ದೊಡ್ಡಬಳ್ಳಾಪುರ ಪ್ರೌಢಶಾಲೆ ಸಹಶಿಕ್ಷಕರಿಂದ BEOಗೆ ಮನವಿ..! ಕಾರಣ ಏನ್ ಗೊತ್ತಾ..?

ದೊಡ್ಡಬಳ್ಳಾಪುರ: ಪ್ರೌಢಶಾಲಾ ಸಹ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆ ಮತ್ತು ಬೇಡಿಕೆಗಳಿಗೆ ಪರಿಹಾರ ನೀಡುವ ಕುರಿತು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ದೊಡ್ಡಬಳ್ಳಾಪುರ ತಾಲೂಕು ಘಟಕದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (BEO) ಇಂದು ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ದೊಡ್ಡಬಳ್ಳಾಪುರ ತಾಲೂಕು ಸಹಶಿಕ್ಷಕರ ಸಂಘದ ಅಧ್ಯಕ್ಷ ಆರ್.ಶಿವಕುಮಾರ್, ಪ್ರೌಢಶಾಲೆಯ ಸಹ ಶಿಕ್ಷಕರು ಇಲಾಖೆಯ ಜೊತೆಗೂಡಿ ಮಕ್ಕಳ ಗುಣಾತ್ಮಕ ಕಲಿಕೆಗಾಗಿ ವಿವಿಧ ರೀತಿಯ ಚಟುವಟಿಕೆಗಳನ್ನು ಕೈಗೊಂಡು ಫಲಿತಾಂಶ ಉತ್ತಮ ಪಡಿಸಲು ಪ್ರಯತ್ನಿಸುತ್ತಿದ್ದೇವೆ. ಪ್ರೌಢ ಶಿಕ್ಷಣ ಹಂತದಲ್ಲಿ ನಿಜವಾಗಿಯೂ ಗುಣಾತ್ಮಕ ಶಿಕ್ಷಣ ನೀಡುವುದು ಅತ್ಯಂತ ಮಹತ್ವದ ವಿಷಯವಾಗಿದೆ.

ಈ ವಿಚಾರವಾಗಿ ಈಗಾಗಲೇ ನಮ್ಮ ಸಂಘಟನೆಯು ಸಚಿವರು, ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಲಾಗಿದೆ. ಅದರ ಜೊತೆಗೆ ಪ್ರತ್ಯಕ್ಷವಾಗಿ ಭೇಟಿಯಾಗಿ ಸಮಸ್ಯೆ ಮತ್ತು ಬೇಡಿಕೆಗಳ ಬಗ್ಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಲಾಗಿದೆ.

ಆದರೆ ಸಹ ಗುಣಾತ್ಮಕ ಶಿಕ್ಷಣ ನೀಡಲು ರಾಜ್ಯ ಮತ್ತು ಜಿಲ್ಲಾ ಹಂತದ ಅಧಿಕಾರಿಗಳು ಪ್ರತ್ಯೇಕವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು (ಉದಾ: ಕಲಿಕಾ ಆಸರೆ, ಮರು ಸಿಂಚನ, ಎಪ್‌.ಎಲ್‌.ಎನ್. ಪ್ರತಿಬಿಂಬ ಇತ್ಯಾದಿ) ಈ ರೀತಿಯ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿ ದಾಖಲೀಕರಣ ಮಾಡಲು ಶಿಕ್ಷಕರ ಮೇಲಿನ ಒತ್ತಡದಿಂದ ಶಿಕ್ಷಕರಲ್ಲಿ ಗೊಂದಲ ಉಂಟಾಗುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಏಕರೂಪದ ಕಾರ್ಯಕ್ರಮಗಳನ್ನು ರೂಪಿಸಿ ಶಿಕ್ಷಕರ ಮೇಲಿನ ಒತ್ತಡ ಕಡಿಮೆ ಮಾಡಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗದಂತೆ ಅನುವು ಮಾಡಿಕೊಡುವುದು ಹಾಗೂ ಕೆಳಗಿನ ಸಮಸ್ಯೆ ಮತ್ತು ಬೇಡಿಕೆಗಳನ್ನು ಪರಿಹರಿಸಿ ಕೊಡುವಂತೆ ಇಲಾಖೆಯ ಉನ್ನತ ಅಧಿಕಾರಿಗಳ ಗಮನಕ್ಕೆ ತರಬೇಕೆಂದರು.

ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಪ್ರೌಢಶಾಲಾ ಸಹಶಿಕ್ಷಕ ವಿಭಾಗ ರಾಜ್ಯ ಸರ್ಕಾರಿ ನೌಕರ ಸಂಘದ ಪ್ರತಿನಿಧಿಗಳಾದ ಟಿಕೆ ಪ್ರಕಾಶ್, ಚಿಕ್ಕೆಗೌಡ ಎಂ.ಎನ್., ಕಾರ್ಯದರ್ಶಿ ಸಿದ್ದಲಿಂಗಸ್ವಾಮಿ, ಪದಾಧಿಕಾರಿಗಳಾದ ಮಂಜುಳ, ಕೆಎನ್ ವೆಂಕಟೇಶ್ ಮೂರ್ತಿ, ದೇವರಾಜು, ಕೆಂಪೇಗೌಡ, ಚಂದ್ರಶೇಖರ್, ಪ್ರಕಾಶ್, ಬಸವರಾಜು, ಪುನೀತ್, ಜಬಿ ಉಲ್ಲಾಖಾನ್, ಶಕಿಲಾ ಕುಂದನ್, ಮಂಜುನಾಥ್, ದೇವರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವಲಿಂಗಯ್ಯ, ಜಿಲ್ಲಾ ಕಾರ್ಯದರ್ಶಿ ಜೈಕುಮಾರ್, ಎವಿ ಚಂದ್ರಪ್ಪ, ವಸಂತಗೌಡ, ಸೇರಿದಂತೆ ಸಂಘದ ಸದಸ್ಯರಿದ್ದರು.

ಬೇಡಿಕೆಗಳು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ 3 ಹಂತದ ಪರೀಕ್ಷೆಗಳ ಬದಲು ಈ ಹಿಂದಿನಂತೆ 2 ಪರೀಕ್ಷೆಗಳನ್ನು ಆಯೋಜಿಸುವುದು ಹಾಗೂ ಸಿಬಿಎಸ್‌ಇ ಮತ್ತು ಐಸಿಎಸ್‌ ಇ ಪರೀಕ್ಷಾ ಫ್ಲಿಂಪಾಶ ಮಾದರಿಯಂತೆ ಅಂತರಿಕ ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡುವುದು.

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆಯ ವಿನ್ಯಾಸವನ್ನು ಸರಳೀಕರಣಗೊಳಿಸುವುದು ಹಾಗೂ ಪರೀಕ್ಷೆ ಮತ್ತು ಮೌಲ್ಯ ಮಾಪನ ಕಾರ್ಯವನ್ನು ಏಪ್ರಿಲ್ 14ರ ಒಳಗಾಗಿ ಪೂರ್ಣಗೊಳಿಸುವುದು.

ಖಾಸಗಿ ಅನುದಾನಿತ ಶಾಲೆಗಳಲ್ಲಿ 01-01-2016 ರಿಂದ 31-12-2020 ವರೆಗಿನ ಖಾಲಿ ಹುದ್ದೆಗಳನ್ನು ತುಂಬಲು ಶೀಘ್ರದಲ್ಲಿ ಅನುಮತಿ ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸುವುದು.

ಕಲ್ಯಾಣ ಕರ್ನಾಟಕ ಭಾಗದಲ್ಲಿಯ ಕೆಕೆಆರ್‌ಡಿ ಮಂಡಳಿಯಿಂದ ನಡೆಯುವ ಪ್ರೌಢಶಾಲೆಗಳ ಸಿಬ್ಬಂದಿಗಳಿಗೆ ನಿಗಧಿತ ಸಮಯದಲ್ಲಿ ವೇತನ ಪಾವತಿಸುವುದು. ರಾಜ್ಯದಲ್ಲಿಯ ಉನ್ನತೀಕರಿಸಿದ ಪ್ರೌಢಶಾಲೆ ಮತ್ತು ಆರ್‌ಎಂಎಸ್‌ಎ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ನಿಯಮಿತವಾಗಿ ವೇತನ ನೀಡುವುದು. ಹಾಗೂ ಮುಖ್ಯ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳನ್ನು ನೇಮಕ ಮಾಡುವುದು.

ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡ್ತಿ ಹೊಂದಿದ ಶಿಕ್ಷಕರುಗಳಿಗೆ 15,20,25,30 ಕಾಲಮಿತಿ ವೇತನ ಬಡ್ತಿ ನೀಡಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಮಗ್ರ ತಿದ್ದುಪಡಿ ತರುವುದು.

ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳಿಗೆ ಬಡ್ತಿ ನೀಡಲು ಈಗಾಗಲೇ ಇರುವ ನಿಯಮಗಳಿಗೆ ತಿದ್ದುಪಡಿ ತಂದು ಈ ಹಿಂದೆ ಇದ್ದಂತೆ ಯಾವುದೇ ನಿಯಮ ಷರತ್ತುಗಳಿಲ್ಲದೇ 50:50 ರ ಅನುಪಾತದಲ್ಲಿ ಸಹ ಶಿಕ್ಷಕರಿಗೆ ಬಡ್ತಿ ನೀಡುವುದು.

ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೌಢಶಾಲಾ ಶಿಕ್ಷಕರು ರಜೆ ಸಹಿತ ನೌಕರರಾಗಿದ್ದು, ಈ ಹಿಂದೆ ಜಾರಿಯಲ್ಲಿದ್ದಂತೆ ದಸರಾ ರಜೆಯನ್ನು ಅಕ್ಟೋಬರ್ 2 ರಿಂದ 29 ರವರೆಗೆ ಮತ್ತು ಬೇಸಿಗೆ ರಜೆಯನ್ನು ಏಪ್ರೀಲ್ 10 ರಿಂದ ಮೇ 30 ರವರಿಗೆ ನಿಗಧಿಗೊಳಿಸುವುದು ರಜೆಯ ಅವಧಿಯಲ್ಲಿ ತರಬೇತಿ, ಮೌಲ್ಯಮಾಪನ ಇನ್ನಿತರ ಕೆಲಸಗಳನ್ನು ನಿರ್ವಹಿಸಿದಲ್ಲಿ ಅದಕ್ಕೆ ಸಮಾನವಾಗಿ ಗಳಿಕೆ ರಜೆ ನೀಡುವುದು.

ಸರ್ಕಾರಿ ಮತ್ತು ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಯ ನೌಕರರಿಗೆ ಓಪಿಎಸ್ ಜಾರಿಗೊಳಿಸುವುದು.

ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಹಿರಿಯ ಶಿಕ್ಷಕರಿಗೆ ಮುಖ್ಯ ಶಿಕ್ಷಕರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು (ಪ್ರಭಾರ ಭತ್ಯೆ, ಗಳಿಕೆ ರಜೆ, ಅರ್ಧ ದಿನದ ರಜೆ) ನೀಡುವುದು.

ರಾಜಕೀಯ

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ:

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ; ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="115331"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!