದವೀಧರರ ಸಂಖ್ಯೆ ಕೇವಲ 5.6 ಮಿಲಿಯನ್ ಇದೆ ಅವರಲ್ಲಿ ನೀವು ಒಬ್ಬರು ಅದೃಷ್ಟವಂತರು.

ವಿದ್ಯಾರ್ಥಿ ಜೀವನದಲ್ಲಿ ಸಾಧಿಸಲು ನಿಮ್ಮ ಪ್ರಯಾಣದಲ್ಲಿ ನೀವು ತೋರಿದ ಶ್ರಮ, ತಾಳ್ಮೆ ಮತ್ತು ಪರಿಶ್ರಮದ ಬಗ್ಗೆ ತಿಳಿದಿದೆ. ನಿಮ್ಮ ಪೋಷಕರು ಮಾಡಿದ ಸಂಕಲ್ಪ ಮತ್ತು ತ್ಯಾಗಗಳು ಮತ್ತು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಿಕ್ಷಕರು ಒದಗಿಸಿದ ವೃತ್ತಿಪರತೆ, ಸಮರ್ಪಣೆ, ಸಹಾನುಭೂತಿ ಮತ್ತು ಮಾರ್ಗದರ್ಶನದಿಂದ ಪದವಿ ಪಡೆದುಕೊಂಡಿದ್ದೀರಿ ಎಂದರು.

ಜೀವನದಲ್ಲಿ ಮಹತ್ತರವಾದುದನ್ನು ಸಾಧಿಸಲು ನಿಮ್ಮೆಲ್ಲರಿಗೂ ಅಪಾರವಾದ ಸಾಮರ್ಥ್ಯವಿದೆ . ನಮ್ಮ ಮಾಜಿ ರಾಷ್ಟ್ರಪತಿ, ವಿಜ್ಞಾನಿ, ದಾರ್ಶನಿಕ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಹೇಳಿದಂತೆ ಶ್ರೇಷ್ಠ ಗುರಿ ಹೊಂದಿ, ಜ್ಞಾನ ಸಂಪಾದನೆ, ಕಠಿಣ ಪರಿಶ್ರಮದಿಂದ ಏನನ್ನು ಬೇಕಾದರೂ ಸಾಧಿಸಬಹುದು. ಸೂರ್ಯನಂತೆ ಬೆಳಗಬೇಕೆಂದರೆ. ಮೊದಲು ಸೂರ್ಯನಂತೆ ಉರಿಯಬೇಕು ಎಂಬುದನ್ನು ಅರಿತುಕೊಳ್ಳಬೇಕು.

ನಿಮ್ಮ ವೃತ್ತಿಪರ ಪ್ರಯಾಣದ ಸಮಯದಲ್ಲಿ ವೈಫಲ್ಯದ ಭಯಪಡಬೇಡಿ. ಡಾ. ಅಬ್ದುಲ್ ಕಲಾಂ ಅವರು “ನೀವು ವಿಫಲವಾದರೆ, ಎಂದಿಗೂ ಬಿಟ್ಟುಕೊಡಬೇಡಿ ಏಕೆಂದರೆ ಫೆಲ್ ಎಂದರೆ ಕಲಿಕೆಯಲ್ಲಿ ಮೊದಲ ಪ್ರಯತ್ನ” ಎಂದು ಹೇಳಿದ್ದಾರೆ.
ಹಾಗಾಗಿ ಪದವೀಧರರು ಯಾವುದೇ ಭಯವಿಲ್ಲದೇ ಉತ್ತಮ ಜೀವನ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಮಾದರಿ ವ್ಯಕ್ತಿಗಳಾಗಬೇಕು ಎಂದು ಡಾ. ಇಡ್ಯಾ ಕರುಣಾಸಾಗರ ಅವರು ತಿಳಿಸಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಗೌರವ ಡಾಕ್ಟರೇಟ್ ಪದವಿ ಪ್ರದಾನ

ಪ್ರದರ್ಶನ ಕಲೆಗಳ ಕ್ಷೇತ್ರದಲ್ಲಿ ಪದ್ಮಶ್ರೀ ಪಂಡಿತ್ ಎಸ್. ಬಾಲೇಶ್ ಭಜಂತ್ರಿ, ಉದ್ಯಮಶೀಲತೆ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗೋಪಾಲ ದೇವೇಂದ್ರ ಜಿನಗೌಡ ಹಾಗೂ ನಾಗರಿಕ, ಕ್ರೀಡೆ, ಲೋಕೋಪಕಾರಿ ಸೇವಾ ಕ್ಷೇತ್ರದಲ್ಲಿ ಗೋಪಾಲ ಬಿ. ಹೊಸೂರ ಇವರುಗಳಿಗೆ ‘ಡಾಕ್ಟರ್ ಆಫ್ ಲೆಟರ್ಸ್’ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು.

ಚಿನ್ನದ ಪದಕ

ಘಟಿಕೋತ್ಸವದಲ್ಲಿ ಒಟ್ಟು 38,512 ವಿದ್ಯಾರ್ಥಿಗಳು ಪದವಿ ಮತ್ತು 5909 ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡರು ಇದರಲ್ಲಿ ಎಂ.ಎ(ಕನ್ನಡ) ವಿಷಯದಲ್ಲಿ ರ್‍ಯಾಂಕ್‌ ಗಳಿಸಿದ ಮತ್ತು ವಿಷಯವಾರು ಹೆಚ್ಚಿನ ಅಂಕ ಪಡೆದ ಮಹೇಶ್ವರಿ ತೇಗೂರ ಎರಡು ಚಿನ್ನದ ಪದಕಗಳು, ಬಿ.ಕಾಂ ವಿನಾಯಕ ತೇಲಿ, ಬಿ.ಎಸ್ಸಿ ಕುಮಾರೇಶ ಕಾತರಕಿ, ಎಂ.ಎ(ಸಮಾಜಶಾಸ್ತ್ರ) ವಿಷಯದಲ್ಲಿ ಐಶ್ವರ್ಯಾ ಪಾಟೀಲ, ಎಂಬಿಎ ಪೂರ್ಣಿಮಾ ದೇಸಾಯಿ, ಎಂ.ಎಸ್ಸಿ(ಗಣಿತ) ವಿಷಯದಲ್ಲಿ ಶಿವಕುಮಾರ ಸರದಾರ ಹಾಗೂ ವಿಷಯವಾರು ಹೆಚ್ಚಿನ ಅಂಕ ಗಳಿಸಿದ ವಿನಯ ಘೂಳಪ್ಪನವರ, ಸುಜಾತಾ ಕೇಸ್ತಿ, ನಿವೇದಿತಾ ಕಾಟಕರ, ಸಂಗೀತಾ ಬಸಗೌಡನವರ ಅವರಿಗೆ ತಲಾ ಒಂದು ಚಿನ್ನದ ಪದಕ ವಿತರಿಸಲಾಯಿತು.

ಅದೇ ರೀತಿಯಲ್ಲಿ 123 ಪಿಎಚ್.ಡಿ. ಪದವಿಗಳನ್ನು ಪ್ರದಾನ ಮಾಡಲಾಯಿತು. ಬಳಿಕ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇ-ವಿದ್ಯಾ ಅಪ್ಲಿಕೇಶನ್ ಬಿಡುಗಡೆ ಮಾಡಲಾಯಿತು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ, ಮೌಲ್ಯಮಾಪನ ಕುಲಸಚಿವ ಪ್ರೊ. ರವೀಂದ್ರ ಎನ್. ಕದಮ್, ಹಣಕಾಸು ಅಧಿಕಾರಿ ಎಂ.ಎ ಸ್ವಪ್ನ, ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳ, ಪಾಲಕರು ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ‌. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು.

[ccc_my_favorite_select_button post_id="117357"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]