ಬೆಂಗಳೂರು: ಹಾಸನದಲ್ಲಿ ನಡೆದ ಜನಕಲ್ಯಾಣೋತ್ಸವದ ಅಭೂತಪೂರ್ವ ಯಶಸ್ಸು ನನಗೆ ಆನೆಬಲ ನೀಡಿದೆ.
ನನ್ನ ಮತ್ತು ಪಕ್ಷದ ಮೇಲಿನ ಪ್ರೀತಿಯಿಂದ ದೂರದೂರದ ಊರುಗಳಿಂದ ಆಗಮಿಸಿ, ಅನ್ಯಾಯ, ಅಪಪ್ರಚಾರ, ದ್ವೇಷರಾಜಕಾರಣದ ವಿರುದ್ಧದ ನನ್ನ ದನಿಗೆ ದನಿಗೂಡಿಸಿದ ನನ್ನ ಎಲ್ಲಾ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರಿಗೆ ನಾನು ಋಣಿ ಎಂದು ಸಿಎಂ ಸಿದ್ದರಾಮಯ್ಯ (Cmsiddaramaiah) ಹೇಳಿದ್ದಾರೆ.
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಕುಟುಂಬದ ಭದ್ರಕೋಟೆಯ ಎಂದೆ ಬಿಂಬಿಸಲಾಗುವ ಹಾಸನದಲ್ಲಿ ಕಾಂಗ್ರೆಸ್ ಸರ್ಕಾರ ಮೂರು ಉಪಚುನಾವಣೆಯ ಗೆಲುವಿನ ಯಶಸ್ವಿ ಜನಕಲ್ಯಾಣೋತ್ಸವ ನಡೆಸಿದೆ.
ಈ ಸಮಾವೇಶದಲ್ಲಿ ಕಾಂಗ್ರೆಸ್ ಸರ್ಕಾರದ ಸಿಎಂ, ಡಿಸಿಎಂ, ಸಚಿವರು, ಶಾಸಕರು ರಣಕಹಳೆ ಮೊಳಗಿಸಿ ಬಿಜೆಪಿ – ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾರ್ಯಕ್ರಮದ ಯಶಸ್ವಿಯಾದ ನಂತರ ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಸನದಲ್ಲಿ ನಡೆದ ಜನಕಲ್ಯಾಣೋತ್ಸವದ ಅಭೂತಪೂರ್ವ ಯಶಸ್ಸು ನನಗೆ ಆನೆಬಲ ನೀಡಿದೆ.
ನನ್ನ ಮತ್ತು ಪಕ್ಷದ ಮೇಲಿನ ಪ್ರೀತಿಯಿಂದ ದೂರದೂರದ ಊರುಗಳಿಂದ ಆಗಮಿಸಿ, ಅನ್ಯಾಯ, ಅಪಪ್ರಚಾರ, ದ್ವೇಷರಾಜಕಾರಣದ ವಿರುದ್ಧದ ನನ್ನ ದನಿಗೆ ದನಿಗೂಡಿಸಿದ ನನ್ನ ಎಲ್ಲಾ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರಿಗೆ ನಾನು ಋಣಿ ಎಂದಿದ್ದಾರೆ.
ಈ ಕಾರ್ಯಕ್ರಮದ ಆಯೋಜನೆಗೆ ಶ್ರಮಿಸಿದ ಶೋಷಿತ ಸಮುದಾಯಗಳ ಸಂಘಟನೆಗಳು ಮತ್ತು ಪಕ್ಷದ ನಾಯಕರಿಗೆ ಅನಂತ ಧನ್ಯವಾದಗಳು.
ಜನತೆಯ ಸೇವೆಯೇ ಜನಾರ್ಧನನ ಸೇವೆ. ಅಧಿಕಾರವೆಂಬುದು ಜನಸೇವೆ ಮಾಡಲು ಒದಗಿಬಂದ ಅವಕಾಶ ಎಂದು ಪ್ರಾಮಾಣಿಕವಾಗಿ ನಂಬಿದವನು ನಾನು.
ಸತ್ಯ, ಧರ್ಮ ಮತ್ತು ನ್ಯಾಯದ ನಡಿಗೆಯಲ್ಲಿ ನನ್ನ ಜೊತೆ ಈ ನಾಡಿನ ಪ್ರಜ್ಞಾವಂತರು, ಶೋಷಿತ ಜನರು ಇದ್ದಾರೆ ಎಂಬುದಕ್ಕೆ ಇಂದು ಸೇರಿದ್ದ ಜನಸಾಗರ ಸಾಕ್ಷಿ.
ಹಾಸನದಲ್ಲಿ ಇಂದು ನಡೆದ ಜನಕಲ್ಯಾಣೋತ್ಸವದ ಅಭೂತಪೂರ್ವ ಯಶಸ್ಸು ನನಗೆ ಆನೆಬಲ ನೀಡಿದೆ.
— Siddaramaiah (@siddaramaiah) December 5, 2024
ನನ್ನ ಮತ್ತು ಪಕ್ಷದ ಮೇಲಿನ ಪ್ರೀತಿಯಿಂದ ದೂರದೂರದ ಊರುಗಳಿಂದ ಆಗಮಿಸಿ, ಅನ್ಯಾಯ, ಅಪಪ್ರಚಾರ,
ದ್ವೇಷರಾಜಕಾರಣದ ವಿರುದ್ಧದ ನನ್ನ ದನಿಗೆ ದನಿಗೂಡಿಸಿದ ನನ್ನ ಎಲ್ಲಾ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರಿಗೆ ನಾನು ಋಣಿ.
ಈ ಕಾರ್ಯಕ್ರಮದ ಆಯೋಜನೆಗೆ… pic.twitter.com/Ayb1fFkdT3
ನಿಮ್ಮೆಲ್ಲರ ಪ್ರೀತಿ – ಆಶೀರ್ವಾದ ಇರುವ ವರೆಗೆ ರಾಜಕೀಯ ವಿರೋಧಿಗಳ ಯಾವ ಷಡ್ಯಂತ್ರ, ಬೆದರಿಕೆಗಳಿಗೆ ನಾನು ಜಗ್ಗುವುದೂ ಇಲ್ಲ, ಕುಗ್ಗುವುದೂ ಇಲ್ಲ. ಎಲ್ಲವನ್ನೂ ಎದುರಿಸಿ ಗೆಲ್ಲುತ್ತೇನೆ.
ನಾನು ಸತ್ಯದ ಪರವಾಗಿದ್ದೇನೆ,
ಅಂತಿಮವಾಗಿ ಗೆಲ್ಲುವುದು ಸತ್ಯವೇ ಎಂದಿದ್ದಾರೆ.