ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂಬರ್‌ 1 ಆಗಿದೆ; ಆರ್.ಅಶೋಕ| RAshoka

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್‌ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಆಕ್ರೋಶ ಹೊರಹಾಕಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಬದಲಾಗಿದೆ. ಬಳ್ಳಾರಿ ಆಸ್ಪತ್ರೆಯಲ್ಲಿ ಐವಿ ದ್ರಾವಣದಿಂದಾಗಿ ತಾಯಂದಿರು ಸತ್ತಿದ್ದಾರೆ. ನಾನು ಹೋಗಿ ಎಚ್ಚರಿಕೆ ನೀಡಿದ ನಂತರವೂ ತಾಯಂದಿರು ಸತ್ತಿದ್ದಾರೆ.

ಹತ್ತು ತಿಂಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 111 ನವಜಾತ ಶಿಶುಗಳು ಹಾಗೂ ಎಂಟು ತಿಂಗಳಲ್ಲಿ ಸುಮಾರು 28 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು ತಾಯಂದಿರ ಸಾವಿಗೆ ನ್ಯಾಯ ಕೊಡಿ ಎಂದು ಆಗ್ರಹಿಸಿದರು.

ಕೋವಿಡ್‌ ಸಮಯದಲ್ಲಿ ರಾಹುಲ್‌ ಗಾಂಧಿ, ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ, ಜನರ ಬಳಿಗೆ ಹೋಗಿ ಟವೆಲ್‌ನಲ್ಲಿ ಕಣ್ಣೀರು ಒರೆಸಿಕೊಂಡರು. ಈಗ ತಾಯಂದಿರು ಸತ್ತಿರುವಾಗ ಜನಕಲ್ಯಾಣ ಸಮಾವೇಶ ಮಾಡಿದ್ದಾರೆ. ಆ ಸಮಾವೇಶದಲ್ಲಿ ರಾಜಕೀಯ ಮಾತಾಡುವುದು ಬಿಟ್ಟರೆ, ಜನರ ಪರವಾಗಿ ಮಾತಾಡಿಲ್ಲ.

28 ಔಷಧಿಗಳು ಕಳಪೆ ಎಂದಮೇಲೂ ಅದೇ ಕಂಪನಿಯಿಂದ ಔಷಧಿ ಖರೀದಿಸಲಾಗಿದೆ. ಮಕ್ಕಳನ್ನು ಉಳಿಸುವ ಕೆಲಸ ಮಾಡದೆ ನೂರು ಸಮಾವೇಶ ಮಾಡಿದರೂ ಶಾಪ ಹಾಗೂ ಪಾಪ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಿದ ನಂತರವೂ ತಾಯಂದಿರು ಸಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗೆ ಸರ್ಕಾರದಲ್ಲಿ ಹಿಡಿತವಿಲ್ಲ ಎಂದರ್ಥ. ಈ ಸಾವಿನ ಹೊಣೆಯನ್ನು ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಕಾಂಗ್ರೆಸ್‌ ನಾಯಕರು ಜನರ ಹಿತ ಕಡೆಗಣಿಸಿ ವಿರೋಧ ಪಕ್ಷಗಳನ್ನು ಬಗ್ಗುಬಡಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.

ನಾನು ಈಗಾಗಲೇ ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದೇನೆ. ಈ ಕುರಿತು ಲೋಕಾಯುಕ್ತಕ್ಕೆ ಪತ್ರ ಕೂಡ ಬರೆಯುತ್ತೇನೆ. ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡದೆ ಬಿಡುವುದಿಲ್ಲ.

ಸಿಎಂ ಸಿದ್ದರಾಮಯ್ಯ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ. ಜಿಡಿಪಿಯಲ್ಲಿ ನಂಬರ್‌ 1 ಎನ್ನುವ ಸಿಎಂ ಸಿದ್ದರಾಮಯ್ಯ ಬಾಣಂತಿಯರ ಸಾವಿನಲ್ಲೂ ನಂಬರ್‌ 1 ಎಂದು ಹೇಳಲಿ ಎಂದರು.

ಒಕ್ಕಲಿಗ ಸ್ವಾಮೀಜಿ ವಿರುದ್ಧ ಪಟಾಪಟ್‌ ಎಂದು ಕ್ರಮ ಕೈಗೊಳ್ಳುವ ಕಾಂಗ್ರೆಸ್‌ ಸರ್ಕಾರ, ನ್ಯಾಯಾಲಯಕ್ಕೆ ಬೆಲೆ ಕೊಡಲ್ಲ ಎಂಬ ಮುಸ್ಲಿಂ ಮುಖಂಡನ ವಿರುದ್ಧ ಏಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು.

ವಕ್ಫ್‌ ಭೂ ಕಬಳಿಕೆ ವಿರುದ್ಧ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ನೋವಿನಿಂದ ಮಾತಾಡಿರುವುದಕ್ಕೆ ಕಾಂಗ್ರೆಸ್‌ ಸರ್ಕಾರ ಪಟಾಪಟ್‌ ಎಂದು ತಕ್ಷಣದ ಕ್ರಮ ಕೈಗೊಂಡಿದೆ. ಮುಸ್ಲಿಂ ಲೀಗ್‌ನ ಮೌಲಾನ ಅಬು ಎಂಬುವನು ಸಂಸತ್ತು, ನ್ಯಾಯಾಲಯವನ್ನು ತಿರಸ್ಕರಿಸುತ್ತೇನೆಂದು ಮಾತಾಡಿದರೂ ಸರ್ಕಾರ ಕ್ರಮ ವಹಿಸಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕುಕ್ಕರ್‌ ಬ್ರದರ್‌ಗಳ ಮೇಲೆ ಪ್ರೀತಿ ಇದ್ದು, ಅವರ ವಿರುದ್ಧ ಕ್ರಮ ವಹಿಸುತ್ತಿಲ್ಲ ಎಂದರು.

ನಾನು ಎಂದಿಗೂ ನಮ್ಮ ಸ್ವಾಮೀಜಿಗಳ ಪರವಾಗಿಯೇ ನಿಲ್ಲುತ್ತೇನೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಒಮ್ಮೆ ಮುಸ್ಲಿಮರು ಬೇಕು, ಮತ್ತೊಮ್ಮೆ ಒಕ್ಕಲಿಗರು ಬೇಕು. ಇವರು ಸಿಎಂ ಸ್ಥಾನದ ಬಗ್ಗೆ ಮಾತಾಡಿದ್ದಕ್ಕೆ ಡಾ.ಜಿ.ಪರಮೇಶ್ವರ್‌ ಗರಂ ಆಗಿದ್ದಾರೆ ಎಂದರು.

ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ ವ್ಯಕ್ತಿಯನ್ನೂ ಕಾಂಗ್ರೆಸ್‌ ಬ್ರದರ್‌ ಎನ್ನಬಹುದು. ಹೀಗಾದರೆ ಹಿಂದೂಗಳ ಕಥೆ ಏನೆಂದು ಚಿಂತೆಯಾಗುತ್ತದೆ. ಮುಸ್ಲಿಮ್‌ ಮುಖಂಡ ನ್ಯಾಯಾಲಯ ನಂಬಲ್ಲ ಎಂದು ಹೇಳಿದರೆ, ಕಾಂಗ್ರೆಸ್‌ನವರು ಬಾಬಾ ಸಾಹೇಬ್‌ ಅಂಬೇಡ್ಕರರ ಸಂವಿಧಾನದ ಪುಸ್ತಕ ಹಿಡಿದುಕೊಳ್ಳುತ್ತಾರೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದರು.

ಗುಂಡಿಗಳ ಊರು

ರಾಜಧಾನಿ ಬೆಂಗಳೂರು ಗುಂಡಿಗಳ ಊರಾಗಿದೆ. ಒಂದೇ ಒಂದು ಗುಂಡಿ ಇಲ್ಲದ ರಸ್ತೆ ನಗರದಲ್ಲಿ ಇಲ್ಲ. ಬಿಬಿಎಂಪಿ ಆಯುಕ್ತರು ಲಕ್ಷಗಟ್ಟಲೆ ಗುಂಡಿ ಇದೆ, ಮುಚ್ಚಿದ್ದೇವೆ ಎನ್ನುತ್ತಾರೆ. ನಂತರ ಮತ್ತೆ ಗುಂಡಿಗಳ ಸಂಖ್ಯೆ ಹೇಳುತ್ತಾರೆ. ಬ್ರ್ಯಾಂಡ್‌ ಬೆಂಗಳೂರು ಯೋಜನೆಯಡಿ ಎಷ್ಟು ಅನುದಾನ ಬಿಬಿಎಂಪಿಗೆ ನೀಡಲಾಗಿದೆ ಎಂದು ಕಾಂಗ್ರೆಸ್‌ ತಿಳಿಸಲಿ. ಅದು ಬಿಟ್ಟು ʼನಮ್ಮ ತೆರಿಗೆ ನಮ್ಮ ಹಕ್ಕುʼ ಎಂದು ಹೇಳುತ್ತಾರೆ. ಹಾಗಾದರೆ ಬೆಂಗಳೂರಿನ ತೆರಿಗೆ ಯಾರ ಹಕ್ಕು? ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ 100 ಕೋಟಿ ರೂ. ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.

ಜಲಮಂಡಳಿ ಅಧ್ಯಕ್ಷರು ಎಲ್ಲ ಶಾಸಕರಿಗೆ ಪತ್ರ ಬರೆದು ದರ ಏರಿಕೆಗೆ ಸಹಕಾರ ನೀಡಲು ಕೋರಿದ್ದಾರೆ. ಹಾಲಿನ ದರ ಹಾಗೂ ಆಲ್ಕೋಹಾಲ್‌ ದರ ಹೆಚ್ಚಳಕ್ಕೆ ಸಿದ್ಧತೆ ನಡೆದಿದೆ. ಅರಣ್ಯ ಸಚಿವರು ನದಿ ನೀರಿಗೂ ತೆರಿಗೆ ವಿಧಿಸಲು ಮುಂದಾಗಿದ್ದಾರೆ. ಇನ್ನು ಸಮುದ್ರಕ್ಕೆ ತೆರಿಗೆ ವಿಧಿಸುವುದು ಬಾಕಿ ಇದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜೊತೆಗಿನ ಸಭೆಯಲ್ಲಿ, ಎಲ್ಲರೂ ಒಂದಾಗಿ ಹೋಗುವ ಕುರಿತು ಸಲಹೆ ನೀಡಿದ್ದೇನೆ. ಇದನ್ನೇ ಬಿ.ಎಸ್‌.ಯಡಿಯೂರಪ್ಪ ಕೂಡ ಹೇಳಿದ್ದಾರೆ. ಎಲ್ಲವೂ ಸುಖಾಂತ್ಯವಾಗಲಿದೆ ಎಂದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!