ಪ್ರಧಾನ ಮಂತ್ರಿಗಳು ಕೇಕ್ ತಿನ್ನೋಕೆ ಪಾಕಿಸ್ತಾನಕ್ಕೆ ಹೋಗಿದ್ರು ಗೊತ್ತಾ.?; ಸಂತೋಷ್ ಲಾಡ್ ತಿರುಗೇಟು| Santosh lad

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂಬ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್‌ ಹೇಳಿಕೆಗೆ ತಿರುಗೇಟು ನೀಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad), ನಿಮ್ಮ ಪ್ರಧಾನ ಮಂತ್ರಿ ಕೇಕ್ ತಿನ್ನೋಕೆ ಪಾಕಿಸ್ತಾನಕ್ಕೆ ಹೋಗಿದ್ರು ಗೊತ್ತಾ ಎಂದು ಲೇವಡಿ ಮಾಡಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಸವನಗೌಡರ ಯತ್ನಾಳ್ ಅವರು ನೆಗೆಟಿವ್ ಮಾತನಾಡಿದ್ರೆ ಜನಪ್ರಿಯತೆ ಸಿಗುತ್ತೆ ಅಂತ ಮಾತನಾಡ್ತಾರೆ. ಪ್ರಧಾನಮಂತ್ರಿಗಳು ಪಾಕಿಸ್ತಾನಕ್ಕೆ ಹೋಗಿದ್ರು ಅವರಿಗೆ ಯಾರಾದ್ರೂ ಆಮಂತ್ರಣ ನೀಡಿದ್ರಾ? ಈ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡಲ್ಲ. ಬರೀ ನಮ್ಮನ್ನ ಕೇಳೋದಲ್ಲ ಈ ರೀತಿ ಹೇಳುವವರನ್ನ ಉಪ ಪ್ರಶ್ನೆ ಕೇಳಿ, ಏನುಕ್ ಹೋಗಿದ್ರು ಪ್ರಧಾನ ಮಂತ್ರಿಗಳು ಅಂತ.

ಅವರದು ಬರೀ ಪಾಕಿಸ್ತಾನ, ಮುಸಲ್ಮಾನ, ಅಫ್ಘಾನಿಸ್ತಾನ ಇದರ ಬಿಟ್ಟರೆ ಜನಪರ ವಿಷಯ ಏನಾದ್ರು ಇದ್ದರೆ ಹೇಳಿ ಚರ್ಚೆ ಮಾಡೋಣ ಎಂದರು.

ಬಿಜೆಪಿ ಅವರು 5 ರಿಂದ 10 ತಂಡ ಮಾಡಲಿ ನಮಗೆ ಸಂಬಂಧ ಇಲ್ಲ 4,567ರ ಮ್ಯೂಟೇಷನ್ ಬದಲಾವಣೆ ಬಿಜೆಪಿ ಕಾಲದಲ್ಲಿ ಆಗಿದೆ ಅದರ ಬಗ್ಗೆ ಉತ್ತರ ಕೊಡಿ ಅಂತ ಅವರನ್ನು ಕೇಳಿ.

ವಕ್ಫ್ ವಿರೋಧಿಸಿ ಬಿಜೆಪಿಯ ಹೋರಾಟದಲ್ಲಿ ಬಣಗಳ ವಿಚಾರದಲ್ಲಿ ಎಲ್ಲಾ ಸರ್ಕಾರಗಳು ನೋಟಿಸ್‌ ಕೊಟ್ಟಿವೆ. ಈ ಹಿಂದೆ ಬಿಜೆಪಿ ಕಾಲದಲ್ಲಿ ಮ್ಯೂಟೇಷನ್ ಚೇಂಜ್ ಆಗಿವೆ. ಇದರ ಬಗ್ಗೆ ಬಿಜೆಪಿ ಅವರು ಚರ್ಚೆ ಮಾಡ್ತಾರಾ? ಅವರ ಕಾಲದಲ್ಲಿ ನಮ್ಮ ಕಾಲದಲ್ಲಿ ಎಷ್ಟು ನೋಟಿಸ್ ಆಗಿವೆ.

ಸಾವಿರಾರು ಎಕರೆ ಇದ್ದವರ ಬಳಿಯಿಂದ ಇಂದಿರಾಗಾಂಧಿ ಬಡವರಿಗೆ ಕೊಡ್ಸಿದ್ರು. ನಾವ್ಯಾಕೆ ಬಡವರ ಭೂಮಿಗಳನ್ನು ತೆಗೆದುಕೊಳ್ಳೋಣ ರೈತರಿಗೆ ಸಮಸ್ಯೆ ಆದ್ರೆ ನಾವು ಸರಿ ಪಡಿಸುವೆ ಅಂತ ಸಿಎಂ ಸ್ಪಷ್ಟಿಕರಣ ಕೂಡ ಕೊಟ್ಟಿದ್ದಾರೆ. ಆದರೆ ಇವರ ಕಾಲದಲ್ಲಾಗಿರೋ 4,567ರ ಬಗ್ಗೆ ಸಮೀಕ್ಷೆ ಮಾಡ್ತಾರಂತಾ ಇವರ ನೋಟಿಸ್‌ ಮ್ಯೂಟೇಷನ್ ಚೇಂಜ್ ಆಗಿದೆ. ಅಲ್ಲ ಇದರ ಬಗ್ಗೆ ಚರ್ಚೆ ಮಾಡಬೇಕು.

ಇದರ ಬಗ್ಗೆ ಸರ್ಕಾರ ಆದಷ್ಟು ಬೇಗ ಉತ್ತರ ಕೊಡುತ್ತೆ ಬಿಜೆಪಿ ಅವರು ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ರು. ಬೇಳೆ ಬೇಯಿಸಿಕೊಳ್ಳಲು ಪ್ರಯತ್ನ ಮಾಡಿದ್ರೂ ಎಲ್ಲಿಯೂ ಕ್ಲಿಕ್ ಆಗಲ್ಲಿಲ್ಲ ರಾಜಕೀಯ ಮಾಡೋದ್ ಬಿಟ್ರೆ ಜನ ಪರವಾಗಿ ಬಿಜೆಪಿಯವರು ಯಾವತ್ತು ಮಾತಾಡಲ್ಲ.

ಉಳುವವನೆ ಭೂಮಿ ಒಡೆಯ ಕಾರ್ಯಕ್ರಮ ಮಾಡಿದ್ದೆ ಕಾಂಗ್ರೆಸ್, ಬಿಜೆಪಿ ಆಗ ಸಾಹುಕಾರರ ಪರವಾಗಿ ಕಾರ್ಯಕ್ರಮಕ್ಕೆ ವಿರೋಧ ಮಾಡಿದ್ರು ಎಂದರು.

ಡಿಕೆಶಿ ಹಾಗೂ ಸಿಎಂ ಬಣ ರಾಜಕೀಯ ವಿಚಾರ ಈಗಾಗಲೇ ಸಿಎಂ ಹಾಗೂ ಡಿಸಿಎಂ ಸ್ಪಷ್ಟಿಕರಣ ನೀಡಿದ್ದಾರೆ ಎಂದ ಅವರು ಸಿಎಂ ಬದಲಾವಣೆ ಈಗ ಅಪ್ರಸ್ತುತ ಅದು ಹೈಕಮಾಂಡ್‌ ನಿರ್ಧಾರ ಮಾಡುತ್ತೆ ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ ಅದು ಸಿಎಂ ಮತ್ತು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರವಾಗಿ ಚರ್ಚೆಗೆ ಅವಕಾಶ ನೀಡುತ್ತೇವೆ. ಆದ್ರೆ ವಿಪಕ್ಷಗಳು ಅದಕ್ಕೆ ವಿರೋಧ ಮಾಡದೇ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಅಭಿವೃದ್ಧಿ ಬಗ್ಗೆ ಚರ್ಚೆಗಳಾಗಬೇಕು ಅನ್ನೋದು ನಮ್ಮ ಉದ್ದೇಶ ಆದ್ರೆ ಅಭಿವೃದ್ದಿ ಬಗ್ಗೆ ವಿಪಕ್ಷ ನಾಯಕರು ಚರ್ಚೆ ಮಾಡಲು ಬಿಡೋದೇ ಇಲ್ಲ ಎಂದರು.

ರಾಜಕೀಯ

ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಪ್ರಕಟ

ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಯನ್ನು ರಚಿಸುವ ಸಲುವಾಗಿ ನಗರ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಿಂದ ಖಾಲಿ ಇರುವ 10 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡುವ ಸಂಬಂಧ ಜಿಲ್ಲಾ ಯೋಜನಾ ಸಮಿತಿ ಚುನಾವಣೆ-2026 ರ

[ccc_my_favorite_select_button post_id="119273"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!