ಸಚಿವ ಸಂಪುಟ ಸಭೆ: ಗ್ಯಾರಂಟಿ ಭಾರ ಸರಿದೂಗಿಸಲು ಸಿದ್ದರಾಮಯ್ಯ ಸರ್ಕಾರದಿಂದ ಭರ್ಜರಿ ಪ್ಲಾನ್..!| Cmsiddaramaiah

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರ ಅಧ್ಯಕ್ಷತೆಯಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಸಲಾಗಿದ್ದು, ಗ್ಯಾರಂಟಿ ಯೋಜನೆಯ ಭಾರ ಸರಿದೂಗಿಸಲು ಭರ್ಜರಿ ಪ್ಲಾನ್ ಮಾಡಲಾಗಿದೆ ಎನ್ನಲಾಗುತ್ತಿದೆ.

ಸಭೆಯ ಪ್ರಮುಖ ನಿರ್ಣಯಗಳು ಈ ರೀತಿಯಲ್ಲಿವೆ.

ರಾಜಧನ ಪರಿಷ್ಕರಣೆಯಿಂದ ರೂ.311.00 ಕೋಟಿ ಹೆಚ್ಚುವರಿ ಆದಾಯ ನಿರೀಕ್ಷೆ; ಕರ್ನಾಟಕ ಉಪಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು, 2024”ಕ್ಕೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

ರಾಜ್ಯ ಸರ್ಕಾರವು ಉಪಖನಿಜಗಳ ಮೇಲಿನ ರಾಜಧನವನ್ನು 3 ವರ್ಷಗಳ ಅವಧಿಯಲ್ಲಿ ಒಂದು ಬಾರಿ ಪರಿಷ್ಕರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಪರಿಷ್ಕರಣೆಯಿಂದ ಒಟ್ಟಾರೆಯಾಗಿ ರೂ.311.55 ಕೋಟಿಗಳ ಹೆಚ್ಚುವರಿ ಮೊತ್ತ ಸಂಗ್ರಹಣೆ ಅಂದಾಜಿಸಲಾಗಿದೆ. ಕಟ್ಟಡ ಕಲ್ಲು (Mining Stone – Miner minerals) ಉಪಖನಿಜದ ರಾಜಧನವನ್ನು ಪ್ರತಿ ಮೆಟ್ರಿಕ್ ಟನ್‍ಗೆ ರೂ.80.00 ರಂತೆ ನಿಗದಿಪಡಿಸಲಾಗಿದೆ.

ಕಲ್ಲುಗಣಿ ಗುತ್ತಿಗೆ ರಾಜಧನ ಮತ್ತು ದಂಡ ವಸೂಲಿಗೆ ಓ.ಟಿ.ಎಸ್: ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ವಿಧಿಸಿರುವ ದಂಡವನ್ನು One Time Settlement (OTS) ಮೂಲಕ ಅನುಷ್ಠಾನಗೊಳಿಸುವ ಕುರಿತು ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸುಗಳಲ್ಲಿನ ಅಂಶ (ಬಿ) ರಲ್ಲಿನ ಮಾರ್ಚ್ 2024ರ ಅಂತ್ಯದೊಳಗೆ ಎಂಬುದನ್ನು ಹೊರತುಪಡಿಸಿ, ಶಿಫಾರಸ್ಸುಗಳನ್ನು ಪರಿಗಣಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಸಂಚಿತ ಆಡಿಟ್ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ಉಪಖನಿಜ ತೆಗೆದು ರಾಜಧನ ಪಾವತಿಸದೇ ಸಾಗಾಣಿಕೆ ಮಾಡಿರುವ ಸಂಬಂಧ ಗಣಿ ಇಲಾಖೆ ವಿಧಿಸಿರುವ ದಂಡವನ್ನು One Time Settlement (OTS) ಮೂಲಕ ಸಂಗ್ರಹಿಸಲು ಪ್ರಸ್ತಾಪಿಸಲಾಗಿತ್ತು.

ಅಂಶ (ಎ) ಅನುಮೋದನೆಯಾದಲ್ಲಿ KSRSAC ರವರು ಸಲ್ಲಿಸಿರುವ / ಸಲ್ಲಿಸುವ DGPS ಸರ್ವೆ ಕಾರ್ಯದ ವರದಿ ಮೇಲೆ ಸದರಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು, 1994 ಕ್ಕೆ ಸೂಕ್ತ ತಿದ್ದುಪಡಿಗಳನ್ನು ಮತ್ತು ಮಾರ್ಗಸೂಚಿಗಳನ್ನು ಗಣಿ ಮತ್ತು ಭೂವಿಜ್ಞಾನ ಸಚಿವರ ಅನುಮೋದನೆಯೊಂದಿಗೆ ಅಳವಡಿಸಿಕೊಳ್ಳಲು; ಸಚಿವ ಸಂಪುಟ ಅನುಮೋದನೆ ನೀಡಿದೆ.

2018-19ನೇ ಸಾಲಿನಲ್ಲಿ ಚಾಲ್ತಿಯಲ್ಲಿದ್ದ 2438 ಕಟ್ಟಡ ಕಲ್ಲು ಗಣಿ ಗುತ್ತಿಗೆಗಳನ್ನು ಡ್ರೋನ್ ಬಳಸಿ ಸರ್ವೇ ಮಾಡಲಾಗಿದ್ದು, ಈ ಸರ್ವೆ ಮೂಲಕ ಖನಿಜ ಪರವಾನಗಿ ಪಡೆಯದೇ ಸಾಗಾಣಿಕೆ ಮಾಡಿದ ಪ್ರಮಾಣ ಮತ್ತು ಗುತ್ತಿಗೆ ಪ್ರದೇಶವನ್ನು ಒತ್ತುವರಿ ಮಾಡಿರುವ ಪ್ರಮಾಣವನ್ನು ಅಂದಾಜಿಸಿ ಪ್ರತಿ ಮೆಟ್ರಿಕ್ ಟನ್‍ಗೆ ರೂ.60.00 ರಾಜಧನದಂತೆ ರೂ.1221.00 ಕೋಟಿಗಳ 5 ಪಟ್ಟು ದಂಡವಿಧಿಸಿ, ರೂ. 6105.98 ಕೋಟಿಗಳ ದಂಡಗಳ ವಸೂಲಿ ಮಾಡಲು ನೋಟಿಸ್ ನೀಡಲಾಗಿದೆ. 2023-24ರಲ್ಲಿ ಮತ್ತೊಂದು ಸಲ ಗುತ್ತಿಗೆದಾರರುಗಳ ಸಮ್ಮುಖದಲ್ಲಿ ನ್ಯಾಯಾಲಯದ ಆದೇಶದಂತೆ ಸರ್ವೆ ಕೈಗೊಳ್ಳಲಾಗಿದೆ.

2018-19ನೇ ಸಾಲಿನ ಮತ್ತು 2023-24ನೇ ಸಾಲಿನ ಸರ್ವೆಯಲ್ಲಿ ಗುತ್ತಿಗೆ ಪ್ರದೇಶದ ಒತ್ತುವರಿ ಮಾಡಿ ತೆಗೆದಿರುವ ಪ್ರಮಾಣ ಹೆಚ್ಚಾಗಿದೆ. ಇನ್ನೂ 20 ಜಿಲ್ಲೆಗಳಲ್ಲಿ ಸರ್ವೆ ಕಾರ್ಯ ಬಾಕಿಯಿದೆ. 11 ಜಿಲ್ಲೆಗಳ ಡಿಜಿಪಿಎಸ್ Differential Global Positioning System) ಸರ್ವೆ ಕಾರ್ಯ ಬರಬೇಕಿದೆ. ಇದರಿಂದಾಗಿ ದಂಡ ವಸೂಲಿಯ ಪ್ರಮಾಣವು ಹೆಚ್ಚಾಗಬಹುದೆಂದು ನಿರೀಕ್ಷಿಸಿದೆ. ವೈಜ್ಞಾನಿಕ ಸಮಿಕ್ಷಾ ಪದ್ಧತಿಯನ್ನು ಅಳವಡಿಸಿಕೊಳ್ಳಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಚಿವ ಸಂಪುಟ ಸಲಹೆ ನೀಡಿದೆ.

ರಾಜ್ಯ ಸರ್ಕಾರದ ಅಂತರ್ ನಿಗಮ ಠೇವಣಿಗಳಿಗೆ ಅಸ್ತು

ಮಾನದಂಡಗಳಿಗನುಸಾರವಾಗಿ ಸಾಲ ಪಡೆಯುವವರನ್ನು ಮತ್ತು ಸಾಲದಾತರನ್ನು ಅಧಿಸೂಚಿಸಲು ಮತ್ತು ಅಗತ್ಯವಿದ್ದರೆ ಸಾಲ ಪಡೆಯುವವರ ಮತ್ತು ಸಾಲ ನೀಡುವವರ ಪಟ್ಟಿಯನ್ನು ನಿಯತಕಾಲಿಕವಾಗಿ ಪರಿಷ್ಕರಿಸಲು ಹಣಕಾಸು ಇಲಾಖೆಗೆ ಅಧಿಕಾರ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

ಬ್ಯಾಂಕ್‍ಗಳು ನೀಡುವ ಬಡ್ಡಿ ದರಗಳಿಗಿಂತ ಅಂತರ್ ನಿಗಮದ ಠೇವಣಿಗಳಲ್ಲಿ ಹೆಚ್ಚಿನ ಬಡ್ಡಿದರಗಳು ಲಭ್ಯವಾಗುವುದರಿಂದ ಸಾರ್ವಜನಿಕ ಉದ್ದಿಮೆಗಳು ತಮ್ಮ ಹೆಚ್ಚುವರಿ ನಿಧಿಯನ್ನು ಅಂತರ್ ನಿಗಮ ಠೇವಣಿಗಳಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಆದಾಯ ಗಳಿಸಲು ಉದ್ದೇಶಿಸಿದೆ. ಸಾರ್ವಜನಿಕ ವಲಯ ಉದ್ದಿಮೆಗಳು ಎದುರಿಸುತ್ತಿರುವ ನಷ್ಟದಿಂದ ಆರ್ಥಿಕ ಒತ್ತಡಕ್ಕೆ ಸಿಲುಕಿ ಸಾಲಕ್ಕೆ ಮೊರೆ ಹೋಗುವುದನ್ನು ತಪ್ಪಿಸಲು ಅಂತರ್ ನಿಗಮ ಠೇವಣಿ ಹೂಡಿಕೆಯನ್ನು ಪ್ರಸ್ತಾಪಿಸಲಾಗಿದೆ.

ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಮಸೂದೆಗೆ ತಿದ್ದುಪಡಿ

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಮಸೂದೆ, 2024 ಸಚಿವ ಸಂಪುಟ ಅನುಮೋದನೆ ನೀಡಿದೆ. ಕಂದಾಯ ಇಲಾಖೆಯು ಹೊಸದಾಗಿ ಈ ಕಾಯ್ದೆಗೆ 35 ತಿದ್ದುಪಡಿಗಳನ್ನು ಮತ್ತು ಹಣಕಾಸು ಇಲಾಖೆ ಒಂದು ತಿದ್ದುಪಡಿಯನ್ನು ಪ್ರಸ್ತಾಪಿಸಿದೆ.

ವಂಚಕ ಹಣಕಾಸು ಸಂಸ್ಥೆಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಹರಾಜು ಮೂಲಕ ಅವುಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ಬಾಧಿತ ಠೇವಣಿದಾರರಿಗೆ ಹಂಚಿಕೆ ಮಾಡುವ ಮೂಲಕ ನ್ಯಾಯ ಒದಗಿಸಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಮತ್ತು ಸಂರಕ್ಷಣೆ ವಿಧೇಯಕ ಜಾರಿಗೆ ತರಲಾಗಿತ್ತು. ಈ ಕಾಯ್ದೆಗೆ ಎರಡು ಬಾರಿ ತಿದ್ದುಪಡಿ ಮಾಡಲಾಗಿದೆ.

ಆರೋಗ್ಯ ಪ್ರಯೋಗಶಾಲೆಗಳ ಪರಿಕರ ಖರೀದಿಗೆ ಅನುಮೋದನೆ

2024-25ನೇ ಸಾಲಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಉಚಿತ ರೋಗ ಪತ್ತೆ ಮತ್ತು ಉಚಿತ ಔಷಧಿ ಸೇವೆಗಳ (NFDS) ಕಾರ್ಯಕ್ರಮದ ಅಡಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಹಾಗೂ ರಾಜ್ಯ ಮಟ್ಟದ ಆಸ್ಪತ್ರೆಗಳಲ್ಲಿನ ಪ್ರಯೋಗಾಲಯ ಉಪಕರಣಗಳಿಗೆ reagents, Consumables & rapid diagnostic kits ಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುಮೋದಿತ ಅನುದಾನ ರೂ.19.70 ಕೋಟಿ ವೆಚ್ಚದಲ್ಲಿ ಖರೀದಿಸಿ ಸರಬರಾಜು ಮಾಡಲು, ಸಚಿವ ಸಂಪುಟ ಅನುಮೋದನೆ ನೀಡಿದೆ

ಗ್ರಾಮಾಂತರ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ 63 ಪ್ರಯೋಗಶಾಲಾ ಪರೀಕ್ಷೆಗಳು. ಸಮುದಾಯ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ 97 ಪ್ರಯೋಗಶಾಲಾ ಪರೀಕ್ಷೆಗಳು. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆ ಮಟ್ಟದಲ್ಲಿ 111 ಪ್ರಯೋಗಶಾಲಾ ಪರೀಕ್ಷೆಗಳು. ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ 134 ಪ್ರಯೋಗಶಾಲಾ ಪರೀಕ್ಷೆಗಳು.

ವಿಶ್ವಬ್ಯಾಂಕ್ ನೆರವಿನಿಂದ ಸರ್ಕಾರಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಅಸ್ತು: ಜುಲೈ 2025 ರಿಂದ ಜೂನ್ ರವರೆಗೆ 4 ವರ್ಷಗಳಲ್ಲಿ ರೂ.2500.0 ಕೋಟಿಗಳ (ರೂ.1750 ಕೋಟಿ ವಿಶ್ವ ಬ್ಯಾಂಕ್‍ನಿಂದ ಮತ್ತು ರೂ.750.0 ಕೋಟಿ ರಾಜ್ಯ ಸರ್ಕಾರದಿಂದ) ಬಾಹ್ಯ ನಿಧಿ ಸಹಯೋಗದೊಂದಿಗೆ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಹಾಗೂ ಬಾಹ್ಯ ನಿಧಿಯ ಅನುಮೋದನೆಗಾಗಿ ಭಾರತ ಸರ್ಕಾರದ ಆರ್ಥಿಕ ವ್ಯವಹಾರಗಳ ಇಲಾಖೆಯ ಮೂಲಕ ಪ್ರಾಥಮಿಕ ಯೋಜನೆಯ ವರದಿಯನ್ನು ವಿಶ್ವಬ್ಯಾಂಕ್‍ಗೆ ಸಲ್ಲಿಸಲು ಸಚಿವ ಸಂಪುಟ ನಿರ್ಣಯಿಸಿದೆ.

ಗುಣಮಟ್ಟದ ಶಿಕ್ಷಣ ನೀಡುವುದು ಇಲಾಖೆಯ ಪ್ರಾಥಮಿಕ ಗುರಿಯಾಗಿದ್ದು, ಉನ್ನತ ಶಿಕ್ಷಣದ ಮಟ್ಟವನ್ನು ಸುಧಾರಿಸಲು ರಾಜ್ಯದಲ್ಲಿ ಖಾಸಗಿ ಸಂಸ್ಥೆಗಳು ಒದಗಿಸುವ ಸಂಪನ್ಮೂಲಗಳನ್ನು ಒದಗಿಸುವುದು ಗುರಿಯಾಗಿದೆ.

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ

ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯ ನೀಡಲು ನಿಬಂಧನೆ ಮತ್ತು ಷರತ್ತುಗಳು) (ಕಾಲೇಜು ಶಿಕ್ಷಣ) (1ನೇ ತಿದ್ದುಪಡಿ) ನಿಯಮಗಳು 2024 (ಅನುಬಂಧ-3) ಕರಡನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗುವವರಿಂದ ಆಕ್ಷೇಪಣೆ/ಸಲಹೆಗಳನ್ನು ಆಹ್ವಾನಿಸಲು ಮತ್ತು ಕರಡನ್ನು ನಿಯಮಗಳಿಗೆ ಯಾವುದೇ ಆಕ್ಷೇಪಣೆ/ಸಲಹೆಗಳು ಸ್ವೀಕೃತವಾಗದಿದ್ದಲ್ಲಿ ಅಥವಾ ಸ್ವೀಕೃತವಾದ ಆಕ್ಷೇಪಣೆ / ಸಲಹೆಗಳನ್ನು ಪರಿಗಣಿಸಿ ಕರಡು ನಿಯಮಗಳಲ್ಲಿ ಯಾವುದೇ ಪ್ರಮುಖ ತಿದ್ದುಪಡಿಗಳನ್ನು ಮಾಡದಿದ್ದಲ್ಲಿ, ಸದರಿ ಕರಡು ನಿಯಮಗಳನ್ನು ಪುನ: ಸಚಿವ ಸಂಪುಟದ ಮುಂದೆ ಮಂಡಿಸದೇ ಅಂತಿಮಗೊಳಿಸಲು ಸಚಿವ ಸಂಪುಟ ನಿರ್ಣಯಿಸಿದೆ.

ರಾಜ್ಯದಲ್ಲಿನ ಒಟ್ಟು ಅಲ್ಪಸಂಖ್ಯಾತರ ಜನಸಂಖ್ಯೆಯಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ದ ಮತ್ತು ಪಾರ್ಸಿ ಸಮುದಾಯಗಳ ಜನಸಂಖ್ಯೆ ಪ್ರಮಾಣವು ತುಂಬಾ ಕಡಿಮೆಯಿರುವುದರಿಂದ ಅಲ್ಪಸಂಖ್ಯಾತರ ಸಮುದಾಯದವರು ನಡೆಸುವ ಶೈಕ್ಷಣಿಕ ಸಂಸ್ಥೆಗಳನ್ನು ಅಲ್ಪಸಂಖ್ಯಾತರ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸಲು ಹಾಲಿ ಜಾರಿಯಲ್ಲಿರುವ ನಿಯಮ ಮತ್ತು ಆದೇಶಗಳಲ್ಲಿ ನಿಗಧಿಪಡಿಸಿರುವ ಶೇಕಡಾವಾರು ವಿದ್ಯಾರ್ಥಿಗಳು ಲಭ್ಯವಾಗುವುದು ಕಷ್ಟಕರವಾಗಿರುವುದರಿಂದ ಈ ನಿಯಮಗಳಿಗೆ ತಿದ್ದುಪಡಿ ತರಲು ಪ್ರಸ್ತಾಪಿಸಲಾಗಿತ್ತು.

ಎಸ್.ಸಿ / ಎಸ್.ಟಿ ಹಾಸ್ಟೆಲ್‍ಗಳಿಗೆ ಮಂಚ್-ಹಾಸಿಗೆ ಪೂರೈಕೆಗೆ ಒಪ್ಪಿಗೆ

ಕಲ್ಯಾಣ ಕರ್ನಾಟಕ ಹಿಂದುಳಿದ ಪ್ರದೇಶ ಅಭಿವೃದ್ಧಿಪಡಿಸುವ ಸಲುವಾಗಿ ಕಲ್ಯಾಣ ಕರ್ನಾಟಕದ ಎಸ್.ಸಿ/ ಎಸ್.ಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಸರ್ಕಾರಿ ವಸತಿ ಶಾಲೆಗಳು ಮತ್ತು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಟೂ ಟಯರ್ ಕಾಟ್, ಕಾಯರ್ ಮ್ಯಾಟ್ರಸ್ ಹಾಗೂ ಎಲೆಕ್ಟ್ರೀಕ್ ಹಿಟ್ ಪಂಪ್‍ಗಳನ್ನು ಪೂರೈಸಲು ಪ್ರಸ್ತಾಪಿಸಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 2022-23ನೇ ಸಾಲಿನಲ್ಲಿ ಒದಗಿಸಿದ್ದ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಲಭ್ಯವಿರುವ ರೂ. 4266.38 ಲಕ್ಷಗಳ ಅನುದಾನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ವಸತಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಟೂ ಟಯರ್ ಕಾಟ್, ಕಾಯರ್ ಮ್ಯಾಟ್ರಸ್ ಹಾಗೂ ಎಲೆಕ್ಟ್ರೀಕ್ ಹಿಟ್ ಪಂಪ್‍ಗಳನ್ನು ಪೂರೈಸುವುದಕ್ಕಾಗಿ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.

ರಸ್ತೆ ಸುಧಾರಣಾ ಕಾಮಗಾರಿಗೆ ರೂ.25.00 ಕೋಟಿ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 2024-25ನೇ ಸಾಲಿನ ಅಧ್ಯಕ್ಷರ ವಿವೇಚನಾ ನಿಧಿಯಡಿ ಕೈಗೊಳ್ಳಲಾಗುತ್ತಿರುವ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಇಜೇರಿ ದಿಂದ ಯಡ್ರಾಮಿ ವರೆಗೆ 53.42 ಕಿ.ಮೀ ರಿಂದ 63.42 ಕಿ.ಮೀ ವರೆಗೆ ರಸ್ತೆ ಸುಧಾರಣೆ ಕಾಮಗಾರಿಯ ರೂ.25.00 ಕೋಟಿಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.

ಜನನ ಮತ್ತು ಮರಣ ಪ್ರಮಾಣಪತ್ರಗಳಿಗೆ ಏಕರೂಪತೆ ತರಲು ನಿಯಮ ತಿದ್ದುಪಡಿ

ಕರ್ನಾಟಕ ಸರ್ಕಾರದ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಭಾಗ 2ರ ನಿಯಮ 20(3) ರನ್ವಯ ಅನುಬಂಧ 2ರಲ್ಲಿರುವ “ಕರ್ನಾಟಕ ಜನನ ಮರಣಗಳ ನೋಂದಣಿ (ತಿದ್ದುಪಡಿ) ನಿಯಮಗಳು 2024” ಕ್ಕೆ ಸಚಿವ ಸಂಪುಟದಿಂದ ಅನುಮೋದನೆ ನೀಡಿದೆ.

ಮರಣದ ಪ್ರಮಾಣ ಪತ್ರದಲ್ಲಿ ಕಾಯಿಲೆಯ ಅಥವಾ ಅಸ್ವಸ್ಥತೆಯ ಇತಿಹಾಸ ಒಂದುವೇಳೆ ಲಭ್ಯವಿದ್ದರೇ ದಾಖಲಿಸಲು ವಿದ್ಯುನ್ಮಾನ ಮಾಧ್ಯಮದ ಮೂಲಕ ಜನನ ಮತ್ತು ಮರಣ ಪತ್ರ ವಿತರಿಸುವುದು.

ಹೊಸಕೋಟೆ ತಾಲ್ಲೂಕಿನ ರಸ್ತೆ ಅಭಿವೃದ್ಧಿಗೆ ರೂ.97.27 ಕೋಟಿ: ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯದಿಂದ ಅನುಮೋದಿತ Construction of two lane ROB and its approaches in lieu of existing level crossing no.130 (at km 48.300) from Km 47.900 to Km 49.280 on NH 2027 Koraluru village in State of Karnataka (Job No. NH-207 (7)-2016-17-010-S&R (B) ಕಾಮಗಾರಿಯ ವಿನ್ಯಾಸ ಬದಲಾವಣೆಯಿಂದಾಗಿ ಉಂಟಾಗುವ ಪರಿಷ್ಕೃತ ಮೊತ್ತ ರೂ.97.27 ಕೋಟಿಗಳ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಭರಿಸಬೇಕಿರುವ ಹೆಚ್ಚುವರಿ ಮೊತ್ತ ರೂ.54.25 ಕೋಟಿಗಳ (ಸಣ್ಣ ನೀರಾವರಿ ಇಲಾಖೆಯಿಂದ ನೀಡಲಾಗುವ ರೂ.17.98 ಕೋಟಿಗಳು ಮತ್ತು ಲೋಕೋಪಯೋಗಿ ಇಲಾಖೆಯಿಂದ ರೂ.36.27 ಕೋಟಿಗಳು) ಮೊತ್ತವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು” ಸಚಿವ ಸಂಪುಟ ಅನುಮೋದಿಸಿದೆ.

ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ಕಚೇರಿಗಳಿಗೆ ಒಂದೇ ಸೂರಿನಡಿ ಮೂಲಸೌಕರ್ಯ: ಬೆಂಗಳೂರು ನಗರದ ಸಂಪಂಗಿರಾಮ ನಗರದಲ್ಲಿ ಸಮಾಜ ಕಲ್ಯಾಣ ಭವನ ವನ್ನು ಪರಿಷ್ಕೃತ ಅಂದಾಜು ರೂ.40.50 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನಮೋದನೆ ನೀಡಲು ಹಾಗೂ ಹಾಲಿ ಇರುವ ಗುತ್ತಿಗೆದಾರರಾದ ಮೆ: ಎನ್. ಬಿ. ಕನ್‍ಸ್ಟ್ರಕ್ಸನ್ಸ್ ರವರಿಗೆ ಪರಿಷ್ಕೃತ ಅಂದಾಜು ಮೊತ್ತಕ್ಕೆ ಪರಿಷ್ಕೃತ ಕಾರ್ಯಾದೇಶವನ್ನು ನೀಡಲು ಸಚಿವ ಸಂಪುಟ ಅನುಮೋದಿಸಿದೆ.

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆ/ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳೂ ಮತ್ತು KREIS ವಸತಿ ಶಾಲೆ/ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾಹೆಯಾನ ರೂ.100/-ಗಳಲ್ಲಿ ಶೇ.25%ರಷ್ಟು ವೆಚ್ಚದಲ್ಲಿ ಶೇಂಗಾ ಚಿಕ್ಕಿ ಮತ್ತು ಇನ್ನುಳಿದ ಶೇ.75% ರಷ್ಟರಲ್ಲಿ ಪೌಷ್ಟಿಕಾಂಶದ ಪುಡಿಯನ್ನು ರೂ.32.95 ಕೋಟಿಗಳ ವೆಚ್ಚದಲ್ಲಿ ಖರೀದಿಸಿ, ಒದಗಿಸಲು ಸಚಿವ ಸಂಪುಟ ಅನುಮೋದಿಸಿದೆ.

ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳ ಸುಧಾರಣೆಗೆ ಅಸ್ತು

ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಮೊದಲನೇ ಅನುಸೂಚಿಯ ಕ್ರಮ ಸಂಖ್ಯೆ: 15ರ ಅನ್ವಯ ಬಿ.ಬಿ.ಎಂ.ಪಿ. ವ್ಯಾಪ್ತಿಯ 389.68 ಕಿ.ಮೀ.ಉದ್ದದ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ರೂ.694.00 ಕೋಟಿಗಳ ಮೊತ್ತವನ್ನು ಬಿ.ಬಿ.ಎಂ.ಪಿ.ಯ ಆಯವ್ಯಯದಲ್ಲಿ 2024-25ನೇ ಸಾಲಿನಲ್ಲಿ ರೂ.300.00 ಕೋಟಿಗಳನ್ನು ಹಾಗೂ 2025-26ನೇ ಸಾಲಿನಲ್ಲಿ ರೂ.394.00 ಕೋಟಿಗಳನ್ನು ಭರಿಸಿಕೊಳ್ಳುವ ಷರತ್ತಿಗೆ ಒಳಪಟ್ಟು ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿರುವ ಸರ್ಕಾರದ ಆದೇಶ ಸಂಖ್ಯೆ: ನಅಇ 446 ಎಂಎನ್‍ವೈ 2024 (ಇ), ದಿನಾಂಕ: 22-11-2024ಕ್ಕೆ (ಅನುಬಂಧ-2) ಸಚಿವ ಸಂಪುಟದ ಘಟನೋತ್ತರ ಅನುಮೋದನೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ 1611.49 ಕಿ.ಮೀ ಉದ್ದದ ಮುಖ್ಯ ಮತ್ತು ಉಪ ಮುಖ್ಯ ರಸ್ತೆ ಜಾಲದ ಕೆಲವು ರಸ್ತೆಗಳು ಹಾಳಾಗಿದ್ದು, ವ್ಯಾಪಕ ಸಾರ್ವಜನಿಕ ಟೀಕೆಗೆ ಗುರಿಯಾಗುತ್ತಿದೆ. ತುರ್ತು ಅಭಿವೃದ್ಧಿಯಿಂದ ಸುಗಮ ಸಂಚಾರ ಉಂಟಾಗಿ ವಾಹನ ಸಾಂದ್ರತೆ ಕಡಿಮೆಯಾಗುವ ನಿರೀಕ್ಷೆ ಇದೆ.

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯ ಪರಿಷ್ಕೃತ ಅಂದಾಜಿಗೆ ಅನುಮೋದನೆ

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ರೈತರ ಸಹಭಾಗಿತ್ವದ ಶೇ.50:50ರ ಅನುಪಾತದಲ್ಲಿ ಹಾಗರಗಾ ಗ್ರಾಮದ ಸರ್ವೆ ನಂ.213/1, 214/1, 214/2, 214/4, 214/5, 214/6, 215/2, 215/3, 215/4, 215/5, 215/6, 215/7, 216/1, 216/2, 216/3, 217, 218/6, 218/7, 221, 228/1, 228/2ರ ಒಟ್ಟು ವಿಸ್ತೀರ್ಣ 117 ಎಕರೆ-05 ಗುಂಟೆ (ಪೊಟ್ ಖರಾಬ ‘ಅ’ 14 ಗುಂಟೆ ಒಳಗೊಂಡಂತೆ) ಜಮೀನನಲ್ಲಿ ವಸತಿ ಯೋಜನೆಗೆ 2016-17ನೇ ಸಾಲಿನ ದರಪಟ್ಟಿಯಂತೆ ಯೋಜನೆ ವೆಚ್ಚ ರೂ.6376.00 ಲಕ್ಷಗಳ ಅಂದಾಜು ಮೊತ್ತವನ್ನು ಪ್ರಾಧಿಕಾರವು ಪ್ರಸ್ತುತ2023-24ನೇ ಸಾಲಿನ ದರಪಟ್ಟಿಯಂತೆ ಪರಿಷ್ಕರಿಸಲಾದ ಅಭಿವೃದ್ಧಿ ಯೋಜನಾ ವೆಚ್ಚ ರೂ.9750.00. ಲಕ್ಷಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಪರಿಷ್ಕೃತ ಯೋಜನಾ ವೆಚ್ಚಕ್ಕೆ ಮಂಜೂರಾತಿ ನೀಡಲು” ಸಚಿವ ಸಂಪುಟ ನಿರ್ಣಯಿಸಿದೆ.

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ರೈತರ ಸಹಭಾಗಿತ್ವದಲ್ಲಿ 50:50ರ ಅನುಪಾತದಲ್ಲಿ ಕಲಬುರಗಿ ತಾಲ್ಲೂಕಿನ ಹಾಗರಗಾ ಗ್ರಾಮದ ವಿವಿಧ ಸರ್ವೆ ನಂಬರ್ ಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ವಸತಿ ಯೋಜನೆಯ ರೂ.97.50 ಕೋಟಿಗಳ ಮೊತ್ತದ ಪರಿಷ್ಕøತ ಅಂದಾಜಿಗೆ ಅನುಮೋದನೆಗೆ ಪ್ರಸ್ತಾಪಿಸಲಾಗಿತ್ತು.

ಬಳ್ಳಾರಿಯಲ್ಲಿ ಬಾಣಂತಿ ಸಾವಿನ ಕುರಿತು ಚರ್ಚೆ

ಬಳ್ಳಾರಿ ಬಾಣಂತಿ ಸಾವಿನ ಕುರಿತು ಚರ್ಚೆಯಾಗಿ, ಈ ಕುರಿತು ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಅವರು ವಿವರವಾದ ವರದಿ ಸಲ್ಲಿಸಿದ್ದಾರೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಹೆಚ್ಚುವರಿ ವಿಷಯಗಳು

ಔಷಧ ನಿಯಂತ್ರಣ ಮತ್ತು ಆಹಾರ ಸುರಕ್ಷತೆ ಇಲಾಖೆ ವಿಲೀನ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಎಂದು ಪದನಾಮೀಕರಿಸಲು ಹಾಗೂ ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಇವರನ್ನು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇಲಾಖೆಯ ಮುಖ್ಯಸ್ಥರನ್ನಾಗಿ ಸಚಿವ ಸಂಪುಟ ಒಪ್ಪಿದೆ.

ಆಯುಕ್ತರು, ಅಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲಿ ಎರಡು ಇಲಾಖೆಗಳ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸಲು ಸಚಿವ ಸಂಪುಟ ಅನುಮೋದಿಸಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ರೂ.47.00 ಕೋಟಿ: ರಾಜ್ಯದ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಅಪರೂಪದ ಮತ್ತು ಹೆಚ್ಚಿನ ವೆಚ್ಚದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ SCSP/TSP ಅಡಿಯಲ್ಲಿ ಪ್ರಸ್ತುತ ಲಭ್ಯವಿರುವ ರೂ.47.00 ಕೋಟಿಗಳ ಕಾರ್ಪಸ್‍ಫಂಡ್‍ನ್ನು ಕಾರ್ಪಸ್ ನಿಧಿಯನ್ನು ಸ್ಥಾಪಿಸಿ 33 ವಿರಳ ಹಾಗೂ ದುಬಾರಿ ವೆಚ್ಚದ ಕಾಯಿಲೆಗಳ ಚಿಕಿತ್ಸೆಗಾಗಿ ಬಳಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

Karnataka (Mineral Rights and Mineral Bearing Land) Tax Bill, 2024* ಅನ್ನು ಅನುಬಂಧದಲ್ಲಿ ಲಗತ್ತಿಸಿರುವಂತೆ ವಿಧಾನ ಮಂಡಲದಲ್ಲಿ ಮಂಡಿಸಲು; ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.

ಪ್ರಸ್ತಾಪಿತ ಕಾಯ್ದೆಯ ಖನಿಜ ಹಕ್ಕುಗಳ ತೆರಿಗೆ ASP ನ ಶೇ.60% ರಷ್ಟು ಪರಿಗಣಿಸಿದರೆ ರಾಜ್ಯವು ಪ್ರತಿವರ್ಷ ಸುಮಾರು ರೂ.4,207.95 ಕೋಟಿ ಹೆಚ್ಚುವರಿ ಆದಾಯವನ್ನು ಮತ್ತು ಖನಿಜವಿರುವ ಭೂಮಿಗಳ ಮೇಲಿನ ತೆರಿಗೆ ಪ್ರಕಾರ ಪ್ರತಿ ವರ್ಷ ಸುಮಾರು ರೂ.505.90 ಕೋಟಿ ಹೆಚ್ಚುವರಿ ಆದಾಯವನ್ನು ನಿರೀಕ್ಷಿಸಿದೆ.

ಗಣಿ ಗುತ್ತಿಗೆ ಮಂಜೂರಾದ ವಿಧಾನ ಮತ್ತು ಪಾವತಿಸುವ ರಾಜಧನವನ್ನು ಆಧರಿಸಿ ಗಣಿ ಗುತ್ತಿಗೆಗಳ ವರ್ಗಕ್ಕನುಸಾರವಾಗಿ ವಿವಿಧ ತೆರಿಗೆ ದರ ಪ್ರಸ್ತಾಪಿಸಿ ಆಯಾ ವರ್ಗಗಳಲ್ಲಿ ಏಕರೀತಿಯ ತೆರಿಗೆಯನ್ನು ವಿಧಿಸಲು ಪ್ರಸ್ತಾಪಿಸಲಾಗಿದೆ.

ವಸತಿ ಸಮುಚ್ಛಯಕ್ಕೆ ಅನುಮೋದನೆ: ಬೆಂಗಳೂರು ನಗರ ಜಿಲ್ಲೆ, ಬಿದರಹಳ್ಳಿ ಹೋಬಳಿ, ಹುಸ್ಕೂರು ಗ್ರಾಮದಲ್ಲಿನ ಕರ್ನಾಟಕ ಗೃಹ ಮಂಡಳಿ ಬಡಾವಣೆಯ ಪ್ಲಾಟ್ ಸಂಖ್ಯೆ: 1 ರ 2.06 ಎಕರೆ ವಿಸ್ತೀರ್ಣದಲ್ಲಿ ರೂ.64.78 ಕೋಟಿಗಳ ಯೋಜನಾ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವ ಯೋಜನೆಯಡಿ (ಜೆ.ವಿ) ಕೆ.ಟಿ.ಪಿ.ಪಿ ಕಾಯ್ದೆಯ ಪ್ರಕಾರ ಬಹುಮಹಡಿ ವಸತಿ ಸಮುಚ್ಛಯ ಯೋಜನೆಯನ್ನು ಕೈಗೊಳ್ಳಲು; ಸಚಿವ ಸಂಪುಟ ಅನುಮೋದನೆ ನೀಡಿದೆ.

ನೇತ್ರಾವತಿ ನದಿಗೆ ಸೇತುವೆ ನಿರ್ಮಾಣ ಕಾಮಗಾರಿಗೆ ಅನುಮೋದನೆ

ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಸಜಪನಡು ಮತ್ತು ತುಂಬೆ ಗ್ರಾಮದ ಮಧ್ಯೆ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗೆ ರೂ.60.00 ಕೋಟಿ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಮಂಗಳೂರು-ಚೆರ್ವತ್ತೂರು – ಕರಾವಳಿ ಜಿಲ್ಲಾ ಮುಖ್ಯ ರಸ್ತೆಗೆ (ಕೋಟೆಪುರದಿಂದ- ಬೋಳಾರಗೆ) ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗೆ ರೂ.200.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಸರ್ಜಾಪುರದಿಂದ ಹೆಬ್ಬಾಳದವರೆಗೆ ಮೆಟ್ರೋ ಕಾಮಗಾರಿಗೆ ಅನುಮೋದನೆ: ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ಎ ನ ಯೋಜನೆಯನ್ನು ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ ಉದ್ದವನ್ನು ಹೊಂದಿದ್ದು, ಇದರಲ್ಲಿ 17 ಮೆಟ್ರೋ ನಿಲ್ದಾಣಗಳ ನ್ನೊಳಗೊಂಡ 22.14 ಕಿ.ಮೀ ಗಳ ಎತ್ತರಿಸಿದ ಮಾರ್ಗ ಮತ್ತು 11 ನಿಲ್ದಾಣಗಳನ್ನೊಳಗೊಂಡ 14.45 ಕಿ.ಮೀ ಗಳ ಸುರಂಗ ಮಾರ್ಗಗಳ ಒಟ್ಟಾರೆ ರೂ.28,405.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಅನುಮೋದಿಸಿದೆ.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!